ವಿಷಯಕ್ಕೆ ಹೋಗಿ

ಕೆಂಕೆರೆ ಪಿಎಸಿ ಬ್ಯಾಂಕ್ ನಲ್ಲಿ ಲಕ್ಷಾಂತರ ರು. ಅವ್ಯವಹಾರ

ಹುಳಿಯಾರು ಹೋಬಳಿ ಕೆಂಕೆರೆ ಪ್ರಾಥಮಿಕ ಕೃಷಿ ಸಹಕಾರ ಬ್ಯಾಂಕ್ನಲ್ಲಿ ಲಕ್ಷಾಂತರ ರು. ಅವ್ಯವಹಾರ ನಡೆದಿರುವುದಾಗಿ ಸ್ವತಃ ಬ್ಯಾಂಕಿನ ನೂತನ ಕಾರ್ಯಕಾರಿ ಮಂಡಳಿ ಸದಸ್ಯರು ಪತ್ತೆ ಹಚ್ಚಿ ಮ್ಯಾನೇಜರ್ ಬಿ.ರಾಜಪ್ಪ ಅವರನ್ನು ತರಾಟೆಗೆ ತೆಗೆದುಕೊಂಡು ಚೀಮಾರಿ ಹಾಕಿದ ಘಟನೆ ಮಂಗಳವಾರ ಜರುಗಿದೆ.

ಬೈಕ್ ಹಾಗೂ ಚಿನ್ನ ಸಾಲ ನೀಡುವ ವಿಚಾರವಾಗಿ ನೂತನ ಚುನಾಯಿತ ಪ್ರತಿನಿಧಿಗಳ ಸಭೆಯನ್ನು ಮಂಗಳವಾರ ಕರೆಯಲಾಗಿತ್ತು. ಸಭೆಯಲ್ಲಿ 2009-10 ನೇ ಸಾಲಿನ ಆಯವ್ಯಯ ದಾಖಲಾತಿಯಲ್ಲಿ 2 ಲಕ್ಷ ರು. ಉಳಿಕೆ ಹಣ ಇದ್ದು ಈ ಹಣ ಡಿಸಿಸಿ ಬ್ಯಾಂಕಿನಲ್ಲಿರುವ ಪಿಎಸಿಬಿ ಖಾತೆಗೆ ಜಮೆ ಆಗದಿರುವುದು ಹಾಗೂ ಸದರಿ ಬ್ಯಾಂಕಿನ ಕ್ಯಾಷ್ ಬಾಕ್ಸ್ನಲ್ಲಿ ಇಲ್ಲದಿರುವ ಸತ್ಯ ತಿಳಿದು ಬಂದಿತು.

ಇದರಿಂದ ಸಹಜವಾಗಿ ಗಾಭರಿಯಾದ ಕಾರ್ಯಕಾರಿ ಮಂಡಳಿ ಮ್ಯಾನೇಜರ್ ಅನ್ನು ಪ್ರಶ್ನಿಸಲಾಗಿ 60 ಸಾವಿರ ರು.ಗಳನ್ನು ಕಛೇರಿ ದುರಸ್ಥಿಗೆ ಬಳಕೆ ಮಾಡಿದ್ದು ಉಳಿದ 1.40 ಲಕ್ಷ ರು.ಗಳನ್ನು ಷೇರುದಾರರಿಗೆ ಸಾಲ ನೀಡಿರುವುದಾಗಿ ಸಬೂಬು ಹೇಳಿದರು. ಪ್ರತಿಯಾಗಿ ಮಂಡಳಿಯವರು ಸಾಲ ಪಡೆದವರ ಪಟ್ಟಿ ಹಾಗೂ ಸಾಲ ನೀಡಿರುವ ದಾಖಲಾತಿಯನ್ನು ತೋರಿಸುವಂತೆ ಪಟ್ಟು ಹಿಡಿದಾಗ ದಾಖಲಾತಿ ತೋರಿಸಲು ವಿಫಲವಾಗಿ ಇನ್ನೇರಡು ದಿನಗಳಲ್ಲಿ ಹಣ ಬ್ಯಾಕಿಕೆ ಜಮೆ ಮಾಡುವುದಾಗಿ ಕೇಳಿಕೊಳ್ಳುವ ಮೂಲಕ ಮ್ಯಾನೇಜರ್ ಹಣವನ್ನು ದುರ್ಬಳಕೆ ಮಾಡಿರುವ ಅಂಶ ಬೆಳಕಿಗೆ ಬಂದಿದೆ.

ಸಮರ್ಪಕವಾಗಿ ಪಡಿತರ ವಿತರಿಸುತ್ತಿಲ್ಲ: ಸದರಿ ಬ್ಯಾಂಕಿನಲ್ಲಿ ಪಡಿತರ ಸಾಮಗ್ರಿಗಳನ್ನು ಸಹ ವಿತರಿಸಲಾಗುತ್ತಿದ್ದು ಪಡಿತರದಾರರಿಗೆ ಸರ್ಕಾರ ನಿಗಧಿ ಮಾಡಿರುವುದಕ್ಕಿಂತ ಕಡಿಮೆ ಪಡಿತರ ವಿತರಿಸುತ್ತಿದ್ದಾರೆ. ಅಲ್ಲದೆ ಬೆಲೆಯನ್ನು ಹೆಚ್ಚುವರಿಯಾಗಿ ಬಲವಂತದಿಂದ ವಸೂಲಿ ಮಾಡಿ ವಂಚಿಸುತ್ತಿದ್ದಾರೆ ಎಂಬ ಆರೋಪವೂ ಸಹ ಮ್ಯಾನೇಜರ್ ಮೇಲೆ ಕೇಳಿಬಂದಿತು.

ಟ್ರಾಂಜಾಕ್ಷನ್ ನಡೆಯುತ್ತಿಲ್ಲ: ಮ್ಯಾನೇಜರ್ ಸರಿಯಾಗಿ ಕಛೇರಿ ಬಾರದೆ ತಮಗೆ ಮನಸ್ಸಿಗೆ ಬಂದಂತೆ ಬಾಗಿಲು ತೆರೆಯುವುದರಿಂದ ದಿನನಿತ್ಯದ ಬ್ಯಾಂಕ್ ವಹಿವಾಟು ಸ್ಥಗಿತಗೊಂಡು ನಷ್ಟದಲ್ಲಿ ನಡೆಯುವಂತಾಗಿದೆ. ಇದರಿಂದ 9 ಸ್ತ್ರೀಶಕ್ತಿ ಸಂಘಗಳಲ್ಲಿ 6 ಸಂಘಗಳು ಬೇಸತ್ತು ತಮ್ಮ ಖಾತೆ ಮುಚ್ಚಿಸಿದ್ದಾರೆ. ಅಲ್ಲದೆ 2 ವರ್ಷಗಳಿಂದ ಎಸ್ಬಿ ಖಾತೆ ಮಾಡಿಸಿದ್ದವರಿಗೆ ಸರಿಯಾಗಿ ಪಾಸ್ ಪುಸ್ತಕ ವಿತರಿಸದೆ ವಹಿವಾಟಿನಲ್ಲಿ ಗೋಲ್ ಮಾಡಲಾಗಿದೆ ಎಂದು ದೂರಲಾಗಿದೆ.

ಯಶಸ್ವಿನಿ ರಿನಿವಲ್ ಮಾಡುತ್ತಿಲ್ಲ: ತಮ್ಮ ಆತ್ಮೀಯರ ಮನೆ ಬಾಗಿಲಿಗೆ ತೆರಳಿ ಹೊಸ ಯಶಸ್ವಿನಿ ಕಾರ್ಡ್ ಸೇರಿದಂತೆ ರಿನಿವಲ್ ಮಾಡಿಸುತ್ತಿದ್ದಾರೆಯೇ ವಿನಃ ಸಮಾನ್ಯ ಜನರು ಇಂದಿಗೂ ಸಹ ಕಛೇರಿಗೆ ಅಲೆಯುತ್ತಿದ್ದರೂ ರಿನಿವಲ್ ಮಾಡಲಾಗಿಲ್ಲ. ಅಲ್ಲದೆ ಬ್ಯಾಂಕಿನಲ್ಲಿ ಹಣ ವಿಲ್ಲದ ಕಾರಣ ಮುಂಗಾರಿಗೆ ಗೊಬ್ಬರ ತಂದು ರೈತರಿಗೆ ಅನುಕೂಲ ಮಾಡುವುದು ಕಷ್ಟವಾಗಿದೆ ಎಂದು ಹೇಳಲಾಗಿದೆ.

ಪಿಗ್ಮಿ ಹಣದ ದಾಖಲೆ, ಸಾಲ ಹಾಗೂ ಮರು ಪಾವತಿ ದಾಖಲಾತಿ ಸೇರಿದಂತೆ ಕಛೇರಿಯಲ್ಲಿ ಯಾವುದೇ ಹಣಕಾಸಿನ ದಾಖಲಾತಿ ಇಲ್ಲದೆ ಕಾಟಚಾರದ ನಿರ್ವಹಣೆಯಾಗಿದ್ದು ಮೇಲಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ಮ್ಯಾನೇಜರ್ ಮೇಲೆ ಕ್ರಮ ಕೈಗೊಳ್ಳುವಂತೆ ಬ್ಯಾಂಕ್ ಅಧ್ಯಕ್ಷ ಜಯಣ್ಣ ಸದಸ್ಯರಾದ ಷಡಾಕ್ಷರಿ, ಚಂದ್ರಶೇಖರ್, ಚನ್ನಬಸವಯ್ಯ ಸೇರಿದಂತೆ ಮತ್ತಿತರರು ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...