ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಬೆಳಗುಲಿಯಲ್ಲಿ ನಾಳೆ ಭಾರತ್ ನಿರ್ಮಾಣ ಸೇವಾ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಇತ್ತೀಚಿನ ಪೋಸ್ಟ್‌ಗಳು

ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿ ಹುಳಿಯಾರಿನಲ್ಲಿ ಸಂಭ್ರಮಾಚರಣೆ

ಹುಳಿಯಾರು : ಒಳ ಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿ ದಲಿತ ಸಂಘರ್ಷ ಸಮಿತಿ ಹಾಗೂ ಮಾದಿಗ ದಂಡೋರ ಸಮಿತಿ ಸದಸ್ಯರು ಸೇರಿದಂತೆ ದಲಿತ ಪರ ಸಂಘಟನೆಗಳ ಮುಖಂಡರುಗಳು ಹುಳಿಯಾರು ಪೊಲೀಸ್ ಸ್ಟೇಷನ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು          ಒಳ ಮೀಸಲಾತಿ ಪರವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮೂರು ದಶಕಗಳ ಕಾಲ ಸತತವಾಗಿ ಹೋರಾಟ ಮಾಡಿಕೊಂಡು ಬಂದಿದ್ದು ಇದೀಗ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಶತಮಾನಗಳಿಂದಲೂ ತುಳಿತಕ್ಕೊಳಗಾಗಿರುವ ದಲಿತರಿಗೆ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದಂತಾಗಿದೆ. ಈ ಐತಿಹಾಸಿಕ ತೀರ್ಪನ್ನು ನಮ್ಮ ಸಂಘಟನೆ ಸ್ವಾಗತಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಹನುಮಂತಯ್ಯ ನುಡಿದರು.                        ಚಿಕ್ಕನಾಯಕನಹಳ್ಳಿ ತಾಲೂಕು ಕೆಡಿಪಿ ಸದಸ್ಯರಾದ ಬರಕನಾಳ್ ಶಂಕರ್ ಮಾತನಾಡಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಶೋಷಿತ ಸಮುದಾಯಗಳಲ್ಲಿ ಹೊಸ ಆಶಾಭಾವನೆಗೆ ಕಾರಣವಾಗಿದ್ದು,ಇದರಿಂದಾಗಿ  ಇನ್ನು ಮುಂದೆ ಅತ್ಯಂತ ಹಿಂದುಳಿದ ಸಣ್ಣ ಪುಟ್ಟ ಉಪಜಾತಿಗಳಿಗೂ ಸಹ ಮೀಸಲಾತಿಯ ಲಾಭ ಪಡೆಯುವಂತಾಗಿದೆ. ರಾಜ್ಯ ಸರ್ಕಾರ ಇದನ್ನು ತ್ವರಿತವಾಗಿ ಜಾರಿ ಮಾಡುವ ಮೂಲಕ ಅನ್ಯಾಯ ಮತ್ತು ಅಸ್ಪೃಶ್ಯತೆಯಲ್ಲಿ ಬೆಂದು ನೊಂದಿದ್ದ ಸಣ್ಣ ಸಮುದಾಯಗಳಿಗೆ ನ್ಯಾಯ ಕೊಡಿಸಬೇಕೆಂದರು.                     ಈ ವೇಳೆ ಡಿ

ಡಾ||ರಂಗನಾಥ್‌ಗೆ ಮುಖ್ಯಮಂತ್ರಿಗಳಿಂದ "ಶ್ರೇಷ್ಠ ವೈದ್ಯ ಪ್ರಶಸ್ತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ 'ರಾಷ್ಟ್ರೀಯ ವೈದ್ಯರ ದಿನಾಚರಣೆ'ಯಲ್ಲಿ ಮುಖ್ಯಮಂತ್ರಿಗಳಿಂದ "ಶ್ರೇಷ್ಠ ವೈದ್ಯ ಪ್ರಶಸ್ತಿ"ಯನ್ನು ಡಾ||ರಂಗನಾಥ್ ರವರು ಪಡೆದರು. ಡಾ||ರಂಗನಾಥ್ ಅವರು ಸದ್ಯ ಹಾಸನ ಜಿಲ್ಲೆಯ ಕಣಕಟ್ಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಈ ಹಿಂದೆ ಹುಳಿಯಾರಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು. ಈ ಸಂದರ್ಭದಲ್ಲಿ ಹುಳಿಯಾರಿನ ಕಿರಣ್ ಕೇಶವಪುರ ಹಾಗೂ ಸ್ನೇಹಿತರು ಪಾಲ್ಗೊಂಡಿದ್ದರು.

ಹುಳಿಯಾರಿನಲ್ಲಿ ಡಿಜಿಟಲ್ ಗ್ರಂಥಾಲಯ ಆರಂಭಿಸುವಂತೆ ಎಬಿವಿಪಿ ಆಗ್ರಹ

ಹುಳಿಯಾರು ಪಟ್ಟಣದಲ್ಲಿ ಒಂದು ಡಿಜಿಟಲ್ ಲೈಬ್ರರಿಯನ್ನು ತೆರೆದು ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕೆಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಹೆಚ್.ಆರ್.ಗುರುಪ್ರಸಾದ್ ಒತ್ತಾಯಿಸಿದರು. ಎಬಿವಿಪಿ ಸದಸ್ಯರೊಂದಿಗೆ ಹುಳಿಯಾರು ಪಟ್ಟಣ ಪಂಚಾಯಿತಿಗೆ ತೆರಳಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ಹುಳಿಯಾರಿನಲ್ಲಿ ಸುಮಾರು 5000 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಹುಳಿಯಾರು ತಾಲ್ಲೂಕ್ ಆಗುವ ನಿರೀಕ್ಷೆಯಿದ್ದರೂ ಸಹ ಹುಳಿಯಾರು ನಗರದಲ್ಲಿ ಒಂದು ಡಿಜಿಟಲ್ ಲೈಬ್ರರಿ ಇಲ್ಲದಿರುವುದು ಬೇಸರದ ಸಂಗತಿಯಾಗಿದೆ. ಕೆಲವು ಗ್ರಾಮಗಳಲ್ಲಿಯೇ ಈಗಾಗಲೇ ಡಿಜಿಟಲ್ ಗ್ರಂಥಾಲಯಗಳಿದ್ದರೂ ಸಹ ಪಟ್ಟಣವಾಗಿರುವ ಹುಳಿಯಾರಿನಲ್ಲಿ ಒಂದು ಸುವ್ಯವಸ್ಥಿತ ಗ್ರಂಥಾಲಯ ಇಲ್ಲದಿರುವುದು ವಿದ್ಯಾರ್ಥಿಗಳ ಕಲಿಕೆ ಸಾಮರ್ಥ್ಯವನ್ನು ಕುಸಿಯುವಂತೆ ಮಾಡಿದೆ.ಶೀಘ್ರವೇ ಹುಳಿಯಾರಿನಲ್ಲಿ ಒಂದು ಡಿಜಿಟಲ್ ಲೈಬ್ರರಿಯನ್ನು ತೆರೆದು ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕೆಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪರವಾಗಿ ಅವರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಎಚ್. ಆರ್ ಗುರುಪ್ರಸಾದ್ ಅವರೊಂದಿಗೆ ಎಬಿವಿಪಿ ರಾಜ್ಯ ಸಾಮಾಜಿಕ ಜಾಲತಾಣ ಪ್ರಮುಖರಾದ ದೀಪಕ್ ಕೆಂಕೆರೆ, ಕಾರ್ಯಕರ್ತರಾದ ಶಾಂತ್ ಕುಮಾರ್, ಸಿದ್

ಮಕ್ಕಳಲ್ಲಿ ಪರಿಸರ ಪ್ರಜ್ಞೆಯನ್ನು ಮೂಡಿಸಿದ ವಿದ್ಯಾವಾರಿಧಿ ಶಾಲೆ

ಹುಳಿಯಾರಿನ ವಿದ್ಯಾವಾರಿಧಿ ಶಾಲೆಯಲ್ಲಿ ಪರಿಸರ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು .                     ಪರಿಸರ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆ ಕುರಿತಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.   ಶಾಲೆಯ ಆಡಳಿತಾಧಿಕಾರಿಯಾದ ಅಮಿತ್ ಅವರು ಪರಿಸರ ದಿನದ ಬಗ್ಗೆ ಮಾತನಾಡುತ್ತಾ ಮೊದಲಿಗೆ ಭೂಮಿತಾಯಿಯನ್ನು ಸ್ಮರಿಸುತ್ತಾ ಮಾಲಿನ್ಯಕ್ಕೆ ಕಾರಣಗಳು ಮತ್ತು ಪರಿಹಾರೋಪಾಯಗಳನ್ನು ಸೂಚಿಸಿ ಮಕ್ಕಳಲ್ಲಿ ಪರಿಸರ ಪ್ರಜ್ಞೆಯನ್ನು ಜಾಗೃತಗೊಳಿಸಲು ಗಿಡಗಳನ್ನು ನೆಡುವುದರ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಒಂದು ಅರ್ಥಪೂರ್ಣ ಬದುಕನ ನಿರ್ಮಿಸಿಕೊಳ್ಳಬೇಕೆಂದು ಮಕ್ಕಳಿಗೆ ತಿಳಿಸಿದರು . ಮುಂದೆ ಎದುರಿಸಬೇಕಾದ ಪರಿಣಾಮಗಳ ಬಗ್ಗೆ ಈಗಿನಿಂದಲೇ ಅರಿತು ಅದರಿಂದ ಆಗುವ ದುಷ್ಪರಿಣಾಮಗಳನ್ನು ಪರಿಹರಿಸುವ ಮಾರ್ಗಗಳನ್ನು ತಿಳಿದು ನಾವೆಲ್ಲರೂ ಜಾಗೃತರಾಗಿ ಮುಂದಿನ ಪೀಳಿಗೆಗೆ ಸಮೃದ್ಧ ಪರಿಸರವನ್ನು ನೀಡಬೇಕು ಎಂದು ಮಕ್ಕಳಿಗೆ ಹಿತವಚನಗಳನ್ನ ನೀಡಿ ಪರಿಸರ ಪ್ರಜ್ಞೆಯನ್ನು ಮೂಡಿಸಿದರು.  ಶಾಲೆಯ ವಿಜ್ಞಾನ ಶಿಕ್ಷಕರಾದ ಪದ್ಮಾಕರ್ ಮಾತನಾಡಿ ಇಂದಿನ ಉಷ್ಣಾಂಶ ಏರಳಿತ  ಪರಿಸರ ಮಾಲಿನ್ಯದ  ಹೆಚ್ಚಳದ ಬಗ್ಗೆ ತಿಳಿಸುತ್ತಾ  ಪ್ರಕೃತಿಯಲ್ಲಿ ಆಗುತ್ತಿರುವ ಅವಮಾನ ವೈ ಪರಿತ್ಯ ರೋಗರುಜನೆಗಳ ಸಂಖ್ಯೆ ಹೆಚ್ಚಳದಿಂದಾಗಿ ಬದುಕಲು ದುಸ್ತರವಾಗಿದೆ ಹಾಗಾಗಿ ಮುಂ

ಹುಳಿಯಾರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಚರಣೆ

ಹುಳಿಯಾರಿನ ಬಿಹೆಚ್ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಲ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಹಾಗೂ ಗಿಡ ನೆಡುವ ಮೂಲಕ 132ನೇ ಜಯಂತಿಯನ್ನು ಆಚರಿಸಲಾಯಿತು. ಉಪನ್ಯಾಸಕ ನರೇಂದ್ರಬಾಬು ಮಾತನಾಡಿ ಶೋಷಿತರ ಏಳಿಗೆಗಾಗಿ ಹೋರಾಡಿದ, ಸಮಾನತೆಯ ಮಾರ್ಗ ತೋರಿದ, ಹೋರಾಟದ ಮುಖಾಂತರ ಶೋಷಿತರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮಿಸಿದ ಅಂಬೇಡ್ಕರ್ ಅವರ ಆದರ್ಶ ಎಲ್ಲರೂ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಎಬಿವಿಪಿ ಸಂಚಾಲಕ ಗುರುಪ್ರಸಾದ್ ಮಾತನಾಡಿ ಅಂಬೇಡ್ಕರ್ ಜನ್ಮದಿನವನ್ನು ವಿಶ್ವ ಜ್ಞಾನ ದಿನ ಎಂದು ಆಚರಿಸಲಾಗುತ್ತಿದ್ದು ಪ್ರತಿಯೊಬ್ಬ ಭಾರತೀಯರ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ಶಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಾಗಿದ್ದು, ಅವರ ವಿಚಾರಧಾರೆಗಳು ಇಂದಿಗೂ ಎಂದಿಗೂ ಪ್ರಸ್ತುತ ಎಂದರು. ಹೆಚ್‍.ಡಿ.ರಾಮಚಂದ್ರಯ್ಯನವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೂರಾನಿ  ಮಸೀದಿಯ ಮುತುವಲ್ಲಿ  ಆರಿಫ್‌ರವರು, ಕಾಲೋನಿ ಮುಖ್ಯಸ್ಥರಾದಂತಹ ಹೆಚ್.ಎನ್.ದುರ್ಗಯ್ಯನವರು, ಹೆಚ್.ಬಿ.ಕೃಷ್ಣಯ್ಯನವರು, ಪ್ಲೇನಿಂಗ್ ಮಿಲ್ ನಾಗಣ್ಣನವರು, ಶಿಕ್ಷಕ ಹಾಗಲವಾಡಿ ಚಿಕ್ಕಣ್ಣನವರು, ಡಿಎಸ್ಎಸ್ ಸಂಚಾಲಕ ರಾಘವೇಂದ್ರ, ಇಮ್ರಾಜ್ , ಹಾರ್ಡ್ವೇರ್ ಬಸವರಾಜು ಮೊದಲಾದವರು ಹಾಜರಿದ್ದರು.

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್