




2010ರ ಫೆ23 ರಿಂದ ಮಾರ್ಚ್ 5 ರವರೆಗೆ ನಡೆಯಲಿರುವ ಕಾರ್ಯಕ್ರಮ ಇಂತಿದೆ. ಫೆ.23 ರಂದು ಕಂಕಣ, ಅಂಕುರಾರ್ಪಣೆ, ಧ್ವಜಾರೋಹಣ, ಉಯ್ಯಾಲೋತ್ಸವ, ಫೆ.24 ರಂದು ಗಜಾರೋಹಣ, ಫೆ.25 ರಂದು ಗರುಡ ವಾಹನೋತ್ಸವ, ಫೆ.26 ಬ್ರಹ್ಮ ರಥೋತ್ಸವ, ಫೆ.27 ರಂದು ಅಡ್ಡಪಲ್ಲಕ್ಕಿ ಉತ್ಸವ, ಫೆ.28 ರಂದು ಮಂಗಳ ಸ್ನಾನ, ಶಯನೋತ್ಸವ, ಮಾ.1 ರಂದು ಸರ್ಪವಾಹನೋತ್ಸವ, ಮಾ.2 ರಂದು ಚಂದ್ರಮಂಡಲೋತ್ಸವ, ಮಾ.3 ರಂದು ಪುಷ್ಪವಾಹನೋತ್ಸವ, ಮಾ.4 ರಂದು ಸೂರ್ಯಮಂಡಲೋತ್ಸವ, ಮಾ.5 ರಂದು ಪಂಚಾಮೃತಾಭಿಷೇಕ, ಮಹಾಮಂಗಳಾರತಿ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.ಜಾತ್ರೆಯ ಅಂಗವಾಗಿ ಪ್ರತಿದಿನ ಅನ್ನಸಂತರ್ಪಣೆಯಿರುತ್ತದೆ.
ಕಾರೇಹಳ್ಳಿ ಶ್ರೀರಂಗನಾಥಸ್ವಾಮಿ ವೈಭವದ ರಥೋತ್ಸವ
------------------------------------------------------------------
ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿಯ ಮೂಲಸ್ಥಾನದಲ್ಲಿ ದನಗಳ ಜಾತ್ರೆ ಹಾಗೂ ಬ್ರಹ್ಮ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ಫೆ.೨೬ರ ಶುಕ್ರವಾರದಂದು ಸಂಭ್ರಮ ಹಾಗೂ ವೈಭವದಿಂದ ಜರುಗಿತು. ಕಳೆದ ಎರಡು ದಿನದಿಂದ ಜಾತ್ರೆ ಅಂಗವಾಗಿ ಕಂಕಣ, ಅಂಕುರಾರ್ಪಣೆ, ಧ್ವಜಾರೋಹಣ, ಉಯ್ಯಾಲೋತ್ಸವ, ಗಜಾರೋಹಣ, ಗರುಡ ವಾಹನೋತ್ಸವ, ಸಂತರ್ಪಣೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆದಿದ್ದು ಇಂದು ಮುಂಜಾನೆಯಿಂದಲೆ ರಥೋತ್ಸವದ ಪೂಜಾ ಕೈಂಕರ್ಯ ನಡೆಯಿತು.ವಿಪ್ರರುಗಳು ಮೂಲ ದೇವಸ್ಥಾನದಿಂದ ಮಂಗಳವಾಧ್ಯ ಹಾಗೂ ಪೂರ್ಣಕುಂಭದೊಂದಿಗೆ ಶ್ರೀ ಸ್ವಾಮಿಯವರನ್ನು ಸಹಸ್ರಾರು ಭಕ್ತರು ಉದ್ಘೋಷದೊಂದಿಗೆ ಕರೆತಂದು ರಂಗು ರಂಗಿನ ಬಾವುಟ, ತಳಿರು ತೋರಣ, ಬಣ್ಣ ಬಣ್ಣದ ಹೂವಿನ ಹಾರದಲ್ಲಿ ಸಿಂಗಾರಗೊಂಡ ಸರ್ವಾಲಂಕೃಥ ರಥದಲ್ಲಿ ಶ್ರೀ ಸ್ವಾಮಿಯವರನ್ನು ಪ್ರತಿಷ್ಠಾಪಿಸಿ ಮಂಗಳವಾದ್ಯದೊಂದಿಗೆ ರಥೋತ್ಸವ ನೆರವೇರಿಸಿದರು ಸುಡುವ ಬಿಸಿಲನ್ನೂ ಲೆಕ್ಕಿಸದೆ ಬೆಳಿಗ್ಗೆಯಿಂದಲೇ ಕಿಕ್ಕಿರಿದು ನೆರೆದಿದ್ದ ಭಕ್ತರು ಜಯಘೋಷದೊಂದಿಗೆ ತೇರನ್ನೆಳೆದು ಸಂಭ್ರಮಿಸಿದರು. ಎಲ್ಲೆಲ್ಲೂ ಜಾತ್ರೆಯ ಸಡಗರ ತುಂಬಿ ತುಳುಕುತಿತ್ತು. ಸುಮಾರು ಐವತ್ತು ಅಡಿಗೂ ಎತ್ತರದಲ್ಲಿದ್ದ ಬ್ರಹ್ಮ ರಥವನ್ನು ಭಕ್ತಿಭಾವದಿಂದ ವಸಂತಬ್ರಾಹ್ಮಣರ ಸಹಿತ ಅಪಾರ ಭಕ್ತಾಧಿಗಳು ಎಳೆದರೆ ಮತ್ತೊಂದು ಕಡೆ ಕೆಲ ಭಕ್ತ ರಥದ ಅನತಿ ದೂರದಲ್ಲಿ ನಿಂತು ಬಾಳೆಹಣ್ಣುಗಳನ್ನು ರಥಕ್ಕೆ ಎಸೆಯುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ರಥೋತ್ಸವ ಜರುಗಿದ ತತ್ ಕ್ಷಣವೇ ಮಹಿಳೆಯರು ಸೇರಿದಂತೆ ಅನೇಕ ಭಕ್ತಾಧಿಗಳು ಶ್ರೀ ಸ್ವಾಮಿಯವರಿಗೆ ಹಣ್ಣುಕಾಯಿ ಮಾಡಿಸಿದರು.ದಸೂಡಿಯ ದಿ.ಕೊಟ್ಟಿಗೆ ರಂಗೇಗೌಡರ ಸಹೋದರರು ಮತ್ತು ಮಕ್ಕಳಿಂದ ಬ್ರಾಹ್ಮಣರಿಗೆ ಅನ್ನಸಂತರ್ಪಣೆ ನಡೆಯಿತು.ಜಿ.ಎಂ.ಸೀನಪ್ಪ ಶಟ್ಟರು ಮತ್ತು ಜಿ.ಎಸ್.ಸತ್ಯನಾರಾಯಣ ಶೆಟ್ಟರು ಇವರುಗಳಿಂದ ಆರ್ಯವೈಶ್ಯ ಮಂಡಳಿ ಹಾಗೂ ದೇವಾಲಯ ಸಮಿತಿಯಿಂದ ಮಹಾಜನತೆಗೆ ಅನ್ನ ದಾಸೋಹ ನಡೆಯಿತು. ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ತಹಸೀಲ್ದಾರ್ ಟಿ.ಸಿ.ಕಾಂತರಾಜು,ಜಿಪಂ ಸದಸ್ಯ ಈರಯ್ಯ,ದೇವಸ್ಥಾನ ಕಮಿಟಿ ಸಂಚಾಲಕ ಎಂ.ಕೆ.ಕಲ್ಲೇಗೌಡರು ಸೇರಿದಂತೆ ಪೂಜೆ ಸಲ್ಲಿಸಿದರು. ಧರ್ಮದರ್ಶಿಗಳಾದ ಆರ್.ರಂಗಸ್ವಾಮಿ, ಜಿ.ಎಂ.ನೀಲಕಂಠಯ್ಯ, ಜಿ.ಸಿ.ದೊಡ್ಡಯ್ಯ, ಗ.ಕರಿಯಪ್ಪ, ಬಿ.ಆರ್.ರಂಗನಾಥ್, ಜಿ.ಎಸ್.ಸತ್ಯನಾರಾಯಣ ಶ್ರೇಷ್ಠಿ, ರಾಂಜೀನಾಯ್ಕ, ಎಂ.ಆರ್.ವಿನೋದಮ್ಮ, ಅರ್ಚಕ ಎಂ.ಆರ್.ಪುಟ್ಟಯ್ಯ ಸೇರಿದಂತೆ ಭಕ್ತರ ಮಹಾಪೂರವೇ ಪಾಲ್ಗೊಂಡಿತ್ತು.ಬ್ರಹ್ಮರಥೋತ್ಸವಕ್ಕೂ ಮುನ್ನಾದಿನದಿಂದ ರಾಸುಗಳು ಸೇರುವುದು ಲಾಗಾಯ್ತಿನಿಂದಲ್ಲೂ ನಡೆಯುತ್ತ ಬಂದಿದ್ದು ಇಲ್ಲಿನ ದನಗಳ ಜಾತ್ರೆ ಜಿಲ್ಲೆಯಲ್ಲಿಯೇ ಹೆಸರುವಾಸಿಯಾಗಿದ್ದು ವಿವಿಧ ಜಿಲ್ಲೆಗಳಿಂದ ರಾಸುಗಳನ್ನು ಕೊಳ್ಳಲು ಹಾಗು ಮಾರಾಟ ಮಾಡಲು ರೈತರು ಆಗಮಿಸುವ ವಾಡಿಕೆಯಿದೆ.ನಿರೀಕ್ಷೆಗೂ ಮೀರಿದ ದನಗಳು ಬಂದಿದ್ದು ರಾಸುಗಳ ಬೆಲೆ ಗಗನಕ್ಕೇರಿದೆ. ಬ್ರಹ್ಮರಥೋತ್ಸವದ ದಿನದ ನಂತರ ಸುತ್ತಮುತ್ತಲ ಭಾಗದಿಂದ ಇನ್ನಷ್ಟು ದನಗಳು ಮಾರಾಟ ಮಾಡಲು ಬರುವುದಿದ್ದು .ಮಾರ್ಚ್ ೫ ರವರೆಗೆ ಜಾತ್ರೆ ನಡೆಯಲಿದೆ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ