ವಿಷಯಕ್ಕೆ ಹೋಗಿ

ಹುಳಿಯಾರು ಗ್ರಾ.ಪಂ.ಚುನಾವಣೆ:ಕಣದಲ್ಲಿದ್ದ ಸಂಬಂಧಿಗಳ ಪೈಕಿ ಮೂವರ ಗೆಲುವು

(ಫೋಟೊ ವಿವರ:ಹುಳಿಯಾರು ಗ್ರಾ.ಪಂ.ಚುನಾವಣೆಯಲ್ಲಿ ರಕ್ತ ಸಂಬಂಧಿಕರ ಸ್ಫಧೆ೯ಯಲ್ಲಿ ಜಯಗಳಿಸಿರುವ ದ್ರಾಕ್ಷಾಯಿಣಮ್ಮ, ಸಿದ್ಧಗಂಗಮ್ಮ, ಪುಟ್ಟರಾಜು)

ಹುಳಿಯಾರು ಗ್ರಾ.ಪಂ.ಚುನಾವಣೆ:ಕಣದಲ್ಲಿದ್ದ ಸಂಬಂಧಿಗಳ ಪೈಕಿ ಮೂವರ ಗೆಲುವು
----------------------------------------------

ಈ ಬಾರಿಯ ಹುಳಿಯಾರು ಗ್ರಾಪಂ ಚುನಾವಣಾ ಫಲಿತಾಂಶದಲ್ಲಿ ಅನೇಕ ಸ್ವಾರಸ್ಯಗಳಿದ್ದು ಗ್ರಾ.ಪಂ.ಚುನಾವಣೆಯ ಕಣಕ್ಕೆ ಐದು ಕುಟುಂಬದಿಂದ ಇಬ್ಬಿಬ್ಬರು ರಕ್ತ ಸಂಬಂಧಿಗಳಂತೆ ಒಟ್ಟು 10ಮಂದಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದು ಅವರಲ್ಲಿ ಮೂರು ಮಂದಿಗೆ ಮಾತ್ರ ಗ್ರಾ.ಪಂ.ಸದಸ್ಯರಾಗುವ ಅದೃಷ್ಟ ಒಲಿದಿರುವುದು ವಿಶೇಷವಾಗಿದೆ.


ಇದುವರೆಗೂ ಗ್ರಾ.ಪಂ.ಅಧ್ಯಕ್ಷರಾಗಿದ್ದ ಶ್ರೀಮತಿ ಮಂಜಮ್ಮ ಅವರು ಈ ಬಾರಿ 8 ನೇ ಬ್ಲಾಕ್ ನಿಂದ ಚುನಾವಣೆಗೆ ಸ್ಪಧಿ೯ಸಿದ್ದರಲ್ಲದೆ ತಮ್ಮ ಪತಿ ರಾಜಣ್ಣ ಅವರನ್ನು ಸಹ 7 ನೇ ಬ್ಲಾಕ್ ನಿಂದ ಚುನಾವಣೆಗೆ ನಿಲ್ಲಿಸಿ ಮತ್ತೊಂದು ಅವಧಿಗಾಗಿ ಅದೃಷ್ಠ ಪರಿಕ್ಷೆಗಿಳಿದಿದ್ದರು. ಮತದಾರರ ಅವಕೃಪೆಯಿಂದಾಗಿ ಠೇವಣಿ ಕಳೆದುಕೊಂಡಿದ್ದು ಮಾತ್ರ ವಿಪರ್ಯಾಸ.

ಕಳೆದ ಸಾಲಿನ ಸದಸ್ಯ ಮೀಸೆ ರಂಗಪ್ಪ ಅವರು ತಮ್ಮ ಹಳೆಯ ಕ್ಷೇತ್ರ 6 ಬ್ಲಾಕಿನಲ್ಲಿ ಸ್ಪಧಿ೯ಸುವ ಜೊತೆಗೆ ತಮ್ಮ ಪತ್ನಿ ಕಮಲಮ್ಮ ಅವರನ್ನು 9 ಬ್ಲಾಕಿನಿಂದ ಸ್ಪಧೆ೯ಗೆ ಇಳಿಸಿ ಗೆಲುವಿಗಾಗಿ ಸಾಕಷ್ಟು ಪರಿಶ್ರಮಪಟ್ಟರಾದರೂ ಮತದಾರ ಮಾತ್ರ ರಂಗಪ್ಪನಿಗೆ ಹೆಚ್ಚಿನ ಅಂತರ ಹಾಗೂ ಆತನ ಪತ್ನಿಗೆ ತೀರಾ ಕಡಿಮೆ ಅಂತರದಿಂದ ಸೋಲಿನ ಕಹಿ ಉಣ್ಣುವಂತೆ ಮಾಡಿದ್ದಾನೆ.

ಮತದಾರರಿಗೆ ತಮ್ಮ ಬಗ್ಗೆ ಒಲವಿದ್ದು ತಮ್ಮ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಭಾರಿ ಆತ್ಮವಿಶ್ವಾಸ ಹೊಂದಿದ್ದ ಕಳೆದ ಸಾಲಿನ ಸದಸ್ಯ ಬಡ್ಡಿಪುಟ್ಟರಾಜು ತಾವು ಹಿಂದೆ ಗೆದಿದ್ದ 1 ಬ್ಲಾಕಿನಿಂದ ತಮ್ಮ ಅತ್ತಿಗೆ ಡಿ.ಸಿದ್ದಗಂಗಮ್ಮ ಅವರನ್ನು ಚುನಾವಣಾ ಕಣಕ್ಕಿಳಿಸಿ ತಾವು ಕೂಡ 8 ನೇ ಬ್ಲಾಕಿನಿಂದ ಸ್ಫಧಿ೯ಸಿ ಭಾರಿ ಅಂತರದಿಂದ ಗೆದ್ದರಲ್ಲದೆ ಹಳೆಯ ಕ್ಷೇತ್ರದಲ್ಲಿ ಹಿಂದೆ ತಾವು ಮಾಡಿದ ಸೇವೆಯ ಶ್ರೀರಕ್ಷೆಯಿಂದಾಗಿ ಅತ್ತಿಗೆಯನ್ನೂ ಸಹ ಗೆಲ್ಲಿಸಿಕೊಂಡಿದ್ದು ನಿರೀಕ್ಷಿತವಾಗಿತ್ತು.

ಮಾಜಿ ಜಿ.ಪಂ.ಸದಸ್ಯ ಶಿವರಾಂ ಅವರು ತಮ್ಮಿಬ್ಬರು ಮಕ್ಕಳನ್ನು ಜನಸೇವೆಗಿಳಿಸುವ ನಿಟ್ಟಿನಲ್ಲಿ ನಿರಂಜನಮೂತಿ೯ಯನ್ನು 10 ನೇ ಬ್ಲಾಕಿನಿಂದಲೂ, ಪ್ರದೀಪ್ ಅವರನ್ನು 3 ನೇ ಬ್ಲಾಕಿನಿಂದಲೂ ಚುನಾವಣೆ ಕಣಕ್ಕಿಳಿಸಿದ್ದರು.ಅಲ್ಲದೆ ಇಬ್ಬರ ಪರವಾಗಿ ತಾವೇ ಪ್ರಚಾರದ ನೇತೃತ್ವ ವಹಿಸಿ ಚುನಾವಣೆ ಎದುರಿಸಿದರಾದರೂ ಸಹ ನಿರಂಜನ ಮೂತಿ೯ ಠೇವಣಿ ಕಳೆದುಕೊಂಡರೆ, ಮತ್ತೊಬ್ಬ ಮಗ ಪ್ರದೀಪ್ ಸಾಮಾನ್ಯ ಕ್ಷೇತ್ರದಲ್ಲಿ ಹೆಚ್ಚು ಮತ ಪಡೆದರಾದರೂ ಬಿಸಿಎಂನ 2 ನೇ ಅಭ್ಯಥಿ೯ ಇವರಿಗಿಂತ ಕೆಲವೇ ಕೆಲವು ಮತ ಹೆಚ್ಚಿಗೆ ಪಡೆದ ಪ್ರಯುಕ್ತ ಚುನಾವಣಾ ನಿಯಮಾನುಸಾರ ಇವರ ಕೊರಳಿಗೆ ಬೀಳಬೇಕಿದ್ದ ಜಯದಮಾಲೆ ಬಿಸಿಎಂ ಅಭ್ಯಥಿ೯ ಪಾಲಾಗಿ ಪರಾಭವಗೊಳ್ಳುವಂತಾಯಿತು.

ವೃತ್ತಿಸಂಬಂಧದಿಂದ ಅನೇಕ ಬಾರಿ ಗ್ರಾಪಂಗೆ ಎಡೆತಾಕಿದ್ದ ಸ್ಟುಡಿಯೋ ದುರ್ಗರಾಜು ಅಲ್ಲಿನ ವ್ಯವಸ್ಥೆಯಿಂದ ಆಕಷಿ೯ತರಾಗಿ ಒಂದು ಕೈ ನೋಡೇಬಿಡುವ ಎಂದು ಇದೇ ಪ್ರಥಮ ಬಾರಿಗೆ ತಾವು 10 ನೇ ಬ್ಲಾಕಿನಿಂದ ಕಣಕ್ಕಿಳಿದರೆ ಅವರ ಅತ್ತಿಗೆ ದ್ರಾಕ್ಷಾಯಿಣಮ್ಮ ಡಾ.ಭೈರೇಶ್ ಅವರು 1 ನೇ ಬ್ಲಾಕಿನಿಂದ ಕಣಕ್ಕಿಳಿದು ಚುನಾಔಣೆ ಎದುರಿಸಿದರು.ಆದರೆ ಮತದಾರರು ಅತ್ತಿಗೆ ದ್ರಾಕ್ಷಾಯಿಣಮ್ಮ ಅವರನ್ನು ಗೆಲ್ಲಿಸಿ ದುರ್ಗರಾಜು ಅವರನ್ನು ಸೋಲಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...