ವಿಷಯಕ್ಕೆ ಹೋಗಿ

ಹುಳಿಯಾರು ಗ್ರಾ.ಪಂ.ದಂಡಿ ದುಡ್ಡು ಹರಿದು ಬಂದರೂ ಅಭಿವೃದ್ಧಿ ಮಾತ್ರ ಶೂನ್ಯ

(ಹುಳಿಯಾರು ಗ್ರಾಮ ಪಂಚಾಯ್ತಿ )
ಲೇಖನ: ಡಿ.ಆರ್.ನರೇಂದ್ರಬಾಬು
ಹುಳಿಯಾರು


ಹಳ್ಳಿಗಳ ವಿಧಾನ ಸೌಧವಾಗಿರುವ ಗ್ರಾಮ ಪಂಚಾಯ್ತಿಗೆ ಮುಂದಿನ ಐದು ವರ್ಷಗಳ ಅವಧಿಯ ಆಡಳಿತಕ್ಕೆ ನೂತನ ಸದಸ್ಯರನ್ನು ಆಯ್ಕೆಮಾಡುವ ಚುನಾವಣೆ ಸಜ್ಜುಗೊಂಡಿದ್ದು ಶನಿವಾರದಂದು ಮುಹೂರ್ತ ನಿಗಧಿಯಾಗಿದೆ.

ಜಯಚಂದ್ರರವರು ತಮ್ಮ ವಿಧಾನಸಭಾ ಕ್ಷೇತ್ರವನ್ನು ಬದಲಿಸಿದ ದಿನದಿಂದ ನೆಲಕಚ್ಚಿರುವ ಕಾಂಗ್ರೆಸ್ ಈ ಚುನಾವಣೆಯನ್ನು ಎದುರಿಸುವಲ್ಲಿ ವಿಫಲವಾದಂತೆ ಕಂಡು ಬಂದಿದ್ದು ಹಾಲಿ ಶಾಸಕ ಸಿ.ಬಿ.ಸುರೇಶ್ಬಾಬು ಬೆಂಬಲಿತ ಜೆಡಿಎಸ್ ಅಭ್ಯಥಿ೯ಗಳು ಹಾಗೂ ಸ್ಥಳೀಯರೂ ಆದ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಬೆಂಬಲಿತ ಬಿಜೆಪಿ ಅಭ್ಯಥಿ೯ಗಳೊಂದಿಗೆ ಅಂತಿಮ ಹಣಾಹಣಿ ನಡೆಯುವ ಲಕ್ಷಣಗಳು ಗೋಚರಿಸುತ್ತಿದೆ.

ಈ ಮಧ್ಯೆ ಕೆಲವೆಡೆ ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಬೆಂಬಲಿತ ಜೆಡಿಯು ಅಭ್ಯಥಿ೯ಗಳು ಸೇರಿದಂತೆ ಪಕ್ಷೇತರ ಅಭ್ಯಥಿ೯ಗಳೂ ಸಹ ಮತದಾರರನ್ನು ಸೆಳೆಯಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಒಟ್ಟಾರೆ ಅಭ್ಯಥಿ೯ಗಳ ಪ್ರಚಾರದ ಭರಾಟೆ ಗಮನಿಸಿದರೆ ಪಂಚಾಯ್ತಿಯಲ್ಲಿ ವರ್ಷನೂ ಗಟ್ಟಲೆಯಿಂದ ಕಾಡುತಿರುವ ಹತ್ತು ಹಲವು ಸಮಸ್ಯೆಗಳ ಬಗ್ಗೆಯಾಗಲಿ, ಮುಂದೆ ತಾವು ಮಾಡುವ ಅಭಿವೃದ್ಧಿ ಕೆಲಸಗಳ ಬಗ್ಗೆಯಾಗಲಿ ಪ್ರಚಾರದಲ್ಲಿ ಬೆಳಕು ಚೆಲ್ಲದಿರುವುದು ದುರಂತದ ಸಂಗತಿಯಾಗಿದೆ.

@ ಪಂಚಾಯ್ತಿಯ ಹಿನ್ನೋಟ: ಜಿಲ್ಲೆಯಲ್ಲಿಯೇ ಅತೀ ದೊಡ್ಡ ಗ್ರಾಮ ಪಂಚಾಯ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಬಿಟ್ಟರೆ ಅಭಿವೃದ್ಧಿಯಲ್ಲಿ ಮಾತ್ರ ಜಿಲ್ಲೆಯಲ್ಲಿಯೇ ಅತೀ ಹಿಂದುಳಿದ ಪಂಚಾಯ್ತಿ ಎನ್ನುವಂತಾಗಿದೆ. ಅಧ್ಯಕ್ಷೆ, ಕಾರ್ಯದಶಿ೯, ಸದಸ್ಯರ ನಡುವೆ ಸಾಮರಸ್ಯದ ಕೊರತೆಯಿಂದ ಕಳೆದ ಐದು ವರ್ಷಗಳು ಗುರುತರವಾದ ಪ್ರಗತಿ ಕಾಣದೆ ಸಮಸ್ಯೆಯಲ್ಲಿಯೇ ಅಂತ್ಯವಾಯಿತು. ಸ್ಥಳೀಯ ಆದಾಯ ಸೇರಿದಂತೆ ವಿವಿಧ ಮೂಲಗಳಿಂದ ದಂಡಿಯಾಗಿ ಅನುದಾನ ಹರಿದು ಬಂದಿದ್ದು ಪ್ರತಿಯೊಂದು ಬ್ಲಾಕುಗಳಲ್ಲೂ ಭ್ರಷ್ಟತೆಯ ವಾಸನೆ ರಾಚುವುದು ಬಿಟ್ಟರೆ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ.

@ ವಸತಿ ಯೋಜನೆ: ವಸತಿ ಯೋಜನೆಯಲ್ಲಿಯೂ ಅವ್ಯವಹಾರ ನಡೆಯುತ್ತದೆ ಎನ್ನುವುದನ್ನು ಇಡೀ ರಾಜ್ಯಕ್ಕೆ ತೋರಿಸಿಕೊಟ್ಟಿದ್ದು ಈ ಪಂಚಾಯ್ತಿ. ಅನೇಕ ಮಾನದಂಡಗಳು, ಅನೇಕ ಅಧಿಕಾರಿಗಳ ಕಣ್ಗಾವಲು ಹಾಗೂ ವಿವಿಧ ಹಂತಗಳಲ್ಲಿ ಹಣ ಬಿಡುಗಡೆ ಎಂಬ ಕಟ್ಟು ನಿಟ್ಟಿನ ಯೋಜನೆಯಾದ ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಹಿಂದೆ ಕಟ್ಟಿದ ಮನೆಗೆ ಬಿಲ್ಲು, ಯಾರದೋ ಮನೆಗೆ ಬಿಲ್ಲು, ಮನೆಯನ್ನೇ ಕಟ್ಟದೆ ಕಂಪ್ಯೂಟರ್ ಗ್ರಾಫಿಕ್ಸ್ ಮಾಡಿ ಬಿಲ್ಲು ಹೀಗೆ ಅನೇಕ ರೀತಿ ಭ್ರಷ್ಟಚಾರ ಎಸಗಿ ರಾಜ್ಯದ ಅಧಿಕಾರಿಗಳು ಭ್ರಷ್ಟಾಚಾರ ಹೀಗೂ ಮಾಡಬಹುದೇ ಎಂದು ಹೌಹಾರಿದ್ದು, ರಾಜ್ಯದಲಿಯೇ ಪ್ರಥಮವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡಿದಲ್ಲದೆ ಅಂದಿನಿಂದ ಕಡು ಬಡವರಿಗೆ ಸೂರು ಇಲ್ಲದಂತೆ ಮಾಡಿದ್ದೇ ಈ ಪಂಚಾಯ್ತಿಯ ಕುಖ್ಯಾತಿ.

@ ಹಳ್ಳ ಹಿಡಿದ ಉದ್ಯೋಗ ಖಾತ್ರಿ: ಕೇಂದ್ರ ಸಕಾ೯ರದ ಮಹತ್ವಾಕಾಂಕ್ಷೆ ಯೋಜನೆ ಉದ್ಯೋಗ ಖಾತ್ರಿಯಲ್ಲಿ ಕೋಟ್ಯಾಂತರ ರೂಪಾಯಿ ಅನುದಾನ ಹರಿದು ಬರುತ್ತಿದ್ದರೂ ಕೂಡ ಇಂತಹ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳದೆ ಮೊದಲ ಅನುಷ್ಠಾನದಲ್ಲಿಯೇ ಹಳ್ಳ ಹಿಡಿಸಿದರು. ಅಧ್ಯಕ್ಷರು ಹಾಗೂ ಕಾರ್ಯದಶಿ೯ಗಳ ಬೇಜವಾಬ್ದಾರಿಯಿಂದ ತೋಟಗಾರಿಕೆ ಸೇರಿದಂತೆ ಅನೇಕ ಕೆಲಸಗಳನ್ನು ಮಾಡಿಸಲಾಗದೆ ಬಿಡುಗಡೆಯಾದ ಹಣವನ್ನು ಉಪಯೋಗ ಮಾಡಲೇಬೇಕಾದ್ದರಿಂದ ಕೆಲವು ಕಾಂಪೌಡು ಹಾಗೂ ತಡೆ ಅಣೆಗೆ ಮಾತ್ರ ವಿನಿಯೋಗಿಸಿ ಅತ್ಯಗತ್ಯವಾಗಿ ಆಗಲೇಬೇಕಾದ ಕೆಲಸಗಳಿಗೆ ಎಳ್ಳುನೀರು ಬಿಟ್ಟರು.

@ ಮೂಲಭೂತ ಸೌಕರ್ಯ ಮರಿಚಿಕೆ: ಪೈಪ್ ಲೈನ್, ಮೋಟರ್, ಬೀದಿದೀಪ, ನೈರ್ಮಲ್ಯೀಕರಣವು ಪಟ್ಟಣದ ಸಮಸ್ಯೆ ನಿವಾರಿಸುವ ಬದಲು ಕೆಲ ಗ್ರಾ.ಪಂ.ಸದಸ್ಯರ ಆದಾಯದ ಮೂಲವಾಗಿದ್ದು ದುರಂತ. 12 ನೇ ಹಣಕಾಸು ಯೋಜನೆ ಕೂಡ ಸಮರ್ಪಕವಾಗಿ ಅನುಷ್ಠಾನವಾಗದೆ ಅವ್ಯವಹಾರಕ್ಕೆ ಕಾರಣವಾಗಿದೆ ಎಂದು ಸದಸ್ಯಸದಸ್ಯರ ಮಡುವೆಯೇ ಚಕಮಕಿಗೆ ಕಾರಣವಾಗಿದ್ದು ಮತನೀಡಿ ಗೆಲ್ಲಿಸಿದ ಮತದಾರರ ದೌಭಾ೯ಗ್ಯ. ಐದು ವರ್ಷದ ಆಡಳಿತದಲ್ಲಿ ಅನೇಕ ಕಾರ್ಯದಶಿ೯ಗಳು ಬಂದು ಹೋಗಿದ್ದು ಲೆಕ್ಕನೂ ಇಲ್ಲ, ಪೊಲೀಸ್ ಉಪಸ್ಥಿತಿಯಲ್ಲಿ ಸಭೆಗಳನ್ನು ನಡೆಸಿದ್ದು ಹಿಂದೆಂದೂ ಕೇಳದ ಸಂಗತಿಯಾಗಿತ್ತು.

ಅಧ್ಯಕ್ಷರ ಚುನಾವಣೆಯಲ್ಲಿ ಖಾಯಂ ದುಡ್ಡು, ಸದಸ್ಯರುಗಳೇ ಆಯ್ಕೆ ಮಾಡುವ ಎಂಎಲ್ಸಿ ಚುನಾವಣೆ, ಮಳಿಗೆ ಹರಾಜು, ಕಾಮಗಾರಿ ಕಮಿಷನ್ ಹೀಗೆ ಅನೇಕ ದುಡ್ಡಿನ ಬಾಬತ್ತುಗಳು ಅಭ್ಯಥಿ೯ಗಳ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಐದು ವರ್ಷಗಳಿಂದ ಹಗರಣಗಳು ನೋಡಿ, ಕೇಳಿ, ಪತ್ರಿಕೆಗಳಲ್ಲಿ ಓದಿರುವ ಮತದಾರರು ಯಾರು ಬಂದರೂ ಇಷ್ಟೆ ಎನ್ನುವ ಮನೋಭಾವ ತಾಳಿದ್ದಾರೆ.

(ಹುಳಿಯಾರು ಗ್ರಾಮ ಪಂಚಾಯ್ತಿ ಮುಂದೆ ನಡೆದಿದ್ದ ಧರಣಿಯ ಸಂಗ್ರಹ ಚಿತ್ರ)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.