ವಿಷಯಕ್ಕೆ ಹೋಗಿ

ನೀರಿನ ಸದ್ಭಳಕೆಗೆ ಒತ್ತು ನೀಡಿ: ಸೋಮಶೇಖರಪ್ಪ

(ಫೋಟೊ ವಿವರ:ಹುಳಿಯಾರು ಹೋಬಳಿ ಅವಳಗೆರೆ ಸಮೀಪದ ತಾರೀಕಟ್ಟೆ ತಾಂಡ್ಯದಲ್ಲಿ ಏರ್ಪಡಿಸಿದ್ದ ಭತ್ತದ ಬೆಳೆಯ ಕ್ಷೇತ್ರೋತ್ಸವದ ಉದ್ಘಾಟನೆಯನ್ನು ಶ್ರೀ ಮಾರುತಿ ಕೆರೆ ಅಭಿವೃದ್ದಿ ಸಂಘದ ಅಧ್ಯಕ್ಷ ಮಹಾಲಿಂಗಪ್ಪ ನೆರವೇರಿಸಿದರು. ಸೋಮಶೇಖರ್, ಶ್ರೀನಿವಾಸಮೂತಿ೯, ವೆಂಕಟೇಶ್, ಸಂತೋಷ್, ಕರಿಯಮ್ಮ ನಾಗರಾಜು ಮತ್ತಿತರರು ಇದ್ದಾರೆ.)
ನೀರಿನ ಸದ್ಭಳಕೆಗೆ ಒತ್ತು ನೀಡಿ: ಸೋಮಶೇಖರಪ್ಪ
ದಿನೆ ದಿನೆ ಮಳೆಯ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಕೆರೆಗಳಲ್ಲಿ ನೀರಿನ ಸಂಗ್ರಹಣೆ ಕಡಿಮೆಯಾಗುತ್ತಿದೆ. ಅಲ್ಲದೆ, ಅಂತರ್ಜಲ ಮಟ್ಟ ಕುಸಿಯುತ್ತಿದ್ದು ರೈತರು ನೀರಿನ ಪ್ರಮಾಣ ಮನಗಂಡು ನೀರಿನ ಸದ್ಭಳಕೆಗೆ ಒತ್ತು ನೀಡಿ ಅಲ್ಪಾವದಿ ಬೆಳೆ, ಹೊಸ ಪದ್ಧತಿಯ ಬೆಳೆ ಬೆಳೆದು ನೀರು ನಿರ್ವಹಣೆ ಮಾಡಬೇಕೆಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಜಿಲ್ಲಾ ಸಂಯೋಜಕ ಸೋಮಶೇಖರಪ್ಪ ಕರೆ ನೀಡಿದರು.

ಬೆಂಗಳೂರು ಜಲ ಸಂವರ್ಧನೆ ಯೋಜನಾ ಸಂಘ, ಕೃಷಿ ವಿಶ್ವ ವಿದ್ಯಾಲಯ, ಜಿಲ್ಲಾ ಮಾರ್ಗದರ್ಶನ ತಂಡ, ಶ್ರೀಮಾರುತಿ ಕೆರೆ ಅಭಿವೃದ್ಧಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹುಳಿಯಾರು ಹೋಬಳಿಯ ಅವಳಗೆರೆ ಸಮೀಪದ ತಾರೀಕಟ್ಟೆ ತಾಂಡ್ಯದಲ್ಲಿ ರೈತರ ಕ್ಷೇತ್ರ ಪಾಠಶಾಲೆ ಅಡಿಯಲ್ಲಿ ಏರ್ಪಡಿಸಿದ್ದ ಭತ್ತ ಬೆಳೆಯ ಕ್ಷೇತ್ರೋತ್ಸವದಲ್ಲಿ ಅವರು ಮಾತನಾಡಿದರು.

ನೀರಿನ ಸದ್ಭಳಕೆಯ ನಿಟ್ಟಿನಲ್ಲಿ ಕನಾ೯ಟಕ ಸಮುದಾಯ ಆಧಾರಿತ ಕೆರೆ ನಿರ್ವಹಣೆ ಯೋಜನೆಯಲ್ಲಿ ಆಯ್ಕೆಯಾಗಿರುವ ರಾಜ್ಯದ 8 ಜಿಲ್ಲೆಗಳಲ್ಲಿನ 24 ತಾಲೂಕುಗಳ 694 ಕೆರೆಗಳಲ್ಲಿನ ನೀರುಘಂಟಿಗಳ ಜ್ಞಾನದ ಮಟ್ಟಕ್ಕೆ ಅನುಗುಣವಾಗಿ ನೀರು ನಿರ್ವಹಣೆ, ನೀರಿನ ಅವಶ್ಯಕತೆಗೆ ಅನುಗುಣದ ಬೆಳೆ ತಿಳುವಳಿಕೆ ಹೀಗೆ ಅನೇಕ ವಿಷಯದ ಬಗ್ಗೆ ಶೀಘ್ರದಲ್ಲಿಯೇ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ತುಮಕೂರು ಕೃಷಿ ತಜ್ಞ ಶ್ರೀನಿವಾಸಮೂತಿ೯ ಅವರು ಮಾತನಾಡಿ ರಾಸಾಯನಿಕ ಗೊಬ್ಬರವನ್ನು ಕಡಿಮೆ ಮಾಡಿ ಖಚಿ೯ಲ್ಲದೆ ತಯಾರಿಸಿದ ಸಾವಾಯವ ಗೊಬ್ಬರ ಬಳಸಿ ಹಾಗೂ ರಾಸಾಯನಿಕ ಔಷಧಿ ಬದಲು ಬೇವಿನ ಬೀಜ, ಬೆಳುಳ್ಳಿ ಕಷಾಯ ಬಳಸಲು ರೈತರು ಮುಂದಾಗಬೇಕು. ಇದರಿಂದ ಹೆಚ್ಚು ಇಳುವರಿ ಬರುತ್ತದೆ, ಮಣ್ಣಿನ ಫಲವತ್ತತೆ ಹೆಚ್ಚುತ್ತದೆ ಎಂದು ಹೇಳಿದರು.

ಜಿಲ್ಲಾ ಮಾರ್ಗದರ್ಶನ ತಂಡದ ಹುಳಿಯಾರು ಮುಖ್ಯಸ್ಥ ವೆಂಕಟೇಶ್ ಮಾತನಾಡಿದರು.
ಶ್ರೀ ಮಾರುತಿ ಕೆರೆ ಅಭಿವೃದ್ಧಿ ಸಂಘದ ಅಧ್ಯಕ್ಷ ಮಹಾಲಿಂಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇಂಜಿನಿಯರ್ ಸಂತೋಷ್, ಗ್ರಾ.ಪಂ.ಸದಸ್ಯ ನಾಗರಾಜು, ಕರಿಯಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ರಮೇಶ್, ರೇವಣ್ಣ, ಜಯಣ್ಣ, ಕಾಂತರಾಜು, ರಜುಲ್ ಮತ್ತಿತರರು ಉಪಸ್ಥಿತರಿದ್ದರು.

(ಫೋಟೊ ವಿವರ:ಹುಳಿಯಾರು ಹೋಬಳಿ ಅವಳಗೆರೆ ಸಮೀಪದ ತಾರೀಕಟ್ಟೆ ತಾಂಡ್ಯದಲ್ಲಿ ಏರ್ಪಡಿಸಿದ್ದ ಭತ್ತದ ಬೆಳೆಯ ಕ್ಷೇತ್ರೋತ್ಸವದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಜಿಲ್ಲಾ ಸಂಯೋಜಕ ಸೋಮಶೇಖರಪ್ಪ ಮಾತನಾಡಿದರು.)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...