ವಿಷಯಕ್ಕೆ ಹೋಗಿ

ಶ್ರೀದೇವಿ ಭವನ್ ನ ಬೋಜರಾಜ್ ಗೆ ಕಾಯಕರತ್ನ ಪ್ರಶಸ್ತಿ



ಹುಳಿಯಾರು ಶ್ರೀದೇವಿ ಭವನ್ ಹೋಟಲ್ ಮಾಲಿಕ ಬೋಜರಾಜ್ ಅವರಿಗೆ ಕಾಯಕರತ್ನ ಬಿರುದು ನೀಡಿ ಸನ್ಮಾನಿಸುತ್ತಿರುವುದು.






ಕಳೆದ 4 ದಶಕಗಳಿಂದ ಹೋಟೆಲ್ ಉದ್ಯಮದಲ್ಲಿ ತೊಡಗಿಕೊಂಡಿರುವ ಇಲ್ಲಿನ ರಾಂಗೋಪಾಲ್ ಸರ್ಕಲ್ ಬಳಿಯ ಶ್ರೀದೇವಿ ಭವನ್ ಮಾಲೀಕ ಕೆ.ಬೋಜರಾಜ್ ಅವರಿಗೆ ಹುಳಿಯಾರು ನಾಗರೀಕರ ಪರವಾಗಿ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಪತ್ರಕರ್ತರ ಸಂಘವು ಇತ್ತೀಚೆಗೆ ಕಾಯಕರತ್ನ ಬಿರುದು ನೀಡಿ ಸನ್ಮಾನಿಸಿತು.


ಪರಿಚಯ: ಸದಾ ಬಿಳಿ ಬನಿಯನ್, ನೀಲಿ ಅಥವಾ ಬಿಳಿ ಪಂಚೆ ತೊಟ್ಟು ಮುಂಜಾನೆಯಿಂದ ಸಂಜೆಯವರೆಗೂ ಜಾಗ ಬಿಟ್ಟು ಕದಲದೆ ಹೋಟೆಲ್ ಕ್ಯಾಷಿಯರ್ ಛೇರ್ ನಲ್ಲಿ ಕಾಣಸಿಗುವ ಇವರು ಆಗಾಗ ಈರುಳ್ಳಿ, ಬೈಟು ಟೀ, ಜಾಮೂನ್, ಕಾರ ಎಂದು ಕೂಗಿ ಸುಮ್ಮನಾಗುವ ದೃಶ್ಯ ಮಾಮೂಲು.ಹುಳಿಯಾರಿನ ತಿಂಡಿ ಪ್ರಿಯರಿಗೆಲ್ಲ ಚಿರಪರಿಚಿತರಾಗಿರುವ ಇವರ ಬಗ್ಗೆ ಅರಿಯದವರ್ಯಾರು ಇಲ್ಲ.


ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ಸಮೀಪದ ಅಶ್ವಥ್ ಪುರ ಗ್ರಾಮದ ಇವರು 4 ನೇ ತರಗತಿಗೆ ವಿದ್ಯಾಭ್ಯಾಸಕ್ಕೆ ತಿಲಾಂಜಲಿ ಇಟ್ಟು ಜೀವನ ನಿರ್ವಹಣೆಗಾಗಿ ಚಿಕ್ಕವಯಸ್ಸಿನಿಂದಲೇ ಹೋಟೆಲ್ ವೃತ್ತಿ ಆಯ್ದುಕೊಂಡು ದಾವಣಗೆರೆ, ಚಿತ್ರದುರ್ಗದಲ್ಲಿ ಕಾಯಕ ಆರಂಭಿದರು.ನಂತರ ಹುಳಿಯಾರಿನ ಪೇಟೆ ಬೀದಿಯಲ್ಲಿ ಸಾಹುಕಾರ್ ಕೆ.ಸುಬ್ಬರಾವ್ ಹೋಟೆಲ್ಗೆ ಅನಿರೀಕ್ಷಿತವಾಗಿ ಸೇರಿ ಕಾಲಕ್ರಮೇಣ ಇದೇ ಹೋಟೆಲ್ ಮಾಲೀಕರಾದ ಇವರು ಬರೋಬ್ಬರಿ 4 ದಶಕಗಳಿಂದಲೂ ಹೋಟೆಲ್ ಅನ್ನೇ ನಂಬಿ ಬದುಕು ಕಟ್ಟುತ್ತಿದ್ದಾರೆ. ಇಷ್ಟು ಸುಧೀರ್ಘ ವರ್ಷದಿಂದಲೂ ಉದ್ದಿಮೆಯನ್ನೂ ಯಶಸ್ವಿಯಾಗಿ ನಿರ್ವಹಿಸಿದ್ದಾರೆ.


ಮೆದು ಸ್ವಭಾವದ ಇವರು ಎಂದಿಗೂ ಗ್ರಾಹಕರೊಂದಿಗೆ ಜಗಳವಾಡುವುದಿರಲಿ ಗಟ್ಟಿಯಾಗಿಯೂ ಸಹ ಮಾತನಾಡುವುದಿಲ್ಲ. ಅನೇಕ ಎಡರು-ತೊಡರುಗಳ ಮಧ್ಯೆಯೂ ಎದೆಗುಂದದೆ ಕಷ್ಟಪಟ್ಟು ಹೋಟೆಲ್ ನಡೆಸಿಕೊಂಡು ಬಂದಿರುವ ಇವರು ಪೇಟೆ ಹೋಟೆಲ್ ಅನ್ನು ಶ್ರೀದೇವಿ ಭವನ್ ಆಗಿ ಬದಲಿಸಿದ್ದರೂ ಸಹ ಇವತ್ತಿಗೂ ಈರುಳ್ಳಿದೋಸೆ, ಜಾಮೂನ್, ಕಾರದ ರುಚಿ ಹಾಗೂ ಗುಣಮಟ್ಟವನ್ನು ಮುಂಚಿನಂತೆಯೆ ಕಾಯ್ದುಕೊಂಡಿದ್ದಾರೆ.


ಶುಚಿ ಹಾಗೂ ರುಚಿಯೊಂದಿಗೆ ಈ ಭಾಗದ ಜನರ ಹಸಿವು ನೀಗಿಸುತ್ತಿರುವ ಇವರ ಕಾಯಕ ನಿಷ್ಠೆ, ಸ್ವಬಾವ ಹಾಗೂ ವ್ಯಕ್ತಿತ್ವ ಗುರುತಿಸಿ ಹುಳಿಯಾರು ನಾಗರೀಕರ ಪರವಾಗಿ ರೈತ ಸಂಘ ,ಹಸಿರು ಸೇನೆ ಮತ್ತು ಪತ್ರಕರ್ತರ ಸಂಘವು ಇತ್ತೀಚೆಗೆ ನೀಡಿದ ಕಾಯಕರತ್ನ ಬಿರುದು ನೀಡಿ ಸನ್ಮಾನಿಸಿತು.


ರಂಗಕರ್ಮಿ ಅನಂತರಾಮಯ್ಯ, ಕೆನರಾಬ್ಯಾಂಕ್ ಮ್ಯಾನೇಜರ್ ಸತೀಶ್, ಸಾಹಿತಿ ನರಸಿಂಹಮೂರ್ತಿ, ಶ್ಯಾನಬೋಗ್ ರಾಜಣ್ಣ, ಕೆಂಕೆರೆ ಸತೀಶ್, ಸೈಯದ್ ಜಲಾಲ್, ಶ್ರೀಮತಿ ಚಂದ್ರಕಲಾ ಸತೀಶ್, ಕೆ.ಪಿ.ಮಲ್ಲೇಶ್, ಡಿ.ಆರ್.ನರೇಂದ್ರಬಾಬು, ರಂಗನಕೆರೆ ಮಹೇಶ್ ಸೇರಿದಂತೆ ಅಪಾರ ಜನಸ್ತೊಮ ಈ ಅಪರೂಪದ ಸನ್ಮಾನಕ್ಕೆ ಸಾಕ್ಷಿಯಾಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...