ವಿಷಯಕ್ಕೆ ಹೋಗಿ

ಎಲ್ಲಿದ್ದಾರೆ ಅವರೆಲ್ಲ....? ನಲ್ಲೂರು ಸಿಡಿಮಿಡಿ

ಎಲ್ಲಿದ್ದಾರೆ ಅವರೆಲ್ಲ....? ನಲ್ಲೂರು ಸಿಡಿಮಿಡಿ
ಗದಗ, 19- ಎಲ್ಲಿದ್ದಾರೆ ಅವರೆಲ್ಲ....? ಮೆರವಣಿಗೆ ಸಮಿತಿ ಸಮೀಪದಲ್ಲಿಯೇ ಇಲ್ಲ.... ಮೆರವಣಿಗೆ ಸಮಿತಿ ವೇಳೆ ಮೀರುತ್ತಲಿದೆ. ಛೆ.... ಛೇ.... ಎಂದು ಅಸಮಾಧಾನ ವ್ಯಕ್ತಪಡಿಸಿ ಸಿಡಿಮಿಡಿಗೊಂಡವರು ರಾಜ್ಯಾಧ್ಯಕ್ಷ ನಲ್ಲೂರು ಪ್ರಸಾದ.
ಶುಕ್ರವಾರ ಬೆಳಗ್ಗೆ ಸರಿಯಾಗಿ 10:00 ಗಂಟೆಗೆ ಆರಂಭವಾಗಬೇಕಿದ್ದ ಸರ್ವಾಧ್ಯಕ್ಷರ ಕುಂಭ ಮೇಳದ ಮೆರವಣಿಗೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಒಂದೂವರೆ ಗಂಟೆ ವಿಳಂಬವಾಗಿದ್ದಕ್ಕೆ ಸಿಡಿಮಿಡಿಗೊಂಡಿದ್ದು ಹೀಗೆ..
ತೋಂಟದಾರ್ಯ ಶಾಲಾ ಆವರಣದಿಂದ ಸಮ್ಮೇಳನದ ಅತ್ತಿಮಬ್ಬೆ ವೇದಿಕೆವರೆಗೆ ಸಾಗಬೇಕಾಗಿದ್ದ ಮೆರವಣಿಗೆ 10:30 ಗಂಟೆ ಮೀರಿದ್ದರೂ ಚಾಲನೆ ಸಿಕ್ಕಿರಲಿಲ್ಲ.
ಮೆರವಣಿಗೆಯಲ್ಲಿ ಸರ್ವಾಧ್ಯಕ್ಷ ಡಾ. ಗೀತಾ ನಾಗಭೂಷಣ ಅವರನ್ನು ಕರೆದುಕೊಂಡು ಹೋಗಬೇಕಿದ್ದ ತೆರೆದ ಜೀಪಿಗಾಗಿ ಶಾಸಕರು, ಗದಗ ಜಿಲ್ಲಾ ಕಸಾಪ ಅಧ್ಯಕ್ಷರಿಬ್ಬರೇ ಅಲ್ಲಿ ತಡಕಾಡುತ್ತಿದ್ದರು.
ಶಾಸಕ ಬಿದರೂರು ಅತ್ತಿಂದಿತ್ತ ಶತಪಥ ಹಾಕುತ್ತಿದ್ದು, ಓಡಾಟ ನಡೆಸಿದ್ದರೆ ಹೊರೆ ಹೆಚ್ಚಾಯಿತು ಎಂಬ ಛಾಯೆಯಲ್ಲಿ ಜಿಲ್ಲಾಧ್ಯಕ್ಷ ಎ. ಬಿ. ಪಾಟೀಲರು ವಯೋಮಾನದ ಅಡ್ಡಿಯಿಂದಾಗಿ ಏಕಾಂಗಿಯಾಗಿ ಓಡಾಟದಲ್ಲಿದ್ದರು.
ನಲ್ಲೂರು ಗುಡುಗಿದರೂ, ಅಸಮಾಧಾನ ವ್ಯಕ್ತಪಡಿಸಿದರೂ, ತಮ್ಮ ಕೇಂದ್ರ ಸಮಿತಿಯಿಂದ ಕರೆ ಕಳುಹಿಸಿದರೂ ಶಾಸಕರು ಸಂಪರ್ಕಕ್ಕೆ ತಕ್ಷಣವೇ ದೊರೆಯದಿದ್ದುದಕ್ಕಾಗಿ ತಾವೇ ಆವರಣದ ಮುಖ್ಯದ್ವಾರದ ಬಳಿ ಬಂದು ನಿಂತುಕೊಂಡಿದ್ದರು. ಮರವಣಿಗೆ ಸಮಿತಿಯವರು ಎಲ್ಲಿದ್ದಾರೆ..? ಎಂದು ನಲ್ಲೂರು ಅಲ್ಲಿದ್ದವರನ್ನು ತರಾಟೆಗೂ ತಂದುಕೊಂಡರು.
ಶಾಸಕರು ಸಿಪಿಐ ರುದ್ರೇಶ ಉಜ್ಜನಕೊಪ್ಪ ಅವರನ್ನು ಕಂಡು ಕೂಡಲೇ ಪೊಲೀಸ್ ಜೀಪನ್ನು ವ್ಯವಸ್ಥೆ ಮಾಡಿಕೊಡುವಂತೆ ಕೇಳಿದರು.
ಆಪತ್ತಿನಲ್ಲಿ ಬಂತು ಪೊಲೀಸ್ ಜೀಪು
ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದಾಗಿ ಮೆರವಣಿಗೆ ರದ್ದುಪಡಿಸಿದ್ದರಿಂದ ಕೊನೆಯ ಕ್ಷಣದಲ್ಲಿ ತೆಗೆದುಕೊಂಡ ನಿರ್ಧಾರ ಸಮ್ಮೇಳನದ ಆರಂಭಕ್ಕೆ ತೀವ್ರ ಗಡಿಬಿಡಿಗೆ ಕಾರಣವಾಗಿತ್ತು. ಈ ಕಾರಣಕ್ಕಾಗಿಯೇ ಮೆರವಣಿಗೆಯಲ್ಲಿ ನಡೆದುಕೊಂಡು ಹೋಗಬೇಕಿದ್ದ ಸರ್ವಾಧ್ಯಕ್ಷರಿಗೆ ಮಂಡಿ ನೋವಿನಿಂದಾಗಿ ಜೀಪು ತರುವ ನಿರ್ಧಾರ ಮಾಡಲಾಗಿತ್ತು. ಆ ವೇಳೆಗಾಗಲೇ ಮುಂಚೆಯೇ ತಯಾರಿಯಲ್ಲಿ ಇರಬೇಕಾಗಿದ್ದ ಕುಂಭಗಳು ತೆಂಗಿನ ಕಾಯಿಗಳು ಆಗ ಕಾರಿನಲ್ಲಿ ತರಲಾಯಿತು.
ಕಾರು ಬಂತು. ಹೂವಿನಿಂದ ಅಲಂಕಾರ ಮಾಡಲಾಯಿತು. ಸಾಗರದ ಮಹಿಳಾ ಮೈತ್ರಿ ಡೊಳ್ಳಿನ ಮಂಡಳದವರು ಬಂದು ಡೊಳ್ಳು ಸಪ್ಪಳ ಮಾಡಿ ಹಬ್ಬದ ವಾತಾವರಣವನ್ನು ನಿರ್ಮಿಸಿದರು.ಆಡಂಬರದ ಮೆರವಣಿಗೆ ಬೇಡವೆಂದಿದ್ದೆ. ಕನ್ನಡ ತಾಯಿಯ ನುಡಿ ಹಬ್ಬ ಸರಿಯಾದ ವೇಳೆಗೆ ಚಾಲನೆಗೊಳ್ಳಬೇಕು. ದೂರದಿಂದ ಬಂದಿರುವ ಸಾಹಿತ್ಯಾಸಕ್ತರನ್ನು ಬಿಸಿಲಲ್ಲಿ ಕಾಯಿಸಬಾರದು. ನಂತರ ತರಾತುರಿಯಲ್ಲಿ ಕಾರ್ಯಕ್ರಮ ಆಗಬಾರದು ಎಂದು ಕಳಕಳಿಯನ್ನು ವ್ಯಕ್ತಪಡಿಸುತ್ತಲೇ ಹಣೆಯ ಮೇಲೆ ಮುತ್ತಿನಂತೆ ಸಾಲುಗಟ್ಟಿದ್ದ ಬೆವರು ಹನಿಗಳನ್ನು ಒರೆಸಿಕೊಳ್ಳುತ್ತಲೇ ಮೆರವಣಿಗೆಯೊಂದಿಗೆ ನಲ್ಲೂರು ಪ್ರಸಾದ ಎಲ್ಲರೊಂದಿಗೆ ಒಂದಾದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...