ವಿಷಯಕ್ಕೆ ಹೋಗಿ

ಕನಾ೯ಟಕ ಹಾಲು ಮಹಾಮಂಡಳಿಯ ಡೈರಿಗಳನ್ನು ಸಧೃಢಗೊಳಿಸಿ: ಹಳೇಮನೆ ಶಿವನಂಜಪ್ಪ

ಗ್ರಾಮಾಂತರ ಪ್ರದೇಶದ ಹಾಲು ಉತ್ಪಾದಕರ ಸಂಸ್ಥೆಗಳನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಸಂಘಗಳಿಗೆ ಸಕಾ೯ರದ ಪ್ರೋತ್ಸಾಹ ಧನವಲ್ಲದೆ ಹಾಲು ಉತ್ಪಾದಕರು ಉತ್ಪಾದಿಸುವ ಪ್ರತಿ ಲೀಟರ್ ಹಾಲಿಗೆ 2 ರು ಪ್ರೋತ್ಸಾಹ ಧನ ನೀಡುತ್ತಿದ್ದು ಕನಾ೯ಟಕ ಹಾಲು ಮಹಾಮಂಡಳಿಯ ಡೈರಿಗಳಿಗೆ ಹಾಲು ಹಾಕುವ ಮೂಲಕ ಮಂಡಳಿಯ ಡೈರಿಗಳನ್ನು ಸಧೃಢಗೊಳಿಸಿ ಎಂದು ತುಮಕೂರು ಹಾಲು ಒಕ್ಕೂಟದ ನಿದೇ೯ಶಕ ಹಾಗೂ ಚಿ.ನಾ.ಹಳ್ಳಿ ನಂದಿನಿ ಸಹಕಾರ ಬ್ಯಾಂಕ್ ಅಧ್ಯಕ್ಷ ಹಳೇಮನೆ ಶಿವನಂಜಪ್ಪ ಕಿವಿ ಮಾತು ಹೇಳಿದರು.

ಹುಳಿಯಾರು ಸಮೀಪದ ಚಿಕ್ಕೆಣ್ಣೇಗೆರೆಯಲ್ಲಿ ನೂತನವಾಗಿ ಸ್ಥಾಪಿತವಾದ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು ಲೀಟರ್ ಹಾಲಿಗೆ 2 ರು. ಪ್ರೋತ್ಸಾಹಧನವಲ್ಲದೆ ಹಸು ಖರೀದಿಗೆ ಶೇ.6 ರ ಬಡ್ಡಿದರದಲ್ಲಿ 70 ಸಾವಿರದವರೆವಿಗೂ ಸಾಲ ನೀಡಲಿದ್ದು ಈ ಸೌಲಭ್ಯಗಳು ಖಾಸಗಿ ಡೈರಿಗಳಲ್ಲಿ ಸಿಗುವುದಿಲ್ಲ. ಖಾಸಗಿಯವರ ಹಾಲಿನ ಡೈರಿಗಳು ಏಕಚಕ್ರಾಧಿಪತ್ಯವುಳ್ಳವುಗಳಾಗಿದ್ದು ಹಾಲು ಹಾಕುವ ರೈತನಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಕನಾ೯ಟಕ ಹಾಲು ಮಹಾಮಂಡಳಿಯ ಡೈರಿಗಳು ಹಾಲು ಹಾಕುವ ರೈತರಿಗೇ ಕಾರ್ಯಕಾರಿ ಮಂಡಳಿ ಅಧಿಕಾರ ನೀಡಿ ಎಲ್ಲಾ ಹಣಕಾಸು ವ್ಯವಹಾರದಲ್ಲಿ ಭಾಗಿಮಾಡಿಕೊಳ್ಳುತ್ತವೆ. ಹಾಗಾಗಿ ಖಾಸಗಿ ಹಾಲಿನ ಡೈರಿಗೆ ಮರುಳಾಗದೆ ಕನಾ೯ಟಕ ಹಾಲು ಮಂಡಳಿಯ ಡೈರಿಗಳನ್ನು ಸ್ಥಾಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ತುಮಕೂರು ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಸುಬ್ರಾಯಭಟ್ ಅವರು ಮಾತನಾಡಿ ಇಂದು ಹೈನುಗಾರಿಗೆ ಹಳ್ಳಿಗಳ ರೈತರ ಆಥಿ೯ಕ ಕಷ್ಟ ನೀಗಿಸುವ ಉದ್ಯಮವಾಗಿದೆ.ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಈ ಹಿಂದೆ 34 ಸಂಘಗಳಿದ್ದು ಈಗ 76 ಸಂಘಗಳಾಗಿ ದಿನಕ್ಕೆ 25 ಸಾವಿರ ಲೀ. ಹಾಲು ಶೇಖರಣೆಯಾಗುತ್ತಿದೆ. ಜಿಲ್ಲೆಯಲ್ಲಿ ದಿನವೊಂದಕ್ಕೆ 3.39 ಲಕ್ಷ ಲೀ. ಹಾಲು ಶೇಖರಣೆಯಾಗಿ 1.70 ಲೀ. ಅನ್ನು ಜಿಲ್ಲೇಯಲ್ಲಿಯೇ ಬಳಸಿಕೊಂಡು ಉಳಿದದನ್ನು ಬಳ್ಳಾರಿ ಹಾಗೂ ಕೇರಳಕ್ಕೆ ಕಳುಹಿಸಲಾಗುತ್ತಿದೆ ಎಂದು ವಿವರಿಸಿದರಲ್ಲದೆ, ಇಂದಿನ ಜಾಗತೀಕರಣದಲ್ಲಿ ಕೃಷಿಕರು ಗುಣಮಟ್ಟಕ್ಕೆ ಹಾಗೂ ಪರಿಶುದ್ದತೆಗೆ ಗಮನ ಹರಿಸುವ ಅಗತ್ಯವಿದ್ದು ಶುದ್ಧಹಾಲು ಉತ್ಪಾದನೆಗೆ ರಾಸುಗಳ ಆರೋಗ್ಯ, ಖನಿಜ ಮಿಶ್ರಣ ಆಹಾರ, ಕಾಲಕಾಲಕ್ಕೆ ಲಸಿಕೆ ಹಾಗೂ ಕೊಟ್ಟಿಗೆ ಸ್ವಚ್ಚವಾಗಿಟ್ಟುಕೊಳ್ಳುವುದು ಮುಖ್ಯ ಎಂದು ಸಲಹೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಚಿಕ್ಕೆಣ್ಣೇಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎನ್.ಗಂಗಾಧರಯ್ಯ ವಹಿಸಿದ್ದರು. ತು.ಹಾ.ಒಕ್ಕೂಟದ ಚಿ.ನಾ.ಹಳ್ಳಿ ತಾಲೂಕು ವಿಸ್ತರಣಾಧಿಕಾರಿ ಎ.ಪಿ.ಯರಗುಂಟಪ್ಪ, ದೊಡ್ಡಎಣ್ಣೇಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಡಿ.ಸಿ.ನಟರಾಜ ಅರಸ್, ನೂತನ ಗ್ರಾ.ಪಂ.ಸದಸ್ಯರಾದ ಮಲ್ಲಯ್ಯ, ಕರಿಯಪ್ಪ, ಗಂಗಮ್ಮ, ಚಿಕ್ಕೆಣ್ಣೇಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಸಿ.ಬಿ.ರಾಜಣ್ಣ, ನಂಜುಂಡಯ್ಯ, ಕಂಸಾಗರಯ್ಯ, ಕರಿಯಪ್ಪ, ಸಿ.ಕೆ.ಕಲ್ಲೇಶಾಚಾರ್, ಸಿ.ಎಚ್.ಚಂದ್ರಯ್ಯ, ಜಯಮ್ಮ, ಮಹಾಲಿಂಗಯ್ಯ ರಮೇಶ್, ಪ್ಯಾರೇಜಾನ್ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.