ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಸಾಮೂಹಿಕ ವಿವಾಹ,ಸಪ್ತಪದಿ ಮೂಲಕ ಸತಿಪತಿಗಳಾದ 20 ಜೋಡಿ

ಹುಳಿಯಾರಿನ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಭಾನುವಾರ ಮದುವೆಯ ಸಂಭ್ರಮ.ಇಲ್ಲಿನ ರೋಟರಿ ಸಂಸ್ಥೆ ಕಳೆದ 27 ವರ್ಷಗಳಿಂದ ಸತತವಾಗಿ ನಡೆಸಿಕೊಂಡು ಬಂದಿರುವ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮದುವೆಯಾಗಲು ಬಂದಿರುವ ವಧುವರರು,ಅವರುಗಳ ಪೋಷಕರು,ಇಷ್ಟಮಿತ್ರರು,ಸ್ನೇಹಿತರುಗಳಿಂದ ಮದುವೆಯ ಸಭಾಂಗಣ ತುಂಬಿತುಳುಕುತಿತ್ತು.ಧರ್ಮಸ್ಥಳದಲ್ಲಿನ ಸಾಮೂಹಿಕ ವಿವಾಹದ ಪರಿಕಲ್ಪನೆ ಹಾಗೂ ಧಮಾ೯ಧಿಕಾರಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ರೋಟರಿ ಸಂಸ್ಥೆ ಅಂದಿನಿಂದಲೂ ಸರಳ ಹಾಗೂ ಸಾಮೂಹಿಕ ವಿವಾಹಕ್ಕೆ ಯಾವೊಂದು ಚ್ಯುತಿ ಬಾರದಂತೆ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬಂದಿದ್ದು ಉಚಿತವಾಗಿ ನಡೆಯುತ್ತ ಬಂದಿರುವ ಮಹೋತ್ಸವದಲ್ಲಿ ಒಟ್ಟು 20 ಜೋಡಿಗಳು ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ ಮಾಡಿದರು.
ಸಾಮೂಹಿಕ ವಿವಾಹದಲ್ಲಿ ಭಾಗವಹಿಸಿದ್ದ ವಧು-ವರರಿಗೆ ಬಿಳಿ ಧೋತಿ,ಅಂಗಿ,ಪೇಟ,ಬಾಸಿಂಗ, ರೇಷ್ಮೆ ಸೀರೆ, ಕಾಲುಂಗುರ, ಬಳೆ, ಮಾಂಗಲ್ಯ, ಮಡಲಕ್ಕಿ ಸೇರಿದಂತೆ ಬಂದವರಿಗೆ ಊಟ ತಿಂಡಿ ಎಲ್ಲಕ್ಕೂ ದಾನಿಗಳ ನೆರವಿರುವದರಿಂದ ಉಚಿತ. ಪೋಷಕರಿಗೆ ಪೈಸೆಯಷ್ಟು ಖಚಿ೯ಲ್ಲ.

ಇಂತಹ ಮದುವೆಗೆ ಗೋಡೆಕೆರೆ ಮಹಾಸಂಸ್ಥಾನದ ಚರಪಟ್ಟಾಧ್ಯಕ್ಷ ಶ್ರೀ ಮೃತ್ಯುಂಜಯ ದೇಶಿಕೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಶುಭ ಹಾರೈಸಿದರು. ಮಾನವೀಯ ಮೌಲ್ಯಗಳನ್ನು ಅರ್ಥಮಾಡಿಕೊಂಡು ಸತಿ-ಪತಿ ಇಬ್ಬರೂ ಸಮಾನರು ಎಂಬ ಭಾವನೆಯಲ್ಲಿ ಅನ್ಯೋನತೆಯಿಂದಲೂ ಸಂಸಾರ ಜೀವನವನ್ನು ನಿರ್ವಹಿಸಬೇಕು ಎಂದು ನೂತನ ವಧು-ವರರಿಗೆ ಕಿವಿಮಾತು ಹೇಳಿದರು. ದುಬಾರಿ ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹವೊಂದೆ ಮಾರ್ಗವಾಗಿದ್ದು ಬಡವರ ಹಾಗೂ ಮಧ್ಯಮ ವರ್ಗದವರ ಪಾಳಿಗೆ ವರದಾನವಾಗಿರುವ ಇಂತಹ ವಿವಾಹ ನಡೆಸುತ್ತಾ ಬಂದಿರುವ ರೋಟರಿ ಸಂಸ್ಥಯ ಕಾರ್ಯ ಶ್ಲಾಘನೀಯ ಎಂದರು.ಸತಿಪತಿಗಳು ಪರಸ್ಪರ ಅಥೈ೯ಸಿಕೊಂಡು ಕಲಹಕ್ಕೆ ಅವಕಾಶ ನೀಡದೆ ಸಾರ್ಥಕ ಜೀವನ ನಡೆಸಿ ಎಂದು ಆಶೀರ್ವಚಿಸಿದರು.

ರೋಟರಿ ಗೌ.ಅಧ್ಯಕ್ಷ ಟಿ.ಆರ್.ಲಕ್ಷ್ಮೀಕಾಂತ್, ಅಧ್ಯಕ್ಷ ಆರ್.ಗೋಪಿನಾಥ್, ರೋಟರಿ ಕಮ್ಯೂನಿಟಿ ಕಾಪ್೯ ರಮೇಶ್, ಯೋಗಿನಾರಾಯಣ ಐಟಿಐ ಕಾಲೇಜಿನ ಪ್ರಾಂಶುಪಾಲ ಬಸವರಾಜು, ದಾನಿಗಳಾದ ರಾಜಗೋಪಾಲಚಾರ್, ಟಿ.ಜಿ.ಮಂಜುನಾಥಗುಪ್ತ, ಎಸ್.ಎಸ್.ಮಲ್ಲಿಕಾಜು೯ನಯ್ಯ, ಟಿ.ಜಿ.ರಮಾಕಾಂತ್, ರಷ್ಮಿ ಎಲೆಕ್ಟ್ರಿಕಲ್ಸ್ ಶ್ರೀನಿವಾಸ್, ನಿವೃತ್ತ ಮುಖ್ಯ ಶಿಕ್ಷಕ ತಿಮ್ಮಯ್ಯ, ಶಿಕ್ಷಕ ಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಈ ಶುಭ ಸಂದರ್ಭದಲ್ಲಿ ಹುಳಿಯಾರು ಹೋಬಳಿಯಲ್ಲದೆ ಹೊಸದುರ್ಗ, ತುರುವೇಕೆರೆ, ಕಡೂರು, ಅರಸೀಕೆರೆ, ಶಿರಾ ತಾಲೂಕುಗಳ ಒಟ್ಟು 20 ವಧು-ವರರು ದಾಂಪತ್ಯ ಜೀವನ ಸ್ವೀಕರಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...