ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ನಡೆದ ಸಂಭ್ರಮದ ವೈಕುಂಠ ಏಕಾದಶಿ ಬಗ್ಗೆ ವಿಶೇಷ ವರದಿ


ಗುಹಾ ಪ್ರವೇಶ ದಾರಿ ಮೂಲಕ ಭಕ್ತರ ಶ್ರೀ ಸ್ವಾಮಿಯವರ ದರ್ಶನ ಹೋಗುತ್ತಿರುವುದು.
ಹುಳಿಯಾರಿನ ಶ್ರೀ ಬನಶಂಕರಮ್ಮ ಅವರಿಗೆ ವೈಕುಂಠ ಏಕಾದಶಿ ಅಂಗವಾಗಿ ವೈಕುಂಠ ನಾರಾಯಣನ ಅಲಂಕಾರ ಮಾಡಿರುವುದು.
ಹುಳಿಯಾರಿನ ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರಕಾರೋತ್ಸವ




ಹುಳಿಯಾರಿನ ಶ್ರೀ ರಂಗನಾಥ ಸ್ವಾಮಿ ಗುಡಿಯಲ್ಲಿ ಶ್ರೀ ಸ್ವಾಮಿಗೆ ಬಗೆಬಗೆಯ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಿರುವುದು.


1 ; ಹುಳಿಯಾರಿನ ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕೋದಂಡರಾಮನ ಸನ್ನಿದಾನದಲ್ಲಿ ಅನಂತಶಯನ ರಂಗನಾಥ ಸ್ವಾಮಿಯನ್ನು ಪ್ರತಿಷ್ಠಾಪಿಸಿರುವುದು.
ಹುಳಿಯಾರಿನಲ್ಲಿ ನಡೆದ ಸಂಭ್ರಮದ ವೈಕುಂಠ ಏಕಾದಶಿ ಬಗ್ಗೆ ವಿಶೇಷ ವರದಿ
---------------------------
ಇದನ್ನು ಬರೆದಿದ್ದು:ಕಿರಣ್ ಕುಮಾರ್ ಹೆಚ್.ಬಿ ಹಾಗೆಯೆ ಇದಕ್ಕೆ ಸಂಭಂದಿಸಿದ ವಿಶೇಷ ಛಾಯಚಿತ್ರಗಳನ್ನು ತೆಗೆದಿದ್ದು ಸ್ಟುಡಿಯೊ ದುರ್ಗರಾಜು ಮತ್ತು ಅಂಬಿಕಾ ಸುಧಿ.ವೆಬ್ ಗೆ ಹಾಕಿದ್ದು ನಾನು.
ಹುಳಿಯಾರಿನ ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನ, ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಬನಶಂಕರಿ ದೇವಸ್ಥಾನಗಳಲ್ಲಿ ದೇವಾಲಯವನ್ನು ಬಣ್ಣಬಣ್ಣದ, ಬಗೆ ಬಗೆಯ ಹೂಗಳಿಂದ ಹಾಗೂ ತಳಿರು ತೋರಣದಿಂದ ಶೃಂಗರಿಸಿ, ಝಗಮಗಿಸುವ ವಿದ್ಯುತ್ ದೀಪಾಲಂಕಾರದಿಂದ ಅಲಂಕರಿಸುವ ಮೂಲಕ ವೈಕುಂಠ ಏಕಾದಶಿಯನ್ನು ಅಪಾರ ಭಕ್ತ ಸಮೂಹದೊಂದಿಗೆ ಸಂಭಮದಿಂದ ಆಚರಿಸಲಾಯಿತು.
ಗ್ರಾಮದ ಪೇಟೆ ಬೀದಿಯಲ್ಲಿರುವ ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕೋದಂಡರಾಮನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತಲ್ಲದೆ ಶ್ರೀ ಸ್ವಾಮಿಯವರ ಸನ್ನಿದಿಯಲ್ಲಿ ಅನಂತಶಯನ ರಂಗನಾಥ ಸ್ವಾಮಿಯನ್ನು ಪ್ರತಿಷ್ಠಾಪಿಸಿ ಗುಹಾ ಪ್ರವೇಶ ದಾರಿ ಮೂಲಕ ಭಕ್ತರ ದರ್ಶನ ವ್ಯವಸ್ಥೆ ಮಾಡಿದಿದುದು ವಿಭೀನ್ನ ಹಾಗೂ ವಿಶೇಷತೆಯಿಂದ ಕೂಡಿತ್ತಲ್ಲದೆ ಭಕ್ತರ ಮೆಚ್ಚುಗೆಗೆ ಪಾತ್ರವಾಗಿತ್ತು.
ಧಾನ್ಯ ವರ್ತಕರ ಸಂಘದ ಅಧ್ಯಕ್ಷ ಎಂ.ಎಸ್.ಆರ್. ನಟರಾಜ್ ಅವರ ಸೇವಾರ್ಥದಲ್ಲಿ ಅಂದು ನಡೆದ ಪೂಜಾ ಕಾರ್ಯಕ್ರಮದಲ್ಲಿ ಅರ್ಚಕ ಹರೀಶ್ ಅವರ ನೇತೃತ್ವದಲ್ಲಿ ಮುಖ್ಯ ವಿಗ್ರಹ ಹಾಗೂ ಉತ್ಸವ ಮೂರ್ತಿಗೆ ವಿವಿಧ ಆಭರಣ ಹಾಗೂ ಪುಷ್ಪರಾಶಿಯೊಂದಿಗೆ ಅಲಂಕೃತಗೊಳಿಸಿ ಪ್ರಕಾರೋತ್ಸವ, ಅಷ್ಟಾವದಾನ ಸೇವೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಮುಂತಾದ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ಇತಿಹಾಸ ಪ್ರಸಿದ್ಧ ಶ್ರೀ ಅನಂತಶಯನ ರಂಗನಾಥ ಸ್ವಾಮಿ ಗುಡಿಯಲ್ಲಿ ಶ್ರೀ ಸ್ವಾಮಿಗೆ ಅರ್ಚಕ ಗುಂಡಣ್ಣ ಅವರ ನೇತೃತ್ವದಲ್ಲಿ ಎಣ್ಣೇ ಮಜ್ಜನ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಮಾಡಿ ಬಗೆಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತಲ್ಲದೆ ಬಸ್ಟಾಂಡ್ ಹೋಟಲ್ ಗೋಪಾಲ್ , ಚಿರುಮುರಿ ರಘು, ವೆಂಕಟೇಶ್ ಮಾಸ್ಟರ್ ಅವರ ನೇತೃತ್ವದಲ್ಲಿ ವಿವಿಧ ಭಜನಾ ಮಂಡಳಿ ಹಾಗೂ ಅಯ್ಯಪ್ಪ ಭಕ್ತರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಯಿತು.
ದೇವಾಂಗ ಸಮುದಾಯದ ಕುಲ ದೇವತೆ ಶ್ರೀ ಬನಶಂಕರಮ್ಮ ದೇವಾಲಯದಲ್ಲಿ ಅರ್ಚಕ ಶ್ರೀಧರ್ ಅವರ ನೇತೃತ್ವದಲ್ಲಿ ನಾಗಭೂಷಣ್, ಈಶ್ವರ್, ರಾಮರಾವ್ , ಕಮಲಮ್ಮ, ಜೋತಿ ಅವರ ಸೇವಾರ್ಥ ಮುಕ್ಕೋಟಿ ದ್ವಾದಶಿ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಮಾಡಲಾಗಿತ್ತಲ್ಲದೆ ಶ್ರೀ ಅಮ್ಮನವರಿಗೆ ವೈಕುಂಠ ನಾರಾಯಣನ ಅಲಂಕಾರ ಮಾಡಿ ಭಕ್ತಾಧಿಗಳ ದರ್ಶನ ಭಾಗ್ಯ ಕಲ್ಪಿಸಿದುದು ವಿಶೇಷವಾಗಿತ್ತು.
ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎನ್ನುವ ಪ್ರತೀತಿ ಇರುವ ಹಿನ್ನೆಲೆಯಲ್ಲಿ ವೈಕುಂಠ ದ್ವಾರದ ಮೂಲಕ ಪ್ರವೇಶ ಮಾಡಿ ಶ್ರೀ ಸ್ವಾಮಿಯವರ ದರ್ಶನ ಪಡೆದರೆ ಪುಣ್ಯ ಲಭಿಸುವುದು ಎನ್ನುವ ನಂಬಿಕೆ ಇರುವ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ದೇವಾಲಯಕ್ಕೆ ತೆರಳಿ ದರ್ಶನ ಪಡೆದು ಪುನೀತರಾದರು.
ಈ ಸುದ್ಧಿಗೆ ಸಂಬಂಧಿಸಿದ ಪೋಟೊವನ್ನು ಮೇಲ್ಭಾಗದಲ್ಲಿ ಪ್ರಕಟಿಸಲಾಗಿದೆ.ದಯಮಾಡಿ ಗಮನಿಸುವುದು.
1 ; ಹುಳಿಯಾರಿನ ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕೋದಂಡರಾಮನ ಸನ್ನಿದಾನದಲ್ಲಿ ಅನಂತಶಯನ ರಂಗನಾಥ ಸ್ವಾಮಿಯನ್ನು ಪ್ರತಿಷ್ಠಾಪಿಸಿರುವುದು.
2 ; ಹುಳಿಯಾರಿನ ಶ್ರೀ ರಂಗನಾಥ ಸ್ವಾಮಿ ಗುಡಿಯಲ್ಲಿ ಶ್ರೀ ಸ್ವಾಮಿಗೆ ಬಗೆಬಗೆಯ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಿರುವುದು.
3; ಹುಳಿಯಾರಿನ ಶ್ರೀ ಬನಶಂಕರಮ್ಮ ಅವರಿಗೆ ವೈಕುಂಠ ಏಕಾದಶಿ ಅಂಗವಾಗಿ ವೈಕುಂಠ ನಾರಾಯಣನ ಅಲಂಕಾರ ಮಾಡಿರುವುದು.
4 ; ಹುಳಿಯಾರಿನ ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಪ್ರಕಾರೋತ್ಸವ ಮಾಡಲಾಯಿತು.
5 ; ಗುಹಾ ಪ್ರವೇಶ ದಾರಿ ಮೂಲಕ ಭಕ್ತರ ಶ್ರೀ ಸ್ವಾಮಿಯವರ ದರ್ಶನ ಹೋಗುತ್ತಿರುವುದು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.