ವಿಷಯಕ್ಕೆ ಹೋಗಿ

ವಿಶ್ವ ಬ್ಯಾಂಕ್ ನೆರವಿನಿಂದ ಜಿಲ್ಲೆಯಲ್ಲಿ 357 ಕೆರೆಗಳ ನಿರ್ವಹಣೆ : ಸೋಮಶೇಖರಪ್ಪ

ವಿಶ್ವ ಬ್ಯಾಂಕಿನ ಆಥಿ೯ಕ ನೆರವಿನಲ್ಲಿ ರಾಜ್ಯದಲ್ಲಿ 1336 ಕೆರೆಗಳಲ್ಲಿ ನೀರಿನ ಸಂಗ್ರಹಣೆ ಅಂತರ್ಜಲ ಅಭಿವೃದ್ಧಿಗೆಂದು ಮೊದಲನೇ ಹಂತವಾಗಿ 600 ಕೋಟಿ ವಿನಿಯೋಗಿಸಿದ್ದು ಎರಡನೇ ಹಂತದಲ್ಲಿ 300 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ತುಮಕೂರು ಜಿಲ್ಲೆಯ ಪಾವಗಡ, ಶಿರಾ, ಕೊರಟಗೆರೆ, ಮಧುಗಿರಿ ಹಾಗೂ ಚಿ.ನಾ.ಹಳ್ಳಿ ತಾಲೂಕುಗಳ 357 ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಕೆರೆ ನಿರ್ವಹಣೆ ಯೋಜನೆಯಲ್ಲಿ ನೀರು ನಿರ್ವಹಣೆ ಪ್ರಾತ್ಸಕ್ಷಿಕೆಯಲ್ಲಿ ಹೊಸ ತಳಿ ಬೆಳೆಗಳನ್ನು ಬೆಳೆಯಲಾಗುವ ಮೂಲಕ ನೀರಿನ ಸದ್ಭಳಕೆಗೆ ಒತ್ತು ನೀಡಲಾಗುತ್ತಿದೆ ಎಂದು ಜಲ ಸಂವರ್ಧನೆ ಯೋಜನಾ ಸಂಘದ ಜಿಲ್ಲಾ ಸಂಯೋಜಕ ಸೋಮಶೇಖರಪ್ಪ ಅವರು ಎಂದು ತಿಳಿಸಿದರು.

ಹುಳಿಯಾರು ಸಮೀಪದ ಸೀಗೆಬಾಗಿಯಲ್ಲಿ ಬೆಂಗಳೂರು ಜಲ ಸಂವರ್ಧನೆ ಯೋಜನಾ ಸಂಘ, ಕೃಷಿ ವಿಶ್ವವಿದ್ಯಾಲಯ, ಶ್ರೀ ವರದರಾಜಸ್ವಾಮಿ ಕೆರೆ ಅಭಿವೃದ್ಧಿ ಸಂಘದ ಸಂಯುಕ್ತ ಆಶ್ರಯದಲ್ಲಿ ಕನಾ೯ಟಕ ಸಮುದಾಯ ಆಧಾರಿತ ಕೆರೆ ನಿರ್ವಹಣೆ ಯೋಜನೆಯಲ್ಲಿ ತೆಗೆದುಕೊಳ್ಳಲಾದ ನೀರು ನಿರ್ವಹಣೆ ಪ್ರಾತ್ಸೆಕ್ಷಿಕೆ ಅಡಿಯಲ್ಲಿ ಏರ್ಪಡಿಸಿದ್ದ ಭತ್ತದ ಬೆಳೆಯ ಕ್ಷೇತ್ರೋತ್ಸವದಲ್ಲಿ ಅವರು ಮಾತನಾಡಿದರು.

ಈ ಯೋಜನೆಯಲ್ಲಿ ರೈತರ ಬೆಳೆಗಳ ಇಳುವರಿ ಸುದಾರಣೆ ಮಾಡಿ ಆಥಿ೯ಕ ಮಟ್ಟ ಉತ್ತಮಗೊಳಿಸುವ ಸಲುವಾಗಿ ನೊಂದಾಯಿತ ರೈತರಿಗೆ ನೀರು ನಿರ್ವಹಣೆ, ಆಹಾರ ಬೆಳೆ, ತೋಟಗಾರಿಕೆ ಬೆಳೆ, ಮೇವಿನ ಬೆಳೆಗಳ ಬಗ್ಗೆ ಪ್ರಾತ್ಸಕ್ಷಿಕೆ ನೀಡುವುದಲ್ಲದೆ ಸಮಗ್ರ ಕೃಷಿ ಪದ್ಧತಿ, ಸಮಗ್ರ ಪೀಡೆ ನಿರ್ವಹಣೆ ಬಗ್ಗೆ ತರಬೇತಿ, ಪರಿಸರ ತರಬೇತಿ, ಅಧ್ಯಯನ ಪ್ರವಾಸ, ಮಣ್ಣು ಪರೀಕ್ಷೆ ಹೀಗೆ ಹತ್ತು ಹಲವು ತಿಳುವಳಿಕೆ ನೀಡಲಾಗುತ್ತಿದೆ ಎಂದು ವಿವರಿಸಿದರು.

ಬೆಂಗಳೂರಿನ ನೀರು ತಜ್ಷ ಕೆ.ಆರ್.ಶೆಟ್ಟರ್ ಅವರು ಮಾತನಾಡಿ ಕೆರೆಯ ನೀರು ಪುಕ್ಕಟ್ಟೆ ಸಿಗುವುದರಿಂದ ರೈತರು ತಮ್ಮ ಬೆಳೆಗಳಿಗೆ ಅಗತ್ಯಕ್ಕಿಂತ ಹೆಚ್ಚು ನೀರನ್ನು ಬಳಕೆಮಾಡುತ್ತಿದ್ದಾರೆ. ಇದರಿಂದ ಕೆರೆಯಲ್ಲಿ ನೀರು ಖಾಲಿಯಾಗಿ ಅಂತರ್ಜಲ ಮಟ್ಟ ಕುಸಿತವಾಗುತ್ತದೆ. ಇಳುವರಿ ಪ್ರಮಾಣ ಕಡಿಮೆಯಾಗುತ್ತದೆ. ಅಲ್ಲದೆ, ಕೃಷಿ ಭೂಮಿಗೆ ಉಪ್ಪಿನಾಂಶ ಇಳಿದು ತನ್ನ ಪೋಷಕಾಂಶ ಕಳೆದುಕೊಳ್ಳುತ್ತದೆ. ಹಾಗಾಗಿ ರೈತರು ನೀರಿನ ದುರ್ಭಳಕೆ ಬಿಟ್ಟು ಮಿತವಾಗಿ ನೀರು ಬಳಸಿ ಬೆಳೆ ಬೆಳೆಯಬೇಕು ಎಂದು ಸಲಹೆ ನೀಡಿದರು.

ಹೆಚ್ಚು ಗೊಬ್ಬರ ಹಾಕಿದರೆ ಹೆಚ್ಚು ಬೆಳೆ ಬರುತ್ತದೆ ಎಂಬ ತಪ್ಪು ಕಲ್ಪನೆಯಲ್ಲಿ ರೈತರಿದ್ದು ಹೆಚ್ಚು ಗೊಬ್ಬರ ಹಾಗೂ ಔಷಧಿ ಬಳಸಿದರೆ ಇಳುವರಿಯಲ್ಲಿ ಕಡಿಮೆಯಾಗುತ್ತದೆ. ಅಲ್ಲದೆ, ಇವುಗಳಲ್ಲಿನ ವಿಷ ನೀರಿನ ಮೂಲಕ ಭೂಮಿ ಸೇರಿ ನಂತರದ ಬೆಳೆಯಲ್ಲಿ ಸೇರಿಕೊಂಡು ವಿಷಯುಕ್ತ ಆಹಾರವಾಗಿ ನಮ್ಮ ಆರೋಗ್ಯಕ್ಕೇ ಮಾರಕವಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಗೆಬಾಗಿ ಶ್ರೀ ವರದರಾಜಸ್ವಾಮಿ ಕೆರೆ ಅಭಿವೃದ್ಧಿ ಸಂಘದ ಅಧ್ಯಕ್ಷ ದಯಾನಂದ್ ವಹಿಸಿದ್ದರು. ಕೃಷಿ ವಿಶ್ವವಿದ್ಯಾಲಯ ಪ್ರಾದ್ಯಾಪಕ ಕೇಶವರೆಡ್ಡಿ, ಕೃಷಿ ಅಧಿಕಾರಿ ಮಹಾಲಿಂಗಪ್ಪ, ಸಂಯೋಜಕ ಮಲ್ಲಿಕಾಜು೯ನ್, ತುಮಕೂರು ಕೃಷಿ ತಜ್ಞ ಶ್ರೀನಿವಾಸ ಮೂತಿ೯, ಹುಳಿಯಾರು ಕೃಷಿ ಇಲಾಖೆಯ ಶಿವಣ್ಣ, ಸೋರಲಮಾವು ಕರಿಯಪ್ಪ, ಗ್ರಾ.ಪಂ.ಸದಸ್ಯ ರೇವಣ್ಣ ಮತ್ತಿತರರು ಇದ್ದರು.

ಕ್ಷೇತ್ರ ತಜ್ಞ ಜಯಣ್ಣ ಅವರ ನಿರೂಪಣೆಯಲ್ಲಿ ಕಾಂತರಾಜು ಸ್ವಾಗತಿಸಿ, ಕೃಷಿ ತರಬೇತಿದಾರ ರಜ್ಹುಲ್ ಸಾಬ್ ಅನುಭವ ಹಂಚಿಕೊಂಡು, ಗಿರಿಯಪ್ಪ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...