ವಿಷಯಕ್ಕೆ ಹೋಗಿ

ಎಚ್.ಮೇಲನಹಳ್ಳಿಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡ ಎನ್ಎಸ್ಎಸ್ ಶಿಬಿರ


ಎಚ್.ಮೇಲನಹಳ್ಳಿಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡ ಎನ್ಎಸ್ಎಸ್ ಶಿಬಿರ
-----------------------------------------------
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹೋಬಳಿಯ ಎಚ್.ಮೇಲನಹಳ್ಳಿಯಲ್ಲಿ ಒಂದು ವಾರದ ಕಾಲ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಗ್ರಾಮ ನೈರ್ಮಲ್ಯ, ಇಂಗುಗುಂಡಿ, ಸಾಕ್ಷರತೆ ಬಗ್ಗೆ ಜಾಗೃತಿ, ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಗ್ರಾಮದ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ಕೆಲಸಗಳನ್ನು ಮಾಡುವ ಮೂಲಕ ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಈ ಶಿಬಿರದಲ್ಲಿ ಶಿಬಿರಾರ್ಥಿಗಳು ಗ್ರಾಮದಲ್ಲಿ ನೂತನವಾಗಿ 8 ಹಿಂಗುಗುಂಡಿಗಳನ್ನು ನಿರ್ಮಾಣ ಮಾಡಿದರು. ವರ್ಷಾನುಕಾಲ ಕಸಕಡ್ಡಿ, ಹೂಳು, ಕೊಳಚೆ ನೀರಿನಿಂದ ತುಂಬಿ ದುರ್ನಾತ ಬೀರುತ್ತಿದ್ದ ಚರಂಡಿಗಳನ್ನು ಸ್ವಚ್ಚಗೊಳಿಸಿದರು. ಅಂಬೇಡ್ಕರ್ ಭವನ ಹಾಗೂ ದೇವಸ್ಥಾನಗಳ ಸುತ್ತ ಬೆಳೆದಿದ್ದ ಮುಳ್ಳಿನ ಗಿಡಗಳನ್ನು ಕಿತ್ತು ಶುಭ್ರಗೊಳಿಸಿದರು. ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿನ ಗಿಡಗಳನ್ನು ಕಸಿಮಾಡಿದರು.
ಅಲ್ಲದೆ, ಡಾ.ನಿರ್ಮಲಹೇಮಂತ್ ಅವರನ್ನು ಬರಮಾಡಿಕೊಂಡು ಸುಮಾರು 70ತಕ್ಕೂ ಹೆಚ್ಚು ಮಂದಿಗೆ ಉಚಿತ ದಂತ ಚಿಕಿತ್ಸೆ ಮಾಡಿಸಿರು. ಪಶುವೈದ್ಯ ಡಾ.ಮಂಜುನಾಥ್ ಅವರಿಂದ 400 ರಕ್ಕೂ ಹೆಚ್ಚು ಪ್ರಾಣಿಗಳ ಆರೋಗ್ಯ ತಪಾಸಣೆ ಮತ್ತು ಅಗತ್ಯ ಔಷಧಿ ಕೊಡಿಸಿದರು. ಸಕರ್ಾರಿ ವೈದ್ಯಾಧಿಕಾರಿ ಡಾ.ಸಿಎಸ್.ರಂಗನಾಥ್ ಅವರಿಂದ 96 ರೋಗಿಗಳಿಗೆ ಚಿಕಿತ್ಸೆ ನೀಡಿಸಿದರು. ಹುಳಿಯಾರ್ ಸ್ಫೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಶಿಬಿರಾರ್ಥಿಗಳಿಗೆ ಕ್ರೀಡಾಕೂಟ ನಡೆಸಿ ಬಹುಮಾನ ವಿತರಿಸಿದರು.
ನಂದೀಶ್ ಬಟ್ಲೇರಿ ಅವರಿಂದ ಹಾಸ್ಯ ಸಿಂಚನ, ದುರ್ಗಯ್ಯ ತಂಡದಿಂದ ಕೋಲಾಟ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳು, ಶಿಬಿರಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿಷಯ ತಜ್ಞರಿಂದ ಶಿಕ್ಷಣ ಮತ್ತು ಕಾನೂನು ಅರಿವು, ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ, ಆಧುನಿಕ ಕೃಷಿ ಶಿಕ್ಷಣ ಸೇರಿದಂತೆ ಉಪನ್ಯಾಸ ಮಾಲಿಕೆಗಳು ನಡೆದವು. ಕೊನೆಯಲ್ಲಿ ಊರಿನ ಪ್ರಮುಖ ಬೀದಿಗಳಲ್ಲಿ ಎನ್ಎಸ್ಎಸ್ ಗೀತೆ ಹಾಡುವ ಮೂಲಕ ರಸ್ತೆಯ ಕಸ ಕಡ್ಡಿಗಳನ್ನು ತೆಗೆದು ಹಾಕುವ ಮೂಲಕ ಶಿಬಿರಕ್ಕೆ ತೆರೆ ಎಳೆಯಲಾಯಿತು.
ಕಾಲೇಜಿನ ಪ್ರಾಚಾರ್ಯ ಪ್ರೊ.ಎಂ.ಎನ್.ನಾಗರಾಜು ಅವರ ಮಾರ್ಗದರ್ಶನದಲ್ಲಿ ಶಿಬಿರಾಧಿಕಾರಿಗಳಾದ ಶಂಕರಲಿಂಗಯ್ಯ, ಗೋವಿಂದರಾಜು ನೇತೃತ್ವದಲ್ಲಿ ಸಹಶಿಬಿರಾಧಿಕಾರಿಗಳಾದ ಸೀತರಾಮಯ್ಯ ಮತ್ತು ಕೃಷ್ಣಮೂರ್ತಿ ಅವರ ಸಹಕಾರದೊಂದಿಗೆ 90 ಶಿಬಿರಾರ್ಥಿಗಳು ಈ ಶಿಬಿರದಲ್ಲಿ ಕೆಲಸ ನಿರ್ವಹಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...