ಗ್ಯಾಸ್ ಟ್ರಬಲ್ ಇದ್ದರೆ ಕರಿಬೇವು ಪುಡಿ ಉಪಯೋಗಿಸಿ,ಆರೋಗ್ಯ ಕಾಯಲು ಕರಿಬೇವು ಅತ್ಯಗತ್ಯ ಎಂದು ಮನಸ್ವಿನಿ,ನಾರಾವಿ ಎಂಬುವವರು ದಟ್ಸ್ ಕನ್ನಡದ ಅಡುಗೆ ಮನೆ ವಿಭಾಗದಲ್ಲಿ ಬರೆದಿರುವ ಲೇಖನವಿದು.ಇದನ್ನು ಓದಿದ ನಂತರ ಎಲ್ಲರಿಗೂ ಇದು ಉಪಯೋಗವಾಗಬಹುದೆಂದು ಈ ಬ್ಲಾಗಿಗೆ ಹಾಕಲಾಗಿದೆ.ನೀವು ಇದನ್ನು ಓದಿ ಆರೋಗ್ಯ ಕಾಪಾಡಿಕೊಳ್ಳಿ.
ಕರಿಬೇವು ಸಾಮಾನ್ಯವಾಗಿ ದಕ್ಷಿಣ ಭಾರತದ ಅಡುಗೆಗಳಲ್ಲಿ ಯಥೇಚ್ಛವಾಗಿ ಬಳಕೆಯಾಗುವ ಒಂದು ಬಗೆಯ ಸೊಪ್ಪು. ಸ್ವಾದ್ವಿಷ್ಟವಿಲ್ಲದಿದ್ದರೂ, ಸುವಾಸನೆ ಭರಿತವಾದ ಸಸ್ಯ. ಸಂಸ್ಕೃತದಲ್ಲಿ ಇದಕ್ಕೆ ಕಾಲಶಾಕ ಎನ್ನುತ್ತಾರೆ.ಕಫ, ಪಿತ್ತ, ಜಠರದ ರೋಗ, ರಕ್ತದೊತ್ತಡ, ಮಧುಮೇಹ, ಉದರ ಸಂಬಂಧ ಸಮಸ್ಯೆ, ಆಮಶಂಕೆ, ಮಲಬದ್ಧತೆ, ಭೇದಿ ನಿವಾರಣೆಗೆ ಕರಿಬೇವು ಸಹಕಾರಿ. ಟಿಬಿ, ಜಾಂಡೀಸ್ ಹಾಗೂ ಸರ್ಜರಿ ನಂತರ ದೇಹದ ಆರೋಗ್ಯ ಸಮತೋಲನ ಕಾಪಾಡಲು ಕರಿಬೇವು ಸೇವನೆ ಒಳ್ಳೆಯದು.
ಉಪಯೋಗಗಳು:* 1-2 ಟೀ ಚಮಚದಷ್ಟು ಎಲೆಯ ರಸವನ್ನು, 1 ಟೀ ಚಮಚ ನಿಂಬೆರಸವನ್ನು ಮತ್ತು ಸಕ್ಕರೆಯನ್ನು ಬೆರೆಸಿ ಸೇವಿಸುವುದರಿಂದ ಅಜೀರ್ಣ, ಅತಿಯಾಗಿ ಜಿಡ್ಡು ಪದಾರ್ಥ ಸೇವನೆಯಿಂದುಂಟಾದ ತೊಂದರೆಗಳನ್ನು ನಿವಾರಿಸಬಹುದು.
ಭೇದಿ, ಆಮಶಂಕೆ ನಿವಾರಣೆಗೆ ಎಳೆಯದಾದ ಎಲೆಗಳನ್ನು ಜೇನಿನೊಂದಿಗೆ ನೀಡಬಹುದು. ಅಥವಾ ಚೆನ್ನಾಗಿ ಅರೆದ ಮಜ್ಜಿಗೆಯೊಂದಿಗೆ ಸ್ವಲ್ಪ ಶುಂಠಿ ಬೆರೆಸಿ ನೀಡಿದರೆ ಉಪಯುಕ್ತ.
* ಬೊಜ್ಜು ಕರಗಿಸಲು ಪ್ರತಿ ಮುಂಜಾನೆ 8-10 ತಾಜಾ ಎಲೆಗಳನ್ನು ಅಗಿದು ಸೇವಿಸಿದರೆ ಒಳ್ಳೆಯದು.ಇದರಿಂದ ಮಧುಮೇಹ ರೋಗವನ್ನು ತಡೆಗಟ್ಟಬಹುದು.
* ಕುರು, ಗಾಯವಾದಾಗ ಕರಿಬೇವಿನ ಎಲೆಗಳನ್ನು ಅರೆದು ಸ್ವಲ್ಪ ಅರಿಶಿನದೊಂದಿಗೆ ಬೆರೆಸಿ ಅರೆದು ಹಚ್ಚಬಹುದು.* ಕಾಮಾಲೆ ರೋಗವಿದ್ದಾಗ 10-12 ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆದು, ಅರೆದುಕೊಂಡು ಸುಮಾರು 60-100ಮಿ.ಲೀ ಎಳನೀರಿನೊಂದಿಗೆ ನೀಡಬಹುದು.
* ಸೊಳ್ಳೆ, ಇರುವೆ, ನೊಣ ಮುಂತಾದ ಕೀಟಗಳ ತೊಂದರೆ ತಪ್ಪಿಸಲು ಕರಿಬೇವಿನ ಸುವಾಸನೆ ಸಾಕು.
* ಕರಿಬೇವಿನ ಎಲೆಯಲ್ಲಿ ಕಬ್ಬಿಣದ ಅಂಶ ಹೇರಳವಾಗಿರುವ ಕಾರಣ, ಹಸಿ ಎಲೆಯನ್ನು ಅಗಿದು ತಿಂದರೆ ಒಳ್ಳೆಯದು.
ಅತ್ಯಧಿಕಇದು ದಿವ್ಯೌಷಧಿ.* ಹೇರಳವಾಗಿ ದೊರೆಯುತ್ತಿದ್ದರೆ ಕರಿಬೇವು ಪುಡಿಯನ್ನೋ ಚಟ್ನಿಪುಡಿಯನ್ನೋ ಮಾಡಿ ತಿನ್ನಿರಿ
ಕಬ್ಬಿಣದ ಅಂಶವುಳ್ಳ ಕರಿಬೇವು ಪುಡಿ ಗ್ಯಾಸ್ ಟ್ರಬಲ್ ಇರುವವರಿಗೆ ಮನೇಲೇ ಸಿಗುವ ಅತ್ಯುತ್ತಮ ಔಷಧಿ. ಅದನ್ನು ತಯಾರಿಸುವ ವಿಧಾನ ಹೀಗಿದೆ ನೋಡಿ.ಬೇಕಾಗುವ ಪದಾರ್ಥಗಳು : ಕರಿಬೇವು ಒಂದು ಬಟ್ಟಲು | ಜೀರಿಗೆ ಅರ್ಧ ಮುಟಿಗೆಯಷ್ಟು | ಮೆಣಸಿನ ಕಾಳು ಏಳೆಂಟು ಹತ್ತು | ರುಚಿಗೆ ಉಪ್ಪು.ತಯಾರಿಸುವ ವಿಧಾನಇದನ್ನು ತಯಾರಿಸಲು ಬೇಕಾಗುವ ಪದಾರ್ಥಗಳು ಇಷ್ಟೇ. ಆದರೆ, ಅದು ಆರೋಗ್ಯದ ಮೇಲೆ ಮಾಡುವ ಪರಿಣಾಮ ಮಾತ್ರ ಅಗಾಧ. ಸೋ, ಮೊದಲು ಕರಿಬೇವನ್ನು ಚೆನ್ನಾಗಿ ತೊಳೆದು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ. ಗರಿಗರಿಯಾದ ನಂತರ ಅದಕ್ಕೆ ಹುರಿದ ಜೀರಿಗೆ ಮತ್ತು ಮೆಣಸಿನ ಕಾಳುಗಳನ್ನು ಉಪ್ಪಿನೊಂದಿಗೆ ಬೆರೆಸಿ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಚಟ್ನಿಪುಡಿಗಿಂದ ಸ್ವಲ್ಪ ನುಣ್ಣಗಾಗಿರಲಿ. ಇದೇ ಕರಿಬೇವು ಪುಡಿ.ಕರಿಬೇವು ಪುಡಿಯನ್ನು ಬಿಸಿಬಿಸಿ ಅನ್ನ ಮತ್ತು ತುಪ್ಪದೊಡನೆ ಸೇರಿಸಿ ಸವಿಯಬಹುದು. ಗ್ಯಾಸ್ ಟ್ರಬಲ್ ನಿಂದ ಬಳಲುತ್ತಿರುವವರು ಜೆಲ್ಯುಸಿಲ್ ಅಥವಾ ಇನ್ನಾವುದೇ ಆಂಟ್ಯಾಸಿಡ್ ಔಷಧಿಯನ್ನು ಸೇವಿಸುವ ಬದಲು ಅನ್ನದ ಜೊತೆ ಕರಿಬೇವು ಪುಡಿಯನ್ನು ತಿನ್ನಬಹುದು. ಇದನ್ನು ಚಟ್ನಿಪುಡಿಯಂತೆ ಕೂಡ ಮೊಸರಿನೊಂದಿಗೆ ಕಲಿಸಿ ಚಪಾತಿ ಜೊತೆ ಮೆಲ್ಲಬಹುದು. ಟ್ರೈ ಮಾಡಿ ನೋಡಿ.ಗಮನಿಸಿ* ಊಟದಲ್ಲಿ ಕರಿಬೇವು ಬಂದಾಗ ಪಕ್ಕಕ್ಕೆ ತೆಗೆದಿಡಬೇಡಿ. ಅಗಿದು ತಿಂದುಬಿಡಿ.* ಅಜೀರ್ಣ, ಮಧುಮೇಹ, ಬೇಧಿ, ಬೊಜ್ಜು ಕರಗಿಸಲು, ಕಾಮಾಲೆ ರೋಗಕ್ಕೆ
ಕಬ್ಬಿಣದ ಅಂಶವುಳ್ಳ ಕರಿಬೇವು ಪುಡಿ ಗ್ಯಾಸ್ ಟ್ರಬಲ್ ಇರುವವರಿಗೆ ಮನೇಲೇ ಸಿಗುವ ಅತ್ಯುತ್ತಮ ಔಷಧಿ. ಅದನ್ನು ತಯಾರಿಸುವ ವಿಧಾನ ಹೀಗಿದೆ ನೋಡಿ.ಬೇಕಾಗುವ ಪದಾರ್ಥಗಳು : ಕರಿಬೇವು ಒಂದು ಬಟ್ಟಲು | ಜೀರಿಗೆ ಅರ್ಧ ಮುಟಿಗೆಯಷ್ಟು | ಮೆಣಸಿನ ಕಾಳು ಏಳೆಂಟು ಹತ್ತು | ರುಚಿಗೆ ಉಪ್ಪು.ತಯಾರಿಸುವ ವಿಧಾನಇದನ್ನು ತಯಾರಿಸಲು ಬೇಕಾಗುವ ಪದಾರ್ಥಗಳು ಇಷ್ಟೇ. ಆದರೆ, ಅದು ಆರೋಗ್ಯದ ಮೇಲೆ ಮಾಡುವ ಪರಿಣಾಮ ಮಾತ್ರ ಅಗಾಧ. ಸೋ, ಮೊದಲು ಕರಿಬೇವನ್ನು ಚೆನ್ನಾಗಿ ತೊಳೆದು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ. ಗರಿಗರಿಯಾದ ನಂತರ ಅದಕ್ಕೆ ಹುರಿದ ಜೀರಿಗೆ ಮತ್ತು ಮೆಣಸಿನ ಕಾಳುಗಳನ್ನು ಉಪ್ಪಿನೊಂದಿಗೆ ಬೆರೆಸಿ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಚಟ್ನಿಪುಡಿಗಿಂದ ಸ್ವಲ್ಪ ನುಣ್ಣಗಾಗಿರಲಿ. ಇದೇ ಕರಿಬೇವು ಪುಡಿ.ಕರಿಬೇವು ಪುಡಿಯನ್ನು ಬಿಸಿಬಿಸಿ ಅನ್ನ ಮತ್ತು ತುಪ್ಪದೊಡನೆ ಸೇರಿಸಿ ಸವಿಯಬಹುದು. ಗ್ಯಾಸ್ ಟ್ರಬಲ್ ನಿಂದ ಬಳಲುತ್ತಿರುವವರು ಜೆಲ್ಯುಸಿಲ್ ಅಥವಾ ಇನ್ನಾವುದೇ ಆಂಟ್ಯಾಸಿಡ್ ಔಷಧಿಯನ್ನು ಸೇವಿಸುವ ಬದಲು ಅನ್ನದ ಜೊತೆ ಕರಿಬೇವು ಪುಡಿಯನ್ನು ತಿನ್ನಬಹುದು. ಇದನ್ನು ಚಟ್ನಿಪುಡಿಯಂತೆ ಕೂಡ ಮೊಸರಿನೊಂದಿಗೆ ಕಲಿಸಿ ಚಪಾತಿ ಜೊತೆ ಮೆಲ್ಲಬಹುದು. ಟ್ರೈ ಮಾಡಿ ನೋಡಿ.ಗಮನಿಸಿ* ಊಟದಲ್ಲಿ ಕರಿಬೇವು ಬಂದಾಗ ಪಕ್ಕಕ್ಕೆ ತೆಗೆದಿಡಬೇಡಿ. ಅಗಿದು ತಿಂದುಬಿಡಿ.* ಅಜೀರ್ಣ, ಮಧುಮೇಹ, ಬೇಧಿ, ಬೊಜ್ಜು ಕರಗಿಸಲು, ಕಾಮಾಲೆ ರೋಗಕ್ಕೆ
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ