ವಿಷಯಕ್ಕೆ ಹೋಗಿ

ಎಲ್ಲಿದ್ದಾರೆ ಅವರೆಲ್ಲ....? ನಲ್ಲೂರು ಸಿಡಿಮಿಡಿ

ಎಲ್ಲಿದ್ದಾರೆ ಅವರೆಲ್ಲ....? ನಲ್ಲೂರು ಸಿಡಿಮಿಡಿ
ಗದಗ, 19- ಎಲ್ಲಿದ್ದಾರೆ ಅವರೆಲ್ಲ....? ಮೆರವಣಿಗೆ ಸಮಿತಿ ಸಮೀಪದಲ್ಲಿಯೇ ಇಲ್ಲ.... ಮೆರವಣಿಗೆ ಸಮಿತಿ ವೇಳೆ ಮೀರುತ್ತಲಿದೆ. ಛೆ.... ಛೇ.... ಎಂದು ಅಸಮಾಧಾನ ವ್ಯಕ್ತಪಡಿಸಿ ಸಿಡಿಮಿಡಿಗೊಂಡವರು ರಾಜ್ಯಾಧ್ಯಕ್ಷ ನಲ್ಲೂರು ಪ್ರಸಾದ.
ಶುಕ್ರವಾರ ಬೆಳಗ್ಗೆ ಸರಿಯಾಗಿ 10:00 ಗಂಟೆಗೆ ಆರಂಭವಾಗಬೇಕಿದ್ದ ಸರ್ವಾಧ್ಯಕ್ಷರ ಕುಂಭ ಮೇಳದ ಮೆರವಣಿಗೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಒಂದೂವರೆ ಗಂಟೆ ವಿಳಂಬವಾಗಿದ್ದಕ್ಕೆ ಸಿಡಿಮಿಡಿಗೊಂಡಿದ್ದು ಹೀಗೆ..
ತೋಂಟದಾರ್ಯ ಶಾಲಾ ಆವರಣದಿಂದ ಸಮ್ಮೇಳನದ ಅತ್ತಿಮಬ್ಬೆ ವೇದಿಕೆವರೆಗೆ ಸಾಗಬೇಕಾಗಿದ್ದ ಮೆರವಣಿಗೆ 10:30 ಗಂಟೆ ಮೀರಿದ್ದರೂ ಚಾಲನೆ ಸಿಕ್ಕಿರಲಿಲ್ಲ.
ಮೆರವಣಿಗೆಯಲ್ಲಿ ಸರ್ವಾಧ್ಯಕ್ಷ ಡಾ. ಗೀತಾ ನಾಗಭೂಷಣ ಅವರನ್ನು ಕರೆದುಕೊಂಡು ಹೋಗಬೇಕಿದ್ದ ತೆರೆದ ಜೀಪಿಗಾಗಿ ಶಾಸಕರು, ಗದಗ ಜಿಲ್ಲಾ ಕಸಾಪ ಅಧ್ಯಕ್ಷರಿಬ್ಬರೇ ಅಲ್ಲಿ ತಡಕಾಡುತ್ತಿದ್ದರು.
ಶಾಸಕ ಬಿದರೂರು ಅತ್ತಿಂದಿತ್ತ ಶತಪಥ ಹಾಕುತ್ತಿದ್ದು, ಓಡಾಟ ನಡೆಸಿದ್ದರೆ ಹೊರೆ ಹೆಚ್ಚಾಯಿತು ಎಂಬ ಛಾಯೆಯಲ್ಲಿ ಜಿಲ್ಲಾಧ್ಯಕ್ಷ ಎ. ಬಿ. ಪಾಟೀಲರು ವಯೋಮಾನದ ಅಡ್ಡಿಯಿಂದಾಗಿ ಏಕಾಂಗಿಯಾಗಿ ಓಡಾಟದಲ್ಲಿದ್ದರು.
ನಲ್ಲೂರು ಗುಡುಗಿದರೂ, ಅಸಮಾಧಾನ ವ್ಯಕ್ತಪಡಿಸಿದರೂ, ತಮ್ಮ ಕೇಂದ್ರ ಸಮಿತಿಯಿಂದ ಕರೆ ಕಳುಹಿಸಿದರೂ ಶಾಸಕರು ಸಂಪರ್ಕಕ್ಕೆ ತಕ್ಷಣವೇ ದೊರೆಯದಿದ್ದುದಕ್ಕಾಗಿ ತಾವೇ ಆವರಣದ ಮುಖ್ಯದ್ವಾರದ ಬಳಿ ಬಂದು ನಿಂತುಕೊಂಡಿದ್ದರು. ಮರವಣಿಗೆ ಸಮಿತಿಯವರು ಎಲ್ಲಿದ್ದಾರೆ..? ಎಂದು ನಲ್ಲೂರು ಅಲ್ಲಿದ್ದವರನ್ನು ತರಾಟೆಗೂ ತಂದುಕೊಂಡರು.
ಶಾಸಕರು ಸಿಪಿಐ ರುದ್ರೇಶ ಉಜ್ಜನಕೊಪ್ಪ ಅವರನ್ನು ಕಂಡು ಕೂಡಲೇ ಪೊಲೀಸ್ ಜೀಪನ್ನು ವ್ಯವಸ್ಥೆ ಮಾಡಿಕೊಡುವಂತೆ ಕೇಳಿದರು.
ಆಪತ್ತಿನಲ್ಲಿ ಬಂತು ಪೊಲೀಸ್ ಜೀಪು
ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದಾಗಿ ಮೆರವಣಿಗೆ ರದ್ದುಪಡಿಸಿದ್ದರಿಂದ ಕೊನೆಯ ಕ್ಷಣದಲ್ಲಿ ತೆಗೆದುಕೊಂಡ ನಿರ್ಧಾರ ಸಮ್ಮೇಳನದ ಆರಂಭಕ್ಕೆ ತೀವ್ರ ಗಡಿಬಿಡಿಗೆ ಕಾರಣವಾಗಿತ್ತು. ಈ ಕಾರಣಕ್ಕಾಗಿಯೇ ಮೆರವಣಿಗೆಯಲ್ಲಿ ನಡೆದುಕೊಂಡು ಹೋಗಬೇಕಿದ್ದ ಸರ್ವಾಧ್ಯಕ್ಷರಿಗೆ ಮಂಡಿ ನೋವಿನಿಂದಾಗಿ ಜೀಪು ತರುವ ನಿರ್ಧಾರ ಮಾಡಲಾಗಿತ್ತು. ಆ ವೇಳೆಗಾಗಲೇ ಮುಂಚೆಯೇ ತಯಾರಿಯಲ್ಲಿ ಇರಬೇಕಾಗಿದ್ದ ಕುಂಭಗಳು ತೆಂಗಿನ ಕಾಯಿಗಳು ಆಗ ಕಾರಿನಲ್ಲಿ ತರಲಾಯಿತು.
ಕಾರು ಬಂತು. ಹೂವಿನಿಂದ ಅಲಂಕಾರ ಮಾಡಲಾಯಿತು. ಸಾಗರದ ಮಹಿಳಾ ಮೈತ್ರಿ ಡೊಳ್ಳಿನ ಮಂಡಳದವರು ಬಂದು ಡೊಳ್ಳು ಸಪ್ಪಳ ಮಾಡಿ ಹಬ್ಬದ ವಾತಾವರಣವನ್ನು ನಿರ್ಮಿಸಿದರು.ಆಡಂಬರದ ಮೆರವಣಿಗೆ ಬೇಡವೆಂದಿದ್ದೆ. ಕನ್ನಡ ತಾಯಿಯ ನುಡಿ ಹಬ್ಬ ಸರಿಯಾದ ವೇಳೆಗೆ ಚಾಲನೆಗೊಳ್ಳಬೇಕು. ದೂರದಿಂದ ಬಂದಿರುವ ಸಾಹಿತ್ಯಾಸಕ್ತರನ್ನು ಬಿಸಿಲಲ್ಲಿ ಕಾಯಿಸಬಾರದು. ನಂತರ ತರಾತುರಿಯಲ್ಲಿ ಕಾರ್ಯಕ್ರಮ ಆಗಬಾರದು ಎಂದು ಕಳಕಳಿಯನ್ನು ವ್ಯಕ್ತಪಡಿಸುತ್ತಲೇ ಹಣೆಯ ಮೇಲೆ ಮುತ್ತಿನಂತೆ ಸಾಲುಗಟ್ಟಿದ್ದ ಬೆವರು ಹನಿಗಳನ್ನು ಒರೆಸಿಕೊಳ್ಳುತ್ತಲೇ ಮೆರವಣಿಗೆಯೊಂದಿಗೆ ನಲ್ಲೂರು ಪ್ರಸಾದ ಎಲ್ಲರೊಂದಿಗೆ ಒಂದಾದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...