ವಿಷಯಕ್ಕೆ ಹೋಗಿ

ವಿಶ್ವ ಬ್ಯಾಂಕ್ ನೆರವಿನಿಂದ ಜಿಲ್ಲೆಯಲ್ಲಿ 357 ಕೆರೆಗಳ ನಿರ್ವಹಣೆ : ಸೋಮಶೇಖರಪ್ಪ

ವಿಶ್ವ ಬ್ಯಾಂಕಿನ ಆಥಿ೯ಕ ನೆರವಿನಲ್ಲಿ ರಾಜ್ಯದಲ್ಲಿ 1336 ಕೆರೆಗಳಲ್ಲಿ ನೀರಿನ ಸಂಗ್ರಹಣೆ ಅಂತರ್ಜಲ ಅಭಿವೃದ್ಧಿಗೆಂದು ಮೊದಲನೇ ಹಂತವಾಗಿ 600 ಕೋಟಿ ವಿನಿಯೋಗಿಸಿದ್ದು ಎರಡನೇ ಹಂತದಲ್ಲಿ 300 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ತುಮಕೂರು ಜಿಲ್ಲೆಯ ಪಾವಗಡ, ಶಿರಾ, ಕೊರಟಗೆರೆ, ಮಧುಗಿರಿ ಹಾಗೂ ಚಿ.ನಾ.ಹಳ್ಳಿ ತಾಲೂಕುಗಳ 357 ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಕೆರೆ ನಿರ್ವಹಣೆ ಯೋಜನೆಯಲ್ಲಿ ನೀರು ನಿರ್ವಹಣೆ ಪ್ರಾತ್ಸಕ್ಷಿಕೆಯಲ್ಲಿ ಹೊಸ ತಳಿ ಬೆಳೆಗಳನ್ನು ಬೆಳೆಯಲಾಗುವ ಮೂಲಕ ನೀರಿನ ಸದ್ಭಳಕೆಗೆ ಒತ್ತು ನೀಡಲಾಗುತ್ತಿದೆ ಎಂದು ಜಲ ಸಂವರ್ಧನೆ ಯೋಜನಾ ಸಂಘದ ಜಿಲ್ಲಾ ಸಂಯೋಜಕ ಸೋಮಶೇಖರಪ್ಪ ಅವರು ಎಂದು ತಿಳಿಸಿದರು.

ಹುಳಿಯಾರು ಸಮೀಪದ ಸೀಗೆಬಾಗಿಯಲ್ಲಿ ಬೆಂಗಳೂರು ಜಲ ಸಂವರ್ಧನೆ ಯೋಜನಾ ಸಂಘ, ಕೃಷಿ ವಿಶ್ವವಿದ್ಯಾಲಯ, ಶ್ರೀ ವರದರಾಜಸ್ವಾಮಿ ಕೆರೆ ಅಭಿವೃದ್ಧಿ ಸಂಘದ ಸಂಯುಕ್ತ ಆಶ್ರಯದಲ್ಲಿ ಕನಾ೯ಟಕ ಸಮುದಾಯ ಆಧಾರಿತ ಕೆರೆ ನಿರ್ವಹಣೆ ಯೋಜನೆಯಲ್ಲಿ ತೆಗೆದುಕೊಳ್ಳಲಾದ ನೀರು ನಿರ್ವಹಣೆ ಪ್ರಾತ್ಸೆಕ್ಷಿಕೆ ಅಡಿಯಲ್ಲಿ ಏರ್ಪಡಿಸಿದ್ದ ಭತ್ತದ ಬೆಳೆಯ ಕ್ಷೇತ್ರೋತ್ಸವದಲ್ಲಿ ಅವರು ಮಾತನಾಡಿದರು.

ಈ ಯೋಜನೆಯಲ್ಲಿ ರೈತರ ಬೆಳೆಗಳ ಇಳುವರಿ ಸುದಾರಣೆ ಮಾಡಿ ಆಥಿ೯ಕ ಮಟ್ಟ ಉತ್ತಮಗೊಳಿಸುವ ಸಲುವಾಗಿ ನೊಂದಾಯಿತ ರೈತರಿಗೆ ನೀರು ನಿರ್ವಹಣೆ, ಆಹಾರ ಬೆಳೆ, ತೋಟಗಾರಿಕೆ ಬೆಳೆ, ಮೇವಿನ ಬೆಳೆಗಳ ಬಗ್ಗೆ ಪ್ರಾತ್ಸಕ್ಷಿಕೆ ನೀಡುವುದಲ್ಲದೆ ಸಮಗ್ರ ಕೃಷಿ ಪದ್ಧತಿ, ಸಮಗ್ರ ಪೀಡೆ ನಿರ್ವಹಣೆ ಬಗ್ಗೆ ತರಬೇತಿ, ಪರಿಸರ ತರಬೇತಿ, ಅಧ್ಯಯನ ಪ್ರವಾಸ, ಮಣ್ಣು ಪರೀಕ್ಷೆ ಹೀಗೆ ಹತ್ತು ಹಲವು ತಿಳುವಳಿಕೆ ನೀಡಲಾಗುತ್ತಿದೆ ಎಂದು ವಿವರಿಸಿದರು.

ಬೆಂಗಳೂರಿನ ನೀರು ತಜ್ಷ ಕೆ.ಆರ್.ಶೆಟ್ಟರ್ ಅವರು ಮಾತನಾಡಿ ಕೆರೆಯ ನೀರು ಪುಕ್ಕಟ್ಟೆ ಸಿಗುವುದರಿಂದ ರೈತರು ತಮ್ಮ ಬೆಳೆಗಳಿಗೆ ಅಗತ್ಯಕ್ಕಿಂತ ಹೆಚ್ಚು ನೀರನ್ನು ಬಳಕೆಮಾಡುತ್ತಿದ್ದಾರೆ. ಇದರಿಂದ ಕೆರೆಯಲ್ಲಿ ನೀರು ಖಾಲಿಯಾಗಿ ಅಂತರ್ಜಲ ಮಟ್ಟ ಕುಸಿತವಾಗುತ್ತದೆ. ಇಳುವರಿ ಪ್ರಮಾಣ ಕಡಿಮೆಯಾಗುತ್ತದೆ. ಅಲ್ಲದೆ, ಕೃಷಿ ಭೂಮಿಗೆ ಉಪ್ಪಿನಾಂಶ ಇಳಿದು ತನ್ನ ಪೋಷಕಾಂಶ ಕಳೆದುಕೊಳ್ಳುತ್ತದೆ. ಹಾಗಾಗಿ ರೈತರು ನೀರಿನ ದುರ್ಭಳಕೆ ಬಿಟ್ಟು ಮಿತವಾಗಿ ನೀರು ಬಳಸಿ ಬೆಳೆ ಬೆಳೆಯಬೇಕು ಎಂದು ಸಲಹೆ ನೀಡಿದರು.

ಹೆಚ್ಚು ಗೊಬ್ಬರ ಹಾಕಿದರೆ ಹೆಚ್ಚು ಬೆಳೆ ಬರುತ್ತದೆ ಎಂಬ ತಪ್ಪು ಕಲ್ಪನೆಯಲ್ಲಿ ರೈತರಿದ್ದು ಹೆಚ್ಚು ಗೊಬ್ಬರ ಹಾಗೂ ಔಷಧಿ ಬಳಸಿದರೆ ಇಳುವರಿಯಲ್ಲಿ ಕಡಿಮೆಯಾಗುತ್ತದೆ. ಅಲ್ಲದೆ, ಇವುಗಳಲ್ಲಿನ ವಿಷ ನೀರಿನ ಮೂಲಕ ಭೂಮಿ ಸೇರಿ ನಂತರದ ಬೆಳೆಯಲ್ಲಿ ಸೇರಿಕೊಂಡು ವಿಷಯುಕ್ತ ಆಹಾರವಾಗಿ ನಮ್ಮ ಆರೋಗ್ಯಕ್ಕೇ ಮಾರಕವಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಗೆಬಾಗಿ ಶ್ರೀ ವರದರಾಜಸ್ವಾಮಿ ಕೆರೆ ಅಭಿವೃದ್ಧಿ ಸಂಘದ ಅಧ್ಯಕ್ಷ ದಯಾನಂದ್ ವಹಿಸಿದ್ದರು. ಕೃಷಿ ವಿಶ್ವವಿದ್ಯಾಲಯ ಪ್ರಾದ್ಯಾಪಕ ಕೇಶವರೆಡ್ಡಿ, ಕೃಷಿ ಅಧಿಕಾರಿ ಮಹಾಲಿಂಗಪ್ಪ, ಸಂಯೋಜಕ ಮಲ್ಲಿಕಾಜು೯ನ್, ತುಮಕೂರು ಕೃಷಿ ತಜ್ಞ ಶ್ರೀನಿವಾಸ ಮೂತಿ೯, ಹುಳಿಯಾರು ಕೃಷಿ ಇಲಾಖೆಯ ಶಿವಣ್ಣ, ಸೋರಲಮಾವು ಕರಿಯಪ್ಪ, ಗ್ರಾ.ಪಂ.ಸದಸ್ಯ ರೇವಣ್ಣ ಮತ್ತಿತರರು ಇದ್ದರು.

ಕ್ಷೇತ್ರ ತಜ್ಞ ಜಯಣ್ಣ ಅವರ ನಿರೂಪಣೆಯಲ್ಲಿ ಕಾಂತರಾಜು ಸ್ವಾಗತಿಸಿ, ಕೃಷಿ ತರಬೇತಿದಾರ ರಜ್ಹುಲ್ ಸಾಬ್ ಅನುಭವ ಹಂಚಿಕೊಂಡು, ಗಿರಿಯಪ್ಪ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...