ವಿಷಯಕ್ಕೆ ಹೋಗಿ

ಹುಳಿಯಾರು ಗ್ರಾ.ಪಂ. ಮುಂದೆ ನೀರಿಗಾಗಿ ಪ್ರತಿಭಟನೆ

(ಹುಳಿಯಾರು ಆಜಾದ್ ನಗರದ ನಿವಾಸಿಗಳು ನೀರಿಗಾಗಿ ಪಂಚಾಯ್ತಿ ಕಛೇರಿ ಮುಂದೆ ಪ್ರತಿಭಟನೆ ನಡೆಸುತ್ತಿರುವುದು. ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಪ್ರತಿಭಟನಾನಿರತರ ಸಮಸ್ಯೆ ಆಲಿಸುತ್ತಿರುವುದು)

ಕಳೆದ ಒಂದು ತಿಂಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿ ಮಹಿಳೆಯರು ದಿನಬೆಳಗಾದರೆ ನೀರಿಗಾಗಿ ಪರದಾಡುವಂತಾಗಿದೆ ಎಂದು ಆರೋಪಿಸಿ ಸುಮಾರು ಐವತ್ತಕ್ಕೂ ಹೆಚ್ಚು ಮಹಿಳೆಯರು ಗ್ರಾಮ ಪಂಚಾಯ್ತಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಸಮಸ್ಯೆ ಬಗೆಹರಿಸಿಕೊಂಡ ಘಟನೆ ಹುಳಿಯಾರಿನಲ್ಲಿ ಜರುಗಿದೆ.

ಇಲ್ಲಿನ ಆಜಾದ್ ನಗರಕ್ಕೆ ಬೋರನಕಣಿವೆ ನೀರು ಹಾಗೂ ರೋಟರಿ ಕ್ಲಬ್ ನವರು ವ್ಯವಸ್ಥೆಗೊಳಿಸಿರುವ ಮಿನಿಟ್ಯಾಂಕಿನಿಂದ ನೀರು ಪೂರೈಸಲಾಗುತ್ತಿತ್ತು. ಆದರೆ ಕಳೆದ ತಿಂಗಳಿಂದ ಮೋಟರ್ ಕೆಟ್ಟು ಬೋರನಕಣಿವೆಯ ನೀರು ಪೂರೈಕೆ ಸ್ಥಗಿತಗೊಂಡಿತ್ತು. ಬೋರನಕಣಿವೆ ನೀರು ನಿಂತು ವಾರದಲ್ಲಾಗಲೇ ರೋಟರಿ ಬೋರಿನ ನೀರು ಪೈರೈಕೆಯಲ್ಲಿಯೂ ಸಹ ವ್ಯತ್ಯಯವಾಗಿ ದೂರದ ತೋಟದ ಕೊಳವೆ ಬಾವಿಯಿಂದ ನೀರು ಹೊತ್ತು ತರುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಅಲ್ಲದೆ, ಪಂಚಾಯ್ತಿ ನೀರು ವ್ಯತ್ಯಯವಾದಾಗ ಇಲ್ಲಿನ ಎಪ್ಪತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ಪೂರೈಸುತ್ತಿದ್ದ ಕೈಪಂಪು ಕೆಟ್ಟು ಆರು ತಿಂಗಳಾದರೂ ಸಹ ದುರಸ್ಥಿ ಮಾಡದೆ ತಾತ್ಸಾರ ಮಾಡಲಾಗಿದೆ. ಜೊತೆಗೆ ಪಂಚಾಯ್ತಿಯಿಂದ ಪ್ರತ್ಯೇಕ 2 ಪೈಪ್ ಲೈನ್ ಮಾಡಿ 6 ತಿಂಗಳಾದರೂ ಅದಕ್ಕೆ ಮೈನ್ ಲೈನ್ ಸಂಪರ್ಕ ಕೊಡದಿದ್ದ ಕಾರಣ ನೀರಿನ ಸಮಸ್ಯೆ ಇಲ್ಲಿ ಆಗಿಂದಾಗೆ ಮರುಕಳಿಸುತ್ತಿರುತ್ತದೆ ಎಂದು ಆಪಾದಿಸಿದರು.

ಗ್ರಾಮ ಪಂಚಾಯ್ತಿಗೆ ನೀರಿನ ಸುಂಕ ಕಟ್ಟುತ್ತಿದ್ದರೂ ಕೂಡ ಮೋಟರ್ ಹಾಗೂ ಪೈಪ್ ಲೈನ್ ದುರಸ್ಥಿಗಾಗಿ ಇಲ್ಲಿನ ನೀರುಘಂಟಿ ರಾಮಯ್ಯ ಅವರಿಗೆ ಪ್ರತಿ ಮನೆಗಳಿಂದ ಹಣ ಸಂಗ್ರಹಿಸಿ ಕೊಡಲಾಗಿದೆ. ಅಲ್ಲದೆ, ಸ್ವಚ್ಚತೆ ಸೇರಿದಂತೆ ಇತರೆ ವೆಚ್ಚ ಸಬೂಬು ಹೇಳಿ ಪ್ರತ್ಯೇಕವಾಗಿ ಹಣ ವಸೂಲಿ ಮಾಡುತ್ತಿದ್ದಾರೆ. ಇಷ್ಟು ಕೊಟ್ಟರೂ ಸಹ ದುಡ್ಡು ಕೊಡುವ ಬೀದಿಗಳಿಗೆ ಮೇಲಿಂದ ಮೇಲೆ ನೀರು ಬಿಟ್ಟು ದುಡ್ಡು ಕೊಡದವರಿಗೆ ನೀರು ಬಿಡದೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನೂ ಸಹ ಮಾಡಿದರು.

ಪ್ರತಿಭಟನಾನಿರತರ ಎಲ್ಲಾ ಸಮಸ್ಯೆಗಳನ್ನು ಆಲಿಸಿದ ಕಾರ್ಯದರ್ಶಿ ಗೋಪಾಲಕೃಷ್ಣ ಅವರು ಪ್ರತಿಭಟನಾಕಾರರೊಂದಿಗೆ ಸಮಸ್ಯೆಯ ಸ್ಥಳಕ್ಕೆ ಕುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಇಲ್ಲಿನ ಸರ್ಕಾರಿ ಶಿಕ್ಷಕರೊಬ್ಬರು ರೈಸಿಂಗ್ ಲೈನಿನ್ನಿಂದ ತಮ್ಮ ನೀರಿನ ಟ್ಯಾಂಕಿಗೆ 3 ಅಕ್ರಮ ನಲ್ಲಿ ಸಂಪರ್ಕ ಪಡೆದಿದ್ದರಿಂದ ಸಾರ್ವಜನಿಕ ಮಿನಿ ಟ್ಯಾಂಕಿಗೆ ನೀರು ಹೋಗದೆ ಸಮಸ್ಯೆ ಉಲ್ಬಣಗೊಳ್ಳಲು ಕಾರಣವಾಗಿದೆ ಎಂಬ ಅಂಶ ಬೆಳಕಿಗೆ ಬಂದಿತು.

ತಕ್ಷಣ ತಮ್ಮ ಸಿಬ್ಬಂಧಿಗೆ ಅಕ್ರಮ ಸಂಪರ್ಕ ಕಡಿತಗೊಳಿಸಲು ಸೂಚಿಸಿ. ಅಕ್ರಮ ನಲ್ಲಿ ಸಂಪರ್ಕ ಪಡೆದಿರುವ ಶಿಕ್ಷಕರಿಗೆ ದಂಡ ಸಹಿತ ನೋಟಿಸ್ ನೀಡುವುದಾಗಿ ಹಾಗೂ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ನೀರುಘಂಟಿ ರಾಮಯ್ಯ ಅವರ ಬದಲಿಗೆ ಗೌಸ್ಪೀರ್ ಎನ್ನುವವರನ್ನು ನೇಮಿಸುವುದಾಗಿ ತಿಳಿಸಿ ಇನ್ನು ಮುಂದೆ ನೀರಿನ ಸಮಸ್ಯೆ ಮರುಕಳಿಸದಂತೆ ಭರವಸೆ ನೀಡಿ ಪ್ರತಿಭಟನಾಕಾರರನ್ನು ಶಾಂತಗೊಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.