ವಿಷಯಕ್ಕೆ ಹೋಗಿ

ಉತ್ತಮ ಆರೋಗ್ಯಕ್ಕೆ ಬಳಸಿ ಕರಿಬೇವು

ಗ್ಯಾಸ್ ಟ್ರಬಲ್ ಇದ್ದರೆ ಕರಿಬೇವು ಪುಡಿ ಉಪಯೋಗಿಸಿ,ಆರೋಗ್ಯ ಕಾಯಲು ಕರಿಬೇವು ಅತ್ಯಗತ್ಯ ಎಂದು ಮನಸ್ವಿನಿ,ನಾರಾವಿ ಎಂಬುವವರು ದಟ್ಸ್ ಕನ್ನಡದ ಅಡುಗೆ ಮನೆ ವಿಭಾಗದಲ್ಲಿ ಬರೆದಿರುವ ಲೇಖನವಿದು.ಇದನ್ನು ಓದಿದ ನಂತರ ಎಲ್ಲರಿಗೂ ಇದು ಉಪಯೋಗವಾಗಬಹುದೆಂದು ಈ ಬ್ಲಾಗಿಗೆ ಹಾಕಲಾಗಿದೆ.ನೀವು ಇದನ್ನು ಓದಿ ಆರೋಗ್ಯ ಕಾಪಾಡಿಕೊಳ್ಳಿ.


ಕರಿಬೇವು ಸಾಮಾನ್ಯವಾಗಿ ದಕ್ಷಿಣ ಭಾರತದ ಅಡುಗೆಗಳಲ್ಲಿ ಯಥೇಚ್ಛವಾಗಿ ಬಳಕೆಯಾಗುವ ಒಂದು ಬಗೆಯ ಸೊಪ್ಪು. ಸ್ವಾದ್ವಿಷ್ಟವಿಲ್ಲದಿದ್ದರೂ, ಸುವಾಸನೆ ಭರಿತವಾದ ಸಸ್ಯ. ಸಂಸ್ಕೃತದಲ್ಲಿ ಇದಕ್ಕೆ ಕಾಲಶಾಕ ಎನ್ನುತ್ತಾರೆ.ಕಫ, ಪಿತ್ತ, ಜಠರದ ರೋಗ, ರಕ್ತದೊತ್ತಡ, ಮಧುಮೇಹ, ಉದರ ಸಂಬಂಧ ಸಮಸ್ಯೆ, ಆಮಶಂಕೆ, ಮಲಬದ್ಧತೆ, ಭೇದಿ ನಿವಾರಣೆಗೆ ಕರಿಬೇವು ಸಹಕಾರಿ. ಟಿಬಿ, ಜಾಂಡೀಸ್ ಹಾಗೂ ಸರ್ಜರಿ ನಂತರ ದೇಹದ ಆರೋಗ್ಯ ಸಮತೋಲನ ಕಾಪಾಡಲು ಕರಿಬೇವು ಸೇವನೆ ಒಳ್ಳೆಯದು.


ಉಪಯೋಗಗಳು:* 1-2 ಟೀ ಚಮಚದಷ್ಟು ಎಲೆಯ ರಸವನ್ನು, 1 ಟೀ ಚಮಚ ನಿಂಬೆರಸವನ್ನು ಮತ್ತು ಸಕ್ಕರೆಯನ್ನು ಬೆರೆಸಿ ಸೇವಿಸುವುದರಿಂದ ಅಜೀರ್ಣ, ಅತಿಯಾಗಿ ಜಿಡ್ಡು ಪದಾರ್ಥ ಸೇವನೆಯಿಂದುಂಟಾದ ತೊಂದರೆಗಳನ್ನು ನಿವಾರಿಸಬಹುದು.

ಭೇದಿ, ಆಮಶಂಕೆ ನಿವಾರಣೆಗೆ ಎಳೆಯದಾದ ಎಲೆಗಳನ್ನು ಜೇನಿನೊಂದಿಗೆ ನೀಡಬಹುದು. ಅಥವಾ ಚೆನ್ನಾಗಿ ಅರೆದ ಮಜ್ಜಿಗೆಯೊಂದಿಗೆ ಸ್ವಲ್ಪ ಶುಂಠಿ ಬೆರೆಸಿ ನೀಡಿದರೆ ಉಪಯುಕ್ತ.

* ಬೊಜ್ಜು ಕರಗಿಸಲು ಪ್ರತಿ ಮುಂಜಾನೆ 8-10 ತಾಜಾ ಎಲೆಗಳನ್ನು ಅಗಿದು ಸೇವಿಸಿದರೆ ಒಳ್ಳೆಯದು.ಇದರಿಂದ ಮಧುಮೇಹ ರೋಗವನ್ನು ತಡೆಗಟ್ಟಬಹುದು.

* ಕುರು, ಗಾಯವಾದಾಗ ಕರಿಬೇವಿನ ಎಲೆಗಳನ್ನು ಅರೆದು ಸ್ವಲ್ಪ ಅರಿಶಿನದೊಂದಿಗೆ ಬೆರೆಸಿ ಅರೆದು ಹಚ್ಚಬಹುದು.* ಕಾಮಾಲೆ ರೋಗವಿದ್ದಾಗ 10-12 ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆದು, ಅರೆದುಕೊಂಡು ಸುಮಾರು 60-100ಮಿ.ಲೀ ಎಳನೀರಿನೊಂದಿಗೆ ನೀಡಬಹುದು.

* ಸೊಳ್ಳೆ, ಇರುವೆ, ನೊಣ ಮುಂತಾದ ಕೀಟಗಳ ತೊಂದರೆ ತಪ್ಪಿಸಲು ಕರಿಬೇವಿನ ಸುವಾಸನೆ ಸಾಕು.

* ಕರಿಬೇವಿನ ಎಲೆಯಲ್ಲಿ ಕಬ್ಬಿಣದ ಅಂಶ ಹೇರಳವಾಗಿರುವ ಕಾರಣ, ಹಸಿ ಎಲೆಯನ್ನು ಅಗಿದು ತಿಂದರೆ ಒಳ್ಳೆಯದು.


ಅತ್ಯಧಿಕಇದು ದಿವ್ಯೌಷಧಿ.* ಹೇರಳವಾಗಿ ದೊರೆಯುತ್ತಿದ್ದರೆ ಕರಿಬೇವು ಪುಡಿಯನ್ನೋ ಚಟ್ನಿಪುಡಿಯನ್ನೋ ಮಾಡಿ ತಿನ್ನಿರಿ

ಕಬ್ಬಿಣದ ಅಂಶವುಳ್ಳ ಕರಿಬೇವು ಪುಡಿ ಗ್ಯಾಸ್ ಟ್ರಬಲ್ ಇರುವವರಿಗೆ ಮನೇಲೇ ಸಿಗುವ ಅತ್ಯುತ್ತಮ ಔಷಧಿ. ಅದನ್ನು ತಯಾರಿಸುವ ವಿಧಾನ ಹೀಗಿದೆ ನೋಡಿ.ಬೇಕಾಗುವ ಪದಾರ್ಥಗಳು : ಕರಿಬೇವು ಒಂದು ಬಟ್ಟಲು | ಜೀರಿಗೆ ಅರ್ಧ ಮುಟಿಗೆಯಷ್ಟು | ಮೆಣಸಿನ ಕಾಳು ಏಳೆಂಟು ಹತ್ತು | ರುಚಿಗೆ ಉಪ್ಪು.ತಯಾರಿಸುವ ವಿಧಾನಇದನ್ನು ತಯಾರಿಸಲು ಬೇಕಾಗುವ ಪದಾರ್ಥಗಳು ಇಷ್ಟೇ. ಆದರೆ, ಅದು ಆರೋಗ್ಯದ ಮೇಲೆ ಮಾಡುವ ಪರಿಣಾಮ ಮಾತ್ರ ಅಗಾಧ. ಸೋ, ಮೊದಲು ಕರಿಬೇವನ್ನು ಚೆನ್ನಾಗಿ ತೊಳೆದು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ. ಗರಿಗರಿಯಾದ ನಂತರ ಅದಕ್ಕೆ ಹುರಿದ ಜೀರಿಗೆ ಮತ್ತು ಮೆಣಸಿನ ಕಾಳುಗಳನ್ನು ಉಪ್ಪಿನೊಂದಿಗೆ ಬೆರೆಸಿ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಚಟ್ನಿಪುಡಿಗಿಂದ ಸ್ವಲ್ಪ ನುಣ್ಣಗಾಗಿರಲಿ. ಇದೇ ಕರಿಬೇವು ಪುಡಿ.ಕರಿಬೇವು ಪುಡಿಯನ್ನು ಬಿಸಿಬಿಸಿ ಅನ್ನ ಮತ್ತು ತುಪ್ಪದೊಡನೆ ಸೇರಿಸಿ ಸವಿಯಬಹುದು. ಗ್ಯಾಸ್ ಟ್ರಬಲ್ ನಿಂದ ಬಳಲುತ್ತಿರುವವರು ಜೆಲ್ಯುಸಿಲ್ ಅಥವಾ ಇನ್ನಾವುದೇ ಆಂಟ್ಯಾಸಿಡ್ ಔಷಧಿಯನ್ನು ಸೇವಿಸುವ ಬದಲು ಅನ್ನದ ಜೊತೆ ಕರಿಬೇವು ಪುಡಿಯನ್ನು ತಿನ್ನಬಹುದು. ಇದನ್ನು ಚಟ್ನಿಪುಡಿಯಂತೆ ಕೂಡ ಮೊಸರಿನೊಂದಿಗೆ ಕಲಿಸಿ ಚಪಾತಿ ಜೊತೆ ಮೆಲ್ಲಬಹುದು. ಟ್ರೈ ಮಾಡಿ ನೋಡಿ.ಗಮನಿಸಿ* ಊಟದಲ್ಲಿ ಕರಿಬೇವು ಬಂದಾಗ ಪಕ್ಕಕ್ಕೆ ತೆಗೆದಿಡಬೇಡಿ. ಅಗಿದು ತಿಂದುಬಿಡಿ.* ಅಜೀರ್ಣ, ಮಧುಮೇಹ, ಬೇಧಿ, ಬೊಜ್ಜು ಕರಗಿಸಲು, ಕಾಮಾಲೆ ರೋಗಕ್ಕೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...