ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಬೀದಿದೀಪವೀಗ ಚುನಾವಣ ವಿಚಾರ

(ಹುಳಿಯಾರಿನ 5 ನೇ ಬ್ಲಾಕ್ನಲ್ಲಿ ಮತದಾರರ ಓಲೈಕೆಗಾಗಿ ಕಂಬಗಳಿಗೆ ದೀಪ ಅಳವಡಿಸುತ್ತಿರುವುದು)

ಮತದಾರರನ್ನು ಓಲೈಸಿಕೊಳ್ಳವ ಸಲುವಾಗಿ ಚುನಾವಣಾ ಚಟುವಟಿಕೆಗಳು ಈಗಾಗಲೇ ಆರಂಭವಾಗಿದ್ದು ಹುಳಿಯಾರಿನ 5 ನೇ ಬ್ಲಾಕ್ನಲ್ಲಿ ರಾಜಾರೋಷವಾಗಿ ಬೀದಿದೀಪಗಳನ್ನು ಅಳವಡಿಸಿರುವದು ತಕರಾರಿನ ವಿಚಾರವಾಗಿದೆ.

ಈ ಬ್ಲಾಕಿನಲ್ಲಿ ಒಟ್ಟು 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಇದರಲ್ಲಿ 2 ಜನರಲ್ ಸ್ಥಾನಗಳು, 1 ಜನರಲ್ ಮಹಿಳೆ, 1 ಎಸ್ಸಿ ಮಹಿಳೆ ಸ್ಥಾನಗಳಿಗೆ ಹಂಚಿಕೆಯಾಗಿದ್ದು ಇದರಲ್ಲಿ ಜನರಲ್ ಸ್ಥಾನಗಳಿಗೆ ಮಾಜಿ ಸದಸ್ಯರುಗಳಾದ ಎಚ್.ಎಂ.ಅಶೋಕ್ ಹಾಗೂ ಮಾಜಿ ಉಪಾಧ್ಯಕ್ಷ ಸೈಯದ್ ಜಹೀರ್ ಅವರು ಸ್ಫರ್ಧಿಸಿರುವುದರಿಂದ ಮಹತ್ವ ಪಡೆದುಕೊಂಡಿದೆ.

ಹಾಗಾಗಿ ಶತಾಯ ಗತಾಯ ಈ ಚುನಾವಣೆಗೆ ಗೆಲ್ಲಲೇ ಬೇಕೆಂದು ಮಾಜಿ ಉಪಾಧ್ಯಕ್ಷ ಸೈಯದ್ ಜಹೀರ್ ಅವರು ಅಡ್ಡದಾರಿ ತುಳಿದಿದ್ದು ರಾಜಾರೋಷವಾಗಿ ತಮ್ಮ ಬ್ಲಾಕಿನ ಕಂಬಗಳಿಗೆ ದೀಪಗಳನ್ನು ಹಾಕಿಸುವ ಮೂಲಕ ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ಮತದಾರರಿಗೆ ಯಾವುದೇ ಆಮಿಷ ಹಾಗೂ ಸಹಾಯ, ಸೌಲಭ್ಯಗಳನ್ನು ನೀಡಬಾರದು ಎಂದು ಆಯೋಗದ ಆದೇಶವನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆಂಬ ಆರೋಪ ಮಾಡಲಾಗಿದೆ.

ಕಳೆದ ಎರಡುವರೆ ವರ್ಷ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ತಮ್ಮ ಬ್ಲಾಕಿನ ಮತದಾರರ ಸೇವೆ ಮಾಡುವ ವಿಫುಲ ಅವಕಾಶ ವಿದ್ದರೂ ಸಹ ಆಗ ಮತದಾರರನ್ನು ಕಡೆಗಣಿಸಿ ಬೀದಿದೀಪಗಳನ್ನು ಅಳವಡಿಸದೆ ಕತ್ತಲೆಯಲ್ಲಿ ಹಾಗೂ ಸಮರ್ಪಕವಾಗಿ ನೀರು ಸರಬರಾಜು ಮಾಡದೆ ನೀರಿನ ಸಮಸ್ಯೆ ಸೃಷ್ಟಿಸಿ ಈಗ ಮತಗಳಿಗಾಗಿ ತಮ್ಮ ಸ್ವಂತ ಹಣದಲ್ಲಿ ಬೀದಿದೀಪಗಳನ್ನು ಅಳವಡಿಸಿ ಹಾಗೂ ಪಂಚಾಯ್ತಿ ನೀರುಘಂಟಿಗಳನ್ನು ದುರ್ಬಳಕೆ ಮಾಡಿಕೊಂಡು ನೀರು ಬಿಡಿಸುತ್ತಿದ್ದಾರೆನ್ನುವ ವಿಚಾರ ಮತದಾರರ ನಗೆಪಾಟಲಿಗೀಡು ಮಾಡಿದೆಯಲ್ಲದೆ ಪ್ರತಿಸ್ಪರ್ಧಿಗಳ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.

ಹಾಲಿ ಸ್ಪರ್ಧಿಗಳಾದ ಅಶೋಕ್ ಬಾಬು ಹಾಗೂ ಜಾವೀದ್ ಅವರು ಈ ಜಹೀರ್ ಅವರು ಮತದಾರರ ಓಲೈಕೆಗೆ ಹಿಡಿದಿರುವ ವಾಮಮಾರ್ಗವನ್ನು ಬೆಳಕಿಗೆ ತಂದಿದ್ದು ಮಾಧ್ಯಮದವರು ದೀಪ ಅಳವಡಿಸುತ್ತಿರುವ ಪೋಟೊ ಸೆರೆ ಹಿಡಿಯಲು ತೆರಳಿದಾಗ ಸ್ವತಃ ಮುಂದೆ ನಿಂತ್ತು ದೀಪ ಅಳವಡಿಸುತ್ತಿದ್ದ ಜಹೀರ್ ಅವರು ಬೈಕ್ ಹತ್ತಿ ಪರಾರಿಯಾಗಿದ್ದು ದೀಪ ಅಳವಡಿಸುತ್ತಿದ್ದವರನ್ನು ಪ್ರಶ್ನಿಸಿದಾಗ ಜಹೀರ್ ಅವರೇ ಹಣ ಕೊಟ್ಟು ದೀಪ ಅಳವಡಿಸುತ್ತಿದ್ದಾರೆ ಎಂದು ತಿಳಿಸಿದರು.

ಬೀದಿದೀಪ ಅಳವಡಿಸಿದ್ದು ಸಂಘದ ಹಣದಲ್ಲಿ: ಸ್ಪಷ್ಟನೆ
----------------------------------
ಆದರೆ ಈ ವಿಚಾರ ಪತ್ರಿಕೆಯಲ್ಲಿ ಪ್ರಕಟವಾದ ನಂತರ ನಡೆದದ್ದೆ ಬೇರೆ.ಆ ಬಡಾವಣೆಯ ಸುಮಾರು ೧೫೦ ಕ್ಕೂ ಹೆಚ್ಚು ಮಂದಿ ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಇದನ್ನು ಅಲ್ಲಗೆಳೆಯುವ ಸಲುವಾಗಿ ಪತ್ರಿಕೆಯ ವರದಿಗಾರರನ್ನು ಕರೆಸಿ ಇದಕ್ಕೆ ಸ್ಪಷ್ಟೀಕರಣ ನೀಡಿದರು.


ಹುಳಿಯಾರು ಗ್ರಾಮ ಪಂಚಾಯ್ತಿಯ ಐದನೇ ಬ್ಲಾಕ್ನಲ್ಲಿ ಬೀದಿದೀಪಗಳನ್ನು ಅಳವಡಿಸುತ್ತಿದ್ದುದು ಸ್ವಸಹಾಯ ಸಂಘದ ಹಣದಲ್ಲಿಯೇ ವಿನಃ ಮಾಜಿ ಉಪಾಧ್ಯಕ್ಷ ಸೈಯದ್ ಜಹೀರ್ ಅವರು ಮತದಾರರನ್ನು ಓಲೈಸಿಕೊಳ್ಳವ ಸಲುವಾಗಿ ಅಳವಡಿಸಿಲ್ಲ ಎಂದು ಕೆಜಿಎನ್ ಸ್ವಸಹಾಯ ಸಂಘದ ಅಧ್ಯಕ್ಷ ದಾದಾಪೀರ್, ಉಪಾಧ್ಯಕ್ಷ ಬಾಬು ಹಾಗೂ ಬಿಸ್ಮಿಲ್ಲಾ ಸ್ವಸಹಾಯ ಸಂಘದ ಅಧ್ಯಕ್ಷೆ ಶಮೀಮ್ ಉನ್ನೀಸ, ಉಪಾಧ್ಯಕ್ಷೆ ಬೀಬೀಜಾನ್ ಅವರ ನೇತೃತ್ವದಲ್ಲಿ ಸರಿಸುಮಾರು ಐವತ್ತಕ್ಕೂ ಹೆಚ್ಚು ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದರು.

ತಮ್ಮ 5 ನೇ ಬ್ಲಾಕ್ನ ಮಾರುತಿ ನಗರದಲ್ಲಿ ಕಳೆದ ಎರಡು ತಿಂಗಳಿಂದ ಬೀದಿದೀಪಗಳಿಲ್ಲ. 1 ತಿಂಗಳಿಂದ ನಲ್ಲಿಗಳಲ್ಲಿ ನೀರು ಬರುತ್ತಿಲ್ಲ. ಈ ಬಗ್ಗೆ ಪಂಚಾಯ್ತಿಗೆ ಎಷ್ಟು ಬಾರಿ ದೂರು ಸಲ್ಲಿಸಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಇಲ್ಲಿ ಹೇರಳವಾಗಿ ಗಿಡಗಂಟೆಗಳು ಬೆಳೆದಿದ್ದು ಲೈಟ್ ಇಲ್ಲದ ಕಾರಣ ವಿಷಜಂತುಗಳ ಕಾಟದಿಂದ ರಾತ್ರಿವೇಳೆ ಮನೆಯಿಂದ ಹೊರಬರುವುದಕ್ಕೆ ಭಯವಾಗುತ್ತಿದೆ. ಜೊತೆಗೆ ಈ ಬ್ಲಾಕಿನಲ್ಲಿ ಕೂಲಿ ನಾಲಿ ಮಾಡಿಕೊಂಡು ಜೀವನ ನಿರ್ವಹಿಸುವವರೇ ಹೆಚ್ಚಾಗಿದ್ದು ದುಡ್ಡುಕೊಟ್ಟು ನೀರು ಖರೀದಿಸುವುದು ದುಸ್ಥರವಾಗಿದೆ.

ಹಾಗಾಗಿ ಸಂಘದ ಸದಸ್ಯರೇ ಹತ್ತತ್ತು ರೂಗಳನ್ನು ಕೈಯಿಂದ ಹಾಕಿ ಬೀದಿದೀಪಗಳನ್ನು ಕಟ್ಟಿಸಿಸಿದ್ದೇವೆ ಹಾಗೂ ಇಲ್ಲೊಬ್ಬರ ಮನೆಯಲ್ಲಿ ದೇವರ ಕೆಲಸವಿದ್ದ ಕಾರಣ ತಾವೇ 5 ನಿಮಿಷ ನೀರು ಬಿಡಿ ಎಂದು ಕೇಳಿ ಬಿಡಿಸಿಕೊಂಡಿದ್ದೇವೆಯೇ ವಿನಃ ಈ ಜನಪರ ಕಾರ್ಯದಲ್ಲಿ ಹಾಲಿ ಅಭ್ಯರ್ಥಿ ಹಾಗೂ ಮಾಜಿ ಉಪಾಧ್ಯಕ್ಷ ಜಹೀರ್ ಸಾಬ್ ಕೈವಾಡ ಖಂಡಿತಾ ಇರುವುದಿಲ್ಲ ಎಂದರು.

ಅವರ ಜನಪ್ರಿಯತೆ ಹಾಗೂ ಪ್ರಸಕ್ತ ಚುನಾವಣೆಯಲ್ಲಿ ಮತದಾರರು ಇವರ ಪರ ನಿಂತಿರುವುದನ್ನು ಸಹಿಸಲಾಗದೆ ಹಾಗೂ ಸೋಲಿನ ಭೀತಿಯಿಂದ ಕಂಗೆಟ್ಟಿರುವ ಪ್ರತಿಸ್ಪರ್ಧಿ ಅಶೋಕ್ ಬಾಬು ಅವರು ಜಹೀರ್ ಅವರು ತಮ್ಮ ಸ್ವಂತ ಹಣದಲ್ಲಿ ಬೀದಿದೀಪಗಳನ್ನು ಕಟ್ಟಿಸುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದು ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸುವುದಾಗಿ ಇಬ್ರಾಹಿಂಸಾಬ್, ಖಲಂದರ್ ಸಾಬ್, ಹಜರತ್ ಜಾನ್, ಅನ್ಸರ್, ನಯಾಝ್, ಜಾಫರ್, ಪಾತೀಮಾಭಿ, ಷಹಾಜಾದಿಬೀ, ನಗೀನಾಬಾನು, ಅಮ್ರೀನ್ತಾಜ್, ಜಾಫರ್ ಸಾಧಿಕ್ ಮುಂತಾದವರು ಎಚ್ಚರಿಕೆ ನೀಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.