ವಿಷಯಕ್ಕೆ ಹೋಗಿ

ಹುಳಿಯಾರು:ಸುಸಜ್ಜಿತ ಬಸ್ ತಂಗುದಾಣ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ

ಹುಳಿಯಾರಿನಲ್ಲಿ 20 ಲಕ್ಷರೂಗಳ ಅಂದಾಜು ವೆಚ್ಚದ ಸುಸಜ್ಜಿತ ಬಸ್ ಶೆಲ್ಟರ್ ನಿರ್ಮಾಣಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಸೋಮವಾರದಂದು ಗುದ್ದಲಿ ಪೂಜೆ ನೆರವೇರಿಸಿದರು.

ಹುಳಿಯಾರಿಗೊಂದು ಮಾದರಿ ಬಸ್ ಶೆಲ್ಟರ್ ನಿರ್ಮಿಸಹೊರಟಿರುವ ತಮ್ಮ ಉದ್ದೇಶದ ಬಗ್ಗೆ ಮಾತನಾಡಿದ ಶಾಸಕ ಸಿ.ಬಿ.ಸುರೇಶ್ ಬಾಬು ಹುಳಿಯಾರು ಜಿಲ್ಲೆಯಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ ಪಟ್ಟಣವಾಗಿದ್ದು ನೂರಾರು ಬಸ್ ಗಳು ಪ್ರತಿದಿನ ಬಂದುಹೋಗುತ್ತಿದ್ದು ಸಾವಿರಾರು ಮಂದಿ ಪ್ರಯಾಣಿಸುತ್ತಾರೆ. ಸೂಕ್ತ ತಂಗುದಾಣ ಇಲ್ಲದೆ ಜನತೆ ಬಿಸಿಲು-ಮಳೆಗೆ ತೊಂದರೆಗೀಡಾಗುತ್ತಿರುವುದನ್ನು ಮನಗಂಡು ಪ್ರಯಾಣಿಕರಿಗೆ ಹೆಚ್ಚಿನ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಶಾಸಕರ ನಿಧಿಯಲ್ಲಿ ಸುಮಾರು 20 ಲಕ್ಷ ರು. ವೆಚ್ಚದಲ್ಲಿ ಚಿ.ನಾ.ಹಳ್ಳಿಯಲ್ಲಿನ ಮಾದರಿಯಂತೆ ನಿರ್ಮಿಸಲು ನೀಲನಕ್ಷೆ ಸಿದ್ಧಪಡಿಸಲಾಗಿದೆ ಎಂದರು.ಸಧ್ಯ 5 ಲಕ್ಷ ರೂ ಹಣ ಬಿಡುಗಡೆಮಾಡಲಾಗಿದ್ದು ನಾಳಿಯಿಂದಲೆ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ ಎಂದು ವಿವರಿಸಿದರು.

ಆತಂಕ ಬೇಡ: ನೂತನ ಬಸ್ ಶೆಲ್ಟರ್ ನಿರ್ಮಾಣ ಪ್ರಾರಂಭವಾಗುವುದರಿಂದ ಫುಟ್ ಪಾತ್ ವ್ಯಾಪಾರಿಗಳ ಅಂಗಡಿಗಳು ಸ್ಥಳಾಂತರ ಅನಿವಾರ್ಯವಾಗಿದ್ದು ಅಂಗಡಿದಾರರು ಆತಂಕಪಡುವ ಅವಶ್ಯಕತೆಯಿಲ್ಲ ಎಂದರು.ಬಸ್ ನಿಲ್ದಾಣದ ಫುಟ್ಪಾತ್ ನಲ್ಲಿ ದಶಕಗಳ ಕಾಲದಿಂದಲೂ ಪೆಟ್ಟಿಗೆ ಅಂಗಡಿ ವ್ಯಾಪಾರವನ್ನೇ ಆಶ್ರಯಿಸಿರುವ ಅಂಗಡಿದಾರರಿಗೆ ಬದಲಿ ವ್ಯವಸ್ಥೆ ಕಲ್ಪಸಲಾಗುವುದೆಂದ ಅವರು ಪ್ರಾರಂಭಿಕ ಹಂತದಲ್ಲಿ ಪಿಲ್ಲರ್ ಗಳನ್ನು ರ್ನಿರ್ಮಾಣ ಮಾಡುವುದಿದ್ದು ಇದರಿಂದ ಇಲ್ಲಿನ ವ್ಯಾಪಾರಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ನಂತರ ಸಣ್ಣ ನೀರಾವರಿ ಇಲಾಖೆ ಸಮ್ಮತಿ ಪಡೆದು ಅಂಗಡಿದಾರರೊಂದಿಗೆ ಚರ್ಚಿಸಿ ಇಲ್ಲಿನ ಕೆರೆ ದಡದಲ್ಲಿ ಇದೇ ಉದ್ದೇಶಕ್ಕೆ ಮೀಸಲಾಗಿಟ್ಟಿರುವ ಜಾಗದಲ್ಲಿ ಅಂಗಡಿಗಳನ್ನು ಇಟ್ಟುಕೊಳ್ಳಲು ಬದಲಿ ವ್ಯವಸ್ಥೆಯನ್ನು ಮಾಡುವದರ ಮೂಲಕ ಅನುಕೂಲ ಕಲ್ಪಿಸಿಕೊಡಲಾಗುವುದೆಂದರು.

ಹುಳಿಯಾರು ಗ್ರಾಮಪಂಚಾಯ್ತಿ ಶೀಘ್ರ ಪಟ್ಟಣ ಪಂಚಾಯ್ತಿಯಾಗಿ ಮೇಲ್ಧರ್ಜೆಗೇರಲಿದೆ ಎಂದ ಅವರು ರಾಜ್ಯದಲ್ಲಿ 2011 ರ ಜನಗಣತಿಯ ಕಾರ್ಯವು ಪ್ರಗತಿಯಲ್ಲಿರುವುದರಿಂದ 31 ಮಾರ್ಚ್ 2011 ರವರೆವಿಗೆ ಯಾವುದೇ ಪ್ರದೇಶವನ್ನು ಮೇಲ್ದರ್ಜೆಗೇರಿಸದಂತೆ ನಿರ್ಭಂದಿಸಲಾಗಿರುವುದರಿಂದ ಸದ್ಯ ಗ್ರಾಪಂ ಆಗೇ ಮುಂದುವರಿಯಲಿದೆ ಎಂದರು.
ಜಿ.ಪಂ.ಸದಸ್ಯ ಹೊನ್ನಪ್ಪ,ಹೊಯ್ಸಳಕಟ್ಟೆ ತಾ.ಪಂ.ಸದಸ್ಯ ರುದ್ರೇಶ್, ಇಂಜಿನಿಯರ್ ಶಿವಾನಂದ್, ಬಸ್ ಏಜೆಂಟರ ಸಂಘದ ಎಂ.ವಿ.ಲೋಕೇಶ್,ಹು.ಕೃ.ವಿಶ್ವನಾಥ್,ಏಜಂಟ್ ರಾಜಣ್ಣ,ಹಸಿರುಸೇನೆ ರಾಜ್ಯ ಸಂಚಾಲಕ ಕೆಂಕೆರೆ ಸತೀಶ್, ಜೆಡಿಸ್ ಮುಖಂಡರಾದ ಸೈಯದ್ ಜಲಾಲ್, ನಂದಿಹಳ್ಳಿ ಶಿವಣ್ಣ, ಪ್ರಸನ್ನ, ಹೂವಿನ ಬಸವರಾಜು, ಅಹಮದ್ ಖಾನ್, ದೇವರಾಜ್ ಗೌಡ, ಪುಟ್ಟಿಭಾಯಿ ನಾಗರಾಜ,ಪಾಳ್ಯ ಬೀರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...