ವಿಷಯಕ್ಕೆ ಹೋಗಿ

ಎಂತಹ ಸದಸ್ಯರು ಬೇಕು? ಕರಪತ್ರದ ಮೂಲಕ ಅರಿವು

ನಮ್ಮ ಪಂಚಾಯ್ತಿಗೆ ಅಭಿವೃದ್ಧಿ ಚಿಂತಕರು ಬೇಕು ಎಂದಿರುವ ಹುಳಿಯಾರಿನ ಟಿಪ್ಪೂ ಸುಲ್ತಾನ್ ಯುವಕ ಸಂಘದ ಪದಾಧಿಕಾರಿಗಳು ಪ್ರಸಕ್ತ ಸಾಲಿನ ಗ್ರಾ.ಪಂ.ಚುನಾವಣೆಗೆ ಎಂತಹ ಸದಸ್ಯರನ್ನು ಆಯ್ಕೆ ಮಾಡಬೇಕು ಎಂದು ಮತದಾನದ ಮಹತ್ವವನ್ನು ಕರಪತ್ರದ ಮೂಲಕ ಮತದಾರರನ್ನು ಎಚ್ಚರಗೊಳಿಸುವ ಜವಾಬ್ದಾರಿಯನ್ನು ಹೊತ್ತಿದ್ದಾರೆ.ಮತದಾರರು ಜನಪ್ರತಿನಿಧಿಗಳಿಂದ ಏನ್ನನ್ನು ನಿರೀಕ್ಷಿಸಬೇಕು ಹಾಗೂ ಮತದಾರರ ಬೇಡಿಕೆ ಏನೆಂಬುದರ ಬಗ್ಗೆ ಕರಪತ್ರದ ಮೂಲಕ ಪ್ರಚಾರ ಪಡಿಸಿದ್ದಾರೆ. ಗ್ರಾಮ ಪಂಚಾಯ್ತಿ ಎಂದರೆ ರಾಜ್ಯಕ್ಕೆ ವಿಧಾನಸೌಧ ಇರುವ ಹಾಗೆ ನಮ್ಮ ಗ್ರಾಮಕ್ಕೆ ಈ ಗ್ರಾಮ ಪಂಚಾಯ್ತಿ. ನಮ್ಮ ಗ್ರಾಮದ ಅಗತ್ಯ ಕೆಲಸಗಳನ್ನು ನಾವೇ ನಿರ್ಧರಿಸಿ ಮಾಡಿಸಿಕೊಳ್ಳುವ ಸಂಪೂರ್ಣ ಅಧಿಕಾರ ಇದರಲ್ಲಿದೆ ಎನ್ನುವ ಮಹತ್ವ ಅರಿವು ಮೂಡಿಸುವ ಜೊತೆಗೆ ಈ ಭಾಗದ ಸಮಸ್ಯೆಗಳ ಅರಿವಿರುವ ಹಾಗೂ ಗ್ರಾಮವನ್ನು ಅಭಿವೃದ್ಧಿ ದಾರಿಯಲ್ಲಿ ಕೊಂಡೊಯ್ಯುವ ಸಚಾರಿತ್ಯ ಉಳ್ಳ ಸಮರ್ಥ ಅಭ್ಯಥಿ೯ಯನ್ನು ನಿರ್ಧರಿಸಿ ಜಾತಿ,ಮತ,ಭೇದ-ಭಾವವಿಲ್ಲದೆ ಆಯ್ಕೆ ಮಾಡುವ ಜವಾಬ್ದಾರಿ ಪಾಠವನ್ನು ಈ ಕರಪತ್ರದಲ್ಲಿ ಹೇಳಲಾಗಿದೆ. ಹಣ, ಹೆಂಡ, ಸೀರೆಗಳ ಆಮೀಷಕ್ಕೆ ಒಳಗಾಗಿ ಅಸಮರ್ಥರನ್ನು ಆಯ್ಕೆ ಮಾಡಿದಲ್ಲಿ ಮುಂದಿನ ಐದು ವರ್ಷ ಸಮಸ್ಯೆಗಳೊಂದಿಗೆ ಕಾಲ ಕಳೆಯ ಅನಿವಾರ್ಯತೆಯನ್ನು ನಾವೇ ಆಹ್ವಾನಿಸಿದಂತಾಗುತ್ತದೆ. ಹಾಗಾಗಿ ಮತದಾನದ ವೇಳೆ ಜಾಗೃತರಾಗಿ ಮತ ಚಲಾಯಿಸಿ ಎಂಬ ಎಚ್ಚರಿಕೆ ಇದೆ.

ಮತದಾರರ ಬೇಡಿಕೆ : ಸಮರ್ಪಕ ಶುದ್ಧ ಕುಡಿಯುವ ನೀರಿನ ಪೂರೈಕೆ, ಪ್ರತಿ ಬೀದಿಗಳಲ್ಲೂ ಬೀದಿದೀಪಗಳ ಅಳವಡಿಕೆ,ಪ್ರತಿ ದಿನ ಗ್ರಾಮ ಸ್ವಚ್ಚತೆ, ಚರಂಡಿ ಸ್ವಚ್ಚತೆ, ಫಾಗಿಂಗ್, ಬೀದಿ ನಾಯಿ, ಹಂದಿ ಹಾವಳಿ ತಪ್ಪಿಸಿ, ವಿವೇಶನ ರಹಿತರಿಗೆ ನಿವೇಶನ, ವಸತಿ ರಹಿತರಿಗೆ ವಸತಿ ಹೀಗೆ ನಮ್ಮಿಂದ ಆರಿಸಿ ಬರುವ ಪ್ರತಿನಿಧಿಗಳು ಗ್ರಾಮದಲ್ಲಿ ಬಹುಮುಖ್ಯವಾಗಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಪಟ್ಟಿಯೂ ಸಹ ಕರಪತ್ರದ ಹಿಂಬದಿಯಲಿದೆ.

ಒಟ್ಟಾರೆ ಮುಸ್ಲಿಂ ಸಂಘದ ಪದಾಧಿಕಾರಿಗಳು ಗ್ರಾ.ಪಂ.ಚುನಾವಣೆ ಹೇಗಿರಬೇಕು ಎಂಬ ಜವಾಬ್ದಾರಿಯನ್ನು ಸಮರ್ಥವಾಗಿ ಪ್ರದಶಿ೯ಸಿದೆ. ಎಲ್ಲ ಸಂಘ-ಸಂಸ್ಥೆಗಳೂ ಇಷ್ಟು ಮಾತ್ರದ ಮತದಾನದ ಅರಿವು ಮೂಡಿಸುವ ಪ್ರಯತ್ನಕ್ಕೆ ಕೈಹಾಕಿದರೂ ಸಾಕು ಪಂಚಾಯ್ತಿಯನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯಬಹುದು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.