ವಿಷಯಕ್ಕೆ ಹೋಗಿ

ಸೋರಲಮಾವುವಿನಲ್ಲಿ ಭತ್ತದ ಬೆಳೆಯ ಕ್ಷೇತ್ರೋತ್ಸವ

ಬೆಂಗಳೂರು ಜಲ ಸಂವರ್ಧನೆ ಯೋಜನಾ ಸಂಘ, ಕೃಷಿ ವಿಶ್ವ ವಿದ್ಯಾಲಯ, ಜಿಲ್ಲಾ ಮಾರ್ಗದರ್ಶನ ತಂಡ, ಶ್ರೀ ಆಂಜನೇಯ ಸ್ವಾಮಿ ಕೆರೆ ಅಭಿವೃದ್ಧಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹುಳಿಯಾರು ಸಮೀಪದ ಸೋರಲಮಾವು ಗ್ರಾಮದಲ್ಲಿ ಸಮುದಾಯ ಆಧಾರಿತ ಕೆರೆ ನಿರ್ವಹಣೆ ಯೋಜನೆಯಲ್ಲಿ ತೆಗೆದುಕೊಳ್ಳಲಾದ ರೈತರ ಕ್ಷೇತ್ರ ಪಾಠಶಾಲೆ ಅಡಿಯಲ್ಲಿ ಏರ್ಪಡಿಸಿದ್ದ ಭತ್ತ ಬೆಳೆಯ ಕ್ಷೇತ್ರೋತ್ಸವವು ಯಶಸ್ವಿಯಾಗಿ ನಡೆಯಿತು.

ಗ್ರಾಮದ ಯುವ ರೈತಜಿ.ಈಶ್ವರಯ್ಯ ಅವರು ಮಾತನಾಡಿ ಕೆರೆಗಳು ಗ್ರಾಮದ ಸಂಪತ್ತುಗಳು ಎನ್ನುವ ಕಾರಣದಿಂದ ಕೆರೆ ಅಭಿವೃದ್ಧಿ ಮೂಲಕ ರೈತರ ಕೃಷಿಗೆ ನೆರವಾಗಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೆ ಜನರ ಸ್ಪಂದನೆ ಇಲ್ಲದ ಕಾರಣ ಯೋಜನೆಗಳು ವಿಫಲವಾಗುತ್ತಿವೆ. ಹಾಗಾಗಿ ಗ್ರಾಮದ ಪ್ರತಿಯೊಬ್ಬರೂ ಕೆರೆ ಅಭಿವೃದ್ಧಿ ಸಂಘಕ್ಕೆ ಸೇರಿಕೊಂಡು ಹೂಳು ತೆಗೆಯುವ, ಏರಿ ದುರಸ್ಥಿ ಮಾಡುವ, ಗಿಡಗಂಟೆಗಳನ್ನು ಕೀಳುವ ಕೆಲಸಗಳಲ್ಲಿ ಭಾಗಿಯಾಗಿ ಮುಂದಿನ ಉತ್ತಮ ಫಸಲಿಗೆ ಪೂರಕ ವಾತಾವರಣ ನಿರ್ಮಾಣ ಮಾಡುವಂತೆ ಕರೆ ನೀಡಿದರು.

ರೈತ ಉತ್ತಮ ಫಸಲು ಪಡೆಯುವ ನಿಟ್ಟಿನಲ್ಲಿ ಕಾಳುಗಳ ಮೊಳಕೆ ಮಾಡುವಾಗ,ನಾಟಿ ಮಾಡುವಾಗ ಎಚ್ಚರಿಕೆಯಾಗಿರಬೇಕು ಹಾಗೂ ಸಮರ್ಪಕ ನೀರು ನಿರ್ವಹಣೆ, ಔಷಧ ಸಿಂಪಡಣೆ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದರು.

ಶ್ರೀ ಆಂಜನೇಯ ಸ್ವಾಮಿ ಕೆರೆ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಕರೇಗೌಡ ಹಿಂದಿನ ಸಾಂಪ್ರದಾಯಕ ಪದ್ದತಿ ಹಾಗೂ ಈಗ ಪ್ರಾಯೋಗಿಕವಾಗಿ ನಾಟಿ ಮಾಡಿರುವ ಜಪಾನ್ ಮಾದರಿಯ ಸಾಲು ಸಸಿ ಪದ್ದತಿಗೆ ಹೊಲಿಕೆ ಮಾಡಿದಲ್ಲಿ ಸಾಂಪ್ರದಾಯಕ ಪದ್ದತಿಯಲ್ಲಿ 20 ತೆಂಟೆ ಬಂದರೆ ಜಪಾನ್ ಪದ್ದತಿಯಲ್ಲಿ 40 ತೆಂಟೆ, ಅಲ್ಲಿ 120 ಕಾಳು ಕಟ್ಟಿದರೆ ಇಲ್ಲಿ 250 ಕಾಳು ಕಟ್ಟುತ್ತದೆ. ಜಪಾನ್ ಮಾದರಿಯಲ್ಲಿ ರೋಗಭಾದೆ ಇರುವುದಿಲ್ಲ ಹಾಗೂ ಕೇವಲ ಒಂದೇ ಬಾರಿ ಕಳೆ ಕೀಳುವ ಅನುಕೂಲಗಳು ಇರುತ್ತವೆ ಎಂದು ವಿವರಿಸಿದರು.

ಜಿಲ್ಲಾ ಮಾರ್ಗದರ್ಶನ ತಂಡದ ಹುಳಿಯಾರು ಮುಖ್ಯಸ್ಥ ವೆಂಕಟೇಶ್ ಅವರು ಮಾತನಾಡಿ ದೊಡ್ಡಬಿದರೆ ಹಾಗೂ ಸೋರಲಮಾವು ಕೆರೆಗಳನ್ನು ಮಾದರಿ ಕೆರೆ ಮಾಡಲು ಗುರಿ ಇಟ್ಟುಕೊಂಡು ಈಗಾಗಲೇ 25 ಲಕ್ಷದ ಬಜೆಟ್ ತಯಾರಿಸಲಾಗಿದೆ. ಅಲ್ಲದೆ, ಈ ಗ್ರಾಮದಲ್ಲಿ ಮತ್ತೊಂದು ಕೆರೆಯನ್ನು ಜಲಸಂವರ್ಧನೆ ಯೋಜನೆಗೆ ಸೇರ್ಪಡೆಮಾಡಿಕೊಳ್ಳುವ ಚಿಂತನೆ ಇದ್ದು ಈ ಯೋಜನೆಯಲ್ಲಿ ನೇರವಾಗಿ ತಮ್ಮ ಕೆರೆ ಸಂಘಕ್ಕೆ ಹಣ ಬರುವುದಿದ್ದು ತಮ್ಮ ಗ್ರಾಮದ ಅಭಿವೃದ್ಧಿಯನ್ನು ತಾವುಗಳೇ ನಿರ್ಧರಿಸಿ ಮಾಡಿಕೊಳ್ಳುವ ಸೌಲಭ್ಯವಿದೆ ಎಂದು ತಿಳಿಸಿದರು.

ತುಮಕೂರು ಕೃಷಿ ತಜ್ಞ ಶ್ರೀನಿವಾಸಮೂರ್ತಿ,ಶ್ರೀ ಆಂಜನೇಯ ಸ್ವಾಮಿ ಕೆರೆ ಅಭಿವೃದ್ಧಿ ಸಂಘದ ಅಧ್ಯಕ್ಷ ಕರಿಯಪ್ಪ, ಗ್ರಾ.ಪಂ.ಮಾಜಿ ಅಧ್ಯಕ್ಷ ನಿರಂಜನಮೂರ್ತಿ, ಸೀಗೆಬಾಗಿ ಕೆರೆ ಸಂಘದ ಅಧ್ಯಕ್ಷ ದಯಾನಂದ್, ಗ್ರಾ.ಪಂ.ಸದಸ್ಯ ಸಿದ್ದೇಗೌಡ, ಗೋಪಾಲಯ್ಯ, ಪಾಲಾಕ್ಷಯ್ಯ, ಕಾಂತರಾಜು, ಮಹಮದ್ ರಸೂಲ್ ಮತ್ತಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...