ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕ ಸಮಸ್ಯೆಗಳ ಸರಣಿ: ಮುಖ್ಯಾಧಿಕಾರಿಗೆ ನಾಗರಿಕ ಹಿತ ರಕ್ಷಣಾ ವೇದಿಕೆಯಿಂದ ಮೂರು ಮನವಿ ಪತ್ರ

ಇತ್ತೀಚಿನ ಪೋಸ್ಟ್‌ಗಳು

ಸವಾಲುಗಳೇ ಇಂದಿನ ಯಶಸ್ಸಿಗೆ ಭದ್ರ ಬುನಾದಿ: ದೊಡ್ಡಬಿದರೆಯಲ್ಲಿ ಇಸ್ರೋ ವಿಜ್ಞಾನಿ ಡಾ. ಆರ್. ಶ್ರೀನಿವಾಸ್ ಸ್ಫೂರ್ತಿದಾಯಕ ನುಡಿ

ಸವಾಲುಗಳೇ ಇಂದಿನ ಯಶಸ್ಸಿಗೆ ಭದ್ರ ಬುನಾದಿ: ದೊಡ್ಡಬಿದರೆಯಲ್ಲಿ ಇಸ್ರೋ ವಿಜ್ಞಾನಿ ಡಾ. ಆರ್. ಶ್ರೀನಿವಾಸ್ ಸ್ಫೂರ್ತಿದಾಯಕ ನುಡಿ --------------------- ಹುಳಿಯಾರು : ಸಮೀಪದ ದೊಡ್ಡಬಿದರೆಯಲ್ಲಿರುವ ಜೆ.ಸಿ.ಎಂ. ಇಂಟರ್ನ್ಯಾಷನಲ್ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ತಾರಾ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಬಾಹ್ಯಾಕಾಶ ವಿಜ್ಞಾನ ಜಾಗೃತಿ' ಕಾರ್ಯಕ್ರಮದಲ್ಲಿ ಹೈದರಾಬಾದಿನ ಇಸ್ರೋ ವಿಜ್ಞಾನಿ ಡಾ. ಆರ್. ಶ್ರೀನಿವಾಸ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಪ್ರೇರಣೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಜ್ಞಾನ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇಸ್ರೋ ಪಯಣದ ರೋಚಕ ಇತಿಹಾಸ :ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಆರ್. ಶ್ರೀನಿವಾಸ್, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಅತ್ಯಂತ ಕಠಿಣ ಹಾದಿಯನ್ನು ದಾಟಿ ಇಂದು ಜಾಗತಿಕ ಮಟ್ಟದಲ್ಲಿ ಅಗ್ರಗಣ್ಯ ಸಂಸ್ಥೆಯಾಗಿ ಬೆಳೆದು ಬಂದ ಇತಿಹಾಸವನ್ನು ವಿವರಿಸಿದರು.  1963ರಲ್ಲಿ ಕೇರಳದ ತುಂಬಾದಲ್ಲಿರುವ ಒಂದು ಸಣ್ಣ ಚರ್ಚ್‌ನಲ್ಲಿ ಆರಂಭವಾದ ಭಾರತದ ಬಾಹ್ಯಾಕಾಶ ಪಯಣ, ಇಂದು ಚಂದ್ರಯಾನ ಮತ್ತು ಮಂಗಳಯಾನದಂತಹ ಬೃಹತ್ ಸಾಧನೆಗಳನ್ನು ಮಾಡಿದೆ ಎಂದು ಹೆಮ್ಮೆಯಿಂದ ಸ್ಮರಿಸಿದರು. ಆರಂಭದಲ್ಲಿ ವಿಜ್ಞಾನ...

ಬೋರನಕಣಿವೆ ಸಾಯಿಧಾಮದಲ್ಲಿ ನರ್ಮದೋದ್ಭವ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಹ್ಯಾಟ್ರಿಕ್ ಹಿರೋ ಶಿವಣ್ಣ ದಂಪತಿ ಭಾಗಿ

ಬೋರನಕಣಿವೆ ಸಾಯಿಧಾಮದಲ್ಲಿ ನರ್ಮದೋದ್ಭವ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಹ್ಯಾಟ್ರಿಕ್ ಹಿರೋ ಶಿವಣ್ಣ ದಂಪತಿ ಭಾಗಿ ಹುಳಿಯಾರು : ಹೋಬಳಿಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಬೋರನಕಣಿವೆಯ ಸಾಯಿಧಾಮದಲ್ಲಿ ಇಂದು ಭಕ್ತಿ ಸಂಭ್ರಮ ಮನೆಮಾಡಿತ್ತು. "ಶ್ರೀ ಶಿರಡಿ ಸಾಯಿಬಾಬಾ ಇಂಟರ್ ನ್ಯಾಷನಲ್ ಸರ್ವೀಸ್ ಫೌಂಡೇಷನ್ ಹಾಗೂ ಸೇವಾ ಚೇತನ" ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನರ್ಮದೋದ್ಭವ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ಅತ್ಯಂತ ವೈಭವದಿಂದ ನೆರವೇರಿತು. ಶಿವಣ್ಣ ದಂಪತಿಗಳ ಆಗಮನ :ಈ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಧ್ರುವತಾರೆ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ದಂಪತಿಗಳು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.  ಕ್ಷೇತ್ರಕ್ಕೆ ಆಗಮಿಸಿದ ಅತಿಥಿಗಳನ್ನು ಟ್ರಸ್ಟಿನ ಕಾರ್ಯದರ್ಶಿ ವಿಟ್ಟಲ್ ಹಾಗೂ ಅವರ ಕುಟುಂಬದವರು ಗೌರವಪೂರ್ವಕವಾಗಿ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಶಿವರಾಜ್ ಕುಮಾರ್ ದಂಪತಿಗಳನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಾಯಿಬಾಬಾ ದರ್ಶನ :ಸಾಯಿ ಮಂದಿರಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಅವರು ಸಾಯಿಬಾಬಾರ ದರ್ಶನ ಪಡೆದರು. ಬಾಬಾ ಅವರ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ, ಸಾಂಪ್ರದಾಯಿಕವಾಗಿ ಚಾದರವನ್ನು ಬದಲಿಸುವ ಮೂಲಕ ಭಕ್ತಿಪೂರ್ವಕ ನಮನ ಸಲ್ಲಿಸಿದರು...

​ಬೋರನಕಣಿವೆ ಸಾಯಿಧಾಮದಲ್ಲಿ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಉಪಲೋಕಾಯುಕ್ತ ಬಿ. ವೀರಪ್ಪ ಭಾಗಿ

​ಬೋರನಕಣಿವೆ ಸಾಯಿಧಾಮದಲ್ಲಿ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಉಪಲೋಕಾಯುಕ್ತ ಬಿ. ವೀರಪ್ಪ ಭಾಗಿ ​ ಹುಳಿಯಾರು : ಸಮೀಪದ ಬೋರನಕಣಿವೆಯ ಸಾಯಿಧಾಮದಲ್ಲಿ ಶ್ರೀ ಶಿರಡಿ ಸಾಯಿಬಾಬಾ ಇಂಟರ್ ನ್ಯಾಷನಲ್ ಸರ್ವೀಸ್ ಫೌಂಡೇಷನ್ ಹಾಗೂ ಸೇವಾ ಚೇತನ ವತಿಯಿಂದ ಭಾನುವಾರ ' ನರ್ಮದೋದ್ಭವ ಕಣಿವೆ ಶಂಕರನ' ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಅತ್ಯಂತ ಸಡಗರದಿಂದ ನೆರವೇರಿತು. ಈ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಪಾಲ್ಗೊಂಡು ಶತ ನದಿಗಳ ಆವರಣ ಪೂಜೆಯನ್ನು ನೆರವೇರಿಸಿದರು.  ಬಳಿಕ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, "ದೇವಸ್ಥಾನಗಳ ಸ್ಥಾಪನೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸುತ್ತದೆ. ಶಿವನು ನಾಡಿನ ಜನತೆಗೆ ಉತ್ತಮ ಆರೋಗ್ಯ, ಸುಬುದ್ಧಿ ಹಾಗೂ ಐಶ್ವರ್ಯವನ್ನು ಕರುಣಿಸಲಿ" ಎಂದು ಹಾರೈಸಿದರು. ​ಇದೇ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಕಣಿವೆ ಶಂಕರನ ದರ್ಶನ ಪಡೆದರು.  ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಗ್ರಾಮಗಳ  ಭಕ್ತರು ಪಾಲ್ಗೊಂಡು ಪುನೀತರಾದರು.

ಉಚಿತ ಸಿಇಟಿ/ನೀಟ್ ತರಬೇತಿ ಶಿಬಿರದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಚಿಕ್ಕನಾಯಕನಹಳ್ಳಿ : ಪಟ್ಟಣದ ತೀ.ನಂ. ಶ್ರೀ ಭವನದಲ್ಲಿ 2024–25ನೇ ಸಾಲಿನ ಉಚಿತ ಸಿಇಟಿ/ನೀಟ್ ತರಬೇತಿ ಶಿಬಿರದಲ್ಲಿ ಅತ್ಯುತ್ತಮ ಸಾಧನೆ ಮಾಡಿಸಿ ಸರ್ಕಾರಿ ಸೀಟು ಪಡೆದುಕೊಂಡ ಎಸ್.ಬಿ. ಚಾರಿಟಬಲ್ ಟ್ರಸ್ಟ್‌ನ ವಿದ್ಯಾರ್ಥಿಗಳಿಗಾಗಿ “ಅಭಿನಂದನಾ ಸಮಾರಂಭ”ವನ್ನು  ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಾಸಕ ಸಿ.ಬಿ. ಸುರೇಶ್ ಬಾ ಬು ಅವರು ತಹಶೀಲ್ದಾರ್ ಹಾಗೂ ಎಸ್.ಬಿ. ಚಾರಿಟಬಲ್ ಟ್ರಸ್ಟ್‌ನ ಪದಾಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿ ಮಾತನಾಡಿದರು. ಉಚಿತ ತರಬೇತಿಯ ಮೂಲಕ ಗ್ರಾಮೀಣ ಹಾಗೂ ಬಡ ಕುಟುಂಬಗಳ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶ ಕಲ್ಪಿಸಿರುವ ಎಸ್.ಬಿ. ಚಾರಿಟಬಲ್ ಟ್ರಸ್ಟ್‌ನ ಕಾರ್ಯ ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳು ಪಡೆದಿರುವ ಸರ್ಕಾರಿ ಸೀಟುಗಳು ಅವರ ಶ್ರಮ ಹಾಗೂ ಸಂಸ್ಥೆಯ ಮಾರ್ಗದರ್ಶನದ ಫಲವಾಗಿದೆ ಎಂದರು. ಸರ್ಕಾರಿ ಸೀಟು ಪಡೆದ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಲ್ಯಾಪ್‌ಟಾಪ್‌ಗಳು ಹಾಗೂ ಅಗತ್ಯ ಶಿಕ್ಷಣ ಸಲಕರಣೆಗಳನ್ನು ವಿತರಿಸಲಾಯಿತು. ಮುಂದುವರಿದು ಮಾತನಾಡಿದ ಶಾಸಕ ಸುರೇಶ್ ಬಾಬು ಅವರು, “ನಾಳೆ ನಿಮ್ಮಲ್ಲಿ ಕೆಲವರು ಅಧಿಕಾರಿಗಳಾಗಿ ನಮ್ಮ ತಾಲೂಕಿಗೆ ಮರಳಿ ಬರುವ ದಿನಗಳು ಬರಬೇಕು. ಸಮಾಜಕ್ಕೆ ಸೇವೆ ಸಲ್ಲಿಸುವ ಶಕ್ತಿ ಶಿಕ್ಷಣದಲ್ಲಿದೆ” ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಮುಂದಿನ ದಿ...

ಹುಳಿಯಾರಮ್ಮನವರ 13ನೇ ವರ್ಷದ ಜಾತ್ರಾ ಮಹೋತ್ಸವ ( ಜ.31 ರ ಶನಿವಾರದಿಂದ ಫೆ.8 ರ ಭಾನುವಾರದವರೆಗೆ)

* ಹುಳಿಯಾರಮ್ಮನವರ 13ನೇ ವರ್ಷದ ಜಾತ್ರಾ ಮಹೋತ್ಸವ ( ಜ.31 ರ ಶನಿವಾರದಿಂದ ಫೆ.8 ರ ಭಾನುವಾರದವರೆಗೆ )* ಹುಳಿಯಾರು ಗ್ರಾಮದೇವತೆ ಶ್ರೀ ಹುಳಿಯಾರಮ್ಮನವರ 13ನೇ ವರ್ಷದ ಜಾತ್ರಾ ಮಹೋತ್ಸವ ಜ.31 ರ ಶನಿವಾರದಿಂದ ಫೆ.8 ರ ಭಾನುವಾರದವರೆಗೆ ಹಮ್ಮಿಕೊಳ್ಳಲಾಗಿದೆ . ಜ.31 ಹಾಗೂ ಫೆ.1 ರಂದು ಕೋಡಿಪಾಳ್ಯ,ಲಿಂಗಪ್ಪನಪಾಳ್ಯ,ಕಾಮಶೆಟ್ಟಿಪಾಳ್ಯ ,ಸೋಮಜ್ಜನಪಾಳ್ಯದಲ್ಲಿ ಮಡಿಲಕ್ಕಿ ಸೇವೆ ನಡೆಯಲಿದೆ. ಫೆ.2 ರ ಸೋಮವಾರದಂದು ಧ್ವಜಾರೋಹಣ, ಅಂಕುರಾರ್ಪಣೆ ಹಾಗೂ ಅಮ್ಮನವರ ಮಧುವಣಗಿತ್ತಿ ಸೇವೆ ನಡೆಯಲಿದೆ. ಫೆ.3 ರ ಮಂಗಳವಾರ ಆರತಿ ಬಾನ ಹಾಗೂ ಎಡೆ ಸೇವೆ ನಡೆಯಲಿದೆ. ಫೆ.4 ರ ಬುಧವಾರ ಹುಳಿಯಾರು ಗ್ರಾಮದೇವತೆ ದುರ್ಗಮ್ಮನವರು , ಹುಳಿಯಾರು ಕೆಂಚಮ್ಮದೇವಿ, ಸೋಮಜ್ಜನಪಾಳ್ಯದ ಅಂತರಘಟ್ಟೆ ಅಮ್ಮನವರು, ಗೌಡಗೆರೆ ದುರ್ಗಮ್ಮ, ದಮ್ಮಡಿಹಟ್ಟಿ ಈರಬೊಮ್ಮಕ್ಕ ದೇವಿ, ,ಕೆ.ಸಿ.ಪಾಳ್ಯದ ಅಂತರಘಟ್ಟೆ ಅಮ್ಮ ಹಾಗೂ ದೊಡ್ಡಬಿದರೆ ಕರಿಯಮ್ಮ ದೇವರುಗಳ ಆಗಮನ ಹಾಗೂ ಕೂಡು ಭೇಟಿ ಕಾರ್ಯ ನಡೆಯಲಿದೆ.  ಫೆ.5 ರ ಗುರುವಾರದಂದು ಬೆಳಗ್ಗೆ 7.30 ಕ್ಕೆ ಕಳಸ ಮಹೋತ್ಸವ ಹಾಗೂ ಅನ್ನಸಂತರ್ಪಣೆ , ಫೆ.6 ರ ಶುಕ್ರವಾರದಂದು ಗಣಪತಿ ಹಾಗೂ ಅಷ್ಟಲಕ್ಷ್ಮಿ ಹೋಮ, ಸಂಜೆ ಧೂತರಾಯ ಸ್ವಾಮಿ ಅವರ ಅದ್ದೂರಿ ಮಣೇವು ಕಾರ್ಯಕ್ರಮ,  ಫೆ.7 ರ ಶನಿವಾರ ಕಂಕಣವಿಸರ್ಜನೆ ,ಓಕಳಿ ಮತ್ತು  ಫೆ.8 ರಂದು ಮಡಿಲಕ್ಕಿ ಸೇವೆಯೊಂದಿಗೆ ಜಾತ್ರೆಗೆ ತೆರೆ ಬೀಳಲಿದೆ. ಕ ...

‘ಪೂಜ್ಯರ ನಡೆ – ಭಕ್ತರ ಮನೆ, ಮನಗಳ ಕಡೆ’ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ

ಚಿಕ್ಕನಾಯಕನಹಳ್ಳಿಯಲ್ಲಿ ಶ್ರೀ ಬಸವರಮಾನಂದ ಸ್ವಾಮೀಜಿ ಮಾರ್ಗದರ್ಶನ ಚಿಕ್ಕನಾಯಕನಹಳ್ಳಿ : ವನಕಲ್ಲು ಮಲ್ಲೇಶ್ವರ ಮಠದ ಪರಮ ಪೂಜ್ಯರಾದ ಶ್ರೀ ಶ್ರೀ ಶ್ರೀ ಬಸವರಮಾನಂದ ಸ್ವಾಮೀಜಿಗಳು ಇಂದು ಚಿಕ್ಕನಾಯಕನಹಳ್ಳಿಯ ಪ್ರವಾಸಿ ಮಂದಿರಕ್ಕೆ ಆಗಮಿಸಿ, “ ಪೂಜ್ಯರ ನಡೆ – ಭಕ್ತರ ಮನೆ, ಮನಗಳ ಕಡೆ ” ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿ ಮಾರ್ಗದರ್ಶನ ನೀಡಿದರು.                   ಇದೇ ತಿಂಗಳ 27-01-2026 (ಮಂಗಳವಾರ) ರಿಂದ 7 ದಿನಗಳ ಕಾಲ ನಡೆಯಲಿರುವ ಈ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಕಾಡುಗೊಲ್ಲರ ಹಟ್ಟಿಗಳಲ್ಲಿ ನಡೆಯಬೇಕಾದ ಪ್ರವಾಸ ಹಾಗೂ ಕಾರ್ಯಕ್ರಮಗಳ ರೂಪುರೇಷೆ ಕುರಿತು ಸಮಗ್ರವಾಗಿ ವಿಚಾರ ವಿನಿಮಯ ನಡೆಯಿತು.                   ಸಭೆಯಲ್ಲಿ ಮುಖ್ಯವಾಗಿ ಕಾಡುಗೊಲ್ಲರ ಹಟ್ಟಿಗಳ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಪ್ರಗತಿ ಕುರಿತು ವಿಸ್ತೃತ ಚರ್ಚೆ ನಡೆಸಿ, ಸಮುದಾಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ನಿರ್ಧಾರ ಕೈಗೊಳ್ಳಲಾಯಿತು. ಈ ಪೂರ್ವಭಾವಿ ಸಭೆಯಲ್ಲಿ ಶಿವಣ್ಣ (ಮಾದಾಪುರ), ಮಲ್ಲಿಕಾರ್ಜುನ್ (ರಾಮಪ್ಪನಹಟ್ಟಿ), ವಿಶ್ವನಾಥ್ ಪೂಜಾರಿ, ಮಂಜು (ಕೆಂಪರಾಯನಹಟ್ಟಿ), ಕದುರೇಗೌಡ, ಅಜ್ಜಪ್ಪ, ಲೋಕೇಶ್, ಈರಣ್ಣ ...