ವಿಷಯಕ್ಕೆ ಹೋಗಿ

ಹುಳಿಯಾರಿನ ಪ್ರಾಕೃಸ ಬ್ಯಾಂಕಿಗೆ 50 ಸಾವಿರ ಅನುದಾನ: ಕೆ.ಎನ್.ಆರ್

1992 ರ ಸಹಕಾರಿ ಕಾಯ್ದೆಯನ್ವಯ ಎಲ್ಲಾ ವಿಧದ ಸಹಕಾರ ಸಂಘಗಳಲ್ಲಿ ಶೇ.20 ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸಾಲ ನೀಡುವುದು ಕಡ್ಡಾಯವಾಗಿದ್ದು ಸಹಕಾರ ಸಂಘಗಳು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಸಹಕಾರಿ ಕಾಯ್ದೆಯಂತೆ ಕೆಲಸ ನಿರ್ವಹಿಸಿದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರು ಅಭಿಪ್ರಾಯ ಪಟ್ಟರು.

ಹುಳಿಯಾರಿನ ಪ್ರಾಥಮಿಕ ಕೃಷಿ ಸಹಕಾರ ಬ್ಯಾಂಕಿನಲ್ಲಿ ಲ್ಲಿ ದ್ವಿಚಕ್ರವಾಹನ ಹಾಗೂ ಚಿನ್ನಾಭರಣ ಸಾಲ ವಿತರಣೆ ಚಾಲನೆ ನೀಡಿ ಮಾತನಾಡಿದ ಅವರು ಸದರಿ ಬ್ಯಾಂಕಿನ ಮೂಲಭೂತ ಸೌಲಭ್ಯ ನಿಮಾ೯ಣಕ್ಕೆ ನೆರವಾಗುವ ನಿಟ್ಟಿನಲ್ಲಿ ತಮ್ಮ ಅಪೆಕ್ಸ್ ಬ್ಯಾಂಕ್ ನಿದೇ೯ಶಕರ ಅನುಧಾನದಲ್ಲಿ 50 ಸಾವಿರ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಸಹಕಾರ ಸಂಘಗಳು ಸಹಕಾರಿ ಸದಸ್ಯರ ಸಹಕಾರದಿಂದ ಬೆಳೆಯಬೇಕಿದ್ದು ಪ್ರತಿಯೊಬ್ಬ ಸದಸ್ಯರು ವಾಷಿ೯ಕ ಮಹಾಸಭೆಗೆ ಕಡ್ಡಾಯವಾಗಿ ಹಾಜರಾಗುವ, ಸೂಕ್ತ ಸಲಹೆ-ಸಚನೆ ನೀಡುವ, ಅನುಮಾನಗಳನ್ನು ಪ್ರಶ್ನಿಸುವ ಹಾಗೂ ಕಾರ್ಯದಶಿ೯ಯಿಂದ ಸೂಕ್ತ ಸಮಜಾಯಿಸಿ ಸಿಗದಿದ್ದಲ್ಲಿ ಮೇಲಾಧಿಕಾರಿಗಳಿಗೆ ಪತ್ರ ಬರೆಯುವ ಮನೋಭಾವವನ್ನು ಬೆಳಸಿಕೊಳ್ಳಬೇಕು ಎಂದರು.

ತು.ಜಿ.ಸ.ಕೇ.ಬ್ಯಾಂಕ್ ನಿದೇ೯ಶಕ ಎಸ್.ಆರ್.ರಾಜ್ ಕುಮಾರ್ ಅವರು ಮಾತನಾಡಿ ಕೆ.ಎನ್.ಆರ್ ಅವರು ಹಳ್ಳಿ ರೈತರ ಕಷ್ಟಕ್ಕೆ ಸ್ಪಂಧಿಸುವ ಸಲುವಾಗಿ ರಾಜ್ಯದಲ್ಲಿ ಪ್ರಪ್ರಥಮ ಭಾರಿಗೆ ಯಾವುದೇ ಅಡಮಾನವಿಲ್ಲದೆ ಕೇವಲ ನಂಬಿಕೆಯ ಮೇಲೆ ಸ್ತ್ರೀಶಕ್ತಿ ಸಂಘಗಳಿಗೆ 1 ರಿಂದ 5 ಲಕ್ಷ ರು.ವರೆವಿಗೆ ಸಾಲ ನೀಡಿದರು. ವಾಣಿಜ್ಯ ಬ್ಯಾಂಕುಗಳು ಇದನ್ನು ಅನುಕರಿಸಿ ಸ್ತ್ರೀಶಕ್ತಿ ಸಂಘಗಳಿಗೆ ಸಾಲ ನೀಡುತ್ತಿವೆ ಎಂದರಲ್ಲದೆ ಚಿ.ನಾ.ಹಳ್ಳಿ ತಾಲೂಕಿನ ರೈತರು ಮಳೆ ಮಾರುತಗಳನ್ನು ನಂಬಿ ವ್ಯವಸಾಯ ಮಾಡುವವರಾಗಿದ್ದು ಮಳೆ ಕೈಕೊಟ್ಟರೆ ಅವರ ಜೀವನ ನಿರ್ವಹಣೆ ಏರುಪೇರಾಗುತ್ತದೆ. ಹಾಗಾಗಿ ಉಪಕಸುಬುಗಳಿಗೆ ಬ್ಯಾಂಕುಗಳು ಸಾಲ ನೀಡಬೇಕು ಎಂದರು.

ತು.ಜಿ.ಸ.ಕೇ.ಬ್ಯಾಂಕ್ ಕೆಂಚಮಾರಯ್ಯ ಅವರು ಮಾತನಾಡಿ ರಾಜ್ಯದಲ್ಲಿ ಮೊದಲ ಭಾರಿಗೆ ಕಾಮದೇನು ಕ್ರೆಡಿಟ್ ಕಾಡ್೯ ಹಾಗೂ ಯಶಸ್ವಿನಿಗೆ ಅರ್ಧ ಹಣ ಬ್ಯಾಂಕಿನಿಂದ ಕಟ್ಟುವ ಮಹತ್ವದ ಯೋಜನೆ ಜಾರಿಗೆ ತಂದ ಕೀತಿ೯ ಕೆ.ಎನ್.ಆರ್ ಗೆ ಸಲ್ಲಬೇಕು ಎಂದರಲ್ಲದೆ ಯಾವುದೇ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಸಿಗದ ಕಡಿಮೆ ಬಡ್ಡಿದರ ಸಾಲ ಡಿಸಿಸಿ ಬ್ಯಾಂಕ್ ಹಾಗೂ ಸಹಕಾರ ಸಂಘಗಳಲ್ಲಿ ಸಿಗಲಿದ್ದು ಇದರ ಸದುಪಯೋಗ ಪಡೆದುಕೊಂಡು ಆಥಿ೯ಕ ಚೈತನ್ಯ ಪಡೆದುಕೊಳ್ಳುವಂತೆ ಕರೆ ನೀಡಿದರು.

ಈ ಸಮಾರಂಭದ ಅಧ್ಯಕ್ಷತೆಯನ್ನು ಹುಳಿಯಾರು ಪ್ರಾ.ಕೃ.ಸ ಬ್ಯಾಂಕ್ ಅಧ್ಯಕ್ಷ ಬಿ.ಎಸ್.ರಾಮಯ್ಯ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತು.ಜಿ.ಸ.ಕೇ.ಬ್ಯಾಂಕ್ ವ್ಯವಸ್ಥಾಪಕ ನಿದರ್ೇಶಕ ಟಿ.ಎ.ನರಸಿಂಹಮೂತಿ೯, ಕುಬೇಂದ್ರ ಕುಮಾರ್, ರಾಮಕೃಷ್ಣಪ್ಪ, ಎಸ್.ಬಿ.ಜಯರಾಂ, ಜಾಫರ್ ಸಾಬ್ ಮತ್ತಿತರರು ಭಾಗವಹಿಸಿದ್ದರು


ಈ ಸಂದರ್ಭದಲ್ಲಿ ನೂತನ ಕಾರ್ಯಕಾರಿ ಮಂಡಳಿ ಸದಸ್ಯರಾದ ಕೆ.ರಮೇಶ್, ಎಚ್.ಆರ್.ರಂಗನಾಥ್, ಬಾಲಯ್ಯ, ಎನ್.ಜಿ.ಬೋರಲಿಂಗಯ್ಯ, ಕೆಂಚಮ್ಮ, ಎ.ಟಿ.ಗುರುವಯ್ಯ, ಮೇಲ್ವಿಚಾರಕ ಎಚ್.ಬಿ.ಜಯರಾಂ, ವ್ಯವಸ್ಥಾಪಕ ಶಿವಣ್ಣ ಅವರು ಉಪಸ್ಥಿತರಿದ್ದರು.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...