ವಿಷಯಕ್ಕೆ ಹೋಗಿ

ಶಿವಲಿಂಗಮ್ಮ ಹುಳಿಯಾರು ಗ್ರಾ.ಪಂ ಹಿರಿಯಕ್ಕ,3 ಮಂದಿಯ ಹ್ಯಾಟ್ರಿಕ್ ದಾಖಲೆ

(ಫೋಟೊ ವಿವರ:ಹುಳಿಯಾರು ಗ್ರಾ.ಪಂ.ಚುನಾವಣೆಯಲ್ಲಿ ಐದನೇ ಬಾರಿ ಜಯಗಳಿಸಿರುವ ಶಿವಲಿಂಗಮ್ಮ, ಹ್ಯಾಟ್ರಿಕ್ ಗೆಲುವು ಪಡೆದಿರುವ ಅಶೋಕ್ ಬಾಬು, ಎಚ್.ಆರ್.ರಂಗನಾಥ್, ಜಹೀರ್ ಸಾಬ್)

ಶಿವಲಿಂಗಮ್ಮ ಹುಳಿಯಾರು ಗ್ರಾ.ಪಂ ಹಿರಿಯಕ್ಕ
3 ಮಂದಿಯ ಹ್ಯಾಟ್ರಿಕ್ ದಾಖಲೆ
---------------------------------
ಸ್ಪರ್ಧಿಸಿರುವ ಎಲ್ಲಾ ಚುನಾವಣೆಗಳಲ್ಲೂ ಸೋಲೆಂಬುದನ್ನು ಕಾಣದೆ ಗೆಲುವಿನ ಸೋಪಾನವೇರುತ್ತ ಬಂದಿರುವ ಮಾರುತಿನಗರದ ಶಿವಲಿಂಗಮ್ಮನಿಗೆ ಈ ಚುನಾವಣೆಯಲ್ಲೂ ಮತದಾರರು ಕೈ ಹಿಡಿಯುವದರೊಂದಿಗೆ 5 ನೇ ಬಾರಿಗೆ ದಾಖಲೆಯೊಂದಿಗೆ ಆಯ್ಕೆಯಾಗುವ ಮೂಲಕ ಹುಳಿಯಾರು ಗ್ರಾ.ಪಂಚಾಯ್ತಿಗೆ ಹಿರಿಯಕ್ಕನಾಗುವ ಸೌಭಾಗ್ಯ ಒದಗಿಬಂದಿದೆ.ಈ ಚುನಾವಣೆಯಲ್ಲಿ ಈಕೆಗೆ ಐದನೇ ಭಾರಿ ಜಯ ಒಲಿದರೆ ಇನ್ನಿತರ ಮೂರು ಮಂದಿಗೆ ಹ್ಯಾಟ್ರಿಕ್ ಹಾಗೂ ಆರು ಮಂದಿಗೆ ಎರಡನೇ ಬಾರಿಯ ಜಯದ ಬಾಗಿಲು ತೆರೆದು ದಾಖಲೆಯಾಗಿದೆ.

5 ನೇ ಬಾರಿ ಸದಸ್ಯೆ : ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ಕೆಲವೆ ಮಂದಿಯನ್ನು ಹೊರತು ಪಡಿಸಿ ಮತ್ತಿನ್ಯಾರೂ ಎರಡನೇ ಬಾರಿ ಗೆಲುವು ಕಂಡಿಲ್ಲ.ಅಂತಹದರಲ್ಲಿ 5 ನೇ ಬಾರಿಯೂ ಗೆಲುವೂ ಸಾಧಿಸುವ ಮುಖಾಂತರ ಗ್ರಾಪಂ ಖಾಯಂ ಸದಸ್ಯೆಯಾಗಿರುವ ಶಿವಲಿಂಗಮ್ಮ ಈ ಬಾರಿಯ ಪಂಚಾಯ್ತಿಯಲ್ಲಿ ಅತ್ಯಂತ ಹಿರಿಯ ಸದಸ್ಯೆ. 84-85 ನೇ ಸಾಲಿನಲ್ಲಿ ಮಂಡಲ ಪಂಚಾಯ್ತಿ ಚುನಾವಣೆಯಲ್ಲಿ 2 ನೇ ಬ್ಲಾಕಿನಲ್ಲಿ ಗೆಲುವು ಸಾಧಿಸುವ ಮೂಲಕ ರಾಜಕೀಯ ಪ್ರವೇಶಿಸಿದ ಎಚ್.ಎಂ.ಶಿವಲಿಂಗಮ್ಮ ನಂತರ 90-91 ರಲ್ಲಿ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು,95ರಲ್ಲಿ ಕೌಟಂಬಿಕ ಕಾರಣಗಳಿಂದ ಸ್ಪರ್ಧಿಸಲ್ಲಿಕ್ಕಾಗದೆ ಆನಂತರದ 2001-02 ಹಾಗೂ 2005-06 ನೇ ಸಾಲಿನ ಚುನಾವಣೆಯಲ್ಲಿ ಗೆದ್ದು ಈಗ ಮತ್ತೊಮ್ಮೆ ಚುನಾವಣಾ ಕಣಕ್ಕೆ ಧುಮುಕಿ ಇಲ್ಲೂ ಗೆಲುವನ್ನು ಸಾಧಿಸಿ ಸತತ ೩ ನೇ ಗೆಲುವು ಹಾಗೂ ಒಟ್ಟಾರೆಯಾಗಿ ಐದನೇ ಗೆಲುವು ದಾಖಲಿಸುವ ಮೂಲಕ ಹುಳಿಯಾರು ಗ್ರಾಮ ಪಂಚಾಯ್ತಿ ಇತಿಹಾಸದಲ್ಲಿಯೇ ಐದು ಬಾರಿ ಗೆದ್ದ ಏಕೈಕ ವ್ಯಕ್ತಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಇವರನ್ನು ಹೊರತು ಪಡಿಸಿದರೆ ಇಲ್ಲಿನ 4 ನೇ ಬ್ಲಾಕಿನಿಂದ ಸತತ 3 ನೇ ಬಾರಿ ಸ್ಪರ್ರ್ಧಿಸಿದ್ದ ಧನುಷ್ ರಂಗನಾಥ್, ತಂದೆಯ ಅಕಾಲಿಕ ಮರಣದ ನಂತರ ಅನಿರಿಕ್ಷಿತವಾಗಿ ರಾಜಕೀಯ ಪ್ರವೇಶ ಮಾಡಿದ ಎಚ್.ಎಂ.ಅಶೋಕ್ ಬಾಬು ಹಾಗೂ ಮಾಜಿ ಉಪಾಧ್ಯಕ್ಷ ಸೈಯದ್ ಜಹೀರ್ ಅವರುಗಳು ಕಳೆದ 3 ಚುನಾವಣೆಗಳಲ್ಲೂ ಜಯದ ಹಾದಿ ಹಿಡಿದು ಹ್ಯಾಟ್ರಿಕ್ ದಾಖಲೆ ದಾಖಲಿಸಿದ್ದಾರೆ.

ತಮ್ಮ ಗೆಲುವಿನ ಬಗ್ಗೆ ಪ್ರತಿಕ್ರಿಯಿಸುತ್ತಾ ತಂತಮ್ಮ ಬ್ಲಾಕಿನ ಅಭಿವೃದ್ಧಿ ಬಗ್ಗೆ ತಾವೂ ಗಮನ ನೀಡುತ್ತ ಬಂದಿರುವುದೇ ಸತತವಾಗಿ ಕಳೆದ ೧೫ ವರ್ಷಗಳಿಂದಲ್ಲೂ ಮತದಾರರು ತಮ್ಮ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಲು ಕಾರಣ ಎನ್ನುವ ಇವರುಗಳು ಗೆಲುವಿನಿಂದಾಗಿ ಜವಬ್ಧಾರಿ ಹೆಚ್ಚಿಗಿದ್ದು ಇನ್ನಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಮತದಾರರ ಆಶಯ ಈಡೇರಿಸುವುದಾಗಿ ತಿಳಿಸಿದರು.

ಇನ್ನುಳಿದಂತೆ ಕಳೆದ ಬಾರಿ ಸದಸ್ಯರಾಗಿದ್ದ ಎಸ್.ಪುಟ್ಟರಾಜು, ಅಹಮದ್ ಖಾನ್, ಸೈಯದ್ ಜಬೀಉಲ್ಲಾ ಅವರುಗಳು ಸತತ ಎರಡನೇ ಗೆಲುವು ದಾಖಲಿಸಿದರೆ ಹಸೀನಾಬಾನು, ಅಭೀದುನ್ನೀಸಾ, ಪರ್ಹಾನ ಒಂದು ಚುನಾವಣೆ ಗ್ಯಾಪ್ ನಂತರ ಎರಡನೇ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.