ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ನಡೆದ ಸಂಭ್ರಮದ ವೈಕುಂಠ ಏಕಾದಶಿ ಬಗ್ಗೆ ವಿಶೇಷ ವರದಿ


ಗುಹಾ ಪ್ರವೇಶ ದಾರಿ ಮೂಲಕ ಭಕ್ತರ ಶ್ರೀ ಸ್ವಾಮಿಯವರ ದರ್ಶನ ಹೋಗುತ್ತಿರುವುದು.
ಹುಳಿಯಾರಿನ ಶ್ರೀ ಬನಶಂಕರಮ್ಮ ಅವರಿಗೆ ವೈಕುಂಠ ಏಕಾದಶಿ ಅಂಗವಾಗಿ ವೈಕುಂಠ ನಾರಾಯಣನ ಅಲಂಕಾರ ಮಾಡಿರುವುದು.
ಹುಳಿಯಾರಿನ ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರಕಾರೋತ್ಸವ




ಹುಳಿಯಾರಿನ ಶ್ರೀ ರಂಗನಾಥ ಸ್ವಾಮಿ ಗುಡಿಯಲ್ಲಿ ಶ್ರೀ ಸ್ವಾಮಿಗೆ ಬಗೆಬಗೆಯ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಿರುವುದು.


1 ; ಹುಳಿಯಾರಿನ ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕೋದಂಡರಾಮನ ಸನ್ನಿದಾನದಲ್ಲಿ ಅನಂತಶಯನ ರಂಗನಾಥ ಸ್ವಾಮಿಯನ್ನು ಪ್ರತಿಷ್ಠಾಪಿಸಿರುವುದು.
ಹುಳಿಯಾರಿನಲ್ಲಿ ನಡೆದ ಸಂಭ್ರಮದ ವೈಕುಂಠ ಏಕಾದಶಿ ಬಗ್ಗೆ ವಿಶೇಷ ವರದಿ
---------------------------
ಇದನ್ನು ಬರೆದಿದ್ದು:ಕಿರಣ್ ಕುಮಾರ್ ಹೆಚ್.ಬಿ ಹಾಗೆಯೆ ಇದಕ್ಕೆ ಸಂಭಂದಿಸಿದ ವಿಶೇಷ ಛಾಯಚಿತ್ರಗಳನ್ನು ತೆಗೆದಿದ್ದು ಸ್ಟುಡಿಯೊ ದುರ್ಗರಾಜು ಮತ್ತು ಅಂಬಿಕಾ ಸುಧಿ.ವೆಬ್ ಗೆ ಹಾಕಿದ್ದು ನಾನು.
ಹುಳಿಯಾರಿನ ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನ, ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಬನಶಂಕರಿ ದೇವಸ್ಥಾನಗಳಲ್ಲಿ ದೇವಾಲಯವನ್ನು ಬಣ್ಣಬಣ್ಣದ, ಬಗೆ ಬಗೆಯ ಹೂಗಳಿಂದ ಹಾಗೂ ತಳಿರು ತೋರಣದಿಂದ ಶೃಂಗರಿಸಿ, ಝಗಮಗಿಸುವ ವಿದ್ಯುತ್ ದೀಪಾಲಂಕಾರದಿಂದ ಅಲಂಕರಿಸುವ ಮೂಲಕ ವೈಕುಂಠ ಏಕಾದಶಿಯನ್ನು ಅಪಾರ ಭಕ್ತ ಸಮೂಹದೊಂದಿಗೆ ಸಂಭಮದಿಂದ ಆಚರಿಸಲಾಯಿತು.
ಗ್ರಾಮದ ಪೇಟೆ ಬೀದಿಯಲ್ಲಿರುವ ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕೋದಂಡರಾಮನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತಲ್ಲದೆ ಶ್ರೀ ಸ್ವಾಮಿಯವರ ಸನ್ನಿದಿಯಲ್ಲಿ ಅನಂತಶಯನ ರಂಗನಾಥ ಸ್ವಾಮಿಯನ್ನು ಪ್ರತಿಷ್ಠಾಪಿಸಿ ಗುಹಾ ಪ್ರವೇಶ ದಾರಿ ಮೂಲಕ ಭಕ್ತರ ದರ್ಶನ ವ್ಯವಸ್ಥೆ ಮಾಡಿದಿದುದು ವಿಭೀನ್ನ ಹಾಗೂ ವಿಶೇಷತೆಯಿಂದ ಕೂಡಿತ್ತಲ್ಲದೆ ಭಕ್ತರ ಮೆಚ್ಚುಗೆಗೆ ಪಾತ್ರವಾಗಿತ್ತು.
ಧಾನ್ಯ ವರ್ತಕರ ಸಂಘದ ಅಧ್ಯಕ್ಷ ಎಂ.ಎಸ್.ಆರ್. ನಟರಾಜ್ ಅವರ ಸೇವಾರ್ಥದಲ್ಲಿ ಅಂದು ನಡೆದ ಪೂಜಾ ಕಾರ್ಯಕ್ರಮದಲ್ಲಿ ಅರ್ಚಕ ಹರೀಶ್ ಅವರ ನೇತೃತ್ವದಲ್ಲಿ ಮುಖ್ಯ ವಿಗ್ರಹ ಹಾಗೂ ಉತ್ಸವ ಮೂರ್ತಿಗೆ ವಿವಿಧ ಆಭರಣ ಹಾಗೂ ಪುಷ್ಪರಾಶಿಯೊಂದಿಗೆ ಅಲಂಕೃತಗೊಳಿಸಿ ಪ್ರಕಾರೋತ್ಸವ, ಅಷ್ಟಾವದಾನ ಸೇವೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಮುಂತಾದ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ಇತಿಹಾಸ ಪ್ರಸಿದ್ಧ ಶ್ರೀ ಅನಂತಶಯನ ರಂಗನಾಥ ಸ್ವಾಮಿ ಗುಡಿಯಲ್ಲಿ ಶ್ರೀ ಸ್ವಾಮಿಗೆ ಅರ್ಚಕ ಗುಂಡಣ್ಣ ಅವರ ನೇತೃತ್ವದಲ್ಲಿ ಎಣ್ಣೇ ಮಜ್ಜನ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಮಾಡಿ ಬಗೆಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತಲ್ಲದೆ ಬಸ್ಟಾಂಡ್ ಹೋಟಲ್ ಗೋಪಾಲ್ , ಚಿರುಮುರಿ ರಘು, ವೆಂಕಟೇಶ್ ಮಾಸ್ಟರ್ ಅವರ ನೇತೃತ್ವದಲ್ಲಿ ವಿವಿಧ ಭಜನಾ ಮಂಡಳಿ ಹಾಗೂ ಅಯ್ಯಪ್ಪ ಭಕ್ತರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಯಿತು.
ದೇವಾಂಗ ಸಮುದಾಯದ ಕುಲ ದೇವತೆ ಶ್ರೀ ಬನಶಂಕರಮ್ಮ ದೇವಾಲಯದಲ್ಲಿ ಅರ್ಚಕ ಶ್ರೀಧರ್ ಅವರ ನೇತೃತ್ವದಲ್ಲಿ ನಾಗಭೂಷಣ್, ಈಶ್ವರ್, ರಾಮರಾವ್ , ಕಮಲಮ್ಮ, ಜೋತಿ ಅವರ ಸೇವಾರ್ಥ ಮುಕ್ಕೋಟಿ ದ್ವಾದಶಿ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಮಾಡಲಾಗಿತ್ತಲ್ಲದೆ ಶ್ರೀ ಅಮ್ಮನವರಿಗೆ ವೈಕುಂಠ ನಾರಾಯಣನ ಅಲಂಕಾರ ಮಾಡಿ ಭಕ್ತಾಧಿಗಳ ದರ್ಶನ ಭಾಗ್ಯ ಕಲ್ಪಿಸಿದುದು ವಿಶೇಷವಾಗಿತ್ತು.
ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎನ್ನುವ ಪ್ರತೀತಿ ಇರುವ ಹಿನ್ನೆಲೆಯಲ್ಲಿ ವೈಕುಂಠ ದ್ವಾರದ ಮೂಲಕ ಪ್ರವೇಶ ಮಾಡಿ ಶ್ರೀ ಸ್ವಾಮಿಯವರ ದರ್ಶನ ಪಡೆದರೆ ಪುಣ್ಯ ಲಭಿಸುವುದು ಎನ್ನುವ ನಂಬಿಕೆ ಇರುವ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ದೇವಾಲಯಕ್ಕೆ ತೆರಳಿ ದರ್ಶನ ಪಡೆದು ಪುನೀತರಾದರು.
ಈ ಸುದ್ಧಿಗೆ ಸಂಬಂಧಿಸಿದ ಪೋಟೊವನ್ನು ಮೇಲ್ಭಾಗದಲ್ಲಿ ಪ್ರಕಟಿಸಲಾಗಿದೆ.ದಯಮಾಡಿ ಗಮನಿಸುವುದು.
1 ; ಹುಳಿಯಾರಿನ ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕೋದಂಡರಾಮನ ಸನ್ನಿದಾನದಲ್ಲಿ ಅನಂತಶಯನ ರಂಗನಾಥ ಸ್ವಾಮಿಯನ್ನು ಪ್ರತಿಷ್ಠಾಪಿಸಿರುವುದು.
2 ; ಹುಳಿಯಾರಿನ ಶ್ರೀ ರಂಗನಾಥ ಸ್ವಾಮಿ ಗುಡಿಯಲ್ಲಿ ಶ್ರೀ ಸ್ವಾಮಿಗೆ ಬಗೆಬಗೆಯ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಿರುವುದು.
3; ಹುಳಿಯಾರಿನ ಶ್ರೀ ಬನಶಂಕರಮ್ಮ ಅವರಿಗೆ ವೈಕುಂಠ ಏಕಾದಶಿ ಅಂಗವಾಗಿ ವೈಕುಂಠ ನಾರಾಯಣನ ಅಲಂಕಾರ ಮಾಡಿರುವುದು.
4 ; ಹುಳಿಯಾರಿನ ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಪ್ರಕಾರೋತ್ಸವ ಮಾಡಲಾಯಿತು.
5 ; ಗುಹಾ ಪ್ರವೇಶ ದಾರಿ ಮೂಲಕ ಭಕ್ತರ ಶ್ರೀ ಸ್ವಾಮಿಯವರ ದರ್ಶನ ಹೋಗುತ್ತಿರುವುದು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...