ವಿಷಯಕ್ಕೆ ಹೋಗಿ

ಸಪ್ತಗಿರಿ ಕಾಯರ್ ಫೈಬರ್ಸ್ ಗೆ ಸೆಂಟ್ರಲ್ ಕಾಯರ್ ಬೋಡ್೯ ತಂಡದ ಭೇಟಿ

ಸಪ್ತಗಿರಿ ಕಾಯರ್ ಫೈಬರ್ಸ್ ಗೆ ಸೆಂಟ್ರಲ್ ಕಾಯರ್ ಬೋಡ್೯ ತಂಡದ ಭೇಟಿ
---------------------------------------
ಕಾಯರ್ ಇಂಡಸ್ಟ್ರಿ ಬಗ್ಗೆ ಮೆಚ್ಚುಗೆ- ನೂತನ ತಂತ್ರಜ್ಞಾನ ಬಳಕೆಗೆ ಸಲಹೆ

ನಾರು ಉದ್ದಿಮೆಯ ಅಧ್ಯಯನದ ಸಲುವಾಗಿ ಕನಾ೯ಟಕ ರಾಜ್ಯಕ್ಕೆ ಆಗಮಿಸಿರುವ ಸೆಂಟ್ರಲ್ ಕಾಯರ್ ಬೋಡ್೯ ರಿಮೋಟ್ ಸ್ಕೀಂ ಛೇರ್ಮನ್ ಹಾಗೂ ಕೇರಳ ಶಾಸಕ ಆನಂದನ್ ಅವರ ನೇತೃತ್ವದ ತಂಡ ಹುಳಿಯಾರಿನ ಪೇಟೆ ಬೀದಿಯಲ್ಲಿರುವ ರೂಪಾ ಚಂದ್ರಶೇಖರ್ ಮಾಲೀಕತ್ವದ ಸಪ್ತಗಿರಿ ಕಾಯರ್ ಫೈಬರ್ಸ್ ಗೆ ಸೋಮವಾರ ಭೇಟಿ ನೀಡಿದರು.ಉತ್ತಮ ಗುಣಮಟ್ಟದ ನಾರಿನ ವಿವಿಧ ಉತ್ಪನ್ನಗಳನ್ನು ತಯಾರಿಸಿ ಉತ್ಪಾದನೆಯಲ್ಲಿ ಉತ್ತಮ ಸಾಧನೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ನಾರು ತಯಾರಿಕೆ ಬಗ್ಗೆ ವಿವಿಧ ಕಾರ್ಯ ಹಂತಗಳನ್ನು ವೀಕ್ಷಿಸಿದ ತಂಡ ನೂತನ ತಂತ್ರಜ್ಞಾನ ಬಳಸಿ ಘಟಕ ಅಭಿವೃದ್ಧಿಪಡಿಸಲು ಬೋಡ್೯ನಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.ನಂತರ ಇಲ್ಲಿನ ನಾರಿನ ಉದ್ದಿಮೆ ಬಗ್ಗೆ ಪ್ರತಿಕಿಯೆ ವ್ಯಕ್ತಪಡಿಸಿದ್ದಿಷ್ಟು.


ತಾಂತ್ರಿಕತೆಯಲ್ಲಿ ಬಹಳ ಹಿಂದಿದೆ: ಕನಾ೯ಟಕ ರಾಜ್ಯ ಕಲ್ಪತರು ನಾಡೆಂದು ಹೆಸರಾಗಿದ್ದು ನಾರು ಉದ್ದಿಮೆ ನಂಬಿ ಅನೇಕರು ಜೀವನ ಸಾಗಿಸುತ್ತಿದ್ದಾರೆ. ರಾಷ್ಟ್ರದಲ್ಲಿ ಕನಾ೯ಟಕ ರಾಜ್ಯ ನಾರು ಉತ್ಪಾದನೆಯಲ್ಲಿ 3 ನೇ ಸ್ಥಾನದಲ್ಲಿದ್ದು ಇಲ್ಲಿನ 16 ಜಿಲ್ಲೆಗಳಲ್ಲಿ ನಾರು ಉದ್ದಿಮೆಗಳಿವೆ. ಆದರೆ ಕೇರಳ ಹಾಗೂ ತಮಿಳುನಾಡಿಗೆ ಹೋಲಿಸಿದರೆ ಕನಾ೯ಟಕ ತಾಂತ್ರಿಕತೆಯಲ್ಲಿ ಬಹಳ ಹಿಂದಿದೆ. ಬ್ಯಾಂಕುಗಳು ಸಾಲ ನೀಡಲು ಹಿಂದೇಟು ಹಾಕುತ್ತಿರುವುದು ಪ್ರಮುಖ ಕಾರಣವಾಗಿದೆ. ಈ ನಿಟ್ಟಿನಲ್ಲಿ ಆಸಕ್ತ ಉದ್ದಿಮೆದಾರರು ಹಾಗೂ ಬ್ಯಾಂಕ್ ಮ್ಯಾನೇಜರ್ ತಂಡವನ್ನು ಕೇರಳಕ್ಕೆ ಕರೆಸಿಕೊಂಡು ಅಲ್ಲಿನ ತಂತ್ರಜ್ಞಾನ ಹಾಗೂ ಮಾರುಕಟ್ಟೆ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸುವುದಾಗಿ ಹೇಳಿದರು.

ಕೇರಳ ಹಾಗೂ ತಮಿಳುನಾಡು ಸಕಾ೯ರ ಈ ಉದ್ದಿಮೆಗೆ ನೀಡುವ ಪ್ರೋತ್ಸಾಹ, ಸಹಕಾರ, ಸೌಲಭ್ಯಗಳನ್ನು ಕನಾ೯ಟಕ ಸಕಾ೯ರ ನೀಡುತ್ತಿಲ್ಲ.ಆ ರಾಜ್ಯಗಳಂತೆ ಇಲ್ಲೂ ಕೂಡ ನಾರಿನ ಉದ್ದಿಮೆಗಾಗಿ ಪ್ರತ್ಯೇಕ ಸಚಿವಾಲಯವನ್ನೇ ಸ್ಥಾಪಿಸಿ ವಿಶೇಷ ಅನುಧಾನದ ವ್ಯವಸ್ಥೆ ಕಲ್ಪಸಿದಲ್ಲಿ ಮಾತ್ರ ನಾರು ಉತ್ಪಾದನೆಯ ಪ್ರಗತಿ ಸಾಧ್ಯ ಎಂದರು

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಯರ್ ಪಿತ್ ಗೂ ಬೇಡಿಕೆ ಬಂದಿದೆ. ನೂತನ ತಂತ್ರಜ್ಞಾನ ಅಳವಡಿಸಿಕೊಂಡು ಉತ್ಪಾದನೆ ಸಾಮಥ್ಯ ಹೆಚ್ಚಿಸುವ ಹಾಗೂ ಹೊಸಬರನ್ನು ಈ ಉದ್ದಿಮೆಗೆ ಕರೆತರುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸಕಾ೯ರ ಕಳೆದ ಬಾರಿ 200 ಕೋಟಿ ರು. ಅನುದಾನ ನೀಡಿದ್ದು ಈ ಬಾರಿ 300 ಕೋಟಿ ರು. ಬೇಡಿಕೆ ಸಲ್ಲಿಸಲಾಗಿದೆ ಎಂದು ವಿವರಿಸಿದರು.

ಉರುವಲಾಗಿ ಬಳಕೆಗೆ ಅಸಮಧಾನ: ಇಲ್ಲಿ ಬಹಳಷ್ಟು ಮಂದಿ ತೆಂಗಿನ ಮೊಟ್ಟೆಯನ್ನು ಉರುವಲಿಗಾಗಿ ಬಳಕೆ ಮಾಡುತ್ತಿರುವುದು ದುರದೃಷ್ಟಕರ.ಉರುವಲು ಬದಲಾಗಿ ತೆಂಗಿನ ಮಟ್ಟೆಯಿಂದ ನಾರು ತಯಾರಿಸುವುದು ಅತ್ಯಂತ ಲಾಭಕರ ಅಲ್ಲದೆ ನಿರುದ್ಯೋಗ ಸಮಸ್ಯೆ ಕೂಡ ನಿವಾರಿಸಬಹುದು.ಈ ನಿಟ್ಟಿನಲ್ಲಿ ಸಕಾ೯ರ ನಾರು ತಯಾರಿಕಾ ಗುಡಿಕೈಗಾರಿಕೆಗೆ ಪ್ರೋತ್ಸಹ ನೀಡಬೇಕು ಹಾಗೂ ಉರುವಲು ಬಳಕೆಯನ್ನು ತಡೆಯಲು ಕಠಿಣ ಕಾನೂನು ರಚಿಸಬೇಕೆಂದರು.

ಅಖಿಲ ಭಾರತ ನಾರು ಉತ್ಪಾದಕರ ಸಂಘದ ಅಧ್ಯಕ್ಷ ಕಾಮರಾಜನ್, ಕಾಯರ್ ಬೋಡ್೯ ಸದಸ್ಯ ಪ್ರಸಾದ್, ಸಹಾಯಕ ನಿದೇ೯ಶಕ ಸುಧಾಕರ್ ಪಿಳ್ಳೆ, ಕೆನರಾ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಎಂ.ವಿ.ಸತ್ಯನ್, ಮ್ಯಾನೇಜರ್ ಸತೀಶ್, ಹುಳಿಯಾರು ಕಾಯರ್ ಇಂಡಸ್ಟ್ರಿಯ ಎಲ್.ಆರ್.ಚಂದ್ರಶೇಖರ್, ಎಲ್.ಆರ್.ಬಾಲಾಜಿ ಉಪಸ್ಥಿತರಿದ್ದರು.

ನಂತರ ಸಮೀಪದ ಪೋಚಕಟ್ಟೆ ಲಂಬಾಣಿ ತಾಂಡ್ಯಕ್ಕೆ ತೆರಳಿ ಅಲ್ಲಿನ ಪ್ರತಿಯೊಂದು ಮನೆಯಲ್ಲಿಯೂ ನಾರಿನ ಹುರಿ ತಯಾರಿಸುತ್ತಿರುವುದನ್ನು ಕಂಡು ಕಾಯರ್ ಬೋಡ್೯ನಿಂದ ಸಬ್ಸಿಡಿಯಲ್ಲಿ ವಿದ್ಯುತ್ ಚಾಲಿತ ರಾಟೆ ನೀಡುವುದಾಗಿ ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.