ವಿಷಯಕ್ಕೆ ಹೋಗಿ

ಮಹಿಳೆಯರಿಗೆ ಶಾಸಕಾಂಗದಲ್ಲಿ ಮೀಸಲಾತಿ:ದಿಟ್ಟ ಹೆಜ್ಜೆ




ಮಹಿಳೆಯರಿಗೆ ಶಾಸಕಾಂಗದಲ್ಲಿ ಮೀಸಲಾತಿ ದಿಟ್ಟ ಹೆಜ್ಜೆ :ಶೀನಪ್ಪ


ಮಹಿಳೆಯರಿಗೆ ಶಾಸಕಾಂಗದಲ್ಲೂ ಮೀಸಲಾತಿ ಕಲ್ಪಿಸುವ ಮುಖಾಂತರ ದಿಟ್ಟ ಹೆಜ್ಜೆ ಇಟ್ಟಂತಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಜಿ.ಎಂ.ಶೀನಪ್ಪ ಸರ್ಕಾರದ ಕ್ರಮವನ್ನು ಶ್ಲಾಘಿಸಿದರು.
ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ಘಾಟಿಸಿ ಮಾತನಾಡಿದ ಅವರು ಇಂದು ಎಲ್ಲಾ ರಂಗದಲ್ಲು ಮಹಿಳೆಯರು ಪುರುಷರಿಗೆ ಸರಿಸಮನಾಗಿ ಕಾರ್ಯ ನಿರ್ವಹಿಸುತ್ತಿದ್ದು ಮಹಿಳೆಯರ ಪಾತ್ರ ಹೆಚ್ಚಿನದಾಗಿದೆ.ಮಹಿಳೆಯರಿಗೆ ಕಾನೂನಿನ ನೆರವು ಕೂಡ ಅಗತ್ಯವಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಕೀಲ ಎಸ್.ಎಚ್.ಚಂದ್ರಶೇಖರ್ ಅವರು ಮಹಿಳಾ ದೌರ್ಜನ್ಯಗಳು ಮತ್ತು ಕಾನೂನು ಬಗ್ಗೆ ಮಾತನಾಡಿ ಮಹಿಳೆಯರಿಗೆ ಮನೆಯಿಂದಲೇ ದೌರ್ಜನ್ಯಗಳು ಆರಂಭವಾಗುತ್ತಿದ್ದು ಮಹಿಳೆಯರ ಮೇಲೆ ಅವಾಚ್ಯ ಶಬ್ಧ ಬಳಸುವುದು, ಬೈಯುವುದು, ಹೊಡೆಯುವುದು, ಸುಳ್ಳು ಆರೋಪ ಮಾಡುವುದು, ಸಿಗರೇಟು,ಬೀಡಿಯಿಂದ ಸುಡುವುದು ಹಾಗೂ ದುಶ್ಚಟಗಳಿಗೆ ವಡವೆ ಮಾರುವುದು ಎಲ್ಲವೂ ಶಿಕ್ಷಾರ್ಹ ಅಪರಾಧವಾಗಿದ್ದು ಇಂತಹ ಕಿರುಕುಳಗಳಿಗೆ ತಕ್ಷಣದಲ್ಲಿಯೇ ಜೀವನಾಂಶದಂತಹ ನ್ಯಾಯ ಸಿಗುತ್ತದೆ ಎಂದು ಮಾಹಿತಿ ನೀಡಿದರು.


ಮಹಿಳೆಯರ ಹಕ್ಕುಗಳು ಮತ್ತು ಕಾನೂನು ಬಗ್ಗೆ ವಕೀಲ ಕೆ.ಆರ್.ಚನ್ನಬಸವಯ್ಯ ಮಾತನಾಡಿ ಕುಟುಂಬ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಾಂತ್ವಾನ ಕೇಂದ್ರಗಳನ್ನು ತೆರೆದು ತಾತ್ಕಾಲಿಕ ವಸತಿ, ವಿದ್ಯಾಭ್ಯಾಸ, ಕರಕುಶಲತೆಯ ತರಬೇತಿ ಕೊಡಲಾಗುತ್ತಿದೆ. ಮಹಿಳಾ ಆಯೋಗ ರಚಿಸಿ ದೌರ್ಜನ್ಯಕ್ಕೊಳಗಾದವರಿಗೆ ಜೀವನಾಂಶ ಹಾಗೂ ದೌರ್ಜನ್ಯವೆಸಗಿದವರಿಗೆ ಶಿಕ್ಷೆ ಕೊಡಿಸುವುದು, ಅಭಿವೃದ್ಧಿ ನಿಗಮ ಸ್ಥಾಪಿಸಿ ಮಹಿಳೆಯರು ಸ್ವಸಾಮಥ್ರ್ಯ ಬೆಳೆಸಿಕೊಳ್ಳಲು ಕಡಿಮೆ ಬಡ್ಡಿದರದಲ್ಲಿ ಸಾಲಸೌಲಭ್ಯ ಕೊಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.
ಚಿ.ನಾ.ಹಳ್ಳಿ ಸಿಪಿಐ ರವಿಪ್ರಸಾದ್ ಅವರು ಮಾತನಾಡಿ ವ್ಯಕ್ತಿತ್ವ, ಶಕ್ತಿ, ಬುದ್ದಿಯಲ್ಲಿ ಪುರುಷರಿಗೆ ಸರಿಸಮನಾದ ಮಹಿಳೆಯರು ಅಧಿಕಾರ ಅನುಭವಿಸ ಬೇಕೆನ್ನುವುದು ಸಂವಿದಾನದ ಮೂಲ ಆಶಯವಾಗಿದೆ. ಅದರಂತೆ ಭಾರತ ದೇಶ ಇತರ ದೇಶಕ್ಕಿಂತ ಹೆಚ್ಚಾಗಿ ಸ್ತ್ರೀಯರಿಗೆ ಅಧಿಕಾರದ ಸ್ಥಾನಮಾನ ನೀಡಿದ್ದು ಪ್ರಧಾನ ಮಂತ್ರಿ, ರಾಷ್ಟ್ರಪತಿ, ಮುಖ್ಯಮಂತ್ರಿ ಹೀಗೆ ವಿವಿಧ ಹಂತದ ಅಧಿಕಾರವನ್ನು ನೀಡಿದ್ದು ಈಗ ಶೇ.33 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು ಸಮರ್ಪಕವಾಗಿ ಬಳಕೆ ಮಾಡುವಂತಾಗಬೇಕು ಎಂದರು. .ಅಧಿಕಾರದಲ್ಲಿರುವ ಮಹಿಳೆಯರು ತಮ್ಮ ಪತಿ ಹೇಳಿದ ರೀತಿ ಅಧಿಕಾರ ನಡೆಸುವ ಹಾಗೂ ಅವರು ಹೇಳಿದಕ್ಕೆಲ್ಲ ಸಹಿ ಹಾಕುವಂತಾದರೆ ಸರ್ಕಾರ ಮಹಿಳೆಯರಿಗೆ ಅಧಿಕಾರ ಕೊಟ್ಟಿರುವುದು ವ್ಯರ್ಥವಾಗುತ್ತದೆ. ಹಾಗಾಗಿ ಪತಿಯ ತಾಳದಂತೆ ಅಧಿಕಾರ ನಡೆಸುವುದ ಬಿಟ್ಟು ಸ್ವತಂತ್ರವಾಗಿ ಆಲೋಚಿಸಿ ಅಧಿಕಾರ ನಡೆಸಬೇಕು ಎಂದು ಕರೆ ನೀಡಿದರು.
ಕೆಂಕೆರೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ತಮ್ಮಯ್ಯ ಮಾತನಾಡಿ ಮಹಿಳೆಯರಿಗೆ ರಾಜಕೀಯ ಸ್ವಾತಂತ್ರ ಸಿಕ್ಕರೆ ಸಾಲದು ಆರ್ಥಿಕ ಸ್ವಾತಂತ್ರವೂ ಸಿಗಬೇಕು. ರಾಜರ ಆಳ್ವಿಕೆಯ ಕಾಲ, ಸ್ವಾತಂತ್ರ್ಯ ಹೋರಾಟದಲ್ಲೂ ಸ್ತ್ರೀಯರು ದೇಶಕ್ಕೆ ಹೆಚ್ಚು ಕೊಡುಗೆಯನ್ನು ನೀಡಿದ್ದು ಹೆಚ್ಚಾಗಿ ಮಹಿಳೆಯರು ಅನಕ್ಷರಸ್ಥರಾದ ಕಾರಣ ಇಂದಿನ ಕಾನೂನು ಹಾಗೂ ಕಾಯ್ದೆಯ ಅರಿವು ಸಿಗದೆ ಹಿಂದುಳಿಯುತ್ತಿದ್ದು ಇನ್ನಾದರೂ ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಉನ್ನತ ಶಿಕ್ಣದವರೆವಿಗೂ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.
ಕೆಂಕೆರೆ ಗ್ರಾ.ಪಂ.ಅಧ್ಯಕ್ಷೆ ಸಾವಿತ್ರಮ್ಮ ಅಧ್ಯಕ್ಷತೆ ವಹಿಸಿದ್ದರು. ಸಿವಿಲ್ ನ್ಯಾಯಾಧೀಶೆ ಎನ್.ಶೀಲಾ, ವಕೀಲರ ಸಂಘದ ಅಧ್ಯಕ್ಷ ಕೆ.ಸಿ.ಬಸವರಾಜು, ಸಹಾಯಕ ಸರ್ಕಾರಿ ಅಭಿಯೋಜಕರಾದ ಆರ್.ಟಿ.ಆಶಾ, ಎಂ.ವಿ.ಶಿವಾನಂದ್, ಮತ್ತಿತರರು ಇದ್ದರು. ವಕೀಲರಾದ ಕೆ.ಎಂ.ರಾಜಶೇಖರ್ ಸ್ವಾಗತಿಸಿ ಸದಾಶಿವಯ್ಯ ನಿರೂಪಿಸಿ , ವಿಶ್ವನಾಥ್ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.