ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಮಹಿಳಾ ಸಹಕಾರಿ ಸಂಘ ಸ್ಥಾಪಿಸಲು ಅನುಮತಿ

ಹುಳಿಯಾರು ಹೋಬಳಿಯ ಎಲ್ಲಾ ಗ್ರಾಮಗಳ ಮಹಿಳೆಯರು ತಮ್ಮದೇ ಆದ ಸಹಕಾರಿ ಸಂಘವನ್ನು ಸ್ಥಾಪಿಸಿಕೊಳ್ಳುವ ಚಿಂತನೆ ನಡೆಸಿ ಈ ಬಗ್ಗೆ ಷೇರು ಸಂಗ್ರಹಣೆಗೆ ಅನುಮತಿ ಕೋರಿ ಸಲ್ಲಿಸಿರುವ ಪ್ರಸ್ತಾವನೆಗೆ ಸಹಕಾರಿಗಳ ಸಹಾಯಕ ನಿಬಂಧಕರು ತಿಪಟೂರು ಉಪವಿಭಾಗಕರು ಮನ್ನಣೆ ನೀಡಿ ಷೇರು ಸಂಗ್ರಹಣೆಗೆ ಇಲಾಖಾ ಅನುಮತಿ ನೀಡಿದ್ದಾರೆ ಎಂದು ಮುಖ್ಯ ಪ್ರವರ್ತಕರಾದ ಎಸ್.ಶಾರದ ಜಗದೀಶ್ ತಿಳಿಸಿದ್ದಾರೆ.

ಮಹಿಳೆಯರಲ್ಲಿ ಮಿತವ್ಯಯ ಹಾಗೂ ಉಳಿತಾಯ ಭಾವನೆಯನ್ನು ಪ್ರಚೋದಿಸಿ ಎಲ್ಲಾ ವಿಧದ ಠೇವಣಿಯನ್ನು ಸಂಗ್ರಹಿಸಿ ಮಹಿಳೆಯರ ಆಥಿ೯ಕ ಅಭಿವೃದ್ಧಿಗಾಗಿ ವಿವಿಧ ರೀತಿಯ ಸಾಲ ಸೌಲಭ್ಯಗಳನ್ನು ಮತ್ತು ಬ್ಯಾಂಕಿಗ್ ಸೌಲಭ್ಯಗಳನ್ನು ನೀಡುವ ಘನ ಉದ್ದೇಶವನ್ನು ಈ ಸಂಸ್ಥೆ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಉದ್ದೇಶಿತ ಸಹಕಾರಿ ಸಂಘಕ್ಕೆ ಶ್ರೀಗಾಯತ್ರಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರ ಸಂಘ ಎಂದು ನೊಂದಾಯಿಸಲು ನಿರ್ಧರಿಸಲಾಗಿದೆ. ಎರಡು ಲಕ್ಷದ ರು. ಷೇರು ಸಂಗ್ರಹಣೆಯ ಗುರಿಯನ್ನು ಇಲಾಖೆ ನೀಡಿದ್ದು ಷೆರು ಧನವನ್ನು 1 ಸಾವಿರ ರು.ಗಳೆಂದು ನಿಗಧಿ ಮಾಡಿ ಸಂಗ್ರಹಣಾ ಕಾರ್ಯ ಆರಂಭಿಸಲಾಗಿದೆ. ಅಲ್ಲದೆ, ಇಲ್ಲಿನ ಬಿಎಚ್ ರಸ್ತೆಯಲ್ಲಿರುವ ಎಸ್.ಬಿ.ಐ ಬ್ಯಾಂಕ್ ಕಟ್ಟಡದಲ್ಲಿ ಕಾಯಾ೯ರಂಭ ಮಾಡಲಿದೆ ಎಂದು ವಿವರಿಸಿದರು.

ಸದರಿ ಸಂಸ್ಥೆಯ ಸ್ಥಾಪನೆ ಕಾರ್ಯದಲ್ಲಿ ಬೆಂಗಳೂರಿನ ಸೌಹಾರ್ದ ಸಹಕಾರಿ ತರಬೇತುದಾರ ವೈ.ಕುಮಾರ್ ಹಾಗೂ ತುಮಕೂರು ಸಹಕಾರಿ ಸಲಹೆಗಾರ ಶಂಕರ್ ಹೆಗ್ಗಡೆ ಅವರ ಮಾರ್ಗದರ್ಶನ ಹಾಗೂ ಸಲಹೆ ನೀಡುತ್ತಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಷೇರು ಪಡೆಯುವ ಮೂಲಕ ಮಹಿಳ ಸಹಕಾರ ಸಂಘ ಸ್ಥಾಪನೆಗೆ ಬೆಂಬಲ ಸೂಸುವಂತೆ ಮುಖ್ಯಪ್ರವರ್ತಕರು ಕೋರಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...