ವಿಷಯಕ್ಕೆ ಹೋಗಿ

ಸಾಲ ಸೌಲಭ್ಯ ಚುನಾವಣೆಗೆ ಸ್ಪಧಿ೯ಸಲು ಅಲ್ಲ: ಕೆ.ಎನ್.ರಾಜಣ್ಣ


ಸಹಕಾರ ಸಂಘದಿಂದ ಸಾಲ ನೀಡಿ ಆಥಿ೯ಕ ಸಹಕಾರ ಒದಗಿಸಿ ಕೈಕಸುಬುಗಳಿಗೆ ಉತ್ತೇಜನ ನೀಡುವುದು ತಮ್ಮ ಮುಖ್ಯ ಗುರಿಯಾಗಿದೆ. ಹಾಗಾಗಿ ಸಹಕಾರ ಸಂಘದ ಸಾಲ ಸೌಲಭ್ಯದಿಂದ ವಂಚಿತರಾಗುತ್ತಿರುವ ಗ್ರಾಮಗಳಲ್ಲಿ ಸಾಲ ಸೌಲಭ್ಯ ನೀಡಲು ಒತ್ತು ನೀಡಲಾಗುತ್ತಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ತಿಳಿಸಿದರು.
ಹುಳಿಯಾರು ಹೋಬಳಿ ದಸೂಡಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಏರ್ಪಡಿಸಿದ್ದ ವಿವಿಧ ಯೋಜನೆಯ ಸಾಲ ಸೌಲಭ್ಯ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚಿನಾಹಳ್ಳಿಯಿಂದ ಸ್ಪಧೆ೯ಇಲ್ಲ:ಮುಂದಿನ ವಿಧಾನಸಭಾ ಚುನಾವಣೆಗೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪಧಿ೯ಸುತ್ತಾರೆ. ಇದಕ್ಕಾಗಿ ತಾಲೂಕಿನ ಹಳ್ಳಿ ಹಳ್ಳಿ ಸುತ್ತಿ ಸಾಲ ಸೌಲಭ್ಯ ನೀಡುತ್ತಿದ್ದಾರೆ ಎಂಬ ಮಾತು ವಿರೋಧಿ ಗುಂಪು ಹುಟ್ಟು ಹಾಕುತ್ತಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ. ತಾವು ಯಾವುದೇ ಕಾರಣಕ್ಕೂ ಮಧುಗಿರಿ ಬಿಟ್ಟು ಬೇರೆಲ್ಲೂ ಸ್ಪಧಿ೯ಸುವುದಿಲ್ಲ. ಈ ಬಗ್ಗೆ ಅನಗತ್ಯ ಅನುಮಾನ ಬೇಡ ಎಂದು ರಾಜಣ್ಣ ಅವರು ಸ್ಫಷ್ಠಪಡಿಸಿದರು.

ದಸೂಡಿ ಗ್ರಾಮ ಜಿಲ್ಲೆಯ ಗಡಿ ಗ್ರಾಮವಲ್ಲದೆ ಅತ್ಯಂತ ಹಿಂದುಳಿದ ಗ್ರಾಮವಾಗಿದ್ದು ಆಥಿ೯ಕ ಅಸಮತೋಲನದಿಂದ ಇಲ್ಲಿನ ಜನ ಕಷ್ಟ-ಕಾರ್ಪಣ್ಯದಿಂದ ಮೇಲೆ ಬರಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಸಹಕಾರ ಸಂಘದಿಂದ ಸಾಲ ನೀಡಿ ಆಥಿ೯ಕ ಸಹಕಾರ ನೀಡಿ ಕೈಕಸುಬುಗಳಿಗೆ ಉತ್ತೇಜನ ನೀಡುವುದು ತಮ್ಮ ಮುಖ್ಯ ಗುರಿಯಾಗಿದೆ. ಬರುವ 6 ತಿಂಗಳಲ್ಲಿ ಹೈನುಗಾರಿಕೆ ಸಾಲ, ಅಡಿಕೆ ದಾಸ್ತಾನು ಸಾಲ, ವಾಹನ, ಚಿನ್ನಾಭರಣ ಸಾಲ ಹೀಗೆ ವಿವಿಧ ರೀತಿಯಲ್ಲಿ 1 ಕೋಟಿ ರು. ಸಾಲ ನೀಡುವುದಾಗಿ ಘೋಷಿಸಿದರು.
ಚಿ.ನಾ.ಹಳ್ಳಿ ಟಿ.ಎ.ಪಿ.ಎಂ.ಎಸ್ ಅಧ್ಯಕ್ಷ ಲೋಕೇಶ್ ಅವರು ಮಾತನಾಡಿ ಮೂಲ ಸೌಲಭ್ಯಗಳಿಂದ ವಂಚಿತವಾದ ಗ್ರಾಮಗಳಲ್ಲಿ ರೈತರು ಗೊಬ್ಬರ, ಬೀಜ, ಔಷಧಿ ಮತ್ತಿತರ ಕೃಷಿ ಸಲಕರಣೆಗಳಿಗೆ ಸಾಲ ಪಡೆಯಲು ಪತ್ತಿನ ಸಹಕಾರ ಸಂಘ ಅಗತ್ಯ ಎಂದರಲ್ಲದೆ ಸಾಲ ಪಡೆಯುವಾಗ ಇರುವ ಹುಮ್ಮಸ್ಸು ಪ್ರಾಮಾಣಿಕವಾಗಿ ಮರುಪಾವತಿ ಮಾಡುವಲ್ಲಿಯೂ ಸಹ ಇರಬೇಕು ಎಂದರು.

ಡಿಸಿಸಿ ಬ್ಯಾಂಕ್ ಚಿ.ನಾ.ಹಳ್ಳಿ ತಾಲೂಕು ನಿದೇ೯ಶಕ ಸಿಂಗದಹಳ್ಳಿ ರಾಜ್ ಕುಮಾರ್ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಸೂಡಿ ಪ್ರಾ.ಕೃ.ಸ.ಸಂಘದ ಅಧ್ಯಕ್ಷ ಎಂ.ಕೆ.ಕಾರಪ್ಪ ವಹಿಸಿದ್ದರು. ಗ್ರಾಮ ಮಂಚಾಯ್ತಿ ಅಧ್ಯಕ್ಷೆ ರೇಣುಕಮ್ಮ, ರಾಮಕೃಷ್ಣಪ್ಪ, ಜಯರಾಂ, ಈಶ್ವರಪ್ಪ, ನೀಲಕಂಠಪ್ಪ, ಹೊನ್ನಪ್ಪ, ಚಿತ್ತಯ್ಯ, ಲಕ್ಷ್ಮೀದೇವಿ, ಪಿ.ಟಿ.ಅಶ್ವಥನಾರಾಯಣ್, ಗೊಳ್ಳೆನಟ್ಟಿ ಚಿತ್ತಪ್ಪ, ಹನುಮಂತಯ್ಯ, ಜಯಣ್ಣ, ಲಕ್ಷ್ಮಕ್ಕ, ಸಣ್ಣನಿಂಗಮ್ಮ ಮತ್ತಿತರರು ಉಪಸ್ಥಿತರಿದ್ದರು.
ಸುಧಾ ಪ್ರಾಥಿ೯ಸಿದರು. ರಂಗಸ್ವಾಮಿ ಸ್ವಾಗತಿಸಿದರು. ರಂಗಸ್ವಾಮಿ ನಿರೂಪಿಸಿದರು. ಕೃಷ್ಣಪ್ಪ ವಂದಿಸಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...