ವಿಷಯಕ್ಕೆ ಹೋಗಿ

ಶ್ರೀದೇವಿ ಭವನ್ ನ ಬೋಜರಾಜ್ ಗೆ ಕಾಯಕರತ್ನ ಪ್ರಶಸ್ತಿ


ಹುಳಿಯಾರು ಶ್ರೀದೇವಿ ಭವನ್ ಹೋಟಲ್ ಮಾಲಿಕ ಬೋಜರಾಜ್ ಅವರಿಗೆ ಕಾಯಕರತ್ನ ಬಿರುದು ನೀಡಿ ಸನ್ಮಾನಿಸುತ್ತಿರುವುದು.
ಕಳೆದ 4 ದಶಕಗಳಿಂದ ಹೋಟೆಲ್ ಉದ್ಯಮದಲ್ಲಿ ತೊಡಗಿಕೊಂಡಿರುವ ಇಲ್ಲಿನ ರಾಂಗೋಪಾಲ್ ಸರ್ಕಲ್ ಬಳಿಯ ಶ್ರೀದೇವಿ ಭವನ್ ಮಾಲೀಕ ಕೆ.ಬೋಜರಾಜ್ ಅವರಿಗೆ ಹುಳಿಯಾರು ನಾಗರೀಕರ ಪರವಾಗಿ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಪತ್ರಕರ್ತರ ಸಂಘವು ಇತ್ತೀಚೆಗೆ ಕಾಯಕರತ್ನ ಬಿರುದು ನೀಡಿ ಸನ್ಮಾನಿಸಿತು.

ಪರಿಚಯ: ಸದಾ ಬಿಳಿ ಬನಿಯನ್, ನೀಲಿ ಅಥವಾ ಬಿಳಿ ಪಂಚೆ ತೊಟ್ಟು ಮುಂಜಾನೆಯಿಂದ ಸಂಜೆಯವರೆಗೂ ಜಾಗ ಬಿಟ್ಟು ಕದಲದೆ ಹೋಟೆಲ್ ಕ್ಯಾಷಿಯರ್ ಛೇರ್ ನಲ್ಲಿ ಕಾಣಸಿಗುವ ಇವರು ಆಗಾಗ ಈರುಳ್ಳಿ, ಬೈಟು ಟೀ, ಜಾಮೂನ್, ಕಾರ ಎಂದು ಕೂಗಿ ಸುಮ್ಮನಾಗುವ ದೃಶ್ಯ ಮಾಮೂಲು.ಹುಳಿಯಾರಿನ ತಿಂಡಿ ಪ್ರಿಯರಿಗೆಲ್ಲ ಚಿರಪರಿಚಿತರಾಗಿರುವ ಇವರ ಬಗ್ಗೆ ಅರಿಯದವರ್ಯಾರು ಇಲ್ಲ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ಸಮೀಪದ ಅಶ್ವಥ್ ಪುರ ಗ್ರಾಮದ ಇವರು 4 ನೇ ತರಗತಿಗೆ ವಿದ್ಯಾಭ್ಯಾಸಕ್ಕೆ ತಿಲಾಂಜಲಿ ಇಟ್ಟು ಜೀವನ ನಿರ್ವಹಣೆಗಾಗಿ ಚಿಕ್ಕವಯಸ್ಸಿನಿಂದಲೇ ಹೋಟೆಲ್ ವೃತ್ತಿ ಆಯ್ದುಕೊಂಡು ದಾವಣಗೆರೆ, ಚಿತ್ರದುರ್ಗದಲ್ಲಿ ಕಾಯಕ ಆರಂಭಿದರು.ನಂತರ ಹುಳಿಯಾರಿನ ಪೇಟೆ ಬೀದಿಯಲ್ಲಿ ಸಾಹುಕಾರ್ ಕೆ.ಸುಬ್ಬರಾವ್ ಹೋಟೆಲ್ಗೆ ಅನಿರೀಕ್ಷಿತವಾಗಿ ಸೇರಿ ಕಾಲಕ್ರಮೇಣ ಇದೇ ಹೋಟೆಲ್ ಮಾಲೀಕರಾದ ಇವರು ಬರೋಬ್ಬರಿ 4 ದಶಕಗಳಿಂದಲೂ ಹೋಟೆಲ್ ಅನ್ನೇ ನಂಬಿ ಬದುಕು ಕಟ್ಟುತ್ತಿದ್ದಾರೆ. ಇಷ್ಟು ಸುಧೀರ್ಘ ವರ್ಷದಿಂದಲೂ ಉದ್ದಿಮೆಯನ್ನೂ ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಮೆದು ಸ್ವಭಾವದ ಇವರು ಎಂದಿಗೂ ಗ್ರಾಹಕರೊಂದಿಗೆ ಜಗಳವಾಡುವುದಿರಲಿ ಗಟ್ಟಿಯಾಗಿಯೂ ಸಹ ಮಾತನಾಡುವುದಿಲ್ಲ. ಅನೇಕ ಎಡರು-ತೊಡರುಗಳ ಮಧ್ಯೆಯೂ ಎದೆಗುಂದದೆ ಕಷ್ಟಪಟ್ಟು ಹೋಟೆಲ್ ನಡೆಸಿಕೊಂಡು ಬಂದಿರುವ ಇವರು ಪೇಟೆ ಹೋಟೆಲ್ ಅನ್ನು ಶ್ರೀದೇವಿ ಭವನ್ ಆಗಿ ಬದಲಿಸಿದ್ದರೂ ಸಹ ಇವತ್ತಿಗೂ ಈರುಳ್ಳಿದೋಸೆ, ಜಾಮೂನ್, ಕಾರದ ರುಚಿ ಹಾಗೂ ಗುಣಮಟ್ಟವನ್ನು ಮುಂಚಿನಂತೆಯೆ ಕಾಯ್ದುಕೊಂಡಿದ್ದಾರೆ.

ಶುಚಿ ಹಾಗೂ ರುಚಿಯೊಂದಿಗೆ ಈ ಭಾಗದ ಜನರ ಹಸಿವು ನೀಗಿಸುತ್ತಿರುವ ಇವರ ಕಾಯಕ ನಿಷ್ಠೆ, ಸ್ವಬಾವ ಹಾಗೂ ವ್ಯಕ್ತಿತ್ವ ಗುರುತಿಸಿ ಹುಳಿಯಾರು ನಾಗರೀಕರ ಪರವಾಗಿ ರೈತ ಸಂಘ ,ಹಸಿರು ಸೇನೆ ಮತ್ತು ಪತ್ರಕರ್ತರ ಸಂಘವು ಇತ್ತೀಚೆಗೆ ನೀಡಿದ ಕಾಯಕರತ್ನ ಬಿರುದು ನೀಡಿ ಸನ್ಮಾನಿಸಿತು.

ರಂಗಕರ್ಮಿ ಅನಂತರಾಮಯ್ಯ, ಕೆನರಾಬ್ಯಾಂಕ್ ಮ್ಯಾನೇಜರ್ ಸತೀಶ್, ಸಾಹಿತಿ ನರಸಿಂಹಮೂರ್ತಿ, ಶ್ಯಾನಬೋಗ್ ರಾಜಣ್ಣ, ಕೆಂಕೆರೆ ಸತೀಶ್, ಸೈಯದ್ ಜಲಾಲ್, ಶ್ರೀಮತಿ ಚಂದ್ರಕಲಾ ಸತೀಶ್, ಕೆ.ಪಿ.ಮಲ್ಲೇಶ್, ಡಿ.ಆರ್.ನರೇಂದ್ರಬಾಬು, ರಂಗನಕೆರೆ ಮಹೇಶ್ ಸೇರಿದಂತೆ ಅಪಾರ ಜನಸ್ತೊಮ ಈ ಅಪರೂಪದ ಸನ್ಮಾನಕ್ಕೆ ಸಾಕ್ಷಿಯಾಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.