ವಿಷಯಕ್ಕೆ ಹೋಗಿ

ವಿಶ್ವಕರ್ಮದವರಿಗೆ 2A ನಲ್ಲಿ ಶೇ. 3 ಒಳಮೀಸಲಾತಿ ಅಗತ್ಯ: ಏಕದಂಡಿಗಿಶ್ರೀ

ಸಕಾ೯ರ ಹಿಂದುಳಿದ ವರ್ಗ ಎ ನಲ್ಲಿ 108 ಜಾತಿಗಳನ್ನು ಒಟ್ಟಿಗೆ ಸೇರಿಸಿ ಶೇ.15 ಮೀಸಲಾತಿ ನಿಗದಿ ಮಾಡಿದ್ದು ಈ ಸೌಲಭ್ಯವನ್ನು ಕೆಲ ಪ್ರಭಲ ಜಾತಿಗಳು ಕಬಳಿಸುತ್ತಿದ್ದಾರೆ. ಇದರಿಂದ ಅತ್ಯಂತ ಹಿಂದುಳಿದ ಜನಾಂಗ ವಿಶ್ವಕರ್ಮದವರಿಗೆ ಅನ್ಯಾಯವಾಗುತ್ತಿದ್ದು ಸಕಾ೯ರ 2 A ನಲ್ಲಿ ಶೇ.3 ಒಳಮೀಸಲಾತಿ ಜಾರಿಗೆ ತರುವ ಅಗತ್ಯವಿದೆ ಎಂದು ಗುಲ್ಬರ್ಗ ಜಿಲ್ಲೆ, ಯಾದಗಿರಿಯ ವಿಶ್ವಕರ್ಮ ಏಕದಂಡಗಿ ಮಠದ ಅನೇಗುಂದಿ ಸಂಸ್ಥಾನ ಸರಸ್ವತೀ ಪೀಠಾಧೀಶರಾದ ಶ್ರೀ ಗುರುನಾಥ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

ಚಿಕ್ಕನಾಯಕನಹಳ್ಳಿಯ ಶ್ರೀಕಾಳಿಕಾಂಬ ದೇವಾಲಯದಲ್ಲಿ ಶ್ರೀಕಾಳಿಕಾಂಬ, ಶ್ರೀ ಶಿವಲಿಂಗ ವಿಗ್ರಹಗಳ ಪುನರ್ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಭಾಗವಹಿಸಿ ಯಾದಗಿರಿ ಮಠಕ್ಕೆ ಹಿಂದಿರುಗುವಾಗ ಮಾರ್ಗಮಧ್ಯೆ ಹುಳಿಯಾರಿನ ಕಾಗಿ೯ಲ್ ಸತೀಶ್ ಅವರ ಮನೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ 2 A ನಲ್ಲಿ ವಿಶ್ವಕರ್ಮದವರಿಗೆ ಶೇ.3 ಮೀಸಲಾತಿ ಸಿಕ್ಕರೆ ಶೈಕ್ಷಣಿಕ, ಉದ್ಯೋಗ, ರಾಜಕೀಯ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಎಂದು ಪ್ರತಿಪಾದಿಸಿದರು.


ಪೊಲೀಸ್ ದಬ್ಬಾಳಿಕೆ ತಪ್ಪಿಸಿ: ಚಿನ್ನಬೆಳ್ಳಿ ಕೆಲಸ ಮಾಡುವವರ, ಬಂಗಾರದ ಅಂಗಡಿ ಇಟ್ಟಿರುವವ ಮೇಲೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿದ್ದು ಪಟ್ಟಣದಲ್ಲಿ ಕಳ್ಳತನ ಪ್ರಕರಣ ಜರುಗಿದರೂ ಸಾಕು ಅಲ್ಲಿನ ಅಂಗಡಿಗಳಿಗೆ ಏಕಾಏಕಿ ಬಂದು ತಪಾಸಣೆ ನಡೆಸಿ ಅವಮಾನಕರ, ದೌರ್ಜನ್ಯದ ಮಾತುಗಳನ್ನಾಡಿ ಮಾನಸಿಕವಾಗಿ ಘಾಸಿಗೊಳಿಸುವುದನ್ನು ಮೊದಲು ತಪ್ಪಿಸಬೇಕು ಎಂದರಲ್ಲದೆ ವಿಶ್ವಕರ್ಮ ಜನಾಂಗದ ಏಳಿಗೆಗೆ ಪ್ರತ್ಯೇಕ ನಿಗಮ ಸ್ಥಾಪಿಸಿ ತರಬೇತಿ, ಸಾಲ-ಸೌಲಭ್ಯ, ಅವಸಾನದ ಅಂಚಿನಲ್ಲಿರುವ ಕಲೆಗಳ ಪುರ್ನಶ್ಚೇತನಕ್ಕೆ ಸಕಾ೯ರ ಮುಂದಾಗುವಂತೆ ಸಲಹೆ ನೀಡಿದರು.


ರಾಜಕೀಯ ಸ್ಥಾನ ಮಾನ: ಇತರ ಹಿಂದುಳಿದ ಜಾತಿಗಳಿಗೆ ಹೋಲಿಸಿದರೆ ವಿಶ್ವಕರ್ಮ ಜನಾಂಗಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ರಾಜಕೀಯವಾಗಿ ಸರಿಯಾದ ಸ್ಥಾನ ಮಾನ ನೀಡುತ್ತಿಲ್ಲ. ಚಂದ್ರಶೇಖರ ಕಂಬಾರ ಸೇರಿದಂತೆ ಒಂದಿಬ್ಬರು ಎಂಎಲ್ಸಿ ಆಗಿದ್ದು ಬಿಟ್ಟರೆ ಮತ್ಯಾರೂ ರಾಜಕೀಯ ಹುದ್ದೆಗಳನ್ನು ಅಲಂಕರಿಸಿಲ್ಲ. ಹೀಗಾಗಲು ನಮ್ಮಲ್ಲಿರುವ ಅಸಂಘಟನೆ ಕಾರಣವಾಗಿದ್ದು ಜನಸಂಖ್ಯೆಯಲ್ಲಿ ಮುಂದುವರಿಯುವುದಕ್ಕಿಂತ ಸಂಘಟಿತರಾಗಿ ಮುಂದುವರಿಯುವುದು ಸೂಕ್ತ ಎಂದರು.


ಸಕಾ೯ರಕ್ಕೆ ಕೂಗು ತಟ್ಟಿಲ್ಲ: ದೇವಸ್ಥಾನ, ಆಸ್ತಿಕಬಾವ, ಕೃಷಿಕರ್ಮ ಮತ್ತು ತಾಂತ್ರಿಕ ಕಸುಬುಗಳನ್ನು ಹುಟ್ಟುಹಾಕಿದ ವಿರ್ಶಕರ್ಮ ಜನಾಂಗ ಇಂದು ಎಲ್ಲರ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ. ಶಿಲ್ಪಕಲೆ ಪರಂಪರೆ ಪುನರುಸ್ಥಾನ ಗೊಂಡರೆ ಭಾರತೀಯ ಸಂಸ್ಕೃತಿ ಪುನಃ ಗತವೈಭವ ಪಡೆದು ಶಿಲ್ಪಗಳ, ಮಠಗಳ, ದೇವಾಲಯಗಳ ಏಳಿಗೆ ಸಾಧ್ಯ. ಈ ನಿಟ್ಟಿನಲ್ಲಿ 2003 ರಿಂದ ಇಲ್ಲಿಯವರೆಗೂ ನಿರಂತರವಾಗಿ 28 ಜಿಲ್ಲೆ ನೂರಾರು ತಾಲೂಕುಗಳಲ್ಲಿ ಸಮ್ಮೇಳನ, ಸಮಾವೇಶ, ಹೋರಾಟ ಮಾಡುತ್ತಿದ್ದರೂ ಕೂಡ ತಮ್ಮ ಕೂಗು ಸಕಾ೯ರಕ್ಕೆ ತಟ್ಟಿಲ್ಲ ಎಂದು ನೊಂದು ನುಡಿದರು.

ಹೋರಾಟ-ಸಂಘಟನೆ ನಿಲ್ಲಿಸುವುದಿಲ್ಲ: ಮನುಕುಲದ ನಾಗರಿಕತೆಗೆ ಮೀಸಲಾದವರು ವಿಶ್ವಕರ್ಮ ಜನಾಂಗದವರು. ಆದರೆ ಅಲ್ಪಸಂಖ್ಯಾತರು ಎನ್ನುವ ಕಾರಣದಿಂದ ಸಕಾ೯ರ ನಮ್ಮನ್ನು ದೂರವಿಡುತ್ತಿದ್ದು ಜನಾಂಗದಲ್ಲಿ ಅನೇಕತೆ ಹೋಗಲಾಡಿಸಿ ಐಕ್ಯತೆ ಬೆಳಸಿ ಒಗ್ಗಟ್ಟಾಗಿ ನಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ಮಾಡುವುದಾಗಿ ಶ್ರೀಗಳು ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.