ವಿಷಯಕ್ಕೆ ಹೋಗಿ

ಉತ್ತಮ ಆರೋಗ್ಯಕ್ಕೆ ಬಳಸಿ ಕರಿಬೇವು

ಗ್ಯಾಸ್ ಟ್ರಬಲ್ ಇದ್ದರೆ ಕರಿಬೇವು ಪುಡಿ ಉಪಯೋಗಿಸಿ,ಆರೋಗ್ಯ ಕಾಯಲು ಕರಿಬೇವು ಅತ್ಯಗತ್ಯ ಎಂದು ಮನಸ್ವಿನಿ,ನಾರಾವಿ ಎಂಬುವವರು ದಟ್ಸ್ ಕನ್ನಡದ ಅಡುಗೆ ಮನೆ ವಿಭಾಗದಲ್ಲಿ ಬರೆದಿರುವ ಲೇಖನವಿದು.ಇದನ್ನು ಓದಿದ ನಂತರ ಎಲ್ಲರಿಗೂ ಇದು ಉಪಯೋಗವಾಗಬಹುದೆಂದು ಈ ಬ್ಲಾಗಿಗೆ ಹಾಕಲಾಗಿದೆ.ನೀವು ಇದನ್ನು ಓದಿ ಆರೋಗ್ಯ ಕಾಪಾಡಿಕೊಳ್ಳಿ.


ಕರಿಬೇವು ಸಾಮಾನ್ಯವಾಗಿ ದಕ್ಷಿಣ ಭಾರತದ ಅಡುಗೆಗಳಲ್ಲಿ ಯಥೇಚ್ಛವಾಗಿ ಬಳಕೆಯಾಗುವ ಒಂದು ಬಗೆಯ ಸೊಪ್ಪು. ಸ್ವಾದ್ವಿಷ್ಟವಿಲ್ಲದಿದ್ದರೂ, ಸುವಾಸನೆ ಭರಿತವಾದ ಸಸ್ಯ. ಸಂಸ್ಕೃತದಲ್ಲಿ ಇದಕ್ಕೆ ಕಾಲಶಾಕ ಎನ್ನುತ್ತಾರೆ.ಕಫ, ಪಿತ್ತ, ಜಠರದ ರೋಗ, ರಕ್ತದೊತ್ತಡ, ಮಧುಮೇಹ, ಉದರ ಸಂಬಂಧ ಸಮಸ್ಯೆ, ಆಮಶಂಕೆ, ಮಲಬದ್ಧತೆ, ಭೇದಿ ನಿವಾರಣೆಗೆ ಕರಿಬೇವು ಸಹಕಾರಿ. ಟಿಬಿ, ಜಾಂಡೀಸ್ ಹಾಗೂ ಸರ್ಜರಿ ನಂತರ ದೇಹದ ಆರೋಗ್ಯ ಸಮತೋಲನ ಕಾಪಾಡಲು ಕರಿಬೇವು ಸೇವನೆ ಒಳ್ಳೆಯದು.


ಉಪಯೋಗಗಳು:* 1-2 ಟೀ ಚಮಚದಷ್ಟು ಎಲೆಯ ರಸವನ್ನು, 1 ಟೀ ಚಮಚ ನಿಂಬೆರಸವನ್ನು ಮತ್ತು ಸಕ್ಕರೆಯನ್ನು ಬೆರೆಸಿ ಸೇವಿಸುವುದರಿಂದ ಅಜೀರ್ಣ, ಅತಿಯಾಗಿ ಜಿಡ್ಡು ಪದಾರ್ಥ ಸೇವನೆಯಿಂದುಂಟಾದ ತೊಂದರೆಗಳನ್ನು ನಿವಾರಿಸಬಹುದು.

ಭೇದಿ, ಆಮಶಂಕೆ ನಿವಾರಣೆಗೆ ಎಳೆಯದಾದ ಎಲೆಗಳನ್ನು ಜೇನಿನೊಂದಿಗೆ ನೀಡಬಹುದು. ಅಥವಾ ಚೆನ್ನಾಗಿ ಅರೆದ ಮಜ್ಜಿಗೆಯೊಂದಿಗೆ ಸ್ವಲ್ಪ ಶುಂಠಿ ಬೆರೆಸಿ ನೀಡಿದರೆ ಉಪಯುಕ್ತ.

* ಬೊಜ್ಜು ಕರಗಿಸಲು ಪ್ರತಿ ಮುಂಜಾನೆ 8-10 ತಾಜಾ ಎಲೆಗಳನ್ನು ಅಗಿದು ಸೇವಿಸಿದರೆ ಒಳ್ಳೆಯದು.ಇದರಿಂದ ಮಧುಮೇಹ ರೋಗವನ್ನು ತಡೆಗಟ್ಟಬಹುದು.

* ಕುರು, ಗಾಯವಾದಾಗ ಕರಿಬೇವಿನ ಎಲೆಗಳನ್ನು ಅರೆದು ಸ್ವಲ್ಪ ಅರಿಶಿನದೊಂದಿಗೆ ಬೆರೆಸಿ ಅರೆದು ಹಚ್ಚಬಹುದು.* ಕಾಮಾಲೆ ರೋಗವಿದ್ದಾಗ 10-12 ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆದು, ಅರೆದುಕೊಂಡು ಸುಮಾರು 60-100ಮಿ.ಲೀ ಎಳನೀರಿನೊಂದಿಗೆ ನೀಡಬಹುದು.

* ಸೊಳ್ಳೆ, ಇರುವೆ, ನೊಣ ಮುಂತಾದ ಕೀಟಗಳ ತೊಂದರೆ ತಪ್ಪಿಸಲು ಕರಿಬೇವಿನ ಸುವಾಸನೆ ಸಾಕು.

* ಕರಿಬೇವಿನ ಎಲೆಯಲ್ಲಿ ಕಬ್ಬಿಣದ ಅಂಶ ಹೇರಳವಾಗಿರುವ ಕಾರಣ, ಹಸಿ ಎಲೆಯನ್ನು ಅಗಿದು ತಿಂದರೆ ಒಳ್ಳೆಯದು.


ಅತ್ಯಧಿಕಇದು ದಿವ್ಯೌಷಧಿ.* ಹೇರಳವಾಗಿ ದೊರೆಯುತ್ತಿದ್ದರೆ ಕರಿಬೇವು ಪುಡಿಯನ್ನೋ ಚಟ್ನಿಪುಡಿಯನ್ನೋ ಮಾಡಿ ತಿನ್ನಿರಿ

ಕಬ್ಬಿಣದ ಅಂಶವುಳ್ಳ ಕರಿಬೇವು ಪುಡಿ ಗ್ಯಾಸ್ ಟ್ರಬಲ್ ಇರುವವರಿಗೆ ಮನೇಲೇ ಸಿಗುವ ಅತ್ಯುತ್ತಮ ಔಷಧಿ. ಅದನ್ನು ತಯಾರಿಸುವ ವಿಧಾನ ಹೀಗಿದೆ ನೋಡಿ.ಬೇಕಾಗುವ ಪದಾರ್ಥಗಳು : ಕರಿಬೇವು ಒಂದು ಬಟ್ಟಲು | ಜೀರಿಗೆ ಅರ್ಧ ಮುಟಿಗೆಯಷ್ಟು | ಮೆಣಸಿನ ಕಾಳು ಏಳೆಂಟು ಹತ್ತು | ರುಚಿಗೆ ಉಪ್ಪು.ತಯಾರಿಸುವ ವಿಧಾನಇದನ್ನು ತಯಾರಿಸಲು ಬೇಕಾಗುವ ಪದಾರ್ಥಗಳು ಇಷ್ಟೇ. ಆದರೆ, ಅದು ಆರೋಗ್ಯದ ಮೇಲೆ ಮಾಡುವ ಪರಿಣಾಮ ಮಾತ್ರ ಅಗಾಧ. ಸೋ, ಮೊದಲು ಕರಿಬೇವನ್ನು ಚೆನ್ನಾಗಿ ತೊಳೆದು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ. ಗರಿಗರಿಯಾದ ನಂತರ ಅದಕ್ಕೆ ಹುರಿದ ಜೀರಿಗೆ ಮತ್ತು ಮೆಣಸಿನ ಕಾಳುಗಳನ್ನು ಉಪ್ಪಿನೊಂದಿಗೆ ಬೆರೆಸಿ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಚಟ್ನಿಪುಡಿಗಿಂದ ಸ್ವಲ್ಪ ನುಣ್ಣಗಾಗಿರಲಿ. ಇದೇ ಕರಿಬೇವು ಪುಡಿ.ಕರಿಬೇವು ಪುಡಿಯನ್ನು ಬಿಸಿಬಿಸಿ ಅನ್ನ ಮತ್ತು ತುಪ್ಪದೊಡನೆ ಸೇರಿಸಿ ಸವಿಯಬಹುದು. ಗ್ಯಾಸ್ ಟ್ರಬಲ್ ನಿಂದ ಬಳಲುತ್ತಿರುವವರು ಜೆಲ್ಯುಸಿಲ್ ಅಥವಾ ಇನ್ನಾವುದೇ ಆಂಟ್ಯಾಸಿಡ್ ಔಷಧಿಯನ್ನು ಸೇವಿಸುವ ಬದಲು ಅನ್ನದ ಜೊತೆ ಕರಿಬೇವು ಪುಡಿಯನ್ನು ತಿನ್ನಬಹುದು. ಇದನ್ನು ಚಟ್ನಿಪುಡಿಯಂತೆ ಕೂಡ ಮೊಸರಿನೊಂದಿಗೆ ಕಲಿಸಿ ಚಪಾತಿ ಜೊತೆ ಮೆಲ್ಲಬಹುದು. ಟ್ರೈ ಮಾಡಿ ನೋಡಿ.ಗಮನಿಸಿ* ಊಟದಲ್ಲಿ ಕರಿಬೇವು ಬಂದಾಗ ಪಕ್ಕಕ್ಕೆ ತೆಗೆದಿಡಬೇಡಿ. ಅಗಿದು ತಿಂದುಬಿಡಿ.* ಅಜೀರ್ಣ, ಮಧುಮೇಹ, ಬೇಧಿ, ಬೊಜ್ಜು ಕರಗಿಸಲು, ಕಾಮಾಲೆ ರೋಗಕ್ಕೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...