ವಿಷಯಕ್ಕೆ ಹೋಗಿ

ಮದುವೆಗಳು ಟ್ವೆಂಟಿ-20 ಮ್ಯಾಚ್ ಗಳಾಗುತ್ತಿವೆ: ವಿರಕ್ತ ಮಠಾಧ್ಯಕ್ಷ

(ಹುಳಿಯಾರು ಸಮೀಪದ ಬೊಮ್ಮೇನಹಳ್ಳಿಯ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ವಿವಿಧ ಮಠದ ಶ್ರೀಗಳು ಹಾಜರಿರುವುದು ಶಾಸಕ ಸುರೇಶ್ ಬಾಬು,ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ಕೋಡಿಹಳ್ಳಿ ಚಂದ್ರಶೇಖರ್ ಮತ್ತಿತರರಿದ್ದಾರೆ.)

ಮೊದ ಮೊದಲು ಮದುವೆಗಳು ಟೆಸ್ಟ್ ಮ್ಯಾಚ್ ರೀತಿ ಐದು ದಿನಗಳು ನಡೆಯುತ್ತಿದ್ದವು. ನಂತರ ಒನ್ ಡೇ ಮ್ಯಾಚ್ ರೀತಿ ಒಂದೇ ದಿನಕ್ಕೆ ಮುಗಿಸುವಂತಾಯಿತು. ಈಗ ಟ್ವೆಂಟಿ-20 ಮ್ಯಾಚ್ಗಳ ರೀತಿ ಮೂರ್ನಾಲ್ಕು ಗಂಟೆಗೆ ಸೀಮಿತವಾಗುತ್ತಿದ್ದು ವಸ್ತುಗಳ ಬೆಲೆ ಗಗನಕ್ಕೇರುತ್ತಿರುವ ಈ ಕಾಲದಲ್ಲಿ ಅನಗತ್ಯ ದುಂದುವೆಚ್ಚ ಆಗುವುದನ್ನು ತಡೆಯುವ ನಿಟ್ಟಿನಲ್ಲಿ ಇದು ಸ್ವಾಗತಾರ್ಹ ಬೆಳವಣಿಗೆ ಎಂದು ಕುಪ್ಪೂರು-ತಮ್ಮಡಿಹಳ್ಳಿ ವಿರಕ್ತ ಮಠಾಧ್ಯಕ್ಷ ಡಾ.ಅಭಿನವ ಮಲ್ಲಿಕಾರ್ಜುನ ದೇಶೀಕೇಂದ್ರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

ಹುಳಿಯಾರು ಸಮೀಪದ ಬೊಮ್ಮೇನಹಳ್ಳಿಯಲ್ಲಿ ಸುವರ್ಣಮುಖಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ರೈತ ಸಂಘದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಗ್ರಾಮೀಣ ಸಿದ್ಧರಾಮ ಸ್ಮರಣೋತ್ಸವ ಹಾಗೂ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಆಶೀರ್ವಚನ ನೀಡಿದ ಅವರು ಮದುವೆಗಳಿಗೆ ಆಡಂಭರ ಮುಖ್ಯವಲ್ಲ ಸತಿಪತಿಗಳ ಮನಸ್ಸುಗಳು ಪರಸ್ಪರ ಅರ್ಥಮಾಡಿಕೊಳ್ಳುವುದು ಮುಖ್ಯ ಎಂದರು.

ವ್ಯರ್ಥವಾಗಿ ಬದುಕು ಸವೆಸಿ ಮಣ್ಣಾಗುವ ಬದಲು ಸಾರ್ಥಕ ಜೀವನ ನಡೆಸಿ ಆದರ್ಶ ಬದುಕು ಬಾಳಿದಾಗ ಮಾತ್ರ ಮಾನವನಾಗಿ ಜನ್ಮ ಪಡೆದದಕ್ಕೂ ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ಬಸವಣ್ಣ, ಸಿದ್ಧಗಂಗಾಶ್ರೀ ಹಾಗೂ ಮದರ್ ತೆರೆಸ ಜೀವನ ಆದರ್ಶವಾಗಲಿ ಎಂದು ಕಿವಿಮಾತು ಹೇಳಿದರು.

ರೈತರ ಸೌಲಭ್ಯ ಕಡಿತಗೊಳ್ಳಿಸಬೇಡಿ: ಯಳನಡು-ಅರಸೀಕೆರೆ ಮಹಾಸಂಸ್ಥಾನದ ಶ್ರೀ ಜ್ಞಾನಪ್ರಭು ಸಿದ್ಧರಾಮ ದೇಶೀಕೇಂದ್ರ ಮಹಾಸ್ವಾಮಿ ತಮ್ಮ ಆಶೀರ್ವಚನದಲ್ಲಿ ರೈತ ಕೇವಲ ಒಂದೇ ಒಂದು ತಿಂಗಳು ಕೃಷಿ ಚಟುವಟಿಕೆಯಲ್ಲಿ ತೊಡಗದೆ ಕೈ ಕಟ್ಟಿ ಕುಳಿತಾದಲ್ಲಿ ಪಡಿತರ ಬೆಲೆಗಳು ಗಗನಕ್ಕೇರಿ ದೇಶದ ಜನಜೀವನವೇ ಅಸ್ಥವ್ಯಸ್ಥವಾಗುತ್ತವೆ. ಹಾಗಾಗಿ ಕೇವಲ ಕಷ್ಟಗಳನ್ನೇ ನುಂಗಿಕೊಂಡು ಅನ್ನ ಬೆಳೆಯುವ ರೈತರಿಗೆ ಸರ್ಕಾರ ನೀಡುವ ಯಾವುದೇ ಸೌಲಭ್ಯಗಳನ್ನು ಕಡಿತಗೊಳಿಸಬಾರದು ಎಂದರು.

ಅಧಿಕಮಾಸದಲ್ಲಿ ಮದುವೆ ಮಾಡುವುದು ಒಳ್ಳೆಯದಲ್ಲ ಎಂಬ ಮೂಡನಂಬಿಕೆಯನ್ನು ಬದಿಗಿಟ್ಟು ಉಚಿತ ಸರಳ ವಿವಾಹ ಮಾಡುವ ಮೂಲಕ ಸಂಘಟಕರು ಬಸವಣ್ಣನವರ ತತ್ವಗಳನ್ನು ಪ್ರತಿಪಾದಿಸ ಹೊರಟಿರುವುದು ಶ್ಲಾಘನೀಯ ಸಂಗತಿಯಾಗಿದ್ದು ಒಂದೇ ವೇದಿಕೆಯಲ್ಲಿ ಹತ್ತಿಪ್ಪತ್ತು ಮದುವೆಗಳನ್ನು ಮಾಡುವ ಕಾರ್ಯ ಕೇವಲ ಒಬ್ಬರಿಂದ ಸಾಧ್ಯವಾಗದು ಹಾಗಾಗಿ ಹಣ್ಣ ಉಳ್ಳವರು ಇಂತಹ ಕಾರ್ಯಗಳಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮಕ್ಕಳನ್ನು ಸತ್ಪ್ರಜೆಯನ್ನಾಗಿ ಮಾಡಿ: ಕುಪ್ಪೂರು ಕ್ಷೇತ್ರದ ಗದ್ದಿಗೆ ಮಠದ ಶ್ರೀ ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿ ಅವರು ತಮ್ಮ ಆಶೀರ್ವಚನದಲ್ಲಿ ಸತಿ ಪತಿಗಳು ನೋವು ನಲಿವುಗಳನ್ನು ಸಮಾನವಾಗಿ ಸ್ವೀಕರಿಸಿ, ಮೇಲು-ಕೀಳು ಎಂಬ ಬೇದಬಾವ ಬಿಟ್ಟು ಒಬ್ಬರಿಗೊಬ್ಬರು ನೆರವಾಗಿ ಸಂಸಾರದ ಬಂಡಿ ಸಾಗಿಸಿದಾಗ ಮಾತ್ರ ಯಶಸ್ವಿ ಜೀವನ ನಡೆಸಬಹುದಾಗಿದ್ದು ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಕಷ್ಟ ಎಂದು ಕೈಕಟ್ಟಿ ಕೂರದೆ ಸವಾಲಾಗಿ ಸ್ವೀಕರಿಸಿ ಎದುರಿಸಲು ಮುಂದಾದಾಗ ಮಾತ್ರ ಮಂಜಿನಂತೆ ಕರಗುತ್ತವೆ ಎಂದು ತಿಳಿಸಿದರು.


ಮಕ್ಕಳನ್ನು ಹುಟ್ಟಿಸುವುದು ಮುಖ್ಯವಲ್ಲ ಅವರಲ್ಲಿ ಮನವೀಯ ಮೌಲ್ಯಗಳನ್ನು ತುಂಬಿ ಒಳ್ಳೆಯ ನಡೆ-ನುಡಿಗಳನ್ನು ಕಲಿಸಿ ಬೆಳೆಸಿ ಸತ್ಪ್ರಜೆಯನ್ನಾಗಿ ಮಾಡಿದಾಗ ಮಾತ್ರ ತಂದೆ-ತಾಯಿಯರ ಕರ್ತವ್ಯ ಸಾರ್ಥಕವಾಗಿ ನಿರ್ವಹಿಸಿದಂತ್ತಾಗುತ್ತದೆ. ಈ ನಿಟ್ಟಿನಲ್ಲಿ ನೂತನ ವಧು-ವರರು ಮದುವೆಯ ದಿನವೇ ಮಕ್ಕಳನ್ನು ಸತ್ಪ್ರಜೆಯನ್ನಾಗಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಸಲಹೆ ನೀಡಿದರು.

ಗೋಡೇಕೆರೆ ಸುಕ್ಷೇತ್ರದ ಚರಪಟ್ಟಾಧ್ಯಕ್ಷ ಶ್ರೀ ಮೃತ್ಯುಂಜಯ ದೇಶೀಕೇಂದ್ರ ಮಹಾಸ್ವಾಮಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಉದ್ಘಾಟಿಸಿದರು. ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ತಾ.ಪಂ.ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಬಿಜೆಪಿ ಮುಖಂಡ ಮೈಸೂರಪ್ಪ, ರಾಜ್ಯ ಹಸಿರು ಸೇನೆ ಸಂಚಾಲಕ ಕೆಂಕೆರೆ ಸತೀಶ್, ತಾ.ಪಂ.ಸದಸ್ಯ ಶಿವಕುಮಾರ್, ತರೀಕೆರೆ ಎಪಿಎಂಸಿ ಅಧ್ಯಕ್ಷ ಅಸುಂಡ್ಡಿ ಬಸವರಾಜು, ಸಿಪಿಐ ರವಿಪ್ರಸಾದ್, ಪಿಎಸ್ಐ ಪಾರ್ವತಮ್ಮಯಾದವ್, ಲಕ್ಷ್ಮೀಪತಿ, ಬಸವರಾಜ್ ಪಂಡಿತ್ ಮತ್ತಿತರರು ವೇಧಿಕೆಯಲ್ಲಿ ಉಪಸ್ಥಿತರಿದ್ದರು.


ಸುವರ್ಣಮುಖಿ ಸಂಸ್ಥೆಯ ಅಧ್ಯಕ್ಷ ಎ.ಬಿ.ವಿನಯ್, ಬಿ.ಆರ್.ಲೋಕೇಶ್, ದಿನೇಶ್, ತಿಮ್ಮೇಗೌಡ, ಜಯಪ್ರಕಾಶ್, ಶ್ರೀಧರ್, ಮಲ್ಲಿಕಾಜರ್ುನ್, ಯತೀಶ್ ಮತ್ತಿತರರು ಇದ್ದರು. ಮೆ.ನಾ.ಬೊಮ್ಮಲಿಂಗಪ್ಪ ಅವರ ನಿರೂಪಣೆಯಲ್ಲಿ ಶ್ರೀಮತಿ ಚಂದ್ರಕಲಾ ಸತೀಶ್ ಸ್ವಾಗತಿಸಿ, ವಂದಿಸಿದರು.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...