ವಿಷಯಕ್ಕೆ ಹೋಗಿ

ಬೋರನಕಣಿವೆ ಜಲಾಶಯಕ್ಕೆ ನದಿ ನೀರು ಹರಿಸಲು ಒತ್ತಾಯಿಸಿ


ಬೋರನಕಣಿವೆ ಜಲಾಶಯಕ್ಕೆ ನದಿ ನೀರು ಹರಿಸಲು ಒತ್ತಾಯಿಸಿ ಫೆಬ್ರವರಿ 15 ರಂದು ಹುಳಿಯಾರ್ ಬಂದ್
------------------------- ---------------------------------------------------------
ಚಿಕ್ಕನಾಯಕನಹಳ್ಳಿ ತಾಲೂಕಿನ ವಿವಿಧ ಕೆರೆಗಳ ಮೂಲಕ ನೈಸರ್ಗಿಕವಾಗಿ ಹುಳಿಯಾರು ಹೋಬಳಿ ಬೋರನಕಣಿವೆ ಜಲಾಶಯಕ್ಕೆ ನದಿ ಮೂಲದ ನೀರು ಹರಿಸಲು ಒತ್ತಾಯಿಸಿ ಹುಳಿಯಾರ್ ಬಂದ್ಗೆ ಕರೆ ನೀಡಲು ರೈತ ಸಂಘ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಸಂಘ ಸಂಸ್ಥೆಗಳು ನಿರ್ಧರಿಸಿವೆ.
ಹುಳಿಯಾರಿನ ಪ್ರವಾಸಿ ಮಂದಿರಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಈ ಸಂಬಂಧ ಕರೆಯಲಾಗಿದ್ದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಅಲ್ಲದೆ, ಬಂದ್ ನ ಭಾರಿ ಪ್ರತಿಭಟನಾ ಮೆರವಣಿಗೆಯಲ್ಲಿ ಸರ್ಕಾರ ತಮ್ಮ ನಿಲುವು ಪ್ರಕಟಿಸದಿದ್ದಲ್ಲಿ ತಾಲೂಕು ಕಛೇರಿಗೆ ಪಾದಯಾತ್ರೆ, ವಿಧಾನಸೌಧಕ್ಕೆ ಬೈಕ್ ರಾಲಿ ಹಾಗೂ ಇಲ್ಲಿನ ನಾಡ ಕಛೇರಿ ಮುಂದೆ ಆಹೋರಾತ್ರಿ ಧರಣಿ ನಡೆಸುವ ಮೂಲಕ ಸರ್ಕಾರದ ಮೇಲೆ ಮತ್ತೊಷ್ಟು ಒತ್ತಡ ತರಲು ತೀರ್ಮಾನಿಸಲಾಯಿತು.
ಚಿಕ್ಕನಾಯಕನಹಳ್ಳಿ ತಾಲೂಕಿಗೆ ಯಾವುದೇ ನೀರಾವರಿ ಸೌಲಭ್ಯ ಇಲ್ಲದೆ ಮಳೆ ಹಾಗೂ ಅಂತರ್ಜಲ ನಂಬಿ ಜೀವನ ಸಾಗಿಸುವ ಅನಿವಾರ್ಯತೆ ಇದೆ. ಇತ್ತೀಚಿನ ದಿನಗಳಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಿಲ್ಲ, ಅಂತರ್ಜಲವೂ ಸಹ ಕುಸಿತವಾಗಿ ಸಾವಿರ ಅಡಿ ಕೊರೆದರೂ ನೀರು ಸಿಗದಂತಾಗಿದೆ ಇಲ್ಲಿನ ಜನಜೀವನದ ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಈ ಭಾಗಕ್ಕೆ ನದಿ ಮೂಲದ ನೀರು ಹರಿಯುವ ಹೊರತು ಉಳಿಗಾಲವಿಲ್ಲ ಎಂದು ನಿರ್ಧರಿಸಿ ಹಲವು ವರ್ಷಗಳಿಂದ ಹೋರಾಟ ಮಾಡಲಾಗಿದ್ದರೂ ಹಿಂದಿನ ಸರ್ಕಾರಗಳು ಈ ಭಾಗವನ್ನು ನಿರ್ಲಕ್ಷ್ಯವಹಿಸಿದ್ದವು.
ಹಾಗಾಗಿ ಇತ್ತೀಚಿನ ದಿನಗಳಲ್ಲಿ ಹೋರಾಟವನ್ನು ತೀವ್ರ ಗೊಳಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ, ವಿವಿಧ ಪಕ್ಷಗಳ ಹಾಗೂ ರಾಜಕಾಣಿಗಳ ನಾಯಕತ್ವದಲ್ಲಿ, ರೈತ ಸಂಘ ಹಾಗೂ ಮೂವತ್ತಕ್ಕೂ ಹೆಚ್ಚು ಸಂಘ ಸಂಸ್ಥೆಗಳ ಮುಂದಾಳತ್ವದಲ್ಲಿ ಹೀಗೆ ಅನೇಕ ಪ್ರತಿಭಟನಾ ಮೆರವಣಿಗೆ, ರಸ್ತೆ ತಡೆ ಹಾಗೂ ಪಟ್ಟಣ ಬಂದ್ ಸಹ ಮಾಡಲಾಗಿತ್ತಲ್ಲದೆ ಇಲ್ಲಿನ ನಾಡಕಛೇರಿ ಬಳಿ ಬರೋಬರಿ ನಲ್ವತಕ್ಕೂ ಹೆಚ್ಚು ದಿನಗಳ ಕಾಲ ಅಹೋರಾತ್ರಿ ಧರಣಿ ನಡೆಸುವ ಮೂಲಕ ಸಕರ್ಾರದ ಮೇಲೆ ಮತ್ತೊಷ್ಟು ಒತ್ತಡ ತರಲಾಯಿತು.
ಪರಿಣಾಮ ಜಿಲ್ಲಾ ಉಸ್ತುವಾರಿ ಸಚಿವರೆ ಖುದ್ದು ಧರಣಿ ಸ್ಥಳಕ್ಕೆ ಆಗಮಿಸಿ ನೀರು ಹರಿಸುವ ಭರವಸೆ ನೀಡಿದರಲ್ಲದೆ ಧರಣಿ ನಿರತ ಮುಖ್ಯಸ್ಥರನ್ನು ವಿಧಾನಸೌಧಕ್ಕೆ ಆಹ್ವಾನಿಸಿ ನೀರಾವರಿ ಸಚಿವ ಬಸವರಾಜ ಬೊಮ್ಮಯಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಬೋರನಕಣಿವೆ ಜಲಾಶಯಕ್ಕೆ ಹೇಮಾವತಿ ನೀರು ಹರಿಸುವ ಸಲುವಾಗಿ 3 ದಿಂಗಳ ಕಾಲಾವಕಾಶ ಕೋರಿ ಸವರ್ೆ ಕಾರ್ಯಕ್ಕೆ ಸ್ಥಳದಲ್ಲಿಯೇ ಆದೇಶ ನೀಡಿದರು.
ಆದರಂತೆ ಈಗಾಗಲೇ ಸರ್ವೆ ಕಾರ್ಯ ಮುಗಿದಿರುವುದು ಹೋರಾಟಕ್ಕೆ ಸಂದ ಜಯವಾಗಿದ್ದರೂ ಕೂಡ ಸಕರ್ಾರ ಪಡೆದಿದ್ದ 3 ತಿಂಗಳ ಕಾಲಾವಕಾಶ ಮೀರಿಹೋಗಿದೆ. ಆದರೂ ನೀರು ಹರಿಸುವ ಸಂಬಂಧ ಈ ಭಾಗಕ್ಕೆ ನಿಗಧಿ ಪಡಿಸಿದ ನೀರಿನ ಪ್ರಮಾಣ, ಯೋಜನ ವೆಚ್ಚ ಹಾಗೂ ಮಾದರಿಯನ್ನು ಘೋಷಿಸಿ ಕಾಮಕಾರಿಗೆ ಟೆಂಡರ್ ಕರೆಯದೆ ಮತ್ತೊಮ್ಮೆ ನಿರ್ಲಕ್ಷ್ಯ ಧೋರಣೆ ತಾಳಿರುವ ಪರಿಣಾಮ ಎಚ್ಚರಗೊಳಿಸುವ ಸಲುವಾಗಿ ಅನಿವಾರ್ಯವಾಗಿ ಹುಳಿಯಾರ್ ಬಂದ್ ಕರೆ ನೀಡಲಾಗಿದೆ ಎಂದು ಸಭೆಯ ನಂತರ ಪತ್ರಿಕಾಗೋಷ್ಟಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖಂಡರು ತಿಳಿಸಿದರು.
ರಾಜ್ಯ ಹಸಿರು ಸೇನೆ ಸಂಚಾಲಕ ಕೆಂಕೆರೆ ಸತಿಶ್, ಜಿಲ್ಲೆಯ ಹೆಸರಾಂತ ಹೃದಯ ತಜ್ಞ ಹಾಗೂ ನೀರಾವರಿ ಹೋರಾಟಗಾರ ಡಾ.ಪರಮೇಶ್ವರಪ್ಪ, ರೈತ ಸಂಘದ ಕೆ.ಪಿ.ಮಲ್ಲೇಶ್, ಚಿಕ್ಕನಾಯಕನಹಳ್ಳಿ ಪುರಸಭೆ ಸದಸ್ಯ ಸಿ.ಡಿ.ಚಂದ್ರಶೇಖರ್, ಕರವೇ ಅಧ್ಯಕ್ಷ ಸಿ.ಟಿ.ಗುರುಮೂರ್ತಿ, ವರ್ತಕರ ಸಂಘದ ನಟರಾಜ್, ಏಜೆಂಟರ ಸಂಘದ ಲೋಕೇಶ್, ಹುಳಿಯಾರು ಕರವೇಯ ರಂಗಸ್ವಾಮಿ, ಕೋಳಿ ಶ್ರೀನಿವಾಸ್, ವಿಪ್ರ ಸಂಘದ ವಿಶ್ವನಾಥ್, ಟಿಪ್ಪು ಸಂಘದ ಅಪ್ಸರ್, ಜಯಕನರ್ಾಟಕದ ಎಚ್.ಎನ್.ವೆಂಕಟೇಶ್, ಛಾಯಾಗ್ರಹಕರ ಸಂಘದ ಎ.ಡಿ.ತಂಡವಾಚಾರ್, ದುರ್ಗಾ ಪರಮೇಶ್ವರಿ ಸಂಘದ ಪೈಲ್ವಾನ್ ಜಯಣ್ಣ, ಜಯಲಕ್ಷ್ಮಮ್ಮ, ಬೈರಮ್ಮ, ಸಿದ್ರಾಮಕ್ಕ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ನೂರಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದರು.
ಸುದ್ಧಿಗೆ ಸಂಬಂಧಿಸಿದ ಪೋಟೊ ಕೂಡ ಇದೆ
ಫೋಟೊ ವಿವರ : ಹುಳಿಯಾರು ಹೋಬಳಿ ಬೋರನಕಣಿವೆ ಜಲಾಶಯಕ್ಕೆ ನದಿ ಮೂಲದ ನೀರು ಹರಿಸಲು ಒತ್ತಾಯಿಸಿ ಹುಳಿಯಾರ್ ಬಂದ್ಗೆ ಕರೆ ನೀಡುವ ಸಲುವಾಗಿ ಪ್ರತಿಕಾಗೋಷ್ಠಿ ನಡೆಸಿದರು. ಕೆಂಕೆರೆ ಸತಿಶ್, ಡಾ.ಪರಮೇಶ್ವರಪ್ಪ, ಸಿ.ಡಿ.ಚಂದ್ರಶೇಖರ್, ಸಿ.ಟಿ.ಗುರುಮೂರ್ತಿ, ನಟರಾಜ್, ಲೋಕೇಶ್ ಮತ್ತಿತರರಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.