ವಿಷಯಕ್ಕೆ ಹೋಗಿ

ಕನಾ೯ಟಕ ಹಾಲು ಮಹಾಮಂಡಳಿಯ ಡೈರಿಗಳನ್ನು ಸಧೃಢಗೊಳಿಸಿ: ಹಳೇಮನೆ ಶಿವನಂಜಪ್ಪ

ಗ್ರಾಮಾಂತರ ಪ್ರದೇಶದ ಹಾಲು ಉತ್ಪಾದಕರ ಸಂಸ್ಥೆಗಳನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಸಂಘಗಳಿಗೆ ಸಕಾ೯ರದ ಪ್ರೋತ್ಸಾಹ ಧನವಲ್ಲದೆ ಹಾಲು ಉತ್ಪಾದಕರು ಉತ್ಪಾದಿಸುವ ಪ್ರತಿ ಲೀಟರ್ ಹಾಲಿಗೆ 2 ರು ಪ್ರೋತ್ಸಾಹ ಧನ ನೀಡುತ್ತಿದ್ದು ಕನಾ೯ಟಕ ಹಾಲು ಮಹಾಮಂಡಳಿಯ ಡೈರಿಗಳಿಗೆ ಹಾಲು ಹಾಕುವ ಮೂಲಕ ಮಂಡಳಿಯ ಡೈರಿಗಳನ್ನು ಸಧೃಢಗೊಳಿಸಿ ಎಂದು ತುಮಕೂರು ಹಾಲು ಒಕ್ಕೂಟದ ನಿದೇ೯ಶಕ ಹಾಗೂ ಚಿ.ನಾ.ಹಳ್ಳಿ ನಂದಿನಿ ಸಹಕಾರ ಬ್ಯಾಂಕ್ ಅಧ್ಯಕ್ಷ ಹಳೇಮನೆ ಶಿವನಂಜಪ್ಪ ಕಿವಿ ಮಾತು ಹೇಳಿದರು.

ಹುಳಿಯಾರು ಸಮೀಪದ ಚಿಕ್ಕೆಣ್ಣೇಗೆರೆಯಲ್ಲಿ ನೂತನವಾಗಿ ಸ್ಥಾಪಿತವಾದ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು ಲೀಟರ್ ಹಾಲಿಗೆ 2 ರು. ಪ್ರೋತ್ಸಾಹಧನವಲ್ಲದೆ ಹಸು ಖರೀದಿಗೆ ಶೇ.6 ರ ಬಡ್ಡಿದರದಲ್ಲಿ 70 ಸಾವಿರದವರೆವಿಗೂ ಸಾಲ ನೀಡಲಿದ್ದು ಈ ಸೌಲಭ್ಯಗಳು ಖಾಸಗಿ ಡೈರಿಗಳಲ್ಲಿ ಸಿಗುವುದಿಲ್ಲ. ಖಾಸಗಿಯವರ ಹಾಲಿನ ಡೈರಿಗಳು ಏಕಚಕ್ರಾಧಿಪತ್ಯವುಳ್ಳವುಗಳಾಗಿದ್ದು ಹಾಲು ಹಾಕುವ ರೈತನಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಕನಾ೯ಟಕ ಹಾಲು ಮಹಾಮಂಡಳಿಯ ಡೈರಿಗಳು ಹಾಲು ಹಾಕುವ ರೈತರಿಗೇ ಕಾರ್ಯಕಾರಿ ಮಂಡಳಿ ಅಧಿಕಾರ ನೀಡಿ ಎಲ್ಲಾ ಹಣಕಾಸು ವ್ಯವಹಾರದಲ್ಲಿ ಭಾಗಿಮಾಡಿಕೊಳ್ಳುತ್ತವೆ. ಹಾಗಾಗಿ ಖಾಸಗಿ ಹಾಲಿನ ಡೈರಿಗೆ ಮರುಳಾಗದೆ ಕನಾ೯ಟಕ ಹಾಲು ಮಂಡಳಿಯ ಡೈರಿಗಳನ್ನು ಸ್ಥಾಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ತುಮಕೂರು ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಸುಬ್ರಾಯಭಟ್ ಅವರು ಮಾತನಾಡಿ ಇಂದು ಹೈನುಗಾರಿಗೆ ಹಳ್ಳಿಗಳ ರೈತರ ಆಥಿ೯ಕ ಕಷ್ಟ ನೀಗಿಸುವ ಉದ್ಯಮವಾಗಿದೆ.ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಈ ಹಿಂದೆ 34 ಸಂಘಗಳಿದ್ದು ಈಗ 76 ಸಂಘಗಳಾಗಿ ದಿನಕ್ಕೆ 25 ಸಾವಿರ ಲೀ. ಹಾಲು ಶೇಖರಣೆಯಾಗುತ್ತಿದೆ. ಜಿಲ್ಲೆಯಲ್ಲಿ ದಿನವೊಂದಕ್ಕೆ 3.39 ಲಕ್ಷ ಲೀ. ಹಾಲು ಶೇಖರಣೆಯಾಗಿ 1.70 ಲೀ. ಅನ್ನು ಜಿಲ್ಲೇಯಲ್ಲಿಯೇ ಬಳಸಿಕೊಂಡು ಉಳಿದದನ್ನು ಬಳ್ಳಾರಿ ಹಾಗೂ ಕೇರಳಕ್ಕೆ ಕಳುಹಿಸಲಾಗುತ್ತಿದೆ ಎಂದು ವಿವರಿಸಿದರಲ್ಲದೆ, ಇಂದಿನ ಜಾಗತೀಕರಣದಲ್ಲಿ ಕೃಷಿಕರು ಗುಣಮಟ್ಟಕ್ಕೆ ಹಾಗೂ ಪರಿಶುದ್ದತೆಗೆ ಗಮನ ಹರಿಸುವ ಅಗತ್ಯವಿದ್ದು ಶುದ್ಧಹಾಲು ಉತ್ಪಾದನೆಗೆ ರಾಸುಗಳ ಆರೋಗ್ಯ, ಖನಿಜ ಮಿಶ್ರಣ ಆಹಾರ, ಕಾಲಕಾಲಕ್ಕೆ ಲಸಿಕೆ ಹಾಗೂ ಕೊಟ್ಟಿಗೆ ಸ್ವಚ್ಚವಾಗಿಟ್ಟುಕೊಳ್ಳುವುದು ಮುಖ್ಯ ಎಂದು ಸಲಹೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಚಿಕ್ಕೆಣ್ಣೇಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎನ್.ಗಂಗಾಧರಯ್ಯ ವಹಿಸಿದ್ದರು. ತು.ಹಾ.ಒಕ್ಕೂಟದ ಚಿ.ನಾ.ಹಳ್ಳಿ ತಾಲೂಕು ವಿಸ್ತರಣಾಧಿಕಾರಿ ಎ.ಪಿ.ಯರಗುಂಟಪ್ಪ, ದೊಡ್ಡಎಣ್ಣೇಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಡಿ.ಸಿ.ನಟರಾಜ ಅರಸ್, ನೂತನ ಗ್ರಾ.ಪಂ.ಸದಸ್ಯರಾದ ಮಲ್ಲಯ್ಯ, ಕರಿಯಪ್ಪ, ಗಂಗಮ್ಮ, ಚಿಕ್ಕೆಣ್ಣೇಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಸಿ.ಬಿ.ರಾಜಣ್ಣ, ನಂಜುಂಡಯ್ಯ, ಕಂಸಾಗರಯ್ಯ, ಕರಿಯಪ್ಪ, ಸಿ.ಕೆ.ಕಲ್ಲೇಶಾಚಾರ್, ಸಿ.ಎಚ್.ಚಂದ್ರಯ್ಯ, ಜಯಮ್ಮ, ಮಹಾಲಿಂಗಯ್ಯ ರಮೇಶ್, ಪ್ಯಾರೇಜಾನ್ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...