ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಹಣ್ಣು ಹಂಪಲು ವಿತರಣೆ ಮೂಲಕ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ

ಇತ್ತೀಚಿನ ಪೋಸ್ಟ್‌ಗಳು

ದಾಖಲೆ ಬರೆದ ಹುಳಿಯಾರು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ: ಕೇವಲ ಒಂದೂಕಾಲು ಗಂಟೆಯಲ್ಲಿ 60 ಅಜೆಂಡಾಗಳಿಗೆ ಒಪ್ಪಿಗೆ!

ದಾಖಲೆ ಬರೆದ ಹುಳಿಯಾರು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ: ಕೇವಲ ಒಂದೂಕಾಲು ಗಂಟೆಯಲ್ಲಿ 60 ಅಜೆಂಡಾಗಳಿಗೆ ಒಪ್ಪಿಗೆ! ------------------ ಹುಳಿಯಾರು : ಅತಿ ಹೆಚ್ಚಿನ ವಿಷಯಗಳಿದ್ದರೂ ಯಾವುದೇ ಗದ್ದಲ, ಗೊಂದಲವಿಲ್ಲದೆ ಅತ್ಯಂತ ಸುಸೂತ್ರವಾಗಿ ನಡೆದ ಹುಳಿಯಾರು ಪಟ್ಟಣ ಪಂಚಾಯಿತಿಯ ಇಂದಿನ ಸಾಮಾನ್ಯ ಸಭೆಯು ಹೊಸ ದಾಖಲೆ ಬರೆದಿದೆ. ನೂತನ ಅಧ್ಯಕ್ಷೆ ಪ್ರೀತಿ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ಹಾಗೂ ಶಾಸಕ ಸಿ.ಬಿ. ಸುರೇಶ್ ಬಾಬು ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ಒಟ್ಟು 60 ಪ್ರಮುಖ ವಿಷಯಗಳನ್ನು ಕೇವಲ ಒಂದೂಕಾಲು ಗಂಟೆಯೊಳಗೆ ಚರ್ಚಿಸಿ ಅನುಮೋದನೆ ನೀಡಲಾಯಿತು. ಸಾಮಾನ್ಯವಾಗಿ ಹುಳಿಯಾರು ಪಂಚಾಯಿತಿ ಸಭೆ ಎಂದರೆ ಇಡೀ ದಿನ ಗದ್ದಲ-ಕೋಲಾಹಲಗಳಿಂದ ಕೂಡಿರುತ್ತಿತ್ತು. ಆದರೆ ಇಂದು ಎಲ್ಲಾ ಕೌನ್ಸಿಲರ್‌ಗಳ ಸಹಕಾರದೊಂದಿಗೆ ಅಭಿವೃದ್ಧಿ ಪರ ನಿರ್ಧಾರಗಳನ್ನು ಶೀಘ್ರವಾಗಿ ತೆಗೆದುಕೊಳ್ಳುವ ಮೂಲಕ ಸಭೆ ವಿಶೇಷ ಗಮನ ಸೆಳೆಯಿತು. ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಕ್ ಆಯ್ಕೆ : ಸಭೆಯ ಆರಂಭದಲ್ಲಿ ಸರ್ಕಾರಿ ಸುತ್ತೋಲೆಗಳನ್ನು ಮಂಡಿಸಲಾಯಿತು. ಇತ್ತೀಚೆಗೆ ಅಕಾಲಿಕ ನಿಧನರಾದ ಸ್ಥಾಯಿ ಸಮಿತಿ ಅಧ್ಯಕ್ಷ ಒಳಗೆ ಚಂದ್ರಶೇಖರ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಕೌನ್ಸಿಲರ್ ಎಸ್.ಆರ್.ಎಸ್ ದಯಾನಂದ್ ಅವರನ್ನು ಸದಸ್ಯರನ್ನಾಗಿ ಹಾಗೂ ಅಧ್ಯಕ್ಷ ಸ್ಥಾನಕ್ಕೆ ಅಬೂಬಕ್ಕರ್ ಸಿದ್ದೀಕ್ ಅವರನ್ನು ಸರ್ವಾನುಮ...

ಹುಳಿಯಾರಿನಲ್ಲಿ ಸಿದ್ಧಗಂಗಾ ಶ್ರೀಗಳ 119ನೇ ಜನ್ಮದಿನೋತ್ಸವ ಆಚರಣೆ: ಶ್ರದ್ಧಾಭಕ್ತಿಯ ನಮನ

ಹುಳಿಯಾರಿನಲ್ಲಿ ಸಿದ್ಧಗಂಗಾ ಶ್ರೀಗಳ 119ನೇ ಜನ್ಮದಿನೋತ್ಸವ ಆಚರಣೆ: ಶ್ರದ್ಧಾಭಕ್ತಿಯ ನಮನ- -------------- ಹುಳಿಯಾರು : ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಹುಳಿಯಾರಿನ ರಾಮಗೋಪಾಲ್ ಸರ್ಕಲ್ ಬಳಿಯ ಭೈರವೇಶ್ವರ ಮೆಡಿಕಲ್ಸ್ ಮುಂಭಾಗದಲ್ಲಿ ಚನ್ನಬಸವಯ್ಯ ಅವರ ನೇತೃತ್ವದಲ್ಲಿ ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಮಾಜಿ ಶಾಸಕ ಕೆ.ಎಸ್. ಕಿರಣ್ ಕುಮಾರ್ ಅವರು ಮಾತನಾಡಿ, ಡಾ. ಶಿವಕುಮಾರ ಸ್ವಾಮೀಜಿಯವರು ಇಡೀ ವಿಶ್ವಕ್ಕೆ ಮಾದರಿಯಾದವರು. ಅವರ ದಾಸೋಹ ಸಂಸ್ಕೃತಿ ಮತ್ತು ಬದುಕಿನ ಆದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಸಕ ಸಿ.ಬಿ. ಸುರೇಶ್ ಬಾಬು ಅವರು ಶ್ರೀಗಳ ಸೇವೆಯನ್ನು ಸ್ಮರಿಸಿ ಮಾತನಾಡಿ, ಸಾವಿರಾರು ವಿದ್ಯಾರ್ಥಿಗಳಿಗೆ ಅಕ್ಷರ ಮತ್ತು ಅನ್ನದ ದಾಸೋಹ ನೀಡಿದ ಸಿದ್ಧಗಂಗಾ ಮಠವು ಒಂದು ಪುಣ್ಯಕ್ಷೇತ್ರ. ಶ್ರೀಗಳು ಇತರ ಮಠಗಳಂತೆ ಶಾಖಾ ಮಠಗಳನ್ನು ತೆರೆಯಲು ಮುಂದಾಗದೆ, ಒಂದೇ ಮಠದ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ್ದಾರೆ. ಇಂದು ದೇಶ-ವಿದೇಶಗಳಲ್ಲಿ ಇಲ್ಲಿನ ವಿದ್ಯಾರ್ಥಿಗಳು ವೈದ್ಯರಾಗಿ, ಇಂಜಿನಿಯರ್ ಆಗಿ ಸೇವೆ...

ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕ ಸಮಸ್ಯೆಗಳ ಸರಣಿ: ಮುಖ್ಯಾಧಿಕಾರಿಗೆ ನಾಗರಿಕ ಹಿತ ರಕ್ಷಣಾ ವೇದಿಕೆಯಿಂದ ಮೂರು ಮನವಿ ಪತ್ರ

ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕ ಸಮಸ್ಯೆಗಳ ಸರಣಿ: ಮುಖ್ಯಾಧಿಕಾರಿಗೆ ನಾಗರಿಕ ಹಿತ ರಕ್ಷಣಾ ವೇದಿಕೆಯಿಂದ ಮೂರು ಮನವಿ ಪತ್ರ ---------- ಹುಳಿಯಾರು : ಪಟ್ಟಣದ ಬೀದಿ ಬದಿ ವ್ಯಾಪಾರಿಗಳು ಫುಟ್‌ಪಾತ್ ಮೇಲೆ ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಫುಟ್ಪಾತ್ ಮೇಲೆ ಸಾರ್ವಜನಿಕರಿಗೆ ಅಡ್ಡಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳ ತೆರವು, ಪಟ್ಟಣ ಪಂಚಾಯಿತಿಯಲ್ಲಿನ ಸಿಬ್ಬಂದಿ ಕೊರತೆ ನೀಗಿಸುವುದು ಹಾಗೂ ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಹುಳಿಯಾರು ನಾಗರಿಕ ಹಿತರಕ್ಷಣಾ ವೇದಿಕೆ'ಯಿಂದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ  ಮನವಿ ಸಲ್ಲಿಸಲಾಯಿತು. ವೇದಿಕೆಯ ಪ್ರಮುಖರಾದ ರಾಮಕೃಷ್ಣಪ್ಪ ಅವರ ನೇತೃತ್ವದ ನಿಯೋಗವು ಮುಖ್ಯಾಧಿಕಾರಿ ಎಲ್.ವಿ. ಮಂಜುನಾಥ್ ಅವರನ್ನು ಭೇಟಿ ಮಾಡಿ ಮೂರು ಪ್ರತ್ಯೇಕ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು. ಫುಟ್‌ಪಾತ್ ತೆರವಿಗೆ ಆಗ್ರಹ : ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಮುಖ್ಯ ರಸ್ತೆಗಳ ಫುಟ್‌ಪಾತ್‌ಗಳ ಮೇಲೆ ವ್ಯಾಪಾರ ವಹಿವಾಟು ನಡೆಯುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ಅಲ್ಲದೆ, ವ್ಯಾಪಾರಿಗಳು ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವುದರಿಂದ ಅಶುಚಿತ್ವ ನಿರ್ಮಾಣವಾಗುತ್ತಿದೆ. ಆದ್ದರಿಂದ ಬೀದಿ ಬದಿ ವ್ಯಾಪಾರಿಗಳಿ...

ಸವಾಲುಗಳೇ ಇಂದಿನ ಯಶಸ್ಸಿಗೆ ಭದ್ರ ಬುನಾದಿ: ದೊಡ್ಡಬಿದರೆಯಲ್ಲಿ ಇಸ್ರೋ ವಿಜ್ಞಾನಿ ಡಾ. ಆರ್. ಶ್ರೀನಿವಾಸ್ ಸ್ಫೂರ್ತಿದಾಯಕ ನುಡಿ

ಸವಾಲುಗಳೇ ಇಂದಿನ ಯಶಸ್ಸಿಗೆ ಭದ್ರ ಬುನಾದಿ: ದೊಡ್ಡಬಿದರೆಯಲ್ಲಿ ಇಸ್ರೋ ವಿಜ್ಞಾನಿ ಡಾ. ಆರ್. ಶ್ರೀನಿವಾಸ್ ಸ್ಫೂರ್ತಿದಾಯಕ ನುಡಿ --------------------- ಹುಳಿಯಾರು : ಸಮೀಪದ ದೊಡ್ಡಬಿದರೆಯಲ್ಲಿರುವ ಜೆ.ಸಿ.ಎಂ. ಇಂಟರ್ನ್ಯಾಷನಲ್ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ತಾರಾ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಬಾಹ್ಯಾಕಾಶ ವಿಜ್ಞಾನ ಜಾಗೃತಿ' ಕಾರ್ಯಕ್ರಮದಲ್ಲಿ ಹೈದರಾಬಾದಿನ ಇಸ್ರೋ ವಿಜ್ಞಾನಿ ಡಾ. ಆರ್. ಶ್ರೀನಿವಾಸ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಪ್ರೇರಣೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಜ್ಞಾನ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇಸ್ರೋ ಪಯಣದ ರೋಚಕ ಇತಿಹಾಸ :ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಆರ್. ಶ್ರೀನಿವಾಸ್, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಅತ್ಯಂತ ಕಠಿಣ ಹಾದಿಯನ್ನು ದಾಟಿ ಇಂದು ಜಾಗತಿಕ ಮಟ್ಟದಲ್ಲಿ ಅಗ್ರಗಣ್ಯ ಸಂಸ್ಥೆಯಾಗಿ ಬೆಳೆದು ಬಂದ ಇತಿಹಾಸವನ್ನು ವಿವರಿಸಿದರು.  1963ರಲ್ಲಿ ಕೇರಳದ ತುಂಬಾದಲ್ಲಿರುವ ಒಂದು ಸಣ್ಣ ಚರ್ಚ್‌ನಲ್ಲಿ ಆರಂಭವಾದ ಭಾರತದ ಬಾಹ್ಯಾಕಾಶ ಪಯಣ, ಇಂದು ಚಂದ್ರಯಾನ ಮತ್ತು ಮಂಗಳಯಾನದಂತಹ ಬೃಹತ್ ಸಾಧನೆಗಳನ್ನು ಮಾಡಿದೆ ಎಂದು ಹೆಮ್ಮೆಯಿಂದ ಸ್ಮರಿಸಿದರು. ಆರಂಭದಲ್ಲಿ ವಿಜ್ಞಾನ...

ಬೋರನಕಣಿವೆ ಸಾಯಿಧಾಮದಲ್ಲಿ ನರ್ಮದೋದ್ಭವ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಹ್ಯಾಟ್ರಿಕ್ ಹಿರೋ ಶಿವಣ್ಣ ದಂಪತಿ ಭಾಗಿ

ಬೋರನಕಣಿವೆ ಸಾಯಿಧಾಮದಲ್ಲಿ ನರ್ಮದೋದ್ಭವ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಹ್ಯಾಟ್ರಿಕ್ ಹಿರೋ ಶಿವಣ್ಣ ದಂಪತಿ ಭಾಗಿ ಹುಳಿಯಾರು : ಹೋಬಳಿಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಬೋರನಕಣಿವೆಯ ಸಾಯಿಧಾಮದಲ್ಲಿ ಇಂದು ಭಕ್ತಿ ಸಂಭ್ರಮ ಮನೆಮಾಡಿತ್ತು. "ಶ್ರೀ ಶಿರಡಿ ಸಾಯಿಬಾಬಾ ಇಂಟರ್ ನ್ಯಾಷನಲ್ ಸರ್ವೀಸ್ ಫೌಂಡೇಷನ್ ಹಾಗೂ ಸೇವಾ ಚೇತನ" ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನರ್ಮದೋದ್ಭವ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ಅತ್ಯಂತ ವೈಭವದಿಂದ ನೆರವೇರಿತು. ಶಿವಣ್ಣ ದಂಪತಿಗಳ ಆಗಮನ :ಈ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಧ್ರುವತಾರೆ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ದಂಪತಿಗಳು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.  ಕ್ಷೇತ್ರಕ್ಕೆ ಆಗಮಿಸಿದ ಅತಿಥಿಗಳನ್ನು ಟ್ರಸ್ಟಿನ ಕಾರ್ಯದರ್ಶಿ ವಿಟ್ಟಲ್ ಹಾಗೂ ಅವರ ಕುಟುಂಬದವರು ಗೌರವಪೂರ್ವಕವಾಗಿ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಶಿವರಾಜ್ ಕುಮಾರ್ ದಂಪತಿಗಳನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಾಯಿಬಾಬಾ ದರ್ಶನ :ಸಾಯಿ ಮಂದಿರಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಅವರು ಸಾಯಿಬಾಬಾರ ದರ್ಶನ ಪಡೆದರು. ಬಾಬಾ ಅವರ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ, ಸಾಂಪ್ರದಾಯಿಕವಾಗಿ ಚಾದರವನ್ನು ಬದಲಿಸುವ ಮೂಲಕ ಭಕ್ತಿಪೂರ್ವಕ ನಮನ ಸಲ್ಲಿಸಿದರು...

​ಬೋರನಕಣಿವೆ ಸಾಯಿಧಾಮದಲ್ಲಿ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಉಪಲೋಕಾಯುಕ್ತ ಬಿ. ವೀರಪ್ಪ ಭಾಗಿ

​ಬೋರನಕಣಿವೆ ಸಾಯಿಧಾಮದಲ್ಲಿ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಉಪಲೋಕಾಯುಕ್ತ ಬಿ. ವೀರಪ್ಪ ಭಾಗಿ ​ ಹುಳಿಯಾರು : ಸಮೀಪದ ಬೋರನಕಣಿವೆಯ ಸಾಯಿಧಾಮದಲ್ಲಿ ಶ್ರೀ ಶಿರಡಿ ಸಾಯಿಬಾಬಾ ಇಂಟರ್ ನ್ಯಾಷನಲ್ ಸರ್ವೀಸ್ ಫೌಂಡೇಷನ್ ಹಾಗೂ ಸೇವಾ ಚೇತನ ವತಿಯಿಂದ ಭಾನುವಾರ ' ನರ್ಮದೋದ್ಭವ ಕಣಿವೆ ಶಂಕರನ' ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಅತ್ಯಂತ ಸಡಗರದಿಂದ ನೆರವೇರಿತು. ಈ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಪಾಲ್ಗೊಂಡು ಶತ ನದಿಗಳ ಆವರಣ ಪೂಜೆಯನ್ನು ನೆರವೇರಿಸಿದರು.  ಬಳಿಕ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, "ದೇವಸ್ಥಾನಗಳ ಸ್ಥಾಪನೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸುತ್ತದೆ. ಶಿವನು ನಾಡಿನ ಜನತೆಗೆ ಉತ್ತಮ ಆರೋಗ್ಯ, ಸುಬುದ್ಧಿ ಹಾಗೂ ಐಶ್ವರ್ಯವನ್ನು ಕರುಣಿಸಲಿ" ಎಂದು ಹಾರೈಸಿದರು. ​ಇದೇ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಕಣಿವೆ ಶಂಕರನ ದರ್ಶನ ಪಡೆದರು.  ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಗ್ರಾಮಗಳ  ಭಕ್ತರು ಪಾಲ್ಗೊಂಡು ಪುನೀತರಾದರು.