ವಿಷಯಕ್ಕೆ ಹೋಗಿ

ಸಪ್ತಗಿರಿ ಕಾಯರ್ ಫೈಬರ್ಸ್ ಗೆ ಸೆಂಟ್ರಲ್ ಕಾಯರ್ ಬೋಡ್೯ ತಂಡದ ಭೇಟಿ

ಸಪ್ತಗಿರಿ ಕಾಯರ್ ಫೈಬರ್ಸ್ ಗೆ ಸೆಂಟ್ರಲ್ ಕಾಯರ್ ಬೋಡ್೯ ತಂಡದ ಭೇಟಿ
---------------------------------------
ಕಾಯರ್ ಇಂಡಸ್ಟ್ರಿ ಬಗ್ಗೆ ಮೆಚ್ಚುಗೆ- ನೂತನ ತಂತ್ರಜ್ಞಾನ ಬಳಕೆಗೆ ಸಲಹೆ

ನಾರು ಉದ್ದಿಮೆಯ ಅಧ್ಯಯನದ ಸಲುವಾಗಿ ಕನಾ೯ಟಕ ರಾಜ್ಯಕ್ಕೆ ಆಗಮಿಸಿರುವ ಸೆಂಟ್ರಲ್ ಕಾಯರ್ ಬೋಡ್೯ ರಿಮೋಟ್ ಸ್ಕೀಂ ಛೇರ್ಮನ್ ಹಾಗೂ ಕೇರಳ ಶಾಸಕ ಆನಂದನ್ ಅವರ ನೇತೃತ್ವದ ತಂಡ ಹುಳಿಯಾರಿನ ಪೇಟೆ ಬೀದಿಯಲ್ಲಿರುವ ರೂಪಾ ಚಂದ್ರಶೇಖರ್ ಮಾಲೀಕತ್ವದ ಸಪ್ತಗಿರಿ ಕಾಯರ್ ಫೈಬರ್ಸ್ ಗೆ ಸೋಮವಾರ ಭೇಟಿ ನೀಡಿದರು.ಉತ್ತಮ ಗುಣಮಟ್ಟದ ನಾರಿನ ವಿವಿಧ ಉತ್ಪನ್ನಗಳನ್ನು ತಯಾರಿಸಿ ಉತ್ಪಾದನೆಯಲ್ಲಿ ಉತ್ತಮ ಸಾಧನೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ನಾರು ತಯಾರಿಕೆ ಬಗ್ಗೆ ವಿವಿಧ ಕಾರ್ಯ ಹಂತಗಳನ್ನು ವೀಕ್ಷಿಸಿದ ತಂಡ ನೂತನ ತಂತ್ರಜ್ಞಾನ ಬಳಸಿ ಘಟಕ ಅಭಿವೃದ್ಧಿಪಡಿಸಲು ಬೋಡ್೯ನಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.ನಂತರ ಇಲ್ಲಿನ ನಾರಿನ ಉದ್ದಿಮೆ ಬಗ್ಗೆ ಪ್ರತಿಕಿಯೆ ವ್ಯಕ್ತಪಡಿಸಿದ್ದಿಷ್ಟು.


ತಾಂತ್ರಿಕತೆಯಲ್ಲಿ ಬಹಳ ಹಿಂದಿದೆ: ಕನಾ೯ಟಕ ರಾಜ್ಯ ಕಲ್ಪತರು ನಾಡೆಂದು ಹೆಸರಾಗಿದ್ದು ನಾರು ಉದ್ದಿಮೆ ನಂಬಿ ಅನೇಕರು ಜೀವನ ಸಾಗಿಸುತ್ತಿದ್ದಾರೆ. ರಾಷ್ಟ್ರದಲ್ಲಿ ಕನಾ೯ಟಕ ರಾಜ್ಯ ನಾರು ಉತ್ಪಾದನೆಯಲ್ಲಿ 3 ನೇ ಸ್ಥಾನದಲ್ಲಿದ್ದು ಇಲ್ಲಿನ 16 ಜಿಲ್ಲೆಗಳಲ್ಲಿ ನಾರು ಉದ್ದಿಮೆಗಳಿವೆ. ಆದರೆ ಕೇರಳ ಹಾಗೂ ತಮಿಳುನಾಡಿಗೆ ಹೋಲಿಸಿದರೆ ಕನಾ೯ಟಕ ತಾಂತ್ರಿಕತೆಯಲ್ಲಿ ಬಹಳ ಹಿಂದಿದೆ. ಬ್ಯಾಂಕುಗಳು ಸಾಲ ನೀಡಲು ಹಿಂದೇಟು ಹಾಕುತ್ತಿರುವುದು ಪ್ರಮುಖ ಕಾರಣವಾಗಿದೆ. ಈ ನಿಟ್ಟಿನಲ್ಲಿ ಆಸಕ್ತ ಉದ್ದಿಮೆದಾರರು ಹಾಗೂ ಬ್ಯಾಂಕ್ ಮ್ಯಾನೇಜರ್ ತಂಡವನ್ನು ಕೇರಳಕ್ಕೆ ಕರೆಸಿಕೊಂಡು ಅಲ್ಲಿನ ತಂತ್ರಜ್ಞಾನ ಹಾಗೂ ಮಾರುಕಟ್ಟೆ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸುವುದಾಗಿ ಹೇಳಿದರು.

ಕೇರಳ ಹಾಗೂ ತಮಿಳುನಾಡು ಸಕಾ೯ರ ಈ ಉದ್ದಿಮೆಗೆ ನೀಡುವ ಪ್ರೋತ್ಸಾಹ, ಸಹಕಾರ, ಸೌಲಭ್ಯಗಳನ್ನು ಕನಾ೯ಟಕ ಸಕಾ೯ರ ನೀಡುತ್ತಿಲ್ಲ.ಆ ರಾಜ್ಯಗಳಂತೆ ಇಲ್ಲೂ ಕೂಡ ನಾರಿನ ಉದ್ದಿಮೆಗಾಗಿ ಪ್ರತ್ಯೇಕ ಸಚಿವಾಲಯವನ್ನೇ ಸ್ಥಾಪಿಸಿ ವಿಶೇಷ ಅನುಧಾನದ ವ್ಯವಸ್ಥೆ ಕಲ್ಪಸಿದಲ್ಲಿ ಮಾತ್ರ ನಾರು ಉತ್ಪಾದನೆಯ ಪ್ರಗತಿ ಸಾಧ್ಯ ಎಂದರು

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಯರ್ ಪಿತ್ ಗೂ ಬೇಡಿಕೆ ಬಂದಿದೆ. ನೂತನ ತಂತ್ರಜ್ಞಾನ ಅಳವಡಿಸಿಕೊಂಡು ಉತ್ಪಾದನೆ ಸಾಮಥ್ಯ ಹೆಚ್ಚಿಸುವ ಹಾಗೂ ಹೊಸಬರನ್ನು ಈ ಉದ್ದಿಮೆಗೆ ಕರೆತರುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸಕಾ೯ರ ಕಳೆದ ಬಾರಿ 200 ಕೋಟಿ ರು. ಅನುದಾನ ನೀಡಿದ್ದು ಈ ಬಾರಿ 300 ಕೋಟಿ ರು. ಬೇಡಿಕೆ ಸಲ್ಲಿಸಲಾಗಿದೆ ಎಂದು ವಿವರಿಸಿದರು.

ಉರುವಲಾಗಿ ಬಳಕೆಗೆ ಅಸಮಧಾನ: ಇಲ್ಲಿ ಬಹಳಷ್ಟು ಮಂದಿ ತೆಂಗಿನ ಮೊಟ್ಟೆಯನ್ನು ಉರುವಲಿಗಾಗಿ ಬಳಕೆ ಮಾಡುತ್ತಿರುವುದು ದುರದೃಷ್ಟಕರ.ಉರುವಲು ಬದಲಾಗಿ ತೆಂಗಿನ ಮಟ್ಟೆಯಿಂದ ನಾರು ತಯಾರಿಸುವುದು ಅತ್ಯಂತ ಲಾಭಕರ ಅಲ್ಲದೆ ನಿರುದ್ಯೋಗ ಸಮಸ್ಯೆ ಕೂಡ ನಿವಾರಿಸಬಹುದು.ಈ ನಿಟ್ಟಿನಲ್ಲಿ ಸಕಾ೯ರ ನಾರು ತಯಾರಿಕಾ ಗುಡಿಕೈಗಾರಿಕೆಗೆ ಪ್ರೋತ್ಸಹ ನೀಡಬೇಕು ಹಾಗೂ ಉರುವಲು ಬಳಕೆಯನ್ನು ತಡೆಯಲು ಕಠಿಣ ಕಾನೂನು ರಚಿಸಬೇಕೆಂದರು.

ಅಖಿಲ ಭಾರತ ನಾರು ಉತ್ಪಾದಕರ ಸಂಘದ ಅಧ್ಯಕ್ಷ ಕಾಮರಾಜನ್, ಕಾಯರ್ ಬೋಡ್೯ ಸದಸ್ಯ ಪ್ರಸಾದ್, ಸಹಾಯಕ ನಿದೇ೯ಶಕ ಸುಧಾಕರ್ ಪಿಳ್ಳೆ, ಕೆನರಾ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಎಂ.ವಿ.ಸತ್ಯನ್, ಮ್ಯಾನೇಜರ್ ಸತೀಶ್, ಹುಳಿಯಾರು ಕಾಯರ್ ಇಂಡಸ್ಟ್ರಿಯ ಎಲ್.ಆರ್.ಚಂದ್ರಶೇಖರ್, ಎಲ್.ಆರ್.ಬಾಲಾಜಿ ಉಪಸ್ಥಿತರಿದ್ದರು.

ನಂತರ ಸಮೀಪದ ಪೋಚಕಟ್ಟೆ ಲಂಬಾಣಿ ತಾಂಡ್ಯಕ್ಕೆ ತೆರಳಿ ಅಲ್ಲಿನ ಪ್ರತಿಯೊಂದು ಮನೆಯಲ್ಲಿಯೂ ನಾರಿನ ಹುರಿ ತಯಾರಿಸುತ್ತಿರುವುದನ್ನು ಕಂಡು ಕಾಯರ್ ಬೋಡ್೯ನಿಂದ ಸಬ್ಸಿಡಿಯಲ್ಲಿ ವಿದ್ಯುತ್ ಚಾಲಿತ ರಾಟೆ ನೀಡುವುದಾಗಿ ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...