ವಿಷಯಕ್ಕೆ ಹೋಗಿ

ಸಾಲ ಸೌಲಭ್ಯ ಚುನಾವಣೆಗೆ ಸ್ಪಧಿ೯ಸಲು ಅಲ್ಲ: ಕೆ.ಎನ್.ರಾಜಣ್ಣ


ಸಹಕಾರ ಸಂಘದಿಂದ ಸಾಲ ನೀಡಿ ಆಥಿ೯ಕ ಸಹಕಾರ ಒದಗಿಸಿ ಕೈಕಸುಬುಗಳಿಗೆ ಉತ್ತೇಜನ ನೀಡುವುದು ತಮ್ಮ ಮುಖ್ಯ ಗುರಿಯಾಗಿದೆ. ಹಾಗಾಗಿ ಸಹಕಾರ ಸಂಘದ ಸಾಲ ಸೌಲಭ್ಯದಿಂದ ವಂಚಿತರಾಗುತ್ತಿರುವ ಗ್ರಾಮಗಳಲ್ಲಿ ಸಾಲ ಸೌಲಭ್ಯ ನೀಡಲು ಒತ್ತು ನೀಡಲಾಗುತ್ತಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ತಿಳಿಸಿದರು.
ಹುಳಿಯಾರು ಹೋಬಳಿ ದಸೂಡಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಏರ್ಪಡಿಸಿದ್ದ ವಿವಿಧ ಯೋಜನೆಯ ಸಾಲ ಸೌಲಭ್ಯ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚಿನಾಹಳ್ಳಿಯಿಂದ ಸ್ಪಧೆ೯ಇಲ್ಲ:ಮುಂದಿನ ವಿಧಾನಸಭಾ ಚುನಾವಣೆಗೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪಧಿ೯ಸುತ್ತಾರೆ. ಇದಕ್ಕಾಗಿ ತಾಲೂಕಿನ ಹಳ್ಳಿ ಹಳ್ಳಿ ಸುತ್ತಿ ಸಾಲ ಸೌಲಭ್ಯ ನೀಡುತ್ತಿದ್ದಾರೆ ಎಂಬ ಮಾತು ವಿರೋಧಿ ಗುಂಪು ಹುಟ್ಟು ಹಾಕುತ್ತಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ. ತಾವು ಯಾವುದೇ ಕಾರಣಕ್ಕೂ ಮಧುಗಿರಿ ಬಿಟ್ಟು ಬೇರೆಲ್ಲೂ ಸ್ಪಧಿ೯ಸುವುದಿಲ್ಲ. ಈ ಬಗ್ಗೆ ಅನಗತ್ಯ ಅನುಮಾನ ಬೇಡ ಎಂದು ರಾಜಣ್ಣ ಅವರು ಸ್ಫಷ್ಠಪಡಿಸಿದರು.

ದಸೂಡಿ ಗ್ರಾಮ ಜಿಲ್ಲೆಯ ಗಡಿ ಗ್ರಾಮವಲ್ಲದೆ ಅತ್ಯಂತ ಹಿಂದುಳಿದ ಗ್ರಾಮವಾಗಿದ್ದು ಆಥಿ೯ಕ ಅಸಮತೋಲನದಿಂದ ಇಲ್ಲಿನ ಜನ ಕಷ್ಟ-ಕಾರ್ಪಣ್ಯದಿಂದ ಮೇಲೆ ಬರಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಸಹಕಾರ ಸಂಘದಿಂದ ಸಾಲ ನೀಡಿ ಆಥಿ೯ಕ ಸಹಕಾರ ನೀಡಿ ಕೈಕಸುಬುಗಳಿಗೆ ಉತ್ತೇಜನ ನೀಡುವುದು ತಮ್ಮ ಮುಖ್ಯ ಗುರಿಯಾಗಿದೆ. ಬರುವ 6 ತಿಂಗಳಲ್ಲಿ ಹೈನುಗಾರಿಕೆ ಸಾಲ, ಅಡಿಕೆ ದಾಸ್ತಾನು ಸಾಲ, ವಾಹನ, ಚಿನ್ನಾಭರಣ ಸಾಲ ಹೀಗೆ ವಿವಿಧ ರೀತಿಯಲ್ಲಿ 1 ಕೋಟಿ ರು. ಸಾಲ ನೀಡುವುದಾಗಿ ಘೋಷಿಸಿದರು.
ಚಿ.ನಾ.ಹಳ್ಳಿ ಟಿ.ಎ.ಪಿ.ಎಂ.ಎಸ್ ಅಧ್ಯಕ್ಷ ಲೋಕೇಶ್ ಅವರು ಮಾತನಾಡಿ ಮೂಲ ಸೌಲಭ್ಯಗಳಿಂದ ವಂಚಿತವಾದ ಗ್ರಾಮಗಳಲ್ಲಿ ರೈತರು ಗೊಬ್ಬರ, ಬೀಜ, ಔಷಧಿ ಮತ್ತಿತರ ಕೃಷಿ ಸಲಕರಣೆಗಳಿಗೆ ಸಾಲ ಪಡೆಯಲು ಪತ್ತಿನ ಸಹಕಾರ ಸಂಘ ಅಗತ್ಯ ಎಂದರಲ್ಲದೆ ಸಾಲ ಪಡೆಯುವಾಗ ಇರುವ ಹುಮ್ಮಸ್ಸು ಪ್ರಾಮಾಣಿಕವಾಗಿ ಮರುಪಾವತಿ ಮಾಡುವಲ್ಲಿಯೂ ಸಹ ಇರಬೇಕು ಎಂದರು.

ಡಿಸಿಸಿ ಬ್ಯಾಂಕ್ ಚಿ.ನಾ.ಹಳ್ಳಿ ತಾಲೂಕು ನಿದೇ೯ಶಕ ಸಿಂಗದಹಳ್ಳಿ ರಾಜ್ ಕುಮಾರ್ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಸೂಡಿ ಪ್ರಾ.ಕೃ.ಸ.ಸಂಘದ ಅಧ್ಯಕ್ಷ ಎಂ.ಕೆ.ಕಾರಪ್ಪ ವಹಿಸಿದ್ದರು. ಗ್ರಾಮ ಮಂಚಾಯ್ತಿ ಅಧ್ಯಕ್ಷೆ ರೇಣುಕಮ್ಮ, ರಾಮಕೃಷ್ಣಪ್ಪ, ಜಯರಾಂ, ಈಶ್ವರಪ್ಪ, ನೀಲಕಂಠಪ್ಪ, ಹೊನ್ನಪ್ಪ, ಚಿತ್ತಯ್ಯ, ಲಕ್ಷ್ಮೀದೇವಿ, ಪಿ.ಟಿ.ಅಶ್ವಥನಾರಾಯಣ್, ಗೊಳ್ಳೆನಟ್ಟಿ ಚಿತ್ತಪ್ಪ, ಹನುಮಂತಯ್ಯ, ಜಯಣ್ಣ, ಲಕ್ಷ್ಮಕ್ಕ, ಸಣ್ಣನಿಂಗಮ್ಮ ಮತ್ತಿತರರು ಉಪಸ್ಥಿತರಿದ್ದರು.
ಸುಧಾ ಪ್ರಾಥಿ೯ಸಿದರು. ರಂಗಸ್ವಾಮಿ ಸ್ವಾಗತಿಸಿದರು. ರಂಗಸ್ವಾಮಿ ನಿರೂಪಿಸಿದರು. ಕೃಷ್ಣಪ್ಪ ವಂದಿಸಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...