ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಬೋರನಕಣಿವೆ ಸಾಯಿಧಾಮದಲ್ಲಿ ನರ್ಮದೋದ್ಭವ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಹ್ಯಾಟ್ರಿಕ್ ಹಿರೋ ಶಿವಣ್ಣ ದಂಪತಿ ಭಾಗಿ

ಇತ್ತೀಚಿನ ಪೋಸ್ಟ್‌ಗಳು

​ಬೋರನಕಣಿವೆ ಸಾಯಿಧಾಮದಲ್ಲಿ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಉಪಲೋಕಾಯುಕ್ತ ಬಿ. ವೀರಪ್ಪ ಭಾಗಿ

​ಬೋರನಕಣಿವೆ ಸಾಯಿಧಾಮದಲ್ಲಿ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಉಪಲೋಕಾಯುಕ್ತ ಬಿ. ವೀರಪ್ಪ ಭಾಗಿ ​ ಹುಳಿಯಾರು : ಸಮೀಪದ ಬೋರನಕಣಿವೆಯ ಸಾಯಿಧಾಮದಲ್ಲಿ ಶ್ರೀ ಶಿರಡಿ ಸಾಯಿಬಾಬಾ ಇಂಟರ್ ನ್ಯಾಷನಲ್ ಸರ್ವೀಸ್ ಫೌಂಡೇಷನ್ ಹಾಗೂ ಸೇವಾ ಚೇತನ ವತಿಯಿಂದ ಭಾನುವಾರ ' ನರ್ಮದೋದ್ಭವ ಕಣಿವೆ ಶಂಕರನ' ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಅತ್ಯಂತ ಸಡಗರದಿಂದ ನೆರವೇರಿತು. ಈ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಪಾಲ್ಗೊಂಡು ಶತ ನದಿಗಳ ಆವರಣ ಪೂಜೆಯನ್ನು ನೆರವೇರಿಸಿದರು.  ಬಳಿಕ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, "ದೇವಸ್ಥಾನಗಳ ಸ್ಥಾಪನೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸುತ್ತದೆ. ಶಿವನು ನಾಡಿನ ಜನತೆಗೆ ಉತ್ತಮ ಆರೋಗ್ಯ, ಸುಬುದ್ಧಿ ಹಾಗೂ ಐಶ್ವರ್ಯವನ್ನು ಕರುಣಿಸಲಿ" ಎಂದು ಹಾರೈಸಿದರು. ​ಇದೇ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಕಣಿವೆ ಶಂಕರನ ದರ್ಶನ ಪಡೆದರು.  ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಗ್ರಾಮಗಳ  ಭಕ್ತರು ಪಾಲ್ಗೊಂಡು ಪುನೀತರಾದರು.

ಉಚಿತ ಸಿಇಟಿ/ನೀಟ್ ತರಬೇತಿ ಶಿಬಿರದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಚಿಕ್ಕನಾಯಕನಹಳ್ಳಿ : ಪಟ್ಟಣದ ತೀ.ನಂ. ಶ್ರೀ ಭವನದಲ್ಲಿ 2024–25ನೇ ಸಾಲಿನ ಉಚಿತ ಸಿಇಟಿ/ನೀಟ್ ತರಬೇತಿ ಶಿಬಿರದಲ್ಲಿ ಅತ್ಯುತ್ತಮ ಸಾಧನೆ ಮಾಡಿಸಿ ಸರ್ಕಾರಿ ಸೀಟು ಪಡೆದುಕೊಂಡ ಎಸ್.ಬಿ. ಚಾರಿಟಬಲ್ ಟ್ರಸ್ಟ್‌ನ ವಿದ್ಯಾರ್ಥಿಗಳಿಗಾಗಿ “ಅಭಿನಂದನಾ ಸಮಾರಂಭ”ವನ್ನು  ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಾಸಕ ಸಿ.ಬಿ. ಸುರೇಶ್ ಬಾ ಬು ಅವರು ತಹಶೀಲ್ದಾರ್ ಹಾಗೂ ಎಸ್.ಬಿ. ಚಾರಿಟಬಲ್ ಟ್ರಸ್ಟ್‌ನ ಪದಾಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿ ಮಾತನಾಡಿದರು. ಉಚಿತ ತರಬೇತಿಯ ಮೂಲಕ ಗ್ರಾಮೀಣ ಹಾಗೂ ಬಡ ಕುಟುಂಬಗಳ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶ ಕಲ್ಪಿಸಿರುವ ಎಸ್.ಬಿ. ಚಾರಿಟಬಲ್ ಟ್ರಸ್ಟ್‌ನ ಕಾರ್ಯ ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳು ಪಡೆದಿರುವ ಸರ್ಕಾರಿ ಸೀಟುಗಳು ಅವರ ಶ್ರಮ ಹಾಗೂ ಸಂಸ್ಥೆಯ ಮಾರ್ಗದರ್ಶನದ ಫಲವಾಗಿದೆ ಎಂದರು. ಸರ್ಕಾರಿ ಸೀಟು ಪಡೆದ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಲ್ಯಾಪ್‌ಟಾಪ್‌ಗಳು ಹಾಗೂ ಅಗತ್ಯ ಶಿಕ್ಷಣ ಸಲಕರಣೆಗಳನ್ನು ವಿತರಿಸಲಾಯಿತು. ಮುಂದುವರಿದು ಮಾತನಾಡಿದ ಶಾಸಕ ಸುರೇಶ್ ಬಾಬು ಅವರು, “ನಾಳೆ ನಿಮ್ಮಲ್ಲಿ ಕೆಲವರು ಅಧಿಕಾರಿಗಳಾಗಿ ನಮ್ಮ ತಾಲೂಕಿಗೆ ಮರಳಿ ಬರುವ ದಿನಗಳು ಬರಬೇಕು. ಸಮಾಜಕ್ಕೆ ಸೇವೆ ಸಲ್ಲಿಸುವ ಶಕ್ತಿ ಶಿಕ್ಷಣದಲ್ಲಿದೆ” ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಮುಂದಿನ ದಿ...

ಹುಳಿಯಾರಮ್ಮನವರ 13ನೇ ವರ್ಷದ ಜಾತ್ರಾ ಮಹೋತ್ಸವ ( ಜ.31 ರ ಶನಿವಾರದಿಂದ ಫೆ.8 ರ ಭಾನುವಾರದವರೆಗೆ)

* ಹುಳಿಯಾರಮ್ಮನವರ 13ನೇ ವರ್ಷದ ಜಾತ್ರಾ ಮಹೋತ್ಸವ ( ಜ.31 ರ ಶನಿವಾರದಿಂದ ಫೆ.8 ರ ಭಾನುವಾರದವರೆಗೆ )* ಹುಳಿಯಾರು ಗ್ರಾಮದೇವತೆ ಶ್ರೀ ಹುಳಿಯಾರಮ್ಮನವರ 13ನೇ ವರ್ಷದ ಜಾತ್ರಾ ಮಹೋತ್ಸವ ಜ.31 ರ ಶನಿವಾರದಿಂದ ಫೆ.8 ರ ಭಾನುವಾರದವರೆಗೆ ಹಮ್ಮಿಕೊಳ್ಳಲಾಗಿದೆ . ಜ.31 ಹಾಗೂ ಫೆ.1 ರಂದು ಕೋಡಿಪಾಳ್ಯ,ಲಿಂಗಪ್ಪನಪಾಳ್ಯ,ಕಾಮಶೆಟ್ಟಿಪಾಳ್ಯ ,ಸೋಮಜ್ಜನಪಾಳ್ಯದಲ್ಲಿ ಮಡಿಲಕ್ಕಿ ಸೇವೆ ನಡೆಯಲಿದೆ. ಫೆ.2 ರ ಸೋಮವಾರದಂದು ಧ್ವಜಾರೋಹಣ, ಅಂಕುರಾರ್ಪಣೆ ಹಾಗೂ ಅಮ್ಮನವರ ಮಧುವಣಗಿತ್ತಿ ಸೇವೆ ನಡೆಯಲಿದೆ. ಫೆ.3 ರ ಮಂಗಳವಾರ ಆರತಿ ಬಾನ ಹಾಗೂ ಎಡೆ ಸೇವೆ ನಡೆಯಲಿದೆ. ಫೆ.4 ರ ಬುಧವಾರ ಹುಳಿಯಾರು ಗ್ರಾಮದೇವತೆ ದುರ್ಗಮ್ಮನವರು , ಹುಳಿಯಾರು ಕೆಂಚಮ್ಮದೇವಿ, ಸೋಮಜ್ಜನಪಾಳ್ಯದ ಅಂತರಘಟ್ಟೆ ಅಮ್ಮನವರು, ಗೌಡಗೆರೆ ದುರ್ಗಮ್ಮ, ದಮ್ಮಡಿಹಟ್ಟಿ ಈರಬೊಮ್ಮಕ್ಕ ದೇವಿ, ,ಕೆ.ಸಿ.ಪಾಳ್ಯದ ಅಂತರಘಟ್ಟೆ ಅಮ್ಮ ಹಾಗೂ ದೊಡ್ಡಬಿದರೆ ಕರಿಯಮ್ಮ ದೇವರುಗಳ ಆಗಮನ ಹಾಗೂ ಕೂಡು ಭೇಟಿ ಕಾರ್ಯ ನಡೆಯಲಿದೆ.  ಫೆ.5 ರ ಗುರುವಾರದಂದು ಬೆಳಗ್ಗೆ 7.30 ಕ್ಕೆ ಕಳಸ ಮಹೋತ್ಸವ ಹಾಗೂ ಅನ್ನಸಂತರ್ಪಣೆ , ಫೆ.6 ರ ಶುಕ್ರವಾರದಂದು ಗಣಪತಿ ಹಾಗೂ ಅಷ್ಟಲಕ್ಷ್ಮಿ ಹೋಮ, ಸಂಜೆ ಧೂತರಾಯ ಸ್ವಾಮಿ ಅವರ ಅದ್ದೂರಿ ಮಣೇವು ಕಾರ್ಯಕ್ರಮ,  ಫೆ.7 ರ ಶನಿವಾರ ಕಂಕಣವಿಸರ್ಜನೆ ,ಓಕಳಿ ಮತ್ತು  ಫೆ.8 ರಂದು ಮಡಿಲಕ್ಕಿ ಸೇವೆಯೊಂದಿಗೆ ಜಾತ್ರೆಗೆ ತೆರೆ ಬೀಳಲಿದೆ. ಕ ...

‘ಪೂಜ್ಯರ ನಡೆ – ಭಕ್ತರ ಮನೆ, ಮನಗಳ ಕಡೆ’ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ

ಚಿಕ್ಕನಾಯಕನಹಳ್ಳಿಯಲ್ಲಿ ಶ್ರೀ ಬಸವರಮಾನಂದ ಸ್ವಾಮೀಜಿ ಮಾರ್ಗದರ್ಶನ ಚಿಕ್ಕನಾಯಕನಹಳ್ಳಿ : ವನಕಲ್ಲು ಮಲ್ಲೇಶ್ವರ ಮಠದ ಪರಮ ಪೂಜ್ಯರಾದ ಶ್ರೀ ಶ್ರೀ ಶ್ರೀ ಬಸವರಮಾನಂದ ಸ್ವಾಮೀಜಿಗಳು ಇಂದು ಚಿಕ್ಕನಾಯಕನಹಳ್ಳಿಯ ಪ್ರವಾಸಿ ಮಂದಿರಕ್ಕೆ ಆಗಮಿಸಿ, “ ಪೂಜ್ಯರ ನಡೆ – ಭಕ್ತರ ಮನೆ, ಮನಗಳ ಕಡೆ ” ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿ ಮಾರ್ಗದರ್ಶನ ನೀಡಿದರು.                   ಇದೇ ತಿಂಗಳ 27-01-2026 (ಮಂಗಳವಾರ) ರಿಂದ 7 ದಿನಗಳ ಕಾಲ ನಡೆಯಲಿರುವ ಈ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಕಾಡುಗೊಲ್ಲರ ಹಟ್ಟಿಗಳಲ್ಲಿ ನಡೆಯಬೇಕಾದ ಪ್ರವಾಸ ಹಾಗೂ ಕಾರ್ಯಕ್ರಮಗಳ ರೂಪುರೇಷೆ ಕುರಿತು ಸಮಗ್ರವಾಗಿ ವಿಚಾರ ವಿನಿಮಯ ನಡೆಯಿತು.                   ಸಭೆಯಲ್ಲಿ ಮುಖ್ಯವಾಗಿ ಕಾಡುಗೊಲ್ಲರ ಹಟ್ಟಿಗಳ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಪ್ರಗತಿ ಕುರಿತು ವಿಸ್ತೃತ ಚರ್ಚೆ ನಡೆಸಿ, ಸಮುದಾಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ನಿರ್ಧಾರ ಕೈಗೊಳ್ಳಲಾಯಿತು. ಈ ಪೂರ್ವಭಾವಿ ಸಭೆಯಲ್ಲಿ ಶಿವಣ್ಣ (ಮಾದಾಪುರ), ಮಲ್ಲಿಕಾರ್ಜುನ್ (ರಾಮಪ್ಪನಹಟ್ಟಿ), ವಿಶ್ವನಾಥ್ ಪೂಜಾರಿ, ಮಂಜು (ಕೆಂಪರಾಯನಹಟ್ಟಿ), ಕದುರೇಗೌಡ, ಅಜ್ಜಪ್ಪ, ಲೋಕೇಶ್, ಈರಣ್ಣ ...

ಚಿಕ್ಕನಾಯಕನಹಳ್ಳಿಯಲ್ಲಿ 'ಪಬ್ಲಿಕ್ ಫಸ್ಟ್ ಕನ್ನಡ' ವಾಹಿನಿ ಲೋಗೊ ಲೋಕಾರ್ಪಣೆ

ಚಿಕ್ಕನಾಯಕನಹಳ್ಳಿ : ತಾಲ್ಲೂಕಿನ ಹಿರಿಯ ಪತ್ರಕರ್ತ ಗಜೇಂದ್ರ ಅವರು ನೂತನವಾಗಿ ಆರಂಭಿಸಿರುವ 'ಪಬ್ಲಿಕ್ ಫಸ್ಟ್ ಕನ್ನಡ' (Public First Kannada) ನ್ಯೂಸ್ ವಾಹಿನಿಯ ಲೋಗೋ ಹಾಗೂ ವೆಬ್‌ಸೈಟ್ ಬಿಡುಗಡೆ ಸಮಾರಂಭವು ಇಂದು ಚಿಕ್ಕನಾಯಕನಹಳ್ಳಿ ಪಟ್ಟಣದ ಹೊಯ್ಸಳ ಪಾರ್ಟಿ ಹಾಲ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಗಣ್ಯರಿಂದ ಲೋಗೋ ಲೋಕಾರ್ಪಣೆ : ಮಾಜಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಚಾನೆಲ್‌ನ ಲೋಗೋ ಮತ್ತು ವೆಬ್‌ಸೈಟ್ ಉದ್ಘಾಟಿಸಿ ಗಜೇಂದ್ರ ಅವರಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದ ತಮ್ಮಡಿಹಳ್ಳಿ ಮಠದ ಡಾ. ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಕುಪ್ಪೂರು ಗದ್ದಿಗೆ ಮಠದ ಆಡಳಿತಾಧಿಕಾರಿಗಳಾದ ವಾಗೀಶ್ ಪಂಡಿತಾರಾಧ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರಮುಖ ಅತಿಥಿಗಳು :  * ಶ್ರೀಮತಿ ಮಮತಾ : ತಹಸೀಲ್ದಾರ್, ಚಿಕ್ಕನಾಯಕನಹಳ್ಳಿ ತಾಲ್ಲೂಕು.  * ಚೇತನ್ : ತಾಲ್ಲೂಕು ಅಧ್ಯಕ್ಷರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ).- --------------- ಹ ತ್ತಾರು ವರ್ಷಗಳ ಅನುಭವದ ಫಲ ಕಳೆದ ಹತ್ತಾರು ವರ್ಷಗಳಿಂದ ಜಿಲ್ಲೆಯ ವಿವಿಧ ಪ್ರಮುಖ ನ್ಯೂಸ್ ವಾಹಿನಿಗಳಲ್ಲಿ ಹಾಗೂ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸಿರುವ ಗಜೇಂದ್ರ ಅವರು, ಈಗ ಸ್ವಂತ ವಾಹಿನಿಯನ್ನು ಆರಂಭಿಸುವ ಮೂಲಕ ಮಾಧ್...

ನಾಳೆ ಸ್ವಾಮಿ ವಿವೇಕಾನಂದ ಜಯಂತಿ–ರಾಷ್ಟ್ರೀಯ ಯುವದಿನ ಆಚರಣೆ

  ಸ್ವಾಮಿ ವಿವೇಕಾನಂದ ಜಯಂತಿ–ರಾಷ್ಟ್ರೀಯ ಯುವದಿನ ಆಚರಣೆ  -------------------------- ಹುಳಿಯಾರು : ಕನಕದಾಸ ಹಿರಿಯ ವಿದ್ಯಾರ್ಥಿಗಳ ಸಂಘ, ಹುಳಿಯಾರು ವತಿಯಿಂದ 163ನೇ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವದಿನ ಕಾರ್ಯಕ್ರಮವನ್ನು ನಾಳೆ ಸೋಮವಾರ (ಜ.12, 2026)ರ ಬೆಳಿಗ್ಗೆ 11 ಗಂಟೆಗೆ ನಗರದ ಕನಕದಾಸ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಕನಕದಾಸ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೆಚ್.ಬಿ. ಅಶ್ವಿನಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕನಕದಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀ ಜಿ.ವಿ. ಶಿವಪ್ರಕಾಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಶ್ರೀ ಹೆಚ್.ಪಿ. ರಾಘವೇಂದ್ರಾಚಾರ್ ಅವರು ಯುವಜನತೆಗೆ ಪ್ರೇರಣಾದಾಯಕ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಹುಳಿಯಾರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ  ಪ್ರೀತಿರಾಘವೇಂದ್ರ ಭಾಗವಹಿಸಲಿದ್ದು, ಕನಕದಾಸ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ  ಎನ್.ಜಿ. ನಾಗೇಂದ್ರಪ್ಪ ಅತಿಥಿಯಾಗಿ ಉಪಸ್ಥಿತರಿರಲಿದ್ದಾರೆ. ಇದಲ್ಲದೆ ವಿವಿಧ ವಿಭಾಗಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಕನಕದಾಸ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಜಿ. ಬಾಲಾಜಿ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕ...