ವಿಷಯಕ್ಕೆ ಹೋಗಿ

ಸರಳ ವಿವಾಹ ಪಾಲಿಸಲು ಮುಂದಾಗಿ : ಶಾಸಕ ಸಿಬಿಎಸ್

ಸರಳ ವಿವಾಹವನ್ನು ಪ್ರೋತ್ಸಾಹಿಸುವುದು ಹಾಗೂ ಆಚರಿಸುವುದನ್ನು ಕೇವಲ ಭಾಷಣಗಳಲ್ಲಿ ಮಾತ್ರ ಸೀಮಿತವಾಗಿರಿಸದೆ ಇತರ ಬಡ ಕುಟುಂಬದ ಜೋಡಿಗಳೊಂದಿಗೆ ತನ್ನ ಮಕ್ಕಳಿಗೂ ಸಹ ಸರಳ ವಿವಾಹ ಮಾಡುವ ಮೂಲಕ ಪಾಲಿಸಲು ಮುಂದಾಗುವುದಾಗಿ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಘೋಷಿಸಿದರು.

ಹುಳಿಯಾರು ಸಮೀಪದ ಹರೇನಹಳ್ಳಿ ಗೇಟ್ ಶ್ರೀ ದುಗಾ೯ ಗ್ರಾಮೀಣ ಮಹಿಳಾ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆ ನಿರುವಗಲ್ ಮಜುರೆ ಹುಲಿಕಲ್ ಬೆಟ್ಟದ ಶ್ರೀ ದುಗಾ೯ಬ ದೇವಿ ಪುಣ್ಯಕ್ಷೇತ್ರದಲ್ಲಿ ಶನಿವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಿಕ್ಕನಾಯಕನಹಳ್ಳಿ ತಾಲೂಕಿನ ಹಲವು ಸಂಘ-ಸಂಸ್ಥೆಗಳು ದಾನಿಗಳ ಸಹಾಯ ಪಡೆದು ಪ್ರತಿವರ್ಷ ಹತ್ತಾರು ಸಾಮೂಹಿಕ ವಿವಾಹ ಮಹೋತ್ಸವವನ್ನು ಏರ್ಪಡಿಸಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾಗುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು ಮುಂದಿನ ವರ್ಷ ಇಂತಹ ಸಂಘ ಸಂಸ್ಥೆಗಳನ್ನು ಒಟ್ಟುಗೂಡಿಸಿ ತಾಲೂಕು ಕೇಂದ್ರದಲ್ಲಿ ಒಂದೇ ದಿನ ನೂರಾರು ಜೋಡಿಗಳ ಸಾಮೂಹಿಕ ವಿವಾಹ ಮಾಡಲು ಮುಂದಾಗುವುದಾಗಿ ತಿಳಿಸಿದರು.

ಸತಿ ಪತಿಗಳು ಕಷ್ಟ-ಸುಖ ಹಾಗೂ ನೋವು ನಲಿವುಗಳನ್ನು ಸಮಾನವಾಗಿ ಸ್ವೀಕರಿಸಿ ಸಂಸಾರ ನಡೆಸಿದಾಗ ಮಾತ್ರ ಯಶಸ್ವಿ ಹಾಗೂ ಸುಖ ಜೀವನ ನಡೆಸಬಹುದಾಗಿದೆ ಎಂದು ಕಿವಿ ಮಾತು ಹೇಳಿದ ಶಾಸಕರು ಸರಳ ವಿವಾಹವಾದ ಪ್ರತಿಯೊಬ್ಬರೂ ಇತರರನ್ನು ಸರಳ ವಿವಾಹದೆಡೆ ಒಲವು ತೋರುವಂತೆ ಮನಸ್ಸು ಪರಿವತಿ೯ಸಬೇಕು ಎಂದು ಕರೆ ನೀಡಿದರು.

ಜಿ.ಪಂ.ಮಾಜಿ ಅಧ್ಯಕ್ಷ ಜಿ.ರಘುನಾಥ್, ಅಖಿಲ ಕನಾ೯ಟಕ ಭೋವಿ ಮಹಾಸಭಾ ಕಾಯಾ೯ಧ್ಯಕ್ಷ ರವಿ.ಎಚ್.ಮಾಕಳಿ, ತಾ.ಪಂ.ಮಾಜಿ ಅಧ್ಯಕ್ಷ ಶಾರದಾ ಸೀತಾರಾಮಯ್ಯ, ಜಿಲ್ಲಾ ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಆರ್.ಪರಶಿವಮೂತಿ೯, ತಾಲೂಕು ಪ್ರಾ.ಶಾ.ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎಂ.ಸುರೇಶ್, ಬೆಂಗಳೂರು ಜಯಪ್ರಕಾಶ್, ಖ್ಯಾತ ಹೃದಯರೋಗ ತಜ್ಞ ಡಾ.ಪರಮೇಶ್ವರಪ್ಪ, ಸಿಪಿಐ ರವಿಪ್ರಸಾದ್, ಬೆಸ್ಕಾಂ ಎಸ್ಓ ಎನ್.ಬಿ.ಗವೀರಂಗಯ್ಯ ಪಿಎಸೈ ಶ್ರೀಮತಿ ಪಾರ್ವತಮ್ಮ ಯಾದವ್, ಪಿಎಸೈ ಲಕ್ಷೀಪತಿ, ಜಿ.ಚಿತ್ತಯ್ಯ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ದುಗಾ೯ ಗ್ರಾಮೀಣ ಮಹಿಳಾ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಇ.ನಾಗರಾಜು, ಉಪಾಧ್ಯಕ್ಷ ಟಿ.ಎಚ್.ಚಂದ್ರು, ಕಾರ್ಯದಶಿ೯ ಎಚ್.ಟಿ.ಮಂಜುನಾಥ್, ಕೆ.ಕೆ.ಹನುಮಂತಪ್ಪ, ಜಿ.ಕರಿಯಪ್ಪ, ತಿಮ್ಮಯ್ಯ ಮತ್ತಿತರರು ಇದ್ದರು.
ಸಕಾ೯ರಿ ನೌಕರರ ಸಂಘದ ನಿದೆ೯ಶಕ ಎಸ್.ಕೆ.ಮಲ್ಲಿಕಾಜು೯ನ್ ಅವರ ನಿರೂಪಣೆಯಲ್ಲಿ ಶಿಕ್ಷಕ ರಾಜಕುಮಾರ್ ಪ್ರಾಥಿ೯ಸಿದರು. ತಿಮ್ಮಾಭೋವಿ ಸ್ವಾಗತಿಸಿದರು. ಇ.ನಾಗರಾಜು ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.