ವಿಷಯಕ್ಕೆ ಹೋಗಿ

ಮೈಲಾರಪುರದ ಏಳುಕೋಟಿ ಮೈಲಾರಲಿಂಗನ ಬ್ರಹ್ಮರಥೋತ್ಸವ.

20 ವರ್ಷಗಳ ನಂತರ ಮೈಲಾರಪುರದ ಏಳುಕೋಟಿ ಮೈಲಾರಲಿಂಗನ ಬ್ರಹ್ಮರಥೋತ್ಸವ.
------------------------------------------
ಹರಿದು ಬಂತು ಭಕ್ತ ಸಾಗರ
-------------------
ಹೊಸದುರ್ಗ ತಾಲೂಕಿನ ಶ್ರೀರಾಂಪುರ ಹೋಬಳಿ ಮೈಲಾರಪುರದ ಬೆಟ್ಟದಲ್ಲಿ ತಪ್ಪಲಿನಲ್ಲಿ ಏಳುಕೋಟಿ ಮೈಲಾರಲಿಂಗನ ಬ್ರಹ್ಮರಥೋತ್ಸವ ಶನಿವಾರದಂದು ಸಹಸ್ರಾರು ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.19 ವರ್ಷಗಳ ನಂತರ ನಡೆಯುತ್ತಿರುವ ಬ್ರಹ್ಮರಥೋತ್ಸವವಾದ್ದರಿಂದ ಉರಿವ ಬಿಸಿಲನ್ನು ಲೆಕ್ಕಿಸದೆ ಹರಿದು ಬಂದ ಸಹಸ್ತ್ರಾರು ಸಂಖ್ಯೆಯ ಭಕ್ತ ಸಾಗರದಿಂದ ಏಳುಕೋಟಿ,ಏಳುಕೋಟಿ ಎಂಬ ಉದ್ಘೋಷ ಮುಗಿಲು ಮುಟ್ಟಿತು.

ರಥೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ಆಗಮಿಕರ ಉಪಸ್ಥಿತಿಯಲ್ಲಿ ದಾರ್ಮಿಕ ವಿಧಿವಿಧಾನಗಳು ಪ್ರಾರಂಭಗೊಂಡಿತು. ನೂಥನವಾಗಿ ಸಮರ್ಪಣೆಗೊಂಡಿದ್ದ ರಥಕ್ಕೆ ರಥಾದಿ ದೇವತಾ ಹೋಮ,ರಥ ಸಂಪ್ರೋಕ್ಷಣೆ, ನಿತ್ಯ ಹೋಮ, ಬಲಿ ಪ್ರಧಾನ, ಕೃಷ್ಣಗಂಧೋತ್ಸವ ಮುಂತಾದ ಧಾರ್ಮಿಕ ಕೈಂಕರ್ಯಗಳು ನಡೆಯಿತು.ಬೆಟ್ಟದ ಮೇಲಿನ ಮೂಲ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ ಕುರುಬರಳ್ಳಿ ಶ್ರೀ ಕಪ್ಪಕರಿಯಮ್ಮದೇವಿ,ಸೂಜಿಕಲ್ಲು ಶ್ರೀ ಕೆಂಚಾಬಿಕೆ ದೇವಿ, ಮೈಲಾರಪುರದ ದೊಡ್ಡಬಿಲ್ಲು ಶ್ರೀ ಚೌಡಮ್ಮದೇವಿ ಉಪಸ್ಥಿತಿಯಲ್ಲಿ ರಥಕ್ಕೆ ಕಳಸ ಸ್ಥಾಪಿಸಲಾಯಿತು. ರಂಗು ರಂಗಿನ ಬಾವುಟಗಳು, ಎಳನೀರು ಗೊನೆಗಳು ಹಾಗೂ ಹೂವಿನ ಹಾರಗಳಿಂದ ಅಲಂಕಾರದೊಂದಿಗೆ ಸಿಂಗಾರಗೊಂಡಿದ್ದ ಹೊಚ್ಚ ಹೊಸ ರಥದಲ್ಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಮಂಗಳ ವಾದ್ಯ,ಸಹಸ್ರಾರು ಭಕ್ಥಾಧಿಗಳ ಜಯಗೋಷ ಹಾಗೂ ಗೊರವಯ್ಯಗಳ ಡಮರು ನಿನಾದದೊಂದಿಗೆ ಕರೆತರಲಾಯಿತು. ಬ್ರಾಹ್ಮಣ ಸಮೂಹ ಹಾಗೂ ದೇವಸ್ಥಾನ ಸಮಿತಿ ಸದಸ್ಯರು ಪ್ರಥಮ ಪೂಜೆ ಸಲ್ಲಿಸಿದ ನಂತರ ನೆರದಿದ್ದ ಭಕ್ತಸಾಗರ ರಥ ಎಳೆಯುವ ಮೂಲಕ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಇಷ್ಟದೈವಕ್ಕೆ ಬಾಳೆಹಣ್ಣು ಎಸೆಯುವ ಮೂಲಕ ಭಕ್ತಿಬಾವ ಸಮರ್ಪಿಸಿದರು.


ಮೈಲಾರಪುರದಲ್ಲಿ ನಡೆವ ಬ್ರಹ್ಮರಥೋತ್ಸವ ವಿಶಿಷ್ಠವಾಗಿದ್ದು ಇದು ಕೇವಲ ಬೆಳಿಗ್ಗೆ ಬಂದು ರಥೋತ್ಸವ ನಂತರ ಹಿಂದಿರುಗುವ ಜಾತ್ರೆಯಲ್ಲ, ವಕ್ಕಲುಗಳು ಬಂದು ಬಳಗ ಸಮೇತ ಗುಡಾರ, ಟೆಂಟ್ ನಿರ್ಮಿಸಿಕೊಂಡು ನಾಲ್ಕಾರು ದಿನ ಅಲ್ಲಿಯೇ ಉಳಿದು ಸ್ವಾಮಿಯ ಜಾತ್ರಾ ಕೈಂಕರ್ಯ ಮುಗಿಸಿ ಹೊರಡುವುದು ವಿಶೇಷ. ಈ ಜಾತ್ರೆಗೆ ರಾಜ್ಯ ಹಾಗೂ ಹೊರರಾಜ್ಯದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ನಂತರ ಹಣ್ಣು ಕಾಯಿ ಮಾಡಿಸಿಕೊಂಡು ವಿವಿಧ ಊರುಗಳ ಭಕ್ತರು ಮಾಡಿಸಿದ್ದ ಪ್ರಸಾದ ಸ್ವೀಕರಿಸಿ ಬ್ರಹ್ಮರಥೋತ್ಸವದ ಚಿತ್ರಣವನ್ನು ಕಣ್ಮನ ತುಂಬಿಕೊಂಡು ಹಿಂದಿರುಗಿದರು.






ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...