ವಿಷಯಕ್ಕೆ ಹೋಗಿ

ಹೊನ್ನಮ್ಮಳ ಹತ್ಯೆ ಪೈಶಾಚಿಕ ಕೃತ್ಯ:ಸಚಿವ ಸುರೇಶ್ ಕುಮಾರ್


ಹೊನ್ನಮ್ಮಳ ಹತ್ಯೆ ಪೈಶಾಚಿಕ ಕೃತ್ಯ:ಸಚಿವ ಸುರೇಶ್ ಕುಮಾರ್
@ ಪ್ರಕರಣದಲ್ಲಿ ಎಎಸ್ಐ ಭಾಗಿಯಾಗಿದಲ್ಲಿ ಕೆಲಸದಿಂದ ವಜಾ @ 18 ಆರೋಪಿಗಳ ಬಂಧನ
--------------------------------------------------------
ಹುಳಿಯಾರು: ಕಡೆ ಕ್ಷಣದಲ್ಲಿ ಗುಟುಕು ನೀರಿಗಾಗಿ ಮೊರೆಯಿಡುತ್ತಿದ್ದ ಹೊನ್ನಮ್ಮಳನ್ನು ಚರಂಡಿ ರಸ್ತೆಯಲ್ಲಿ ಎಳೆದಾಡಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವುದು ಮೈ ಜುಮ್ ಎನ್ನಿಸುವ ಪೈಶಾಚಿಕ ಕೃತ್ಯವಾಗಿದ್ದು ಇದನ್ನು ಆಡಳಿತ ಎಂದೂ ಸಹಿಸುವುದಿಲ್ಲ ಎಂದು ಕಾನೂನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದರು.

ದಲಿತ ಬಿಜೆಪಿ ನಾಯಕಿ ಹೊನ್ನಮ್ಮಳ ಹತ್ಯೆ ಸಂಬಂಧ ಭಾನುವಾರ ಗೋಪಾಲಪುರಕ್ಕೆ ಭೇಟಿ ನೀಡಿ ಘಟನೆಯ ಪ್ರತ್ಯಕ್ಷ ಸಾಕ್ಷಿ ಮೀನಾಕ್ಷಮ್ಮ ಅವರಿಂದ ಘಟನಾ ಮಾಹಿತಿ ಪಡೆದು ನಂತರ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಮನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೊನ್ನಮ್ಮಳ ಹತ್ಯೆಯನ್ನು ಜನತೆ, ಸಮಾಜ, ಹಾಗೂ ಆಡಳಿತ ಕ್ಷಮಿಸಲಾಗದ ಘೋರ ಕೃತ್ಯವಾಗಿದ್ದು ಆಕೆಯನ್ನು ಹತ್ಯೆಗೈದವರ ಮನದಲ್ಲಿ ಎಂತಹ ರಾಕ್ಷಸ ಪ್ರವೃತ್ತಿ ಮನೆಮಾಡಿತ್ತು ಎಂದು ಊಹಿಸಲು ಅಸಾಧ್ಯ ಎಂದರು.

ಲಭ್ಯ ಮಾಹಿತಿಯಂತೆ ಅಮಾನುಷವಾಗಿ ಹತ್ಯೆಯಾದ ಹೊನ್ನಮ್ಮಳ ಪ್ರಕರಣದಲ್ಲಿ ಮೇಲ್ನೋಟಕ್ಕೆ ಹಂದನಕೆರೆ ಎಎಸ್ಐಗಳು ಪ್ರಚೋದನೆ ನೀಡಿ ಅಪರಾಧದಲ್ಲಿ ಭಾಗಿಯಾಗಿರುವ ವರ್ತನೆಯಿದ್ದು ತನಿಖೆಯಲ್ಲಿ ಇವರು ಭಾಗಿಯಾಗಿರುವುದು ಸಾಬೀತಾದಲ್ಲಿ ಈಗಾಗಲೇ ಅಮಾನತ್ತು ಮಾಡಲಾಗಿರುವ ಇವರನ್ನು ಕೆಲಸದಿಂದಲೇ ತೆಗೆದುಹಾಕಲಾಗುವುದು ಎಂದರು.

ಇದೊಂದು ದಲಿತ ದೌರ್ಜನ್ಯ ಪ್ರಕರಣವಾಗಿದ್ದು ಹತ್ಯೆಗೊಳಗಾದವಳು ಮಹಿಳೆ ಎನ್ನುವುದು ಪ್ರಮುಖವಾಗಿದೆ. ಇಲ್ಲಿಯವರೆವಿಗೆ ಘಟನೆಗೆ ಸಂಬಂಧಿಸಿದಂತೆ 18 ಆರೋಪಿಗಳನ್ನು ಬಂಧಿಸಲಾಗಿದ್ದು ಆಡಳಿತ ಕಡೆಯಿಂದ ಕಟ್ಟುನಿಟ್ಟಾದ ಪ್ರಾಸಿಕ್ಯೂಷನ್ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ತಿಪಟೂರು ಡಿವೈಎಸ್ಪಿಯನ್ನು ತನಿಖಾಧಿಕಾರಿಯನ್ನಾಗಿ ಮಾಡಲಾಗಿದ್ದು ಇವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದತನಿಖಾ ತಂಡ ರಚಿಸಿದ್ದು ಸಕ್ಷಮ ಅಧಿಕಾರಿಗಳಾಗಿ ಇಬ್ಬರು ಸಿಪಿಐ ಹಾಗೂ ಇಬ್ಬರು ಪಿಎಸ್ಐ ಅವರುಗಳು ಒಳಗೊಂಡಿರುತ್ತಾರೆ. ಉಳಿದ ಆರೋಪಿಗಳ ಪತ್ತೆಗೆ ವ್ಯಾಪಕ ಜಾಲ ಬೀಸಲಾಗಿದೆ ಎಂದರು.

ಮೃತ ಹೊನ್ನಮ್ಮಳ ಕುಟುಂಬದ ಜೀವನಾಂಶಕ್ಕೆ ಈಗಾಗಲೇ 1 ಲಕ್ಷ ರು. ಪರಿಹಾರ ನೀಡಲಾಗಿದ್ದು ಮತ್ತಷ್ಟು ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮಗನಿಗೆ ಭವಿಷ್ಯದ ದೃಷ್ಠಿಯಿಂದ ಅರ್ಹತೆ ಆಧಾರದ ಮೇಲೆ ಸಕಾ೯ರಿ ಉದ್ಯೋಗ ನೀಡಲು ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಿದ್ದು ತಾವೂ ಕೂಡ ಮುಖ್ಯ ಕಾರ್ಯದಶಿ೯ಯೊಂದಿಗೆ ಮಾತನಾಡುವುದಾಗಿ ಹೇಳಿದರು.
ಒಟ್ಟಾರೆ ಕಾನೂನು ಹಿಡಿತದಲ್ಲಿ ತಪ್ಪಿಸಿಕೊಳ್ಳದಂತೆ ಎಲ್ಲಾ ಆರೋಪಿಗಳನ್ನು ಬಂಧಿಸಿ ವಿಕಟ ನಗೆ ನಕ್ಕು ಹೊರ ಬಾರದ ರೀತಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್, ಪೊಲೀಸ್ ವರಿಷ್ಠಾಧಿಕಾರಿ ಡಾ.ಪಿ.ಎಸ್.ಹರ್ಷ, ತನಿಖಾಧಿಕಾರಿ ಶಿವರುದ್ರಸ್ವಾಮಿ,ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವಪ್ರಸಾದ್, ತಾ.ಪಂ.ಅಧ್ಯಕ್ಷ ಮಲ್ಲಿಕಾಜು೯ನಯ್ಯ, ತಿಪಟೂರು ಪ್ರಭಾರ ಉಪವಿಭಾಗಾಧಿಕಾರಿ ವಿಜಯಕುಮಾರ್, ತಹಸೀಲ್ದಾರ್ ಟಿ.ಸಿ.ಕಾಂತರಾಜು, ಸಿಪಿಐ ಪಿ.ರವಿಪ್ರಸಾದ್ ಪಿಎಸ್ಐಗಳಾದ ಶಿವಕುಮಾರ್, ಪಾರ್ವತಿ ಯಾದವ್, ವಕೀಲ ಬಿ.ಕೆ.ಸದಾಶಿವು ಮತ್ತಿತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...