ವಿಷಯಕ್ಕೆ ಹೋಗಿ

ಬೋರನಕಣಿವೆ ಜಲಾಶಯಕ್ಕೆ ನದಿ ನೀರು ಹರಿಸಲು ಒತ್ತಾಯಿಸಿ


ಬೋರನಕಣಿವೆ ಜಲಾಶಯಕ್ಕೆ ನದಿ ನೀರು ಹರಿಸಲು ಒತ್ತಾಯಿಸಿ ಫೆಬ್ರವರಿ 15 ರಂದು ಹುಳಿಯಾರ್ ಬಂದ್
------------------------- ---------------------------------------------------------
ಚಿಕ್ಕನಾಯಕನಹಳ್ಳಿ ತಾಲೂಕಿನ ವಿವಿಧ ಕೆರೆಗಳ ಮೂಲಕ ನೈಸರ್ಗಿಕವಾಗಿ ಹುಳಿಯಾರು ಹೋಬಳಿ ಬೋರನಕಣಿವೆ ಜಲಾಶಯಕ್ಕೆ ನದಿ ಮೂಲದ ನೀರು ಹರಿಸಲು ಒತ್ತಾಯಿಸಿ ಹುಳಿಯಾರ್ ಬಂದ್ಗೆ ಕರೆ ನೀಡಲು ರೈತ ಸಂಘ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಸಂಘ ಸಂಸ್ಥೆಗಳು ನಿರ್ಧರಿಸಿವೆ.
ಹುಳಿಯಾರಿನ ಪ್ರವಾಸಿ ಮಂದಿರಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಈ ಸಂಬಂಧ ಕರೆಯಲಾಗಿದ್ದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಅಲ್ಲದೆ, ಬಂದ್ ನ ಭಾರಿ ಪ್ರತಿಭಟನಾ ಮೆರವಣಿಗೆಯಲ್ಲಿ ಸರ್ಕಾರ ತಮ್ಮ ನಿಲುವು ಪ್ರಕಟಿಸದಿದ್ದಲ್ಲಿ ತಾಲೂಕು ಕಛೇರಿಗೆ ಪಾದಯಾತ್ರೆ, ವಿಧಾನಸೌಧಕ್ಕೆ ಬೈಕ್ ರಾಲಿ ಹಾಗೂ ಇಲ್ಲಿನ ನಾಡ ಕಛೇರಿ ಮುಂದೆ ಆಹೋರಾತ್ರಿ ಧರಣಿ ನಡೆಸುವ ಮೂಲಕ ಸರ್ಕಾರದ ಮೇಲೆ ಮತ್ತೊಷ್ಟು ಒತ್ತಡ ತರಲು ತೀರ್ಮಾನಿಸಲಾಯಿತು.
ಚಿಕ್ಕನಾಯಕನಹಳ್ಳಿ ತಾಲೂಕಿಗೆ ಯಾವುದೇ ನೀರಾವರಿ ಸೌಲಭ್ಯ ಇಲ್ಲದೆ ಮಳೆ ಹಾಗೂ ಅಂತರ್ಜಲ ನಂಬಿ ಜೀವನ ಸಾಗಿಸುವ ಅನಿವಾರ್ಯತೆ ಇದೆ. ಇತ್ತೀಚಿನ ದಿನಗಳಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಿಲ್ಲ, ಅಂತರ್ಜಲವೂ ಸಹ ಕುಸಿತವಾಗಿ ಸಾವಿರ ಅಡಿ ಕೊರೆದರೂ ನೀರು ಸಿಗದಂತಾಗಿದೆ ಇಲ್ಲಿನ ಜನಜೀವನದ ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಈ ಭಾಗಕ್ಕೆ ನದಿ ಮೂಲದ ನೀರು ಹರಿಯುವ ಹೊರತು ಉಳಿಗಾಲವಿಲ್ಲ ಎಂದು ನಿರ್ಧರಿಸಿ ಹಲವು ವರ್ಷಗಳಿಂದ ಹೋರಾಟ ಮಾಡಲಾಗಿದ್ದರೂ ಹಿಂದಿನ ಸರ್ಕಾರಗಳು ಈ ಭಾಗವನ್ನು ನಿರ್ಲಕ್ಷ್ಯವಹಿಸಿದ್ದವು.
ಹಾಗಾಗಿ ಇತ್ತೀಚಿನ ದಿನಗಳಲ್ಲಿ ಹೋರಾಟವನ್ನು ತೀವ್ರ ಗೊಳಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ, ವಿವಿಧ ಪಕ್ಷಗಳ ಹಾಗೂ ರಾಜಕಾಣಿಗಳ ನಾಯಕತ್ವದಲ್ಲಿ, ರೈತ ಸಂಘ ಹಾಗೂ ಮೂವತ್ತಕ್ಕೂ ಹೆಚ್ಚು ಸಂಘ ಸಂಸ್ಥೆಗಳ ಮುಂದಾಳತ್ವದಲ್ಲಿ ಹೀಗೆ ಅನೇಕ ಪ್ರತಿಭಟನಾ ಮೆರವಣಿಗೆ, ರಸ್ತೆ ತಡೆ ಹಾಗೂ ಪಟ್ಟಣ ಬಂದ್ ಸಹ ಮಾಡಲಾಗಿತ್ತಲ್ಲದೆ ಇಲ್ಲಿನ ನಾಡಕಛೇರಿ ಬಳಿ ಬರೋಬರಿ ನಲ್ವತಕ್ಕೂ ಹೆಚ್ಚು ದಿನಗಳ ಕಾಲ ಅಹೋರಾತ್ರಿ ಧರಣಿ ನಡೆಸುವ ಮೂಲಕ ಸಕರ್ಾರದ ಮೇಲೆ ಮತ್ತೊಷ್ಟು ಒತ್ತಡ ತರಲಾಯಿತು.
ಪರಿಣಾಮ ಜಿಲ್ಲಾ ಉಸ್ತುವಾರಿ ಸಚಿವರೆ ಖುದ್ದು ಧರಣಿ ಸ್ಥಳಕ್ಕೆ ಆಗಮಿಸಿ ನೀರು ಹರಿಸುವ ಭರವಸೆ ನೀಡಿದರಲ್ಲದೆ ಧರಣಿ ನಿರತ ಮುಖ್ಯಸ್ಥರನ್ನು ವಿಧಾನಸೌಧಕ್ಕೆ ಆಹ್ವಾನಿಸಿ ನೀರಾವರಿ ಸಚಿವ ಬಸವರಾಜ ಬೊಮ್ಮಯಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಬೋರನಕಣಿವೆ ಜಲಾಶಯಕ್ಕೆ ಹೇಮಾವತಿ ನೀರು ಹರಿಸುವ ಸಲುವಾಗಿ 3 ದಿಂಗಳ ಕಾಲಾವಕಾಶ ಕೋರಿ ಸವರ್ೆ ಕಾರ್ಯಕ್ಕೆ ಸ್ಥಳದಲ್ಲಿಯೇ ಆದೇಶ ನೀಡಿದರು.
ಆದರಂತೆ ಈಗಾಗಲೇ ಸರ್ವೆ ಕಾರ್ಯ ಮುಗಿದಿರುವುದು ಹೋರಾಟಕ್ಕೆ ಸಂದ ಜಯವಾಗಿದ್ದರೂ ಕೂಡ ಸಕರ್ಾರ ಪಡೆದಿದ್ದ 3 ತಿಂಗಳ ಕಾಲಾವಕಾಶ ಮೀರಿಹೋಗಿದೆ. ಆದರೂ ನೀರು ಹರಿಸುವ ಸಂಬಂಧ ಈ ಭಾಗಕ್ಕೆ ನಿಗಧಿ ಪಡಿಸಿದ ನೀರಿನ ಪ್ರಮಾಣ, ಯೋಜನ ವೆಚ್ಚ ಹಾಗೂ ಮಾದರಿಯನ್ನು ಘೋಷಿಸಿ ಕಾಮಕಾರಿಗೆ ಟೆಂಡರ್ ಕರೆಯದೆ ಮತ್ತೊಮ್ಮೆ ನಿರ್ಲಕ್ಷ್ಯ ಧೋರಣೆ ತಾಳಿರುವ ಪರಿಣಾಮ ಎಚ್ಚರಗೊಳಿಸುವ ಸಲುವಾಗಿ ಅನಿವಾರ್ಯವಾಗಿ ಹುಳಿಯಾರ್ ಬಂದ್ ಕರೆ ನೀಡಲಾಗಿದೆ ಎಂದು ಸಭೆಯ ನಂತರ ಪತ್ರಿಕಾಗೋಷ್ಟಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖಂಡರು ತಿಳಿಸಿದರು.
ರಾಜ್ಯ ಹಸಿರು ಸೇನೆ ಸಂಚಾಲಕ ಕೆಂಕೆರೆ ಸತಿಶ್, ಜಿಲ್ಲೆಯ ಹೆಸರಾಂತ ಹೃದಯ ತಜ್ಞ ಹಾಗೂ ನೀರಾವರಿ ಹೋರಾಟಗಾರ ಡಾ.ಪರಮೇಶ್ವರಪ್ಪ, ರೈತ ಸಂಘದ ಕೆ.ಪಿ.ಮಲ್ಲೇಶ್, ಚಿಕ್ಕನಾಯಕನಹಳ್ಳಿ ಪುರಸಭೆ ಸದಸ್ಯ ಸಿ.ಡಿ.ಚಂದ್ರಶೇಖರ್, ಕರವೇ ಅಧ್ಯಕ್ಷ ಸಿ.ಟಿ.ಗುರುಮೂರ್ತಿ, ವರ್ತಕರ ಸಂಘದ ನಟರಾಜ್, ಏಜೆಂಟರ ಸಂಘದ ಲೋಕೇಶ್, ಹುಳಿಯಾರು ಕರವೇಯ ರಂಗಸ್ವಾಮಿ, ಕೋಳಿ ಶ್ರೀನಿವಾಸ್, ವಿಪ್ರ ಸಂಘದ ವಿಶ್ವನಾಥ್, ಟಿಪ್ಪು ಸಂಘದ ಅಪ್ಸರ್, ಜಯಕನರ್ಾಟಕದ ಎಚ್.ಎನ್.ವೆಂಕಟೇಶ್, ಛಾಯಾಗ್ರಹಕರ ಸಂಘದ ಎ.ಡಿ.ತಂಡವಾಚಾರ್, ದುರ್ಗಾ ಪರಮೇಶ್ವರಿ ಸಂಘದ ಪೈಲ್ವಾನ್ ಜಯಣ್ಣ, ಜಯಲಕ್ಷ್ಮಮ್ಮ, ಬೈರಮ್ಮ, ಸಿದ್ರಾಮಕ್ಕ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ನೂರಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದರು.
ಸುದ್ಧಿಗೆ ಸಂಬಂಧಿಸಿದ ಪೋಟೊ ಕೂಡ ಇದೆ
ಫೋಟೊ ವಿವರ : ಹುಳಿಯಾರು ಹೋಬಳಿ ಬೋರನಕಣಿವೆ ಜಲಾಶಯಕ್ಕೆ ನದಿ ಮೂಲದ ನೀರು ಹರಿಸಲು ಒತ್ತಾಯಿಸಿ ಹುಳಿಯಾರ್ ಬಂದ್ಗೆ ಕರೆ ನೀಡುವ ಸಲುವಾಗಿ ಪ್ರತಿಕಾಗೋಷ್ಠಿ ನಡೆಸಿದರು. ಕೆಂಕೆರೆ ಸತಿಶ್, ಡಾ.ಪರಮೇಶ್ವರಪ್ಪ, ಸಿ.ಡಿ.ಚಂದ್ರಶೇಖರ್, ಸಿ.ಟಿ.ಗುರುಮೂರ್ತಿ, ನಟರಾಜ್, ಲೋಕೇಶ್ ಮತ್ತಿತರರಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...