ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಹುಳಿಯಾರು: ಮೊಬೈಲ್ ಮೂಲಕ 'ಸ್ವಯಂ ಜನಗಣತಿ'ಗೆ ಚಾಲನೆ

ಇತ್ತೀಚಿನ ಪೋಸ್ಟ್‌ಗಳು

ಕೆಂಕೆರೆಯಲ್ಲಿ ಇಂದಿನಿಂದ (ಏಪ್ರಿಲ್ 4ರಿಂದ) ಶ್ರೀ ಕಾಳಿಕಾಂಬಾ ದೇವಿ ಜಾತ್ರಾ ಮಹೋತ್ಸವ

ಕೆಂಕೆರೆಯಲ್ಲಿ ಇಂದಿನಿಂದ (ಏಪ್ರಿಲ್ 4ರಿಂದ) ಶ್ರೀ ಕಾಳಿಕಾಂಬಾ ದೇವಿ ಜಾತ್ರಾ ಮಹೋತ್ಸವ ----------- ​ವರದಿ :✍️ ನರೇಂದ್ರಬಾಬು-ಹುಳಿಯಾರು ----------- ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದಲ್ಲಿ ನೆಲೆಸಿರುವ ಲೋಕಮಾತೆ ಶ್ರೀ ಕಾಳಿಕಾಂಬಾ ದೇವಿಯವರ ಜಾತ್ರಾ ಮಹೋತ್ಸವವು ಇಂದು ಏಪ್ರಿಲ್ 4ರಿಂದ 11ರವರೆಗೆ ಅತ್ಯಂತ ವೈಭವದಿಂದ ಜರುಗಲಿದೆ. ​ಎಂಟು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ  ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.  ಜಾತ್ರೆಯ ಪ್ರಮುಖ ಆಕರ್ಷಣೆಯಾದ 'ಅಗ್ನಿಕುಂಡ ಸೇವೆ' ಏಪ್ರಿಲ್ 4, 5 ಹಾಗೂ 6ರಂದು (ಶನಿವಾರ, ಭಾನುವಾರ ಮತ್ತು ಸೋಮವಾರ) ಸತತ ಮೂರು ದಿನಗಳ ಕಾಲ ಸಂಜೆ ಜರುಗಲಿದೆ. ​ಕಾರ್ಯಕ್ರಮದ ವಿವರ: ​ಏಪ್ರಿಲ್ 07 (ಮಂಗಳವಾರ): ಅಂದು 'ದೊಡ್ಡಬಾನ' ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 11 ಗಂಟೆಗೆ ಶ್ರೀ ಕಾಳಿಕಾಂಬಾ ದೇವಿ, ಶ್ರೀ ಈರಬೊಮ್ಮಕ್ಕ ದೇವಿ, ಶ್ರೀ ದುರ್ಗಮ್ಮ ದೇವಿ ಹಾಗೂ ಶ್ರೀ ಅಂಬಿಕಾ ದೇವಿಯವರ ಆಗಮನ ಮತ್ತು  'ಕೂಡು ಭೇಟಿ'  ನಡೆಯಲಿದೆ. ದಮ್ಮಡಿಹಟ್ಟಿ ಗ್ರಾಮಸ್ಥರಿಂದ ಮದವಣಗಿತ್ತಿ ಕಾರ್ಯಕ್ರಮ ನಡೆಯಲಿದೆ. ​ಏಪ್ರಿಲ್ 08 (ಬುಧವಾರ): ಅಂದು ಮಡಿಲಕ್ಕಿ ಸೇವೆ ನೆರವೇರಲಿದ್ದು, ರಾತ್ರಿ 10 ಗಂಟೆಗೆ ಕೆಂಕೆರೆಯ ಶನೇಶ್ವರ ಕಲಾ ಸಂಘದ ವತಿಯಿಂದ 'ರಾಜ ಸತ್ಯವ್ರತ ಮತ್ತು ಶನಿ ಪ್ರಭಾವ' ಎಂಬ ಪೌರಾಣಿಕ ನ...

*ಇಂದಿನಿಂದ (ಏ.4 ರಿಂದ) ಹುಳಿಯಾರು ದುರ್ಗಮ್ಮನ ಜಾತ್ರೆ ಆರಂಭ*

*ಇಂದಿನಿಂದ (ಏ.4 ರಿಂದ) ಹುಳಿಯಾರು ದುರ್ಗಮ್ಮನ ಜಾತ್ರೆ ಆರಂಭ* ----------------------- ಹುಳಿಯಾರು ಗ್ರಾಮದೇವತೆ ಶ್ರೀದುರ್ಗಾಪರಮೇಶ್ವರಿ ದೇವಿಯ 54ನೇ ವರ್ಷದ  ಜಾತ್ರಾಮಹೋತ್ಸವ ಇಂದು ಏ.4 ರ ಶನಿವಾರದಿಂದ ಪ್ರಾರಂಭಗೊಂಡು 12 ರ ಭಾನುವಾರದವರೆಗೆ ಒಂಬತ್ತು ದಿನಗಳ ಕಾಲ ಜರುಗಲಿದೆ. ಏ.4 ರ ಶನಿವಾರ ಕೋಡಿಪಾಳ್ಯ, ಲಿಂಗಪ್ಪನಪಾಳ್ಯದವರಿಂದ ಹಾಗೂ 5 ರ ಭಾನುವಾರ ಕಾಮಶೆಟ್ಟಿಪಾಳ್ಯ,ಸೋಮಜ್ಜನ ಪಾಳ್ಯದ ಭಕ್ತಾಧಿಗಳಿಂದ ಅಮ್ಮನವರಿಗೆ ಮಡಿಲಕ್ಕಿ ಸೇವೆ ನಡೆಯಲಿದೆ. ಏ.6ರ ಸೋಮವಾರ ಬೆಳಿಗ್ಗೆ ಎಡೆಸೇವೆ,ಸಂಜೆ ಅಮ್ಮನವರ ಮಧುವಣಗಿತ್ತಿ ಕಾರ್ಯ ಹಾಗೂ ಧ್ವಜಾರೋಹಣ ಮತ್ತು ಅಂಕುರಾರ್ಪಣೆ ಕಾರ್ಯ ನಡೆಯಲಿದೆ. ಏ.7 ರ ಮಂಗಳವಾರ ಗ್ರಾಮಸ್ಥರಿಂದ ಆರತಿಬಾನ, ಎಡೆಸೇವೆ ನಡೆಯಲಿದೆ. ಏ.8ರ ಬುಧವಾರ ರಾತ್ರಿ ಹುಳಿಯಾರು ಗ್ರಾಮದೇವತೆ ಹುಳಿಯಾರಮ್ಮ, ಕೆಂಚಮ್ಮನವರು,ಹೊಸಹಳ್ಳಿಯ ಶ್ರೀ ಕೊಲ್ಲಾಪುರದಮ್ಮ ,ಹೊಸಹಳ್ಳಿ ಪಾಳ್ಯದ ಅಂತರಘಟ್ಟೆಅಮ್ಮ, ಗೌಡಗೆರೆಯ ದುರ್ಗಮ್ಮ, ತಿರುಮಲಾಪುರದ ಕೊಲ್ಲಾಪುರದಮ್ಮ, ಕೆಸಿ ಪಾಳ್ಯದ ಶ್ರೀ ಅಂತರಘಟ್ಟಮ್ಮ , ಸೋಮಜ್ಜನ ಪಾಳ್ಯದ ಶ್ರೀ ಅಂತರಘಟ್ಟಮ್ಮ  ದೇವರುಗಳ ಆಗಮನದೊಂದಿಗೆ ಕೂಡುಭೇಟಿ ನಡೆದು ನಂತರ ಗಂಗಾಸ್ನಾನಕ್ಕೆ ಹುಳಿಯಾರು ಕೆರೆಗೆ ದಯಮಾಡಿಸುವುದು. ಏ.9 ರ ಗುರುವಾರ ಮುಂಜಾನೆ 7ಕ್ಕೆ ಕೆರೆಯ ಹತ್ತಿರ ಕಳಸ ಸ್ಥಾಪನೆ ನಡೆದು ನಂತರ ಕಳಸ ಸಮೇತ ನಡೆಮುಡಿಯಲ್ಲಿ ಅಮ್ಮನವರ ಮೂಲಸ್ಥಾನಕ್ಕೆ ದಯಮಾಡಿಸುವ...

ಹಣ್ಣು ಹಂಪಲು ವಿತರಣೆ ಮೂಲಕ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ

ಹಣ್ಣು ಹಂಪಲು ವಿತರಣೆ ಮೂಲಕ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ ಚಿಕ್ಕನಾಯಕನಹಳ್ಳಿ , ಏಪ್ರಿಲ್ 2 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬದ ಅಂಗವಾಗಿ ತಾಲೂಕಿನ ಮಾಸಾಶನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಸಿಬ್ಬಂದಿಗಳು ಪ್ರತಿ ಮನೆಗೆ ಭೇಟಿ ನೀಡಿ ಫಲಾನುಭವಿಗಳ ಕ್ಷೇಮ ಸಮಾಚಾರ ವಿಚಾರಿಸಿ, ಹಣ್ಣು ಹಂಪಲುಗಳನ್ನು ಹಂಚುವ ಮೂಲಕ ಮಾನವೀಯತೆ ಮೆರೆದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಪ್ರೇಮಾನಂದ ಎಲ್.ಬಿ., ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಪ್ರಕಾಶ್, ಸದಸ್ಯ ಉಮೇಶ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕವಿತಾ, ಮೇಲ್ವಿಚಾರಕರಾದ ಆಶಾ, ಗಾಯತ್ರಿ, ವಸಂತ್ ಹಾಗೂ ಚೈತ್ರ ಸೇರಿದಂತೆ ಸೇವಾ ಪ್ರತಿನಿಧಿಗಳು, ಒಕ್ಕೂಟ ಪದಾಧಿಕಾರಿಗಳು ಮತ್ತು ಸಂಘಗಳ ಸದಸ್ಯರು ಉಪಸ್ಥಿತರಿದ್ದರು. ಈ ವೇಳೆ ಎಲ್ಲರೂ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.

ದಾಖಲೆ ಬರೆದ ಹುಳಿಯಾರು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ: ಕೇವಲ ಒಂದೂಕಾಲು ಗಂಟೆಯಲ್ಲಿ 60 ಅಜೆಂಡಾಗಳಿಗೆ ಒಪ್ಪಿಗೆ!

ದಾಖಲೆ ಬರೆದ ಹುಳಿಯಾರು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ: ಕೇವಲ ಒಂದೂಕಾಲು ಗಂಟೆಯಲ್ಲಿ 60 ಅಜೆಂಡಾಗಳಿಗೆ ಒಪ್ಪಿಗೆ! ------------------ ಹುಳಿಯಾರು : ಅತಿ ಹೆಚ್ಚಿನ ವಿಷಯಗಳಿದ್ದರೂ ಯಾವುದೇ ಗದ್ದಲ, ಗೊಂದಲವಿಲ್ಲದೆ ಅತ್ಯಂತ ಸುಸೂತ್ರವಾಗಿ ನಡೆದ ಹುಳಿಯಾರು ಪಟ್ಟಣ ಪಂಚಾಯಿತಿಯ ಇಂದಿನ ಸಾಮಾನ್ಯ ಸಭೆಯು ಹೊಸ ದಾಖಲೆ ಬರೆದಿದೆ. ನೂತನ ಅಧ್ಯಕ್ಷೆ ಪ್ರೀತಿ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ಹಾಗೂ ಶಾಸಕ ಸಿ.ಬಿ. ಸುರೇಶ್ ಬಾಬು ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ಒಟ್ಟು 60 ಪ್ರಮುಖ ವಿಷಯಗಳನ್ನು ಕೇವಲ ಒಂದೂಕಾಲು ಗಂಟೆಯೊಳಗೆ ಚರ್ಚಿಸಿ ಅನುಮೋದನೆ ನೀಡಲಾಯಿತು. ಸಾಮಾನ್ಯವಾಗಿ ಹುಳಿಯಾರು ಪಂಚಾಯಿತಿ ಸಭೆ ಎಂದರೆ ಇಡೀ ದಿನ ಗದ್ದಲ-ಕೋಲಾಹಲಗಳಿಂದ ಕೂಡಿರುತ್ತಿತ್ತು. ಆದರೆ ಇಂದು ಎಲ್ಲಾ ಕೌನ್ಸಿಲರ್‌ಗಳ ಸಹಕಾರದೊಂದಿಗೆ ಅಭಿವೃದ್ಧಿ ಪರ ನಿರ್ಧಾರಗಳನ್ನು ಶೀಘ್ರವಾಗಿ ತೆಗೆದುಕೊಳ್ಳುವ ಮೂಲಕ ಸಭೆ ವಿಶೇಷ ಗಮನ ಸೆಳೆಯಿತು. ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಕ್ ಆಯ್ಕೆ : ಸಭೆಯ ಆರಂಭದಲ್ಲಿ ಸರ್ಕಾರಿ ಸುತ್ತೋಲೆಗಳನ್ನು ಮಂಡಿಸಲಾಯಿತು. ಇತ್ತೀಚೆಗೆ ಅಕಾಲಿಕ ನಿಧನರಾದ ಸ್ಥಾಯಿ ಸಮಿತಿ ಅಧ್ಯಕ್ಷ ಒಳಗೆ ಚಂದ್ರಶೇಖರ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಕೌನ್ಸಿಲರ್ ಎಸ್.ಆರ್.ಎಸ್ ದಯಾನಂದ್ ಅವರನ್ನು ಸದಸ್ಯರನ್ನಾಗಿ ಹಾಗೂ ಅಧ್ಯಕ್ಷ ಸ್ಥಾನಕ್ಕೆ ಅಬೂಬಕ್ಕರ್ ಸಿದ್ದೀಕ್ ಅವರನ್ನು ಸರ್ವಾನುಮ...

ಹುಳಿಯಾರಿನಲ್ಲಿ ಸಿದ್ಧಗಂಗಾ ಶ್ರೀಗಳ 119ನೇ ಜನ್ಮದಿನೋತ್ಸವ ಆಚರಣೆ: ಶ್ರದ್ಧಾಭಕ್ತಿಯ ನಮನ

ಹುಳಿಯಾರಿನಲ್ಲಿ ಸಿದ್ಧಗಂಗಾ ಶ್ರೀಗಳ 119ನೇ ಜನ್ಮದಿನೋತ್ಸವ ಆಚರಣೆ: ಶ್ರದ್ಧಾಭಕ್ತಿಯ ನಮನ- -------------- ಹುಳಿಯಾರು : ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಹುಳಿಯಾರಿನ ರಾಮಗೋಪಾಲ್ ಸರ್ಕಲ್ ಬಳಿಯ ಭೈರವೇಶ್ವರ ಮೆಡಿಕಲ್ಸ್ ಮುಂಭಾಗದಲ್ಲಿ ಚನ್ನಬಸವಯ್ಯ ಅವರ ನೇತೃತ್ವದಲ್ಲಿ ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಮಾಜಿ ಶಾಸಕ ಕೆ.ಎಸ್. ಕಿರಣ್ ಕುಮಾರ್ ಅವರು ಮಾತನಾಡಿ, ಡಾ. ಶಿವಕುಮಾರ ಸ್ವಾಮೀಜಿಯವರು ಇಡೀ ವಿಶ್ವಕ್ಕೆ ಮಾದರಿಯಾದವರು. ಅವರ ದಾಸೋಹ ಸಂಸ್ಕೃತಿ ಮತ್ತು ಬದುಕಿನ ಆದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಸಕ ಸಿ.ಬಿ. ಸುರೇಶ್ ಬಾಬು ಅವರು ಶ್ರೀಗಳ ಸೇವೆಯನ್ನು ಸ್ಮರಿಸಿ ಮಾತನಾಡಿ, ಸಾವಿರಾರು ವಿದ್ಯಾರ್ಥಿಗಳಿಗೆ ಅಕ್ಷರ ಮತ್ತು ಅನ್ನದ ದಾಸೋಹ ನೀಡಿದ ಸಿದ್ಧಗಂಗಾ ಮಠವು ಒಂದು ಪುಣ್ಯಕ್ಷೇತ್ರ. ಶ್ರೀಗಳು ಇತರ ಮಠಗಳಂತೆ ಶಾಖಾ ಮಠಗಳನ್ನು ತೆರೆಯಲು ಮುಂದಾಗದೆ, ಒಂದೇ ಮಠದ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ್ದಾರೆ. ಇಂದು ದೇಶ-ವಿದೇಶಗಳಲ್ಲಿ ಇಲ್ಲಿನ ವಿದ್ಯಾರ್ಥಿಗಳು ವೈದ್ಯರಾಗಿ, ಇಂಜಿನಿಯರ್ ಆಗಿ ಸೇವೆ...

ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕ ಸಮಸ್ಯೆಗಳ ಸರಣಿ: ಮುಖ್ಯಾಧಿಕಾರಿಗೆ ನಾಗರಿಕ ಹಿತ ರಕ್ಷಣಾ ವೇದಿಕೆಯಿಂದ ಮೂರು ಮನವಿ ಪತ್ರ

ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕ ಸಮಸ್ಯೆಗಳ ಸರಣಿ: ಮುಖ್ಯಾಧಿಕಾರಿಗೆ ನಾಗರಿಕ ಹಿತ ರಕ್ಷಣಾ ವೇದಿಕೆಯಿಂದ ಮೂರು ಮನವಿ ಪತ್ರ ---------- ಹುಳಿಯಾರು : ಪಟ್ಟಣದ ಬೀದಿ ಬದಿ ವ್ಯಾಪಾರಿಗಳು ಫುಟ್‌ಪಾತ್ ಮೇಲೆ ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಫುಟ್ಪಾತ್ ಮೇಲೆ ಸಾರ್ವಜನಿಕರಿಗೆ ಅಡ್ಡಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳ ತೆರವು, ಪಟ್ಟಣ ಪಂಚಾಯಿತಿಯಲ್ಲಿನ ಸಿಬ್ಬಂದಿ ಕೊರತೆ ನೀಗಿಸುವುದು ಹಾಗೂ ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಹುಳಿಯಾರು ನಾಗರಿಕ ಹಿತರಕ್ಷಣಾ ವೇದಿಕೆ'ಯಿಂದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ  ಮನವಿ ಸಲ್ಲಿಸಲಾಯಿತು. ವೇದಿಕೆಯ ಪ್ರಮುಖರಾದ ರಾಮಕೃಷ್ಣಪ್ಪ ಅವರ ನೇತೃತ್ವದ ನಿಯೋಗವು ಮುಖ್ಯಾಧಿಕಾರಿ ಎಲ್.ವಿ. ಮಂಜುನಾಥ್ ಅವರನ್ನು ಭೇಟಿ ಮಾಡಿ ಮೂರು ಪ್ರತ್ಯೇಕ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು. ಫುಟ್‌ಪಾತ್ ತೆರವಿಗೆ ಆಗ್ರಹ : ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಮುಖ್ಯ ರಸ್ತೆಗಳ ಫುಟ್‌ಪಾತ್‌ಗಳ ಮೇಲೆ ವ್ಯಾಪಾರ ವಹಿವಾಟು ನಡೆಯುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ಅಲ್ಲದೆ, ವ್ಯಾಪಾರಿಗಳು ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವುದರಿಂದ ಅಶುಚಿತ್ವ ನಿರ್ಮಾಣವಾಗುತ್ತಿದೆ. ಆದ್ದರಿಂದ ಬೀದಿ ಬದಿ ವ್ಯಾಪಾರಿಗಳಿ...