ವಿಷಯಕ್ಕೆ ಹೋಗಿ

ಬೋರನಕಣಿವೆಗೆ ಹೇಮೆ ತರುವಲ್ಲಿ ವಿಫಲವಾದರೆ ಹಸಿರು ಶಾಲು ಹಾಕುವುದಿಲ್ಲ: ಸತೀಶ್ ಶಪಥ


ಬೋರನಕಣಿವೆಗೆ ಹೇಮೆ ತರುವಲ್ಲಿ ವಿಫಲವಾದರೆ ಹಸಿರು ಶಾಲು ಹಾಕುವುದಿಲ್ಲ: ಸತೀಶ್ ಶಪಥ
-------------------------------------------------------
ಹುಳಿಯಾರು: ಬೋರನಕಣಿವೆ ಜಲಾಶಯಕ್ಕೆ ಚಿಕ್ಕನಾಯಕನಹಳ್ಳಿ ತಾಲೂಕಿನ ವಿವಿಧ ಕೆರೆಗಳ ಮೂಲಕ ನೈಸರ್ಗಿಕವಾಗಿ ಹೇಮಾವತಿ ನೀರನ್ನು ತರುವಲ್ಲಿ ವಿಫಲವಾದರೆ ಆ ಕ್ಷಣದಿಂದಲೇ ಹಸಿರು ಶಾಲು ಹಾಕುವುದಿಲ್ಲ ಎಂದು ರಾಜ್ಯ ಹಸಿರು ಸೇನೆ ಸಂಚಾಲಕ ಕೆಂಕೆರೆ ಸತೀಶ್ ಅವರು ಶಪಥ ಗೈದರು.
ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಶ್ರೀ ಲಕ್ಷ್ಮೀವಿನಾಯಕ ರೈತ ಸಂಘ ಕಾಯಿ ತಿಮ್ಮನಹಳ್ಳಿಯಲ್ಲಿ ಏರ್ಪಡಿಸಿದ್ದ ಹೋಬಳಿ ಮಟ್ಟದ ರೈತ ಸಮಾವೇಶದಲ್ಲಿ ಅವರು ಮಾತನಾಡಿ ನೈಸರ್ಗಿಕವಾಗಿ ಬೋರನಕಣಿವೆಗೆ ನೀರು ಹರಿಯುವುದರಿಂದ ಅಂತರ್ಜಲ ವೃದ್ಧಿಯಾಗಿ, ಉದ್ಯೋಗ ಸೃಷ್ಠಿಯಾಗಿ ಪಟ್ಟಣಗಳಿಗೆ ಗುಳೆ ಹೋಗುವುದನ್ನು ತಪ್ಪಿಸಬಹುದಾಗಿದ್ದು ಈ ಭಾಗದ ಜನರ ಹಿತದೃಷ್ಠಿಯಿಂದ ಎಂತಹುದೇ ಪರಿಸ್ಥಿತಿ ನಿಮರ್ಾಣವಾದರೂ ಸಹ ನೀರಿನ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಸಾರಿದರು.
ರಾಗಿ, ಕೊಬ್ಬರಿಗೆ ಬೆಂಬಲ ಬೆಲೆಗೆ, ನ್ಯಾಫೆಡ್ ಕೇಂದ್ರಕೆ, ಟಿಸಿಗಳಿಗೆ ಹೀಗೆ ಈ ಹಿಂದೆ ಮಾಡಿದ ಅನೇಕ ಹೋರಾಟದಲ್ಲಿ ಯಶಸ್ವಿಯಾಗಿದ್ದೇವೆ. ಈಗ ರಾಜಕಾರಣಿಗಳ ದಿವ್ಯ ನಿರ್ಲಕ್ಷ್ಯದಿಂದ ನೀರಿನ ಹಾಹಾಕಾರಕ್ಕೆ ತುತ್ತಾಗಿರುವ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನೀರಿನ ಕ್ರಾಂತಿ ಮಾಡುವ ಸಲುವಾಗಿ ಹೇಮೆ ಹರಿಸುವ ಹೋರಾಟಕ್ಕೆ ಧುಮುಕಲಾಗಿದೆ. 3 ತಿಂಗಳ ವಿವಿಧ ಸ್ವರೂಪದ ಹೋರಾಟದ ಪ್ರತಿಫಲ ಈಗಾಗಲೇ ಸರ್ವೆಕಾರ್ಯ ಮುಗಿದಿದ್ದು ಮತ್ತೆ ನೆನಗುದಿಗೆ ಬೀಳದಂತೆ ಸರ್ಕಾರಕ್ಕೆ ಆಗಾಗ ಚುರುಕು ಮುಟ್ಟಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ತಾವು ರೂಪಿಸುವ ಹೋರಾಟಕ್ಕೆ ತಾಲೂಕಿನ ರೈತರು ಬೆಂಬಲ ಸೂಸಿ ತಮ್ಮೊಂದಿಗೆ ನಿಂತಿದ್ದೇಯಾದರೆ ನೀರು ಹರಿಸುವುದು ಕಷ್ಠಕರವಲ್ಲ ಎಂದು ಹೇಳಿದರು.
ರಾಜಕೀಯ ಪಕ್ಷಗಳು ಬೀಡಿ ಕಟ್ಟು ಇದ್ದ ಹಾಗೆ. ಲೇಬಲ್ ಬೇರೆ ಬೇರೆಯಾದರೂ ಎಲ್ಲಾ ಬೀಡಿಗಳಿಗೂ ಬಳಸುವುದು ಒಂದೇ ತರಹದ ಸೊಪ್ಪು. ಅಂತೆಯೆ ಪಕ್ಷಗಳ ಹೆಸರು ಬೇರೆ ಬೇರೆ ಇದ್ದರೂ ಅದರಲ್ಲಿರುವ ರಾಜಕಾರಣಿಗಳು ಒಂದೇ ಗುಣ ಹೊಂದಿರುತ್ತಾರೆ. ಹಾಗಾಗಿ ರಾಜಕಾರಣಿಗಳ ಹಿಂದೆ ಸುತ್ತವುದರಿಂದ ಯಾವುದೇ ಪ್ರಯೋಜನವಿಲ್ಲ. ಅವರನ್ನು ಬಿಟ್ಟು ತಮ್ಮ ತಮ್ಮ ಗ್ರಾಮಗಳ ರೈತರನ್ನು ಸಂಘಟಿಸಿ ತಮ್ಮ ಬೇಡಿಕೆ ಈಡೇರಿಸಲು ತಾವೇ ಹೋರಾಟ ರೂಪಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎಸ್.ದೇವರಾಜು ಅವರು ಮಾತನಾಡಿ ಚುನಾವಣೆ ಪೂರ್ವ 24 ಗಂಟೆ ವಿದ್ಯುತ್ ಕೊಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಕೇವಲ 6 ಗಂಟೆ ಮಾತ್ರ ವಿದ್ಯುತ್ ನೀಡುತ್ತಿದೆ. ಈ ವಿದ್ಯುತ್ ಕೊರತೆಯಿಂದ ಇಡೀ ರಾಜ್ಯದಲ್ಲಿ 25 ಲಕ್ಷ ಎಕರೆ ಭೂಮಿಯನ್ನು ರೈತರು ಬೀಳುಬಿಡುವಂತಾಗಿದೆ. ಇದರಿಂದ 3.75 ಲಕ್ಷ ಕ್ವಿಂಟಾಲ್ ಆಹಾರ ಉತ್ಪಾದನೆ ಕಡಿಮೆಯಾಗಿ ರೈತರಿಗೆ 3150 ಕೋಟಿ ರೂ ಆದಾಯ ನಷ್ಠವಾಗಿದೆ. ಈ ನಷ್ಠವನ್ನು ಸರ್ಕಾರ ರೈತರಿಗೆ ತುಂಬಿಕೊಡಬೇಕು ಎಂದು ವಾದಿಸಿದರು.
ಜನಪ್ರತಿನಿಧಿಗಳಿಗೆ ರೈತರ ಮೇಲೆ ಕಾಳಜಿ ಇಲ್ಲದ ಪರಿಣಾಮ ರೈತನ ಬೆಳೆಗೆ ಅವೈಜ್ಞಾನಿಕ ಬೆಲೆ. ಬಜೆಟ್ ತಾರತಮ್ಯ, ನೀರು, ವಿದ್ಯುತ್ ಪೂರೈಕೆಯಲ್ಲಿ ಕಡೆಗಣನೆ ಆಗುತ್ತಿದೆ. ಇದರಿಂದ ರೈತರು ಸಾಲದ ಸುಳಿಗೆ ಸಿಕ್ಕಿ ನಲುಗಿ ಕೆಲವರು ಆತ್ಮಹತ್ಯೆ ಹಾದಿ ತುಳಿದರೆ, ಇನ್ನೂ ಕೆಲವರು ಗುಳೆ ಹೋಗುತ್ತಿದ್ದಾರೆ. ಈ ಪರಿಸ್ಥಿತಿಯನ್ನು ರೈತರು ಸಂಘಟಿತರಾಗಿ ಹೋರಾಟ ಮಾಡಿ ಪರಿಹರಿಸಿಕೊಳ್ಳುವ ಅನಿವಾರ್ಯತೆ ಇದೆ. ಇನ್ನಾದರೂ ರೈತರು ಎಚ್ಚೆತ್ತು ಸುತ್ತ ಮುತ್ತಲ ಗ್ರಾಮಗಳ ರೈತರನ್ನು ಸಂಘಟಿಸಿ ಪ್ರಾಮಾಣಿಕ ಹೋರಾಟಕ್ಕೆ ಮುಂದಾಗಿ ತಮ್ಮ ಬದುಕಿನ ಭವಿಷ್ಯ ಕಟ್ಟಿಕೊಳ್ಳಿ ಎಂದು ತಿಳಿ ಹೇಳಿದರು.
ರೈತ ಸಂಘದ ರಾಜ್ಯಾಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ ಅವರು ಸಮಾವೇಶವನ್ನು ಉದ್ಘಾಟಿಸಿದರು. ಕಾಯಿ ತಿಮ್ಮನಹಳ್ಳಿ ರೈತ ಸಂಘದ ಗೌರವ ಅಧ್ಯಕ್ಷ ಟಿ.ಎಂ.ತಿಮ್ಮೇಗೌಡ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ರೈತ ಸಂಘದ ಉಪಾಧ್ಯಕ್ಷ ಸೋಮಗುದ್ದ ರಂಗಸ್ವಾಮಿ, ಗ್ರಾ.ಪಂ.ಅಧ್ಯಕ್ಷೆ ಶಾರದಮ್ಮ, ಕೆ.ಪಿ.ಮಲ್ಲೇಶ್, ಶಿವಶಂಕರಪ್ಪ, ಬಿ.ಎ.ಪ್ರಕಾಶಯ್ಯ, ಮಂಡ್ಯಕೆಂಪೇಗೌಡರು. ನರೇಂದ್ರ, ಬಂಡೀಮನೆ ಲೋಕೇಶ್, ಇಟ್ಟಿಗೆ ರಾಜಣ್ಣ, ಜಿ.ಜಗಧೀಶ್, ಡಾ.ಬಾಬು, ರಾಜಶೇಖರಪ್ಪ ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.
ಈ ಸುದ್ಧಿಗೆ ಸಂಬಂಧಿಸಿದ ಪೋಟೊ ವಿವರ ಹೀಗಿದೆ.
ಹುಳಿಯಾರು ಸಮೀಪದ ಕಾಯಿ ತಿಮ್ಮನಹಳ್ಳಿಯಲ್ಲಿ ಏರ್ಪಡಿಸಿದ್ದ ಹೋಬಳಿ ಮಟ್ಟದ ರೈತ ಸಮಾವೇಶದಲ್ಲಿ ರೈತ ಸಂಘದ ಕೆ.ಪಿ.ಮಲ್ಲೇಶ್ ಮಾತನಾಡಿದರು. ಕೆ.ಎಸ್.ಪುಟ್ಟಣ್ಣಯ್ಯ, ಟಿ.ಎಂ.ತಿಮ್ಮೇಗೌಡ, ಸೋಮಗುದ್ದ ರಂಗಸ್ವಾಮಿ, ಕೆಂಕೆರೆ ಸತೀಶ್, ಬಿ.ಎಸ್.ದೇವರಾಜು ಮತ್ತಿತರರು ಇದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...