ವಿಷಯಕ್ಕೆ ಹೋಗಿ

ಹುಳಿಯಾರು ಎಪಿಎಂಸಿ ಅಧ್ಯಕ್ಷರಾಗಿ ಮೈನ್ಸ್ ಬಸವರಾಜು




ಹುಳಿಯಾರು ಎಪಿಎಂಸಿ ಅಧ್ಯಕ್ಷರಾಗಿ ಮೈನ್ಸ್ ಬಸವರಾಜು---------------------------------------------- ಹುಳಿಯಾರು: ಹುಳಿಯಾರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಮಂಗಳವಾರ ನಡೆದ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಬಸವರಾಜು ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಸಭೆಯಲ್ಲಿ 16 ಮಂದಿ ಸದಸ್ಯರಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸರ್ಕಾರದ ನಾಮಾಂಕಿತ ಸದಸ್ಯರಾದ ಕೋಡಲಾಗರದ ಕೆ.ಪ್ರಭುಸ್ವಾಮಿ ಅವರ ಗೈರು ಹಾಜರಾತಿಯಲ್ಲಿ ಉಳಿದ 15 ಮಂದಿ ಹಾಜರಾಗಿದ್ದರು. ಸಿ.ಬಸವರಾಜು ಅವರ ವಿರುದ್ಧ ಪ್ರತಿಸ್ಪರ್ಧಿಯಾಗಿ ಮತ್ಯಾರೂ ಅರ್ಜಿ ಸಲ್ಲಿಸದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತಹಸೀಲ್ದಾರ್ ಟಿ.ಸಿ.ಕಾಂತರಾಜು ಅವರು ತಿಳಿಸಿದ್ದಾರೆ.ಹಿಂದಿನ ಅಧ್ಯಕ್ಷ ಕೋಡಲಾಗರದ ಕೆ.ಎಸ್.ಲೋಕೇಶ್ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ ತೆರವಾದ 1 ವರ್ಷ ಅವಧಿ ಅಧ್ಯಕ್ಷ ಸ್ಥಾನಕ್ಕೆ ಈ ಚುನಾವಣೆ ನಡೆದಿದೆ. ಚುನಾವಣಾ ಹಿಂದಿನ ದಿನದವರೆವಿಗೂ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ದಂಡು ಇತ್ತು.16 ಮಂದಿ ಸದಸ್ಯರಲ್ಲಿ 7 ಮಂದಿ ಬಿಜೆಪಿ ಬೆಂಬಲಿಗರೇ ಇದ್ದು ಅವರಲ್ಲೆ ಯಾರಾದರೊಬ್ಬರು ಆಯ್ಕೆಯಾಗುವ ಸಂಭವವಿದ್ದಾಗ್ಯೂ ಯಾರೂ ಅರ್ಜಿಹಾಕದೆ ಕಾಂಗ್ರೆಸ್ ಗೆ ಅಧ್ಯಕ್ಷ ಸ್ಥಾನ ದಕ್ಕಿರುವುದು, ಅಲ್ಲದೆ ಕಳೆದ ದಿನದವರೆವಿಗೂ ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸಿ ಪ್ರಭಲ ಪೈಪೋಟಿ ನೀಡುವರೆಂದು ಹೇಳಲಾಗುತ್ತಿದ್ದ ದೊಡ್ಡೆಣ್ಣೇಗೆರೆ ಡಿ.ಬಿ.ಬಸವರಾಜು ಅವರು ಸಿ.ಬಸವರಾಜು ಅವರ ಹೆಸರು ಸೂಚಿಸಿದ್ದು ಮತ್ತೊಬ್ಬ ಪ್ರಭಲ ಅಭ್ಯರ್ಥಿಯಾಗುವರೆನ್ನಲಾಗಿದ್ದ ವಕೀಲ ಮಲ್ಲಿಕಾರ್ಜುನಯ್ಯ ಅನುಮೋದಿಸಿದ್ದು ಆಚ್ಚರಿ ಮೂಡಿಸಿದೆ. ಒಟ್ಟಾರೆ ಸಿ.ಬಸವರಾಜು ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕಾಂಗ್ರೆಸ್ ಮುಖಂಡರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಎಪಿಎಂಸಿ ಆವರಣದಲ್ಲಿ ಬಹುಸಂಖ್ಯೆಯಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸುವಂತೆ ಮಾಡಿದೆ. ಈ ಸಂದರ್ಭದಲ್ಲಿ ನೆರೆದಿದ್ದವರ ಶುಭ ಹಾರೈಕೆ ಸ್ವೀಕರಿಸಿ ಮಾತನಾಡಿದ ಸಿ.ಬಸವರಾಜು ತಮ್ಮ ಜ್ಯಾತ್ಯಾತೀತ ನಿಲುವನ್ನು ಮೆಚ್ಚಿ ಪಕ್ಷದ ಬೇದ ಭಾವ ತೋರದೆ ಎಲ್ಲ ಪಕ್ಷದ ಬೆಂಬಲಿತ ಸದಸ್ಯರು ತಮ್ಮ ಬೆಂಬಲಕ್ಕೆ ನಿಂತ ಕಾರಣದಿಂದ ಈ ಅವಿರೋಧ ಆಯ್ಕೆಗೆ ಕಾರಣವಾಗಿದೆ ಎಂದು ವಿವರಿಸಿದರಲ್ಲದೆ ರೈತರಿಗೆ ಎಪಿಎಂಸಿಗಳಲ್ಲಿ ತೂಕ, ಬೆಲೆಯಲ್ಲಿ ನ್ಯಾಯ ಒದಗಿಸುವುದಾಗಿ ತಿಳಿಸಿದರಲ್ಲದೆ ಬೆಲೆ ಇಳಿಕೆ ಸಂದರ್ಭದಲ್ಲಿ ತಡಮಾಡದೆ ಬೆಂಬಲ ಬೆಲೆಯಲ್ಲಿ ಕೊಬ್ಬರಿ, ಅಡಿಕೆ, ರಾಗಿ ಖರೀಧಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವುದಾಗಿ ರೈತ ಪರ ಕಾಳಜಿ ವ್ಯಕ್ತಪಡಿಸಿದರು. ಮಾಜಿ ಶಾಸಕ ಕೆ.ಲಕ್ಕಪ್ಪ, ಎಐಸಿಸಿ ಪ್ರತಿನಿಧಿ ಸೀಮೆಎಣ್ಣೆ ಕೃಷ್ಣಯ್ಯ, ಯೂತ್ ಕಾಂಗ್ರೆಸ್ ಅಧ್ಯಕ್ಷ ಬೀರಲಿಂಗಯ್ಯ, ಅಹಿಂದ ಮುಖಂಡ ರವಿಕುಮಾರ್, ಪುರಸಭಾ ಸದಸ್ಯ ಬಾಬು ಸಾಹೇಬ್, ಮಹೇಶ್, ಕನಕ ಸೇವಾ ಟ್ರಸ್ಟ್ ಅಧ್ಯಕ್ಷ ಎನ್.ಬಿ.ಗವೀರಂಗಯ್ಯ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ವೈ.ಸಿ.ಸಿದ್ಧರಾಮಯ್ಯ, ಸುರೇಂದ್ರಯ್ಯ, ಕೃಷ್ಣೇಗೌಡ, ಸೈಯದ್ ಜಲಾಲ್, ದಬ್ಬಗುಂಟೆ ಶ್ರೀನಿವಾಸ್, ಲೋಕೇಶ್, ರಹಮತ್ ಉಲ್ಲಾ ಸಾಬ್, ಶಿವರಾಂ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.