ವಿಷಯಕ್ಕೆ ಹೋಗಿ

ಕನಕದಾಸರ ಏಕಶಿಲೆಗೆ ಹುಳಿಯಾರಿನಲ್ಲಿ ಭವ್ಯ ಸ್ವಾಗತ, ಆತ್ಮೀಯ ಬೀಳ್ಕೊಡುಗೆ

ಹೊಸದುರ್ಗ ಸಮೀಪದ ಕೆಲ್ಲೋಡುವಿನ ನೇತ್ರಾವತಿ ನದಿ ನಾಲೆಯ ದಂಡೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕನಕಪೀಠದಲ್ಲಿ ಕನಕದಾಸರ ಬೃಹತ್ ವಿಗ್ರಹ ಸ್ಥಾಪಿಸುವ ಸಲುವಾಗಿ ದೊಡ್ಡಬಳ್ಳಾಪುರದ ದೇವನಹಳ್ಳಿ ಬಂಡೆಯಿಂದ ಸಾಗಿಸುತ್ತಿರುವ ಏಕಶಿಲೆ ಹೊತ್ತ ವಾಹನವು ಮಾರ್ಗಮಧ್ಯೆ ಹುಳಿಯಾರಿಗೆ ಆಗಮಿಸಿದಾಗ ಕುರುಬರ ಸಂಘದ ಪ್ರತಿನಿಧಿಗಳು ಹಾಗೂ ನಾಗರೀಕರು ಕಂಸಾಳೆ, ನಗಾರಿ, ಡೊಳ್ಳು ವಾಧ್ಯದೊಂದಿಗೆ ಭವ್ಯವಾಗಿ ಸ್ವಾಗತಿಸಲಾಯಿತು.

380 ಟನ್ ತೂಕದ, 40 ಅಡಿ ಉದ್ದದ ಹಾಗೂ 8 ಅಡಿ ದಪ್ಪದಾದ 150 ಕ್ಕೂ ಹೆಚ್ಚು ಚಕ್ರವುಳ್ಳ ಭಾರಿ ವಾಹನದಲ್ಲಿ ಸಾಗಿಬಂದ ಏಕಶಿಲೆಯನ್ನು ಇಲ್ಲಿನ ಎಪಿಎಂಸಿ ಬಳಿ ಹೋಬಳಿ ಕುರುಬರ ಸಂಘದ ಬಸವಲಿಂಗೇಗೌಡ, ಕಾಯಿ ಕುಮಾರ್, ಲಿಂಗರಾಜು, ದಯಾನಂದ್, ಗೋವಿಂದಪ್ಪ, ರಾಮಯ್ಯ, ತಿಮ್ಮಯ್ಯ ಅವರುಗಳು ಪೂಜೆ ಸಲ್ಲಿಸಿ ಸ್ವಾಗತಿಸಿದರು.
ಮಂಗಳವಾದ್ಯ, ಡೊಳ್ಳುಕುಣಿತದೊಂದಿಗೆ ಹೊಸದುರ್ಗ ಕನಕಶಾಖಾ ಮಠದ ಈಶ್ವರಾನಂದಪುರಿ ಸ್ವಾಮಿಜಿಯೊಂದಿಗೆ ಏಕಶಿಲೆಯನ್ನು ಮೆರವಣಿಗೆಯೊಂದಿಗೆ ಕರೆತರುವಾಗ ಕನಕ ಟ್ರಸ್ಟ್ ನ ಗವಿರಂಗಯ್ಯ, ರಂಗನಾಥ್, ಜಯಣ್ಣ, ಪುಟ್ಟರಾಜು, ಬೋರಲಿಂಗಯ್ಯ, ಬನಪ್ಪ ಅವರುಗಳು ಕೆನರಾ ಬ್ಯಾಂಕ್ ಬಳಿ ಶ್ರೀಗಳಿಗೆ ಹಾಗೂ ಏಕಶಿಲೆಗೆ ಹಾರ ಹಾಕಿ ಪೂಜೆ ಸಲ್ಲಿಸಿ ಪಠಾಕಿ ಸಿಡಿಸಿ ಸಂಭ್ರಮಿಸಿದರು.
128 ಚಕ್ರದ ಭಾರಿ ವಾಹನದಲ್ಲಿ ಭಾರಿ ಗಾತ್ರದ ಏಕಶಿಲೆ ಕೊಂಡೊಯ್ಯುವುದನ್ನು ನೋಡಲು ಜನಜಾತ್ರೆಯೇ ನೆರೆದಿತ್ತು. ಶಾಸಕ ಸಿ.ಬಿ.ಸುರೇಶ್ ಬಾಬು, ಕನಕಪೀಠದ ಆಡಳಿತಾಧಿಕಾರಿ ಹಾಗೂ ಹೊಸದುರ್ಗದ ಮಾಜಿ ಶಾಸಕ ಗೋವಿಂದಪ್ಪ, ತಾ.ಪಂ.ಸದಸ್ಯ ಶಿವನಂಜಪ್ಪ, ನಂದಿಹಳ್ಳಿ ಶಿವಣ್ಣ,ಅಹಿಂದ ರಾಜ್ಯ ಸಂಚಾಲಕ ಸಿ.ಎಲ್.ರವಿಕುಮಾರ್ ಸೇರಿದಂತೆ ಲಿಂಗಪ್ಪನಪಾಳ್ಯ, ಸೋಮಜ್ಜನಪಾಳ್ಯ, ಹುಳಿಯಾರು, ಕುರಿಹಟ್ಟಿ, ನಂದಿಹಳ್ಳಿ, ಹೊಸಹಳ್ಳಿ, ಸೀಗೆಬಾಗಿ ಸೇರಿದಂತೆ ಅಕ್ಕಪಕ್ಕದ ಅಪಾರ ಸಂಖ್ಯೆಯ ಕನಕದಾಸರ ಅನುಯಾಯಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ನೂರಕ್ಕೂ ಹೆಚ್ಚು ಬೈಕ್ ಗಳಲ್ಲಿ ರ್ಯಾಲಿ ನಡೆಸಿ ಜಯಘೋಷ, ಪಠಾಕಿ, ಅದ್ದೂರಿ ಮೆರವಣಿಗೆ ನಡೆಸಿ ಆತ್ಮೀಯತೆಯಿಂದ ಬೀಳ್ಕೊಟ್ಟರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...