ವಿಷಯಕ್ಕೆ ಹೋಗಿ

ಕೆಂಕೆರೆ ಪಿಎಸಿ ಬ್ಯಾಂಕ್ ನಲ್ಲಿ ಲಕ್ಷಾಂತರ ರು. ಅವ್ಯವಹಾರ

ಹುಳಿಯಾರು ಹೋಬಳಿ ಕೆಂಕೆರೆ ಪ್ರಾಥಮಿಕ ಕೃಷಿ ಸಹಕಾರ ಬ್ಯಾಂಕ್ನಲ್ಲಿ ಲಕ್ಷಾಂತರ ರು. ಅವ್ಯವಹಾರ ನಡೆದಿರುವುದಾಗಿ ಸ್ವತಃ ಬ್ಯಾಂಕಿನ ನೂತನ ಕಾರ್ಯಕಾರಿ ಮಂಡಳಿ ಸದಸ್ಯರು ಪತ್ತೆ ಹಚ್ಚಿ ಮ್ಯಾನೇಜರ್ ಬಿ.ರಾಜಪ್ಪ ಅವರನ್ನು ತರಾಟೆಗೆ ತೆಗೆದುಕೊಂಡು ಚೀಮಾರಿ ಹಾಕಿದ ಘಟನೆ ಮಂಗಳವಾರ ಜರುಗಿದೆ.

ಬೈಕ್ ಹಾಗೂ ಚಿನ್ನ ಸಾಲ ನೀಡುವ ವಿಚಾರವಾಗಿ ನೂತನ ಚುನಾಯಿತ ಪ್ರತಿನಿಧಿಗಳ ಸಭೆಯನ್ನು ಮಂಗಳವಾರ ಕರೆಯಲಾಗಿತ್ತು. ಸಭೆಯಲ್ಲಿ 2009-10 ನೇ ಸಾಲಿನ ಆಯವ್ಯಯ ದಾಖಲಾತಿಯಲ್ಲಿ 2 ಲಕ್ಷ ರು. ಉಳಿಕೆ ಹಣ ಇದ್ದು ಈ ಹಣ ಡಿಸಿಸಿ ಬ್ಯಾಂಕಿನಲ್ಲಿರುವ ಪಿಎಸಿಬಿ ಖಾತೆಗೆ ಜಮೆ ಆಗದಿರುವುದು ಹಾಗೂ ಸದರಿ ಬ್ಯಾಂಕಿನ ಕ್ಯಾಷ್ ಬಾಕ್ಸ್ನಲ್ಲಿ ಇಲ್ಲದಿರುವ ಸತ್ಯ ತಿಳಿದು ಬಂದಿತು.

ಇದರಿಂದ ಸಹಜವಾಗಿ ಗಾಭರಿಯಾದ ಕಾರ್ಯಕಾರಿ ಮಂಡಳಿ ಮ್ಯಾನೇಜರ್ ಅನ್ನು ಪ್ರಶ್ನಿಸಲಾಗಿ 60 ಸಾವಿರ ರು.ಗಳನ್ನು ಕಛೇರಿ ದುರಸ್ಥಿಗೆ ಬಳಕೆ ಮಾಡಿದ್ದು ಉಳಿದ 1.40 ಲಕ್ಷ ರು.ಗಳನ್ನು ಷೇರುದಾರರಿಗೆ ಸಾಲ ನೀಡಿರುವುದಾಗಿ ಸಬೂಬು ಹೇಳಿದರು. ಪ್ರತಿಯಾಗಿ ಮಂಡಳಿಯವರು ಸಾಲ ಪಡೆದವರ ಪಟ್ಟಿ ಹಾಗೂ ಸಾಲ ನೀಡಿರುವ ದಾಖಲಾತಿಯನ್ನು ತೋರಿಸುವಂತೆ ಪಟ್ಟು ಹಿಡಿದಾಗ ದಾಖಲಾತಿ ತೋರಿಸಲು ವಿಫಲವಾಗಿ ಇನ್ನೇರಡು ದಿನಗಳಲ್ಲಿ ಹಣ ಬ್ಯಾಕಿಕೆ ಜಮೆ ಮಾಡುವುದಾಗಿ ಕೇಳಿಕೊಳ್ಳುವ ಮೂಲಕ ಮ್ಯಾನೇಜರ್ ಹಣವನ್ನು ದುರ್ಬಳಕೆ ಮಾಡಿರುವ ಅಂಶ ಬೆಳಕಿಗೆ ಬಂದಿದೆ.

ಸಮರ್ಪಕವಾಗಿ ಪಡಿತರ ವಿತರಿಸುತ್ತಿಲ್ಲ: ಸದರಿ ಬ್ಯಾಂಕಿನಲ್ಲಿ ಪಡಿತರ ಸಾಮಗ್ರಿಗಳನ್ನು ಸಹ ವಿತರಿಸಲಾಗುತ್ತಿದ್ದು ಪಡಿತರದಾರರಿಗೆ ಸರ್ಕಾರ ನಿಗಧಿ ಮಾಡಿರುವುದಕ್ಕಿಂತ ಕಡಿಮೆ ಪಡಿತರ ವಿತರಿಸುತ್ತಿದ್ದಾರೆ. ಅಲ್ಲದೆ ಬೆಲೆಯನ್ನು ಹೆಚ್ಚುವರಿಯಾಗಿ ಬಲವಂತದಿಂದ ವಸೂಲಿ ಮಾಡಿ ವಂಚಿಸುತ್ತಿದ್ದಾರೆ ಎಂಬ ಆರೋಪವೂ ಸಹ ಮ್ಯಾನೇಜರ್ ಮೇಲೆ ಕೇಳಿಬಂದಿತು.

ಟ್ರಾಂಜಾಕ್ಷನ್ ನಡೆಯುತ್ತಿಲ್ಲ: ಮ್ಯಾನೇಜರ್ ಸರಿಯಾಗಿ ಕಛೇರಿ ಬಾರದೆ ತಮಗೆ ಮನಸ್ಸಿಗೆ ಬಂದಂತೆ ಬಾಗಿಲು ತೆರೆಯುವುದರಿಂದ ದಿನನಿತ್ಯದ ಬ್ಯಾಂಕ್ ವಹಿವಾಟು ಸ್ಥಗಿತಗೊಂಡು ನಷ್ಟದಲ್ಲಿ ನಡೆಯುವಂತಾಗಿದೆ. ಇದರಿಂದ 9 ಸ್ತ್ರೀಶಕ್ತಿ ಸಂಘಗಳಲ್ಲಿ 6 ಸಂಘಗಳು ಬೇಸತ್ತು ತಮ್ಮ ಖಾತೆ ಮುಚ್ಚಿಸಿದ್ದಾರೆ. ಅಲ್ಲದೆ 2 ವರ್ಷಗಳಿಂದ ಎಸ್ಬಿ ಖಾತೆ ಮಾಡಿಸಿದ್ದವರಿಗೆ ಸರಿಯಾಗಿ ಪಾಸ್ ಪುಸ್ತಕ ವಿತರಿಸದೆ ವಹಿವಾಟಿನಲ್ಲಿ ಗೋಲ್ ಮಾಡಲಾಗಿದೆ ಎಂದು ದೂರಲಾಗಿದೆ.

ಯಶಸ್ವಿನಿ ರಿನಿವಲ್ ಮಾಡುತ್ತಿಲ್ಲ: ತಮ್ಮ ಆತ್ಮೀಯರ ಮನೆ ಬಾಗಿಲಿಗೆ ತೆರಳಿ ಹೊಸ ಯಶಸ್ವಿನಿ ಕಾರ್ಡ್ ಸೇರಿದಂತೆ ರಿನಿವಲ್ ಮಾಡಿಸುತ್ತಿದ್ದಾರೆಯೇ ವಿನಃ ಸಮಾನ್ಯ ಜನರು ಇಂದಿಗೂ ಸಹ ಕಛೇರಿಗೆ ಅಲೆಯುತ್ತಿದ್ದರೂ ರಿನಿವಲ್ ಮಾಡಲಾಗಿಲ್ಲ. ಅಲ್ಲದೆ ಬ್ಯಾಂಕಿನಲ್ಲಿ ಹಣ ವಿಲ್ಲದ ಕಾರಣ ಮುಂಗಾರಿಗೆ ಗೊಬ್ಬರ ತಂದು ರೈತರಿಗೆ ಅನುಕೂಲ ಮಾಡುವುದು ಕಷ್ಟವಾಗಿದೆ ಎಂದು ಹೇಳಲಾಗಿದೆ.

ಪಿಗ್ಮಿ ಹಣದ ದಾಖಲೆ, ಸಾಲ ಹಾಗೂ ಮರು ಪಾವತಿ ದಾಖಲಾತಿ ಸೇರಿದಂತೆ ಕಛೇರಿಯಲ್ಲಿ ಯಾವುದೇ ಹಣಕಾಸಿನ ದಾಖಲಾತಿ ಇಲ್ಲದೆ ಕಾಟಚಾರದ ನಿರ್ವಹಣೆಯಾಗಿದ್ದು ಮೇಲಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ಮ್ಯಾನೇಜರ್ ಮೇಲೆ ಕ್ರಮ ಕೈಗೊಳ್ಳುವಂತೆ ಬ್ಯಾಂಕ್ ಅಧ್ಯಕ್ಷ ಜಯಣ್ಣ ಸದಸ್ಯರಾದ ಷಡಾಕ್ಷರಿ, ಚಂದ್ರಶೇಖರ್, ಚನ್ನಬಸವಯ್ಯ ಸೇರಿದಂತೆ ಮತ್ತಿತರರು ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...