ವಿಷಯಕ್ಕೆ ಹೋಗಿ

ಕ್ರೀಡಾಂಗಣ ನಿರ್ಮಾಣ ಸಹಾಯಾರ್ಥ ನಾಟಕ ಪ್ರದರ್ಶನ




ಹುಳಿಯಾರು ಒಳಾಂಗಣ ಕ್ರೀಡಾಂಗಣ ನಿರ್ಮಾಣ ಸಹಾಯಾರ್ಥ
ಉಚಿತ ನಾಟಕ ಪ್ರದರ್ಶನಕ್ಕೆ ಸಿದ್ಧ: ಡಾ.ಮಾಸ್ಟರ್ ಹಿರಣ್ಣಯ್ಯ
----------------------------------
ರಂಗಕಲೆಯ ರೀತಿ ಕ್ರೀಡೆಯೂ ಸಹ ಮನರಂಜನಾ ಚಟುವಟಿಕೆಯಾಗಿದ್ದು ಹುಳಿಯಾರಿನಲ್ಲಿ ಕ್ರೀಡೆಗೆ ಒತ್ತು ನೀಡುವ ನಿಟ್ಟಿನಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಸಹಾಯಾರ್ಥ ತಮ್ಮ ಸಂಸ್ಥೆಯಿಂದ ಉಚಿತ ನಾಟಕ ಪ್ರದರ್ಶನ ನೀಡುವುದಾಗಿ ನಟರತ್ನಾಕರ ಡಾ.ಮಾಸ್ಟರ್ ಹಿರಣ್ಣಯ್ಯ ಘೋಷಿಸಿದರು.
ಹುಳಿಯಾರಿನಲ್ಲಿ ಶಿವರಾತ್ರಿ ಜಾಗರಣೆ ಅಂಗವಾಗಿ ಕೆನರಾ ಬ್ಯಾಂಕ್, ಸ್ಪೊರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಹಾಗೂ ನೆಹರು ಯುವ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಹೊನಲು ಬೆಳಕಿನ ಕ್ರೀಡಾಕೂಟವನ್ನು ಹಗ್ಗ ಜಗ್ಗಾಟ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಈ ಬೆನಿಫಿಟ್ ಶೋ ಸಂಘಟನೆಯ ಸಂಪೂರ್ಣ ಜವಾಬ್ದಾರಿಯನ್ನು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ ವಹಿಸಿಕೊಳ್ಳಬೇಕು ಎಂಬ ಆಶಯ ವ್ಯಕ್ತಪಡಿಸಿದರಲ್ಲದೆ ಕಾರ್ಯಕ್ರಮ ಮುಗಿದ ನಂತರ ತಾವೇ ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕ್ರೀಡಾಂಗಣ ನಿರ್ಮಾಣದ ತಮ್ಮ ನಿಲುವು ಹಾಗೂ ಆಶಯ ತಿಳಿಸಿ ಶೀಘ್ರ ಪ್ರದರ್ಶನದ ವ್ಯವಸ್ಥೆಯನ್ನು ಮಾಡುವಂತೆ ತಿಳಿಸಿದರು.
ಜಾಗರಣೆ ಸಂಸ್ಕೃತಿ ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ ಇಡೀ ರಾತ್ರಿ ಹೊನಲು ಬೆಳಕಿನ ಕ್ರೀಡಾಕೂಟವನ್ನು ಏರ್ಪಡಿಸುವ ಮೂಲಕ ಯುವಕರಲ್ಲಿ ಮನರಂಜನೆ ಸಹಿತ ಜಾಗರಣೆಯ ಪರಂಪರೆ ಹುಟ್ಟುಹಾಕುತ್ತಿರುವುದು ಸ್ವಾಗತಾರ್ಹ ಸಂಗತಿಯಾಗಿದೆ ಎಂದರಲ್ಲದೆ ಮುಂದಿನ ಜಾಗರಣೆ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ವಹಿಸಿಕೊಂಡು ಈ ಕಾರ್ಯಕ್ಕೆ ಮತ್ತೊಷ್ಟು ಉತ್ತೇಜನ ನೀಡುವುದಾಗಿ ಪ್ರಕಟಿಸಿದರು.
ವಯಸ್ಸಾದ ತಂದೆ ತಾಯಿಯರು ತಮ್ಮ ಮಕ್ಕಳಿಂದ 2 ಹೊತ್ತಿನ ಊಟ, ಅರ್ಧ ಗಂಟೆ ಮೊಮ್ಮೊಗುವನ್ನು ತೊಡೆಯ ಮೇಲೆ ಆಡಿಸುವ ಸ್ವಾತಂತ್ರ ಬಿಟ್ಟು ಬೇರೇನನ್ನೂ ನಿರೀಕ್ಷಿಸುವುದಿಲ್ಲ. ತಮ್ಮನ್ನು ಇಪ್ಪತ್ತು ವರ್ಷ ಸಾಕಿ ಸಲುಹಿದವರಿಗೆ ಇಷ್ಟೂ ಕೊಡಲಾಗುವುದಿಲ್ಲವೆ ಎಂದು ಪ್ರಶ್ನಿಸಿ ಮುಂದೊಂದು ದಿನ ತಮಗೂ ವಯಸ್ಸಾಗುತ್ತದೆ ಎಂಬುದನ್ನು ಮರೆಯಬೇಡಿ ಎಂದು ಯುವ ಜನತೆಗೆ ಕಿವಿ ಮಾತು ಹೇಳಿದರು.
ಹಿರಣ್ಣಯ್ಯನವರ ಭಾಷಣ ಎಂದರೆ ಅಲ್ಲಿ ನಗೆ ಚಟಾಕಿಗಳಿಗೆ ಕೊರತೆಯಿಲ್ಲ. ಇಲ್ಲಿಯೂ ಸಹ ಅನೇಕ ಹಾಸ್ಯ ಚಟಾಕಿ ಮಿಶ್ರಿತ ನುಡಿ ಮುತ್ತುಗಳನ್ನು ಉದುರಿಸಿದ್ದು ದೇವರಿಗೆ ಕಲಾವಿದರ ಮೇಲೆಯೇ ಕಣ್ಣು ರಾಜ್, ವಿಷ್ಣು ಸೇರಿದಂತೆ ಅನೇಕ ಕಲಾರತ್ನಗಳನ್ನು ಕರೆದುಕೊಂಡಿದ್ದಾನೆ. ಮನೆಗೆ ಇಬ್ಬಿಬ್ಬರಂತೆ ವಿಧಾನಸೌಧದಲ್ಲಿ ಅನೇಕ ರಾಜಕಾರಣಿಗಳು ಇದ್ದರೂ ಕೂಡ ಕಲಾವಿಧರನ್ನೇ ಕರೆದುಕೊಳ್ಳುತ್ತಿದ್ದಾನೆ ಎಂದರೆ ರಾಜಕಾರಣಿಗಳನ್ನು ಕರೆದುಕೊಂಡರೆ ತಮ್ಮ ಸೀಟುಗಳನ್ನು ಇವರೆಲ್ಲಿ ಕಿತ್ತುಕೊಳ್ಳುತ್ತಾರೋ ಎಂಬ ಭಯ ಇರಬಹುದು ಎಂಬ ಹಾಸ್ಯ ಇದರಲ್ಲಿ ಒಂದಾಗಿತ್ತು.
ತಹಸೀಲ್ದಾರ್ ಟಿ.ಸಿ.ಕಾಂತರಾಜು, ಆರಕ್ಷಕ ಠಾಣಾಧಿಕಾರಿ ಪಾರ್ವತಮ್ಮ ಯಾದವ್, ಕೆನರಾ ಬ್ಯಾಂಕ್ ಮ್ಯಾನೇಕರ್ ಎಚ್.ಎಸ್.ಸತೀಶ್, ತಾಲೂಕು ಪತ್ರಕರ್ತರ ಸಂಘದ ಖಜಾಂಜಿ ನರೇಂದ್ರ ಬಾಬು, ಹಿರಿಯ ದೈಹಿಕ ಶಿಕ್ಷಕ ರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಹುಳಿಯಾರ್ ಸ್ಪೊರ್ಟ್ಸ್ ಅಸೋಸಿಯೇಷನ್ನ ಬಳೆ ಕುಮಾರ್, ಮೆಡಿಕಲ್ ಶ್ರೀನಿವಾಸ್, ಲೇತ್ ರಂಗನಾಥ್, ಎಚ್.ಬಿ.ಕಿರಣ್ ಕುಮಾರ್, ಕಂಠಯ್ಯ, ಎಚ್.ಎ.ರಮೇಶ್, ಕಾರ್ಗಿಲ್ ಸತೀಶ್, ಸುಂದರ್, ರಾಘವೇಂದ್ರ, ಗುರುಪ್ರಸಾದ್, ರೇಣುಕ ಪ್ರಸಾದ್, ದೈಹಿಕ ಶಿಕ್ಷಕರಾದ ಜಗಧೀಶ್, ತ್ಯಾಗರಾಜ್, ಮೋಹನ್ ಕುಮಾರ್, ಕೆ.ಎನ್.ಕುಮಾರಯ್ಯ, ಕುಮಾರ್, ಕೆ.ಮಂಜುನಾಥ್ ಮತ್ತಿತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.